ವಜಾಗೊಂಡಿದ್ದ ಸಾರಿಗೆ ಸಂಸ್ಥೆ ಚಾಲಕರು- ನಿರ್ವಾಹಕರ ಮರು ನೇಮಕ: ಸಚಿವ ಶ್ರೀರಾಮುಲು

ಬೆಂಗಳೂರು: ವಿವಿಧ ಬೇಡಿಕೆಗಳನ್ನ ಈಡೇರಿಸುವಂತೆ ಕೋರಿ ಮುಷ್ಕರದಲ್ಲಿ ಭಾಗಿಯಾಗಿದ್ದ ಕಾರಣಕ್ಕೆ ಕೆಲಸದಿಂದ ವಜಾ ಮಾಡಲಾಗಿದ್ದ ಸಾರಿಗೆ ನೌಕರರನ್ನು ಮರು ನೇಮಕ ಮಾಡಿಕೊಳ್ಳಲಾಗುತ್ತಿದೆ ಎಂದು ಸಚಿವ ಬಿ.ಶ್ರೀರಾಮುಲು ಹೇಳಿದ್ದಾರೆ. ಪ್ರತಿಭಟನೆ ವೇಳೆ ಭಾಗಿಯಾಗಿದ್ದ ನೌಕರರನ್ನು ನೌಕರಿಯಿಂದ ವಜಾ ಮಾಡಲಾಗಿತ್ತು. ಇದೀಗ ಅವರನ್ನೆಲ್ಲ ಮರು ನೇಮಕ ಮಾಡಿಕೊಳ್ಳಲಾಗುತ್ತಿದೆ. ಇಂದು, ಗುರುವಾರ 100 ನೌಕರರು, ನಾಳೆ 200 ನೌಕರರ ಮರು … Continued

ಉಪಚುನಾವಣೆಯಲ್ಲಿ ಯಾವ ಜೋಡೆತ್ತುಗಳು ಕೆಲಸ ಮಾಡಲ್ಲ: ಸಚಿವ ಶ್ರೀರಾಮಲು

ಬಳ್ಳಾರಿ: ಉಪಚುನಾವಣೆಯಲ್ಲಿ ಯಾವ ಜೋಡೆತ್ತುಗಳು ಕೆಲಸ ಮಾಡಲ್ಲ, ಮಸ್ಕಿ, ಬಸವಕಲ್ಯಾಣ ಹಾಗೂ ಬೆಳಗಾವಿಯಲ್ಲಿ ಬಿಜೆಪಿ ಗೆಲುವು ನಿಶ್ಚಿತ ಎಂದು ಸಚಿವ ಶ್ರೀರಾಮಲು ಹೇಳಿದರು. ಕಾಂಗ್ರೆಸ್‌ ಮುಖಂಡರು ಎಲ್ಲಿ ಪ್ರಚಾರಕ್ಕೆ ಹೋಗಿದ್ದಾರೋ ಅಲ್ಲೆಲ್ಲ ಕಾಂಗ್ರೆಸ್‌ ಸೋಲನುಭವಿಸಿದೆ. ಯಾವ ಜೋಡೆತ್ತುಗಳ ಕರಾಮತ್ತು ನಡೆಯೊಲ್ಲ ಎಂದರು. ವಿಜಯೇಂದ್ರ ಬಂದರೆ ಹಣ ಎಂಬ ಸಿದ್ದು ಹೇಳಿಕೆಗೆ ರಾಮುಲು ತಿರುಗೇಟು ನೀಡಿದ್ದು, ಸುಳ್ಳು … Continued

ಸಮುದಾಯ ಭವನಗಳು ಹೊಸ ಚಿಂತನೆಯ ಕಮ್ಮಟಗಳಾಗಲಿ: ಶ್ರೀರಾಮುಲು

ಹುಬ್ಬಳ್ಳಿ: ಇಲಾಖೆಯಿಂದ ನಿರ್ಮಿಸಿರುವ ಸಮುದಾಯ ಭವನಗಳಲ್ಲಿ ಮದುವೆ ಮತ್ತಿತರ ಕಾರ್ಯಕ್ರಮಗಳ ಜೊತೆಗೆ ಸಮಾಜದ ಬಗೆಗಿನ ಚಿಂತನೆಗಳು ಹಾಗೂ ಗೋಷ್ಠಿಗಳು ನಡೆಯಬೇಕು‌. ಸಮುದಾಯ ಭವನಗಳು ಹೊಸ ಚಿಂತನೆಯ ಕಮ್ಮಟಗಳಾಗಬೇಕು ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಬಿ ಶ್ರೀರಾಮುಲು ಹೇಳಿದರು. ಹುಬ್ಬಳ್ಳಿಯ‌ ಈಶ್ವರ ಹಾಗೂ ಸಂಗೊಳ್ಳಿ ರಾಯಣ್ಣ ನಗರದಲ್ಲಿ ಸಮಾಜ ಕಲ್ಯಾಣ ಇಲಾಖೆ ಮೂರು ಕೋಟಿ ಹಾಗೂ … Continued

ಕಾಂಗ್ರೆಸ್‌ ಜೆಡಿಎಸ್‌ ಬಿ ಟೀಮ್‌ ಎಂಬುದು ಮೈಸೂರು ಪಾಲಿಕೆಯಲ್ಲಿ ಸಾಬೀತು

ಹಗರಿಬೊಮ್ಮನಹಳ್ಳಿ: ‘ಕರ್ನಾಕದಲ್ಲಿ ಕಾಂಗ್ರೆಸ್ ಪಕ್ಷವು ಜೆಡಿಎಸ್ ಪಕ್ಷದ ‘ಬಿ’ ಟೀಮ್ ಎನ್ನುವುದು ಮೈಸೂರು ಮಹಾನಗರ ಪಾಲಿಕೆ ಮೇಯರ್‌ ಆಯ್ಕೆ ವಿಚಾರದಲ್ಲಿ ಸಾಬೀತಾಗಿದೆ’ ಎಂದು ರಾಜ್ಯದ ಸಮಾಜ‌ ಕಲ್ಯಾಣ ಖಾತೆ ಸಚಿವ ಬಿ. ಶ್ರೀರಾಮುಲು ಹೇಳಿದರು. ನೂತನ ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲ್ಲೂಕಿನ ಉಪನಾಯಕನಹಳ್ಳಿ ಬಳಿ ಮೊರಾರ್ಜಿ ದೇಸಾಯಿ ವಸತಿ ಶಾಲೆ ಉದ್ಘಾಟಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ … Continued

ಬದಾಮಿಯಲ್ಲಿ ನನ್ನ ಸೋಲಿಗೆ ಕೆಲ ಬಿಜೆಪಿ ಮುಖಂಡರ ಷಡ್ಯಂತ್ರವೇ ಕಾರಣ: ಸಚಿವ ಶ್ರೀರಾಮುಲು

ಮೊಳಕಾಲ್ಮೂರು: ಬದಾಮಿಯಲ್ಲಿ ಸಿದ್ದರಾಮಯ್ಯ ವಿರುದ್ಧ ನಾನು ಸೋಲನುಭವಿಸಲು ಮತದಾರರಲ್ಲ, ಕೆಲ ಬಿಜೆಪಿ ಮುಖಂಡರ ಷಡ್ಯಂತ್ರವೇ ಕಾರಣ ಎಂದು ಸಮಾಜ ಕಲ್ಯಾಣ ಸಚಿವ ಬಿ.ಶ್ರೀರಾಮಲು ಹೇಳಿದರು. ಕೆಲವು ಬಿಜೆಪಿ ನಾಯಕರ ಷಡ್ಯಂತ್ರವೇ ನನ್ನ ಸೋಲಿಗೆ ಕಾರಣ. ನಾನು ಬದಾಮಿ ಕ್ಷೇತ್ರದಲ್ಲಿ ಗೆದ್ದರೆ ಎಲ್ಲಿ ತಮಗೆ ಮುಳುವಾಗಬಹುದೆಂದು ಕೆಲವರು ಷಡ್ಯಂತ್ರ ಮಾಡಿ ನನ್ನನ್ನು ಸೋಲಿಸಿದರು. ಪ್ರಧಾನಿ ನರೇಂದ್ರ ಮೋದಿ … Continued