ಸಿಎಂ ಸಿದ್ದರಾಮಯ್ಯ ಪತ್ನಿ ಆಸ್ಪತ್ರೆಗೆ ದಾಖಲು

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಬಿ.ಎಂ. ಪಾರ್ವತಿ (B.M. Parvathi) ಅವರ ಆರೋಗ್ಯದಲ್ಲಿ ದಿಢೀರ್ ಏರುಪೇರು ಉಂಟಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದುಬಂದಿದೆ. ಶ್ವಾಸಕೋಶದ ತೊಂದರೆ ಹಿನ್ನೆಲೆಯಲ್ಲಿ ಅವರನ್ನು ಬೆಂಗಳೂರಿನ ಶೇಷಾದ್ರಿಪುರಂನಲ್ಲಿರುವ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ. ಪಾರ್ವತಿ ಅವರನ್ನು ಸೋಮವಾರ ಅಪರಾಹ್ನ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಹೇಳಲಾಗಿದೆ. ಪ್ರಧಾನಿ ಮೋದಿ ಮತ್ತು … Continued

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್‌ ವೀಡಿಯೊ ವೈರಲ್‌ ; ಬಿಜೆಪಿ ಆಕ್ಷೇಪ, ಸಿಎಂ ಸಿದ್ದರಾಮಯ್ಯಗೆ ಪ್ರಶ್ನೆ

ಬೆಂಗಳೂರು: ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (Kempegowda international airport) ಕೆಲವರು ಸಾಮೂಹಿಕ ನಮಾಜ್ ಮಾಡಿರುವ ವೀಡಿಯೊ ವೈರಲ್‌ ಆಗಿದೆ. ಕೆಂಪೇಗೌಡ ವಿಮಾನ ನಿಲ್ದಾಣದ ಟರ್ಮಿನಲ್ 2ರಲ್ಲಿ ಕೆಲವರು ಸಾಮೂಹಿಕವಾಗಿ ನಮಾಜ್ ಮಾಡಿದ್ದು, ಹಜ್ ಯಾತ್ರಿಕರನ್ನು ಬೀಳ್ಕೊಡಲು ವಿಮಾನ ನಿಲ್ದಾಣಕ್ಕೆ ಬಂದಿದ್ದ ಕೆಲವರು ನಮಾಜ್ ಮಾಡಿದ್ದಾರೆ ಎನ್ನಲಾಗಿದೆ. ಬೆಂಗಳೂರು ವಿಮಾನ ನಿಲ್ದಾಣ ಆವರಣದಲ್ಲಿ ನಮಾಜ್ … Continued

ರಾಜ್ಯ ಸರ್ಕಾರದಿಂದ ಪರಿಷ್ಕೃತ ದರ ನಿಗದಿ ; ಪ್ರತಿ ಟನ್‌ ಕಬ್ಬಿಗೆ 3,300 ರೂ. ದರ ನೀಡಲು ನಿರ್ಧಾರ

ಬೆಂಗಳೂರು : ಕಬ್ಬು ಬೆಳೆಗಾರರ ಪ್ರತಿಭಟವೆ ತೀವ್ರಗೊಂಡ ಬೆನ್ನಲ್ಲೇ ಪ್ರತಿ ಟನ್‌ (1 ಸಾವಿರ ಕೆಜಿ) ಕಬ್ಬಿನ ಪರಿಷ್ಕೃತ ಬೆಲೆಯನ್ನು 3,300 ರೂ.ಗಳಿಗೆ ನಿಗದಿ ಮಾಡಿದೆ. ವಿಧಾನಸೌಧದಲ್ಲಿ ಸಕ್ಕರೆ ಕಾರ್ಖಾನೆ ಮಾಲೀಕರ ಜೊತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಭೆ ನಡೆಸಿದ ಬಳಿಕ ಈ ಮಹತ್ವದ ನಿರ್ಧಾರಕ್ಕೆ ಬರಲಾಗಿದೆ. ಸರ್ಕಾರದ ಈ ನಿರ್ಧಾರಕ್ಕೆ ಕಬ್ಬು ಬೆಳೆಗಾರರು ಒಪ್ಪಿಗೆ ನೀಡಿದ್ದಾರೆ. … Continued

ಮಾಜಿ ಸಚಿವ, ಕಾಂಗ್ರೆಸ್ ಶಾಸಕ ಎಚ್.ವೈ ಮೇಟಿ ನಿಧನ

ಬೆಂಗಳೂರು: ಮಾಜಿ ಸಚಿವ, ಕಾಂಗ್ರೆಸ್‌ ಶಾಸಕ (Congres MLA) ಎಚ್.ವೈ ಮೇಟಿ (HY Meti) ಅವರು ಮಂಗಳವಾರ ನಿಧನರಾಗಿದ್ದಾರೆ. ಬಾಗಲಕೋಟೆ ಕಾಂಗ್ರೆಸ್​ ಶಾಸಕರಾಗಿದ್ದ ಇವರು ಚಿಕಿತ್ಸೆ ಫಲಕಾರಿಯಾಗದೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಎಚ್.ವೈ ಮೇಟಿ ಅವರು ತೀವ್ರ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದರು. ಅವರಿಗೆ 80 ವರ್ಷ ವಯಸ್ಸಾಗಿತ್ತು. ಬಾಗಲೋಕಟೆ ಜಿಲ್ಲೆಯ ತಿಮ್ಮಾಪುರದಲ್ಲಿ 1946 ಅಕ್ಟೋಬರ್ … Continued

“ಸಿದ್ದರಾಮಯ್ಯ ರಾಜಕೀಯ ಜೀವನದ ಕೊನೆ ಹಂತದಲ್ಲಿದ್ದಾರೆ ಎಂದ ಪುತ್ರ ; ಸಂಭಾವ್ಯ ಉತ್ತರಾಧಿಕಾರಿ ಯಾರೆಂದು ಹೇಳಿದ ಯತೀಂದ್ರ : ರಾಜಕೀಯದಲ್ಲಿ ಸಂಚಲನ…!

ಬೆಂಗಳೂರು/ಬೆಳಗಾವಿ: ಕರ್ನಾಟಕದಲ್ಲಿ ಮುಖ್ಯಮಂತ್ರಿ ಬದಲಾವಣೆ ಕುರಿತು ನಿರಂತರ ಊಹಾಪೋಹಗಳು ಕೇಳಿಬರುತ್ತಿರುವ ನಡುವೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರ ಹೇಳಿಕೆಯೊಂದು ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ರಾಜಕೀಯ ಜೀವನದ ಕೊನೆಯ ಹಂತದಲ್ಲಿದ್ದಾರೆ ಮತ್ತು ಸಚಿವ ಸತೀಶ ಜಾರಕಿಹೊಳಿ ಅವರಂತಹವರಿಗೆ ‘ಮಾರ್ಗದರ್ಶಕರಾಗಿ’ರಬೇಕು ಎಂದು ಯತೀಂದ್ರ ಹೇಳಿದ್ದಾರೆ. ಸಿದ್ದರಾಮಯ್ಯ ಅವರು ಉಪಮುಖ್ಯಮಂತ್ರಿ … Continued

ಸರ್ಕಾರಿ ಜಾಗದಲ್ಲಿ ಸಂಘ-ಸಂಸ್ಥೆಗಳ ಚಟುವಟಿಕೆಗೆ ಅನುಮತಿ ಕಡ್ಡಾಯ: ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ

ಬೆಂಗಳೂರು: ಬೆಂಗಳೂರು: ಸರ್ಕಾರಿ ಜಾಗದಲ್ಲಿ ಆರ್​ಎಸ್​ಎಸ್​ ಸೇರಿದಂತೆ ಖಾಸಗಿ ಸಂಘಟನೆಗಳ ಚಟುವಟಿಕೆ ನಡೆಸಲು ಕಡ್ಡಾಯವಾಗಿ ಅನುಮತಿಪಡೆಯಬೇಕೆಂದು ಇತ್ತೀಚೆಗೆ ಸಚಿವ ಸಂಪುಟವು ನಿರ್ಧಾರ ಕೈಗೊಂಡ ನಂತರ ಈಗ ರಾಜ್ಯ ಸರ್ಕಾರವು ಈ ಬಗ್ಗೆ ಅಧಿಕೃತ ಆದೇಶವನ್ನು ಹೊರಡಿಸಿದೆ. ಈ ಕುರಿತು ರಾಜ್ಯ ಸರ್ಕಾರ ಶನಿವಾರ (ಅಕ್ಟೋಬರ್ 18) ಅಧಿಕೃತ ಆದೇಶ ಹೊರಡಿಸಿದ್ದು, ತಕ್ಷಣದಿಂದಲೇ ಆದೇಶ ಜಾರಿಯಾಗಲಿದೆ. ರಾಜ್ಯದ … Continued

ಸರ್ಕಾರಿ ಜಾಗಗಳಲ್ಲಿ ನಮಾಜ್ ಮಾಡಲು ಅವಕಾಶ ಕೊಡಬೇಡಿ : ಸಿಎಂ ಸಿದ್ದರಾಮಯ್ಯಗೆ‌ ಶಾಸಕ ಯತ್ನಾಳ ಪತ್ರ

ಬೆಂಗಳೂರು: ಸರ್ಕಾರಿ ಸ್ಥಳಗಳಲ್ಲಿ ಆರ್‌ಎಸ್‌ಎಸ್‌ ಚಟುವಟಿಕೆ ನಿಷೇಧಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ಪತ್ರ ಬರೆದ ಬೆನ್ನಲ್ಲೇ ಬಿಜೆಪಿ ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ ಯತ್ನಾಳ (Basanagouda Patil Yatnal), ಸಾರ್ವಜನಿಕ ಸ್ಥಳಗಳು, ಸರ್ಕಾರಿ ಜಾಗಗಳಲ್ಲಿ ನಮಾಜ್ ಮಾಡಲು ಅವಕಾಶ ನೀಡಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು ಆಗ್ರಹಿಸಿದ್ದಾರೆ. ತಾವು … Continued

ಸರ್ಕಾರಿ ಸ್ಥಳಗಳಲ್ಲಿ ಖಾಸಗಿ ಸಂಸ್ಥೆಗಳ ಚಟುವಟಿಕೆಗೆ ಅನುಮತಿ ಕಡ್ಡಾಯ ; ಆರ್‌ ಎಸ್‌ ಎಸ್‌ ಚಟುವಟಿಕೆಗೆ ಪರೋಕ್ಷ ಮೂಗುದಾರಕ್ಕೆ ಮುಂದಾದ ಸರ್ಕಾರ..?

ಬೆಂಗಳೂರು: ರಾಜ್ಯದ ಸರ್ಕಾರಿ ಶಾಲಾ-ಕಾಲೇಜುಗಳ ಆವರಣದಲ್ಲಿ, ಸರ್ಕಾರಿ ಸ್ಥಳಗಳಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್)ದ ಚಟುವಟಿಕೆಗಳಿಗೆ ಪರೋಕ್ಷವಾಗಿ ನಿಯಂತ್ರಣ ಹೇರುವ ನಿರ್ಧಾರವನ್ನು ಗುರುವಾರ (ಅಕ್ಟೋಬರ್ 16) ರಾಜ್ಯ ಸರ್ಕಾರ ತೆಗೆದುಕೊಂಡಿದೆ. ಖಾಸಗಿ ಸಂಸ್ಥೆಗಳು, ಸಂಘಟನೆಗಳು ಚಟುವಟಿಕೆಗಳನ್ನ ನಡೆಸಲು ಸರ್ಕಾರದ ಪೂರ್ವಾ ಅನುಮತಿ ಕಡ್ಡಾಯಗೊಳಿಸಲಾಗಿದೆ. ಗುರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟದಲ್ಲಿ ಈ ತೀರ್ಮಾನ … Continued

ಸಂಚಾರ ದಟ್ಟಣೆ ಕಡಿಮೆ ಮಾಡಲು ವಿಪ್ರೋ ಕ್ಯಾಂಪಸ್ಸಿನಲ್ಲಿ ವಾಹನ ಸಂಚಾರಕ್ಕೆ ಅವಕಾಶ ಕೋರಿದ್ದ ಸಿಎಂ ಸಿದ್ದರಾಮಯ್ಯ ; ಒಪ್ಪದ ಅಜೀಂ ಪ್ರೇಮ್‌ ಜಿ

ಬೆಂಗಳೂರು: ಬೆಂಗಳೂರು ಔಟರ್‌ ರಿಂಗ್‌ ರೋಡ್‌ (outer ring road) ಪ್ರದೇಶದಲ್ಲಿ ಭಾರೀ ಸಂಚಾರ ದಟ್ಟಣೆ ಸಮಸ್ಯೆಗೆ ಪರಿಹಾರಕ್ಕಾಗಿ ಸರ್ಜಾಪುರದ ವಿಪ್ರೋ ಕ್ಯಾಂಪಸ್ ಮೂಲಕ ಸೀಮಿತ ವಾಹನ ಸಂಚಾರಕ್ಕೆ ಅವಕಾಶ ನೀಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಡಿದ ಮನವಿಗೆ ವಿಪ್ರೋ ಅಧ್ಯಕ್ಷ ಅಜೀಜ್ ಪ್ರೇಮ್‌ಜಿ ಸಮ್ಮತಿ ಸೂಚಿಸಿಲ್ಲ. ಕ್ಯಾಂಪಸ್ ಕಂಪನಿಯ ಒಡೆತನದ ಖಾಸಗಿ ಆಸ್ತಿಯಾಗಿದ್ದು, ಕ್ಯಾಂಪಸ್ … Continued

ಮೈಸೂರಿನಲ್ಲಿ ಸಾಹಿತಿ ಎಸ್‌.ಎಲ್‌. ಭೈರಪ್ಪ ಸ್ಮಾರಕ ನಿರ್ಮಾಣ: ಸಿಎಂ ಸಿದ್ದರಾಮಯ್ಯ ಘೋಷಣೆ

ಬೆಂಗಳೂರು: ಕನ್ನಡದ ಖ್ಯಾತ ಸಾಹಿತಿ ಹಾಗೂ ಸರಸ್ವತಿ ಸಮ್ಮಾನ್‌ ಪುರಸ್ಕೃತ ಡಾ. ಎಸ್ ಎಲ್ ಭೈರಪ್ಪ (SL Bhyrappa) ಅವರ ಸ್ಮಾರಕವನ್ನು ಮೈಸೂರಿನಲ್ಲಿ ನಿರ್ಮಾಣ ಮಾಡಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ನಿನ್ನೆ ಬುಧವಾರ (ಸೆ.24) ನಿಧನರಾದ ಸಾಹಿತಿ ಎಸ್.ಎಲ್. ಭೈರಪ್ಪ (94) ಅವರ ಪಾರ್ಥಿವ ಶರೀರವನ್ನು ಇಂದು ಗುರುವಾರ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ … Continued