ಜಾತಿ ಗಣತಿ | ಹಿಂದೂ ಉಪಜಾತಿಗಳ ಜೊತೆ ಕ್ರೈಸ್ತ ಪದ ; ಮರುಪರಿಶೀಲಿಸುವಂತೆ ಸಿಎಂ ಸಿದ್ದರಾಮಯ್ಯಗೆ ರಾಜ್ಯಪಾಲ ಗೆಹ್ಲೋಟ್ ಪತ್ರ

ಬೆಂಗಳೂರು: ಹಿಂದೂ ಉಪಜಾತಿಗಳ ಜೊತೆ ಕ್ರೈಸ್ತ ಪದ ಸೇರ್ಪಡೆ ಕುರಿತಂತೆ ರಾಜ್ಯದಲ್ಲಿ ತೀವ್ರ ವಿವಾದ ಉಂಟಾಗಿದ್ದು, ಈ ಮಧ್ಯೆ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ (Thaawarchand Gehlot) ಮಧ್ಯ ಪ್ರವೇಶಿಸಿದ್ದಾರೆ. ಕ್ರೈಸ್ತ ಪದಕ್ಕೆ ಹಿಂದೂ ಉಪಜಾತಿಗಳ ಸೇರ್ಪಡೆಗೊಳಿಸಿದ್ದನ್ನು ಕುರಿತಂತೆ ಮರುಪರಿಶೀಲಿಸುವಂತೆ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯಗೆ (Siddaramaia) ಪತ್ರ ಬರೆದಿದ್ದಾರೆ. ಮುಂಬರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ಜಾತಿ … Continued

ರಾಜ್ಯದಲ್ಲಿ ಅನರ್ಹ ಬಿಪಿಎಲ್ ಕಾರ್ಡ್‌ ರದ್ದುಪಡಿಸಿ; ಸಿಎಂ ಸಿದ್ದರಾಮಯ್ಯ ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಅನರ್ಹ ಬಿಪಿಎಲ್ ಕಾರ್ಡ್‌ಗಳನ್ನು ರದ್ದುಪಡಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಆದರೆ ಅರ್ಹ ಬಿಪಿಎಲ್ ಕಾರ್ಡುದಾರರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಬೇಕು. ಒಂದುವೇಳೆ ಅರ್ಹರು ಯಾರಾದರೂ ಬಿಟ್ಟು ಹೋಗಿದ್ದರೆ ಅವರಿಗೆ ತಕ್ಷಣವೇ ಬಿಪಿಎಲ್ ಕಾರ್ಡ್ ನೀಡಲು ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಬುಧವಾರ ನಡೆದ … Continued

ಭೋವಿ ನಿಗಮದ ಅಧ್ಯಕ್ಷ ಸ್ಥಾನಕ್ಕೆ ಎಸ್.ರವಿಕುಮಾರ ರಾಜೀನಾಮೆ

ಬೆಂಗಳೂರು: ಕರ್ನಾಟಕ ಭೋವಿ ಅಬಿವೃದ್ಧಿ ನಿಗಮದ ಅಧ್ಯಕ್ಷ ಸ್ಥಾನಕ್ಕೆ ಎಸ್‌. ರವಿಕುಮಾರ ರಾಜೀನಾಮೆ ನೀಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಭೇಟಿ ಮಾಡಿ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ ಎಂದು ಹೇಳಲಾಗಿದೆ. ಕಮಿಷನ್ ವಸೂಲಿ ಆರೋಪಕ್ಕೆ ತುತ್ತಾಗಿರುವ ಭೋವಿ ನಿಗಮದ ಅಧ್ಯಕ್ಷ ಎಸ್. ರವಿಕುಮಾರ ಅವರಿಗೆ ರಾಜೀನಾಮೆ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ ಎನ್ನಲಾಗಿದ್ದು, ಅದರ ಬೆನ್ನಲ್ಲೇ ಅವರು … Continued

ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಇವಿಎಂ ಬದಲಿಗೆ ಬ್ಯಾಲೆಟ್ ಪೇಪರ್ ಬಳಕೆ; ಆಯೋಗಕ್ಕೆ ಶಿಫಾರಸಿಗೆ ಸಂಪುಟದ ಮಹತ್ವದ ನಿರ್ಧಾರ

ಬೆಂಗಳೂರು: ರಾಜ್ಯದಲ್ಲಿ ಮುಂಬರುವ ಎಲ್ಲ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಇವಿಎಂಗಳ ಬದಲಿಗೆ ಮತಪತ್ರ (ಬ್ಯಾಲೆಟ್ ಪೇಪರ್)ಗಳ ಬಳಸಿ ಚುನಾವಣೆ ನಡೆಸುವಂತೆ ರಾಜ್ಯ ಚುನಾವಣಾ ಆಯೋಗಕ್ಕೆ ಶಿಫಾರಸು ಮಾಡಲು ರಾಜ್ಯ ಸಚಿವ ಸಂಪುಟ ಗುರುವಾರ (ಸೆಪ್ಟೆಂಬರ್‌ ೪) ನಿರ್ಧರಿಸಿದೆ. ಗುರುವಾರ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕಾನೂನು … Continued

ವೀಡಿಯೊ…| “ನಿಮಗೆ ಕನ್ನಡ ಬರುತ್ತದೆಯೇ” ; ರಾಷ್ಟ್ರಪತಿಗಳನ್ನುಕೇಳಿದ ಸಿದ್ಧರಾಮಯ್ಯ: ಅವರು ಕೊಟ್ಟ ಉತ್ತರ ಏನು ಗೊತ್ತೆ ?-ವೀಕ್ಷಿಸಿ

ಬೆಂಗಳೂರು: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಮೈಸೂರಿಗೆ ಸೋಮವಾರ ಭೇಟಿ ನೀಡಿದಾಗ ಅವರು ಮತ್ತು ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ನಡುವೆ ಹಾಸ್ಯಮಯವಾಗಿ ವಿಚಾರ ವಿನಿಮಯವಾಯಿತು. ಮುಖ್ಯಮಂತ್ರಿ ಸಿದ್ದರಾಮಯ್ಯ ರಾಷ್ಟ್ರಪತಿಯವರನ್ನು “ನಿಮಗೆ ಕನ್ನಡ ಬರುತ್ತಾ?” ಎಂದು ಕೇಳಿದರು. ರಾಷ್ಟ್ರಪತಿಗಳು ನಗುತ್ತಾ, ಗೊತ್ತಿಲ್ಲ ಎಂದು ಹೇಳಿದರು.  ಹಾಗೂ ಖಂಡಿತವಾಗಿಯೂ ತಾವು ಭಾಷೆ ಕಲಿಯುವುದಾಗಿ ಹೇಳಿದರು. ಅಖಿಲ ಭಾರತ ವಾಕ್ … Continued

ವೀಡಿಯೊ…| ಕಾಂಗ್ರೆಸ್‌ ಪಕ್ಷದ ಮತಗಳ್ಳತನ ಬಯಲು ಮಾಡಿದ ಸಿದ್ದರಾಮಯ್ಯ ; ಇದಕ್ಕೇನಂತೀರಿ ಎಂದು ಬಿಜೆಪಿ ವಾಗ್ದಾಳಿ

ಬೆಂಗಳೂರು :ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್‌ ಪಕ್ಷದ ಟಿಕೆಟ್‌ನಲ್ಲಿ ಸ್ಪರ್ಧಿಸಿದಾಗ ಕಾಂಗ್ರೆಸ್ ಅಭ್ಯರ್ಥಿಯ ವಿರುದ್ಧ ಚುನಾವಣೆಯಲ್ಲಿ ವಂಚನೆಯಿಂದಾಗಿ ಸೋತಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಹೇಳಿಕೊಂಡಿದ್ದಾರೆ. ಇದು ಬಿಹಾರದಲ್ಲಿ “ಮತ ಅಧಿಕಾರ ಯಾತ್ರೆ” ಆಯೋಜಿಸಿರುವ ಕಾಂಗ್ರೆಸ್‌ ಮೇಲೆ ವಾಗ್ದಾಳಿ ನಡೆಸಲು ಬಿಜೆಪಿಗೆ ಅವಕಾಶ ನೀಡಿದೆ. 1991ರಲ್ಲಿ ಕೊಪ್ಪಳ ಲೋಕಸಭಾ ಕ್ಷೇತ್ರದಿಂದ ಜನತಾದಳದ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಸಿದ್ದರಾಮಯ್ಯ (Siddaramaiah) … Continued

ಗ್ರೇಟರ್‌ ಬೆಂಗಳೂರು ಪ್ರಾಧಿಕಾರ ಅಧ್ಯಕ್ಷರಾಗಿ ಸಿದ್ದರಾಮಯ್ಯ, ಉಪಾಧ್ಯಕ್ಷರಾಗಿ ಡಿಕೆಶಿ ನೇಮಕ

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರವನ್ನು (Greater Bengaluru Authority) ರಚನೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಪ್ರಾಧಿಕಾರದ ಅಧ್ಯಕ್ಷರಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ, ಉಪಾಧ್ಯಕ್ಷರಾಗಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರನ್ನು ನೇಮಕ ಮಾಡಲಾಗಿದೆ. ಈ ಸಂಬಂಧ ನಗರಾಭಿವೃದ್ಧಿ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಿದ್ದಾರೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಪದನಿಮಿತ್ತ ಅಧ್ಯಕ್ಷರಾಗಿ ಐದು ವಲಯದ … Continued

ಭಾರತದ ಟಾಪ್ 3 ಶ್ರೀಮಂತ- ಬಡ ಸಿಎಂಗಳು : ಸಿಎಂ ಸಿದ್ದರಾಮಯ್ಯಗೆ ಎಷ್ಟನೇ ಸ್ಥಾನ ಗೊತ್ತೆ..?

ನವದೆಹಲಿ: ಅಸೋಸಿಯೇಷನ್ ​​ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ADR) ದೇಶದ ಮುಖ್ಯಮಂತ್ರಿಗಳ ಸಂಪತ್ತನ್ನು ಒಳಗೊಂಡ ಪಟ್ಟಿಯನ್ನು ತನ್ನ ಇತ್ತೀಚಿನ ವರದಿಯನ್ನು ಬಿಡುಗಡೆ ಮಾಡಿದ್ದು, ಈ ಪಟ್ಟಿಯು ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಯಾರು ಮತ್ತು ಅತ್ಯಂತ ಬಡವ ಮುಖ್ಯಮಂತ್ರಿ ಯಾರು ಎಂಬುದನ್ನು ಬಹಿರಂಗಪಡಿಸಿದೆ. ದೇಶದ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳಲ್ಲಿ ಆಂಧ್ರಪ್ರದೇಶದ ಮುಖ್ಯಮಂತ್ರಿ ಎನ್‌.ಚಂದ್ರಬಾಬು ನಾಯ್ಡು ದೇಶದ ಅತ್ಯಂತ … Continued

ಬೂಕರ್ ಪ್ರಶಸ್ತಿ ಪುರಸ್ಕೃತ ಲೇಖಕಿ ಬಾನು ಮುಷ್ತಾಕರಿಂದ ಈ ಬಾರಿಯ ದಸರಾ ಉದ್ಘಾಟನೆ

ಬೆಂಗಳೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವನ್ನು (Mysuru Dasara) ಈ ಬಾರಿ ಬೂಕರ್ ಪ್ರಶಸ್ತಿ ಪುರಸ್ಕೃತ ಕನ್ನಡದ ಲೇಖಕಿ ಬಾನು ಮುಷ್ತಾಕ್ ಉದ್ಘಾಟಿಸಲಿದ್ದಾರೆ. ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಪ್ರಕಟಿಸಿದ್ದಾರೆ. ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ಬಾರಿ ವಿಶ್ವ ವಿಖ್ಯಾತ ದಸರಾ ಮಹೋತ್ಸವವನ್ನು ಬೂಕರ್ ಪ್ರಶಸ್ತಿ ಪುರಸ್ಕೃತ ಬಾನು ಮುಷ್ತಾಕ್ ಅವರು ಉದ್ಘಾಟಿಸಲಿದ್ದು, … Continued

ಪರಿಶಿಷ್ಟ ಜಾತಿ ಎಡಗೈ, ಬಲಗೈ ಸಮುದಾಯಕ್ಕೆ ತಲಾ ಶೇ. 6 ರಷ್ಟು ಒಳ ಮೀಸಲಾತಿ: ಸದನದಲ್ಲಿ ಪ್ರಕಟಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಕುರಿತು ನ್ಯಾಯಮೂರ್ತಿ ಎಚ್.ಎನ್. ನಾಗಮೋಹನ ದಾಸ್ ಆಯೋಗದ ವರದಿಯನ್ನು ಕೆಲವು ಮಾರ್ಪಾಡುಗಳೊಂದಿಗೆ ರಾಜ್ಯ ಸರ್ಕಾರವು ಔಪಚಾರಿಕವಾಗಿ ಸ್ವೀಕರಿಸಲು ನಿರ್ಧರಿಸಿದೆ. ಮಂಗಳವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಪ್ರಸ್ತಾವನೆಗೆ ಅನುಮೋದನೆ ದೊರೆತ ನಂತರ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ವಿಧಾನಸಭೆಯಲ್ಲಿ ಈ ನಿರ್ಧಾರವನ್ನು ಪ್ರಕಟಿಸಿದರು. ನವೆಂಬರ್ 2024 ರಲ್ಲಿ ರಚಿಸಲಾದ … Continued