ಸಿದ್ದರಾಮಯ್ಯರನ್ನು ಒಂದು ತಿಂಗಳು ತಾಲಿಬಾನ್ ಆಡಳಿತದ ಪ್ರದೇಶಕ್ಕೆ ಕಳುಹಿಸಬೇಕು: ಶ್ರೀನಿವಾಸ್ ಪ್ರಸಾದ್

ಮೈಸೂರು: ತಾಲಿಬಾನ್‌ ಆಡಳಿತವನ್ನು ಪರಿಶೀಲಿಸಲು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ಆಫ್ಘಾನಿಸ್ತಾನಕ್ಕೆ ಕಳುಹಿಸಿಕೊಡಲು ಕೇಂದ್ರ ಸರ್ಕಾರಕ್ಕೆ ಮನವಿ ಮಾಡುತ್ತೇನೆ ಎಂದು ಸಂಸದ ವಿ.ಶ್ರೀನಿವಾಸ ಪ್ರಸಾದ್‌ ಹೇಳಿದರು. ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,ಸಿಂದಗಿ, ಹಾನಗಲ್ ಉಪಚುನಾವಣೆ ಸಂಬಂಧ ರಾಜ್ಯ ನಾಯಕರ ಮಾತು ಮಿತಿ ಮೀರಿದೆ. ನಾನು ಕೂಡ ಮಾಧ್ಯಮಗಳಲ್ಲಿ ಅವರ ಹೇಳಿಕೆ ನೋಡಿದ್ದೇನೆ. ಚುನಾವಣೆಯಲ್ಲಿ … Continued

ಕೇಳಿದವರಿಗೆಲ್ಲ ಮೀಸಲಾತಿ ಭರವಸೆ ಹಾಸ್ಯಾಸ್ಪದ

ಮೈಸೂರು: ರಾಜಕಾರಣಿಗಳು ಕೇಳಿದವರಿಗೆಲ್ಲ ಮೀಸಲಾತಿಯ ಭರವಸೆ ನೀಡುತ್ತಿರುವುದು ಹಾಸ್ಯಾಸ್ಪದ ಎಂದು ಸಂಸದ ಶ್ರೀನಿವಾಸ ಪ್ರಸಾದ ಅಭಿಪ್ರಾಯಪಟ್ಟಿದ್ದಾರೆ. ಮೀಸಲಾತಿ ಕುರಿತು ಸರ್ವೋಚ್ಚ ನ್ಯಾಯಲಯ ಏನು ನಿರ್ಧಾರ ತೆಗೆದುಕೊಂಡಿದೆ. ಕೇಂದ್ರದ ಅಧಿಕಾರವೇನು? ರಾಜ್ಯ ಸರಕಾರ ಏನು ಮಾಡಬೇಕೆಂಬ ಬಗ್ಗೆ ಯೋಚಿಸದೇ ಮೀಸಲಾತಿ ನೀಡುವ ಭರವಸೆ ನೀಡುತ್ತಿದ್ದಾರೆ ಎಂದರು. ಕರ್ನಾಟಕದಲ್ಲಿ ಮೀಸಲು ವಿವಾದ ಭುಗಿಲೆದ್ದಿದ್ದು, ಹಾದಿ ಬೀದಿಯಲ್ಲಿ ಮೀಸಲಾತಿ ಕುರಿತು … Continued