ಮುಡಾ ಹಗರಣ : ಸಿಎಂ ಸಿದ್ದರಾಮಯ್ಯ ಪತ್ನಿ ವಾಪಸ್​ ನೀಡಿದ್ದ 14 ನಿವೇಶನಗಳ ಖಾತೆ ರದ್ದು…!

ಮೈಸೂರು : ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ, ಇ.ಡಿ ಎಫ್‌ಐಆರ್‌ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರಿಗೆ ಸೇರಿದ್ದ 14 ನಿವೇಶನಗಳ ಖಾತೆ ಹಾಗೂ ಕ್ರಯಪತ್ರವನ್ನು ಮುಡಾ ರದ್ದುಗೊಳಿಸಿದೆ ಎಂದು ವರದಿಯಾಗಿದೆ. ಹಗರಣದ ಕೇಂದ್ರಬಿಂದುವಾಗಿರುವ 14 ನಿವೇಶನಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿಯಿಂದ ಹಿಂಪಡೆಯಲು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಒಪ್ಪಿಗೆ … Continued

ಮುಡಾ ಪ್ರಕರಣಕ್ಕೆ ಮಹತ್ವದ ಟ್ವಿಸ್ಟ್‌ : 14 ನಿವೇಶನ ಹಿಂದಿರುಗಿಸಲು ಸಿಎಂ ಸಿದ್ದರಾಮಯ್ಯ ಪತ್ನಿ ನಿರ್ಧಾರ ; ಮುಡಾ ಆಯುಕ್ತರಿಗೆ ಪತ್ರ….!

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಬಿ.ಎನ್. ಪಾರ್ವತಿ ಅವರು ತಮ್ಮ ಕುಟುಂಬದ ವಿರುದ್ಧದ ಪ್ರಕರಣಗಳ ಕೇಂದ್ರ ಬಿಂದುವಾಗಿರುವ ಭೂಮಿಯನ್ನು ಹಿಂದಿರುಗಿಸುವುದಾಗಿ ಮುಡಾ (ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ)ಕ್ಕೆ ಪತ್ರ ಬರೆದಿದ್ದಾರೆ. ತನ್ನ ಆತ್ಮಸಾಕ್ಷಿಯಂತೆ ನಡೆಯುತ್ತಿದ್ದೇನೆ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ. “ಈ ಪ್ಲಾಟ್‌ಗಳನ್ನು ಹಿಂದಿರುಗಿಸುವುದರ ಜೊತೆಗೆ, ಮುಡಾಕ್ಕೆ ಸಂಬಂಧಿಸಿದ ಎಲ್ಲಾ ಆರೋಪಗಳ ಬಗ್ಗೆ ಸಮಗ್ರ ತನಿಖೆಗೆ ನಾನು … Continued

ಮುಡಾ ಹಗರಣ ; ಸಿಎಂ ಸಿದ್ದರಾಮಯ್ಯಗೆ ಶುರುವಾಯ್ತು ಇ.ಡಿ.ಸಂಕಷ್ಟ ;ಇಸಿಐಆರ್ ದಾಖಲು

ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ (ಮುಡಾ) ಪ್ರಕರಣದಲ್ಲಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಜಾರಿ ನಿರ್ದೇಶನಾಲಯ (ED) ಪ್ರಕರಣ ದಾಖಲಿಸಿದೆ. ಜಾರಿ ನಿರ್ದೇಶನಾಲವು ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಡಿ ಪ್ರಕರಣದಡಿ ದಾಖಲಿಸಿದ್ದು, ಇದರಿಂದ ಮುಡಾ ಹಗರಣದಲ್ಲಿ ಸಿದ್ದರಾಮಯ್ಯ ಈಗ ಮತ್ತಷ್ಟು ಸಂಕಷ್ಟಕ್ಕೆ ಸಿಲುಕಿದ್ದಾರೆ. ಬೆಂಗಳೂರಿನ ವಿಶೇಷ ನ್ಯಾಯಾಲಯದ … Continued

ಮುಡಾ ಹಗರಣ: ಸಿಎಂ ವಿರುದ್ಧ ತನಿಖೆಗೆ ಲೋಕಾಯುಕ್ತದಿಂದ 4 ತಂಡಗಳ ರಚನೆ

ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನ ಹಂಚಿಕೆ ಪ್ರಕರಣದ ಸಂಬಂಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಆದೇಶದ ಮೇರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಎಫ್ ಐಆರ್‌ದಾಖಲಿಸಿಕೊಂಡಿರುವ ಲೋಕಾಯುಕ್ತ ಪೊಲೀಸರು, ತನಿಖೆಗಾಗಿ ಶನಿವಾರ ನಾಲ್ಕು ತಂಡಗಳನ್ನು ರಚಿಸಿದ್ದಾರೆ. ಲೋಕಾಯುಕ್ತ ಮೈಸೂರು ಠಾಣೆಯ ಕೇಸ್ ನಂಬರ್11/2024 ಅಡಿ ದಾಖಲಾಗಿರುವ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಅವರ ಪತ್ನಿ … Continued

ವೀಡಿಯೊ| ಹಿಂದಿನ ರಾಜ್ಯಪಾಲರ ಕ್ರಮ ಸಮರ್ಥಿಸಿಕೊಂಡಿದ್ದ ಸಿದ್ದರಾಮಯ್ಯನವರ ಹಳೆ ವೀಡಿಯೊ ಹಂಚಿಕೊಂಡು ಟಾಂಗ್‌ ನೀಡಿದ ಸ್ನೇಹಮಯಿ ಕೃಷ್ಣ…!

ಬೆಂಗಳೂರು : ರಾಜ್ಯಪಾಲ ಥಾವರಚಂದ ಗೆಹ್ಲೋಟ್‌ ಕಾರ್ಯ ವೈಖರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್‌‍ ನಾಯಕರು ಟೀಕಿಸುತ್ತಿರುವ ಬೆನ್ನಲ್ಲೇ ಈಗ, ಸಿದ್ದರಾಮಯ್ಯ ಈ ಹಿಂದೆ ರಾಜ್ಯಪಾಲರ ಪಾತ್ರದ ಕುರಿತು ಆಡಿರುವ ಮಾತು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗುತ್ತಿದೆ. ದೂರುದಾರ ಸ್ನೇಹಮಯಿ‌ ಕೃಷ್ಣ (Snehamayi Krishna) ಅವರು ಸಾಮಾಜಿಕ ಜಾಲತಾಣವಾದ ಫೇಸ್‌ಬುಕ್‌ನಲ್ಲಿ ಸಿದ್ದರಾಮಯ್ಯ ಅವರ 2011ರ ವೀಡಿಯೊ … Continued

ಮುಡಾ ಹಗರಣ : ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್ ​ಐಆರ್ ದಾಖಲು

ಮೈಸೂರು : ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ಆದೇಶದ ಮೇರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಇತರರ ವಿರುದ್ಧ ಲೋಕಾಯುಕ್ತ ಪೊಲೀಸರು ಶುಕ್ರವಾರ ಪ್ರಥಮ ಮಾಹಿತಿ ವರದಿ (FIR) ದಾಖಲಿಸಿದ್ದಾರೆ. ಲೋಕಾಯುಕ್ತ ಎಡಿಜಿಪಿ ಮನೀಶ ಖರ್ಬೀಕರ್ ಸೂಚನೆ ಮೇರೆಗೆ ಮೈಸೂರು ಲೋಕಾಯುಕ್ತ ಎಸ್‌ ಪಿ ಉದೇಶ ನೇತೃತ್ವದಲ್ಲಿ ಎಫ್ಐಆರ್ ದಾಖಲು ಮಾಡಲಾಗಿದೆ. ಜನಪ್ರತಿನಿಧಿಗಳ ನ್ಯಾಯಾಲಯವು ಸಿದ್ದರಾಮಯ್ಯ … Continued

ಮುಡಾ ಹಗರಣ | ಪಕ್ಷಕ್ಕೆ ಮುಜುಗರ ತಪ್ಪಿಸಲು ಸಿದ್ದರಾಮಯ್ಯ ರಾಜೀನಾಮೆ ಕೊಡುವುದು ಸೂಕ್ತ : ಕಾಂಗ್ರೆಸ್‌ ನಾಯಕನಿಂದಲೇ ಒತ್ತಾಯ

ಬೆಂಗಳೂರು: ಮುಡಾ ಹಗರಣದಲ್ಲಿ ಲೋಕಾಯುಕ್ತ ತನಿಖೆಗೆ ಜನಪ್ರತಿನಿಧಿಗಳ ನ್ಯಾಯಾಲಯ ಆದೇಶಿರುವ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆಗೆ ಪ್ರತಿಪಕ್ಷಗಳು ಆಗ್ರಹಿಸುವೆ. ಈಗ ಆಡಳಿತ ಪಕ್ಷವಾದ ಕಾಂಗ್ರೆಸ್‌ ನಾಯಕನಿಂದಲೇ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂಬ ಒತ್ತಾಯ ಕೇಳಿಬಂದಿದೆ. ಹೈಕೋರ್ಟ್ ಹಾಗೂ ಜನಪ್ರತಿನಿಧಿಗಳ ಕೋರ್ಟ್ ತೀರ್ಪಿನ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡುವುದು ಉತ್ತಮ ಎಂದು … Continued

ಮುಡಾ ಪ್ರಕರಣ | ‘ನನಗೆ ಯಾವುದೇ ಭಯವಿಲ್ಲ’: ಲೋಕಾಯುಕ್ತ ತನಿಖೆಗೆ ನ್ಯಾಯಾಲಯದ ಆದೇಶದ ನಂತರ ಸಿದ್ದರಾಮಯ್ಯ ಪ್ರತಿಕ್ರಿಯೆ

ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನ ಹಂಚಿಕೆ ಪ್ರಕರಣದ ತನಿಖೆ ಎದುರಿಸಲು ಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬುಧವಾರ ಪುನರುಚ್ಚರಿಸಿದ್ದಾರೆ. ಪ್ರಕರಣದಲ್ಲಿ ತಮ್ಮ ವಿರುದ್ಧ ಲೋಕಾಯುಕ್ತ ಪೊಲೀಸರ ತನಿಖೆಗೆ ವಿಶೇಷ ನ್ಯಾಯಾಲಯ ಆದೇಶಿಸಿದ ಕುರಿತು ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಯಾವುದೇ ತನಿಖೆಗೆ ಹೆದರುವುದಿಲ್ಲ. ಕಾನೂನು ಹೋರಾಟ ಮಾಡಲು ತಯಾರಾಗಿದ್ದೇವೆ  ಎಂದು ಹೇಳಿದ್ದಾರೆ. ಮಾಧ್ಯಮದವರೊಂದಿಗೆ … Continued

ಸಿದ್ದರಾಮಯ್ಯ ವಿರುದ್ಧ ತನಿಖೆ ಏಕೆ ಅಗತ್ಯ ? ಹೈಕೋರ್ಟ್ ಹೇಳಿದ್ದೇನು…?

ಬೆಂಗಳೂರು: ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೆರೆಮರೆಯಲ್ಲಿ ಇಲ್ಲ ಎಂದು ಒಪ್ಪಿಕೊಳ್ಳುವುದು ಕಷ್ಟ. ಮುಖ್ಯಮಂತ್ರಿ ಕುಟುಂಬದವರೇ ಫಲಾನುಭವಿ ಆಗಿರುವುದರಿಂದ ಮುಡಾ ಪ್ರಕರಣದಲ್ಲಿ ತನಿಖೆ ಅಗತ್ಯವಿದೆ ಎಂದು ಹೈಕೋರ್ಟ್‌ (High Court) ತೀರ್ಪಿನಲ್ಲಿ ಹೇಳಿದೆ. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(MUDA) ಹಗರಣಕ್ಕೆ ಸಂಬಂಧಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ರಾಜ್ಯಪಾಲರು ಸೆಕ್ಷನ್ 17 ಎ ಭ್ರಷ್ಟಾಚಾರ ನಿರ್ಮೂಲನೆ … Continued

ಮುಡಾ ಪ್ರಕರಣ | ಸಿದ್ದರಾಮಯ್ಯಗೆ ಹಿನ್ನಡೆ ; ರಾಜ್ಯಪಾಲರ ಪ್ರಾಸಿಕ್ಯೂಷನ್‌ ಆದೇಶ ಎತ್ತಿಹಿಡಿದ ಹೈಕೋರ್ಟ್‌ : ಸಿದ್ದರಾಮಯ್ಯ ಅರ್ಜಿ ವಜಾ

ಬೆಂಗಳೂರು : ಮುಡಾ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲ ಥಾವರಚಂದ ಗೆಹ್ಲೋಟ್‌ ಅವರು ತಮ್ಮ ವಿರುದ್ಧ ಅಭಿಯೋಜನಾ (ಪ್ರಾಸಿಕ್ಯೂಷನ್) ಮಂಜೂರಾತಿ ನೀಡಿರುವುದನ್ನು ಪ್ರಶ್ನಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್‌ ಮಂಗಳವಾರ ವಜಾ ಮಾಡಿದೆ. ಹೀಗಾಗಿ ಮೊದಲ ಹಂತದ ಕಾನೂನು ಹೋರಾಟದಲ್ಲಿ ಸಿದ್ದರಾಮಯ್ಯ ಅವರಿಗೆ ತೀವ್ರ ಹಿನ್ನಡೆಯಾದಂತಾಗಿದೆ. ರಾಜ್ಯಪಾಲರ ಆದೇಶ ರದ್ದತಿಗೆ ಕೋರಿ … Continued