ಸಿಎಂರಿಂದ ಅವಮಾನಕ್ಕೊಳಗಾಗಿ ರಾಜೀನಾಮೆಗೆ ಮುಂದಾಗಿದ್ದ ಭರಮನಿಗೆ ಬಡ್ತಿ ನೀಡಿದ ರಾಜ್ಯ ಸರ್ಕಾರ

ಬೆಳಗಾವಿ: ಕೆಲ ತಿಂಗಳ ಹಿಂದೆ ಬೆಳಗಾವಿಯಲ್ಲಿ ನಡೆದ ಕಾಂಗ್ರೆಸ್‌ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರಿಂದ ಅವಮಾನಕ್ಕೀಡಾಗಿ ರಾಜೀನಾಮೆಗೆ ಮುಂದಾಗಿದ್ದ ಧಾರವಾಡ ಎಎಸ್‌ಪಿ ನಾರಾಯಣ ವಿ. ಭರಮನಿ ಅವರಿಗೆ ರಾಜ್ಯ ಸರ್ಕಾರ ಪದೋನ್ನತಿ ನೀಡಿದೆ. ಈಗ ಅವರನ್ನು ಬೆಳಗಾವಿ ಮಹಾನಗರ ಕಾನೂನು ಮತ್ತು ಸುವ್ಯವಸ್ಥೆಯ ನೂತನ ಡಿಸಿಪಿಯಾಗಿ ನೇಮಕ ಮಾಡಿದೆ. ಬೆಳಗಾವಿಯಲ್ಲಿ ಸಬ್ ಇನ್ಸ್ಪೆಕ್ಟರ್, … Continued

ಕರ್ನಾಟಕ ಸರ್ಕಾರ ಭೂಸ್ವಾಧೀನ ಕೈಬಿಟ್ಟ ಬೆನ್ನಲ್ಲೇ ಏರೋಸ್ಪೇಸ್ ಉದ್ಯಮಿಗಳಿಗೆ ಬಹಿರಂಗ ಆಹ್ವಾನ ನೀಡಿದ ಆಂಧ್ರ ಸರ್ಕಾರ

ಅಮರಾವತಿ: ಮೂರು ವರ್ಷಗಳಿಂದ ನಡೆಯುತ್ತಿದ್ದ ದೇವನಹಳ್ಳಿಯ ಚನ್ನರಾಯಪಟ್ಟಣ ಜಮೀನು ಭೂಸ್ವಾಧೀನವನ್ನು ರಾಜ್ಯ ಸರ್ಕಾರ ರದ್ದುಪಡಿಸಿದ ಬೆನ್ನಲ್ಲೇ, ಆಂಧ್ರಪ್ರದೇಶ ಸರ್ಕಾರ ಏರೋಸ್ಪೇಸ್ ಉದ್ಯಮಿಗಳಿಗೆ ಬಹಿರಂಗ ಆಹ್ವಾನ ನೀಡಿದೆ. ಆಂಧ್ರ (Andhra Pradesh) ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಪುತ್ರ ಹಾಗೂ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ನಾರಾ ಲೋಕೇಶ್ (Nara Lokesh) ಏರೋಸ್ಪೇಸ್ ಉದ್ಯಮಿಗಳಿಗೆ ಬಹಿರಂಗ ಆಹ್ವಾನ ನೀಡಿದ್ದಾರೆ. … Continued

ವೀಡಿಯೊ..| ರಸ್ತೆ ಬೇಕಂದ್ರೆ ಗ್ಯಾರಂಟಿ ಯೋಜನೆಗಳು ಬಂದ್ ಆಗ್ತವೆ : ಸಿಎಂ ಆರ್ಥಿಕ ಸಲಹೆಗಾರ ರಾಯರೆಡ್ಡಿ ಹೇಳಿಕೆ ಚರ್ಚೆಗೆ ಗ್ರಾಸ

ಕೊಪ್ಪಳ: ”ಗ್ರಾಮೀಣ ಭಾಗದಲ್ಲಿ ರಸ್ತೆ ನಿರ್ಮಿಸಬೇಕೆಂದರೆ ಅನ್ನಭಾಗ್ಯ ಯೋಜನೆಯ ಅಕ್ಕಿ ಸೇರಿ ಎಲ್ಲ ಬಂದ್‌ ಆಗುತ್ತವೆ,” ಎಂದು ಮುಖ್ಯಮಂತ್ರಿ ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿ ಹೇಳಿಕೆ ನೀಡಿರುವುದು ತೀವ್ರ ಚರ್ಚೆಗೆ ಗ್ರಾಸವಾಗಿದೆ. ಜಿಲ್ಲೆಯ ಕುಕನೂರು ತಾಲೂಕಿನ ಗ್ರಾಮವೊಂದರಲ್ಲಿ ಶನಿವಾರ ನಡೆದ ಸರಕಾರಿ ಪ್ರೌಢಶಾಲೆ ಉದ್ಘಾಟನೆ ಕಾರ್ಯಕ್ರಮದಲ್ಲಿ ರೈತರೊಬ್ಬರು, ” ಮಹಿಳೆಯರಿಗೆ ಹಣ ಕೊಡ್ತೀರಿ, ಸೌಲಭ್ಯ ಕೊಡ್ತೀರಿ. … Continued

ಕಾಂಗ್ರೆಸ್ಸಿನ ಹಿಂದುಳಿದ ವರ್ಗಗಳ ರಾಷ್ಟ್ರೀಯ ಸಲಹಾ ಮಂಡಳಿಗೆ ಸಿದ್ದರಾಮಯ್ಯ ಮುಖ್ಯಸ್ಥ

ಬೆಂಗಳೂರು : ಕಾಂಗ್ರೆಸ್‌ ಹೈಕಮಾಂಡ್‌ ಹಿಂದುಳಿದ ವರ್ಗಗಳ ಸಂಘಟನೆಗೆ ಮುಂದಾಗಿದೆ. ಎಐಸಿಸಿ ಹಿಂದುಳಿದ ವರ್ಗಗಳ ಘಟಕದ ರಾಷ್ಟ್ರೀಯ ಸಲಹಾ ಮಂಡಳಿಯನ್ನು ರಚಿಸಿದ್ದು, ನಾಲ್ಕು ಮಂದಿ ಮಾಜಿ ಮುಖ್ಯಮಂತ್ರಿಗಳು ಸೇರಿದಂತೆ 24 ಸದಸ್ಯರಿರುವ ಮಂಡಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಮುಖ್ಯಸ್ಥರನ್ನಾಗಿ ನೇಮಕ ಮಾಡಿದೆ. ಅಹಿಂದ ನಾಯಕನಾಗಿ ಯಶಸ್ವಿಯಾಗಿರುವ ಸಿದ್ದರಾಮಯ್ಯ ಅವರಿಗೆ ಹಿಂದುಳಿದ ವರ್ಗಗಳನ್ನು ಸಂಘಟಿಸಿದ ಅನುಭವವಿದೆ ಎಂಬ … Continued

ಕೋವಿಡ್ ಲಸಿಕೆಗಳಿಗೂ ಹೃದಯಾಘಾತದ ಸಾವುಗಳಿಗೂ ಯಾವುದೇ ಸಂಬಂಧವಿಲ್ಲ; ತಳ್ಳಿಹಾಕಿದ ಏಮ್ಸ್ ವೈದ್ಯರು

ನವದೆಹಲಿ: ಕೋವಿಡ್-19 ಲಸಿಕೆಗಳನ್ನು “ಪರಿಣಾಮಕಾರಿ” ಎಂದು ಕರೆದ ದೆಹಲಿಯ ಏಮ್ಸ್ ವೈದ್ಯರು, ವ್ಯಾಕ್ಸಿನೇಷನ್ ಮತ್ತು ಹೃದಯಾಘಾತದಿಂದ ಉಂಟಾಗುವ ಹಠಾತ್ ಸಾವುಗಳಿಗೆ ಸಂಬಂಧವಿದೆ ಎಂಬುದನ್ನು ಸಂಪೂರ್ಣವಾಗಿ ತಳ್ಳಿಹಾಕಿದ್ದಾರೆ. ದೆಹಲಿಯ ಏಮ್ಸ್‌ನ ಶ್ವಾಸಕೋಶ, ಕ್ರಿಟಿಕಲ್ ಕೇರ್ ಮತ್ತು ಸ್ಲೀಪ್ ಮೆಡಿಸಿನ್ ವಿಭಾಗದ ಅಸೋಸಿಯೇಟ್ ಪ್ರೊಫೆಸರ್ ಡಾ. ಕರಣ ಮದನ ಅವರು, ಈವರೆಗೆ ಬಳಸಲಾದ ಲಸಿಕೆಗಳ ಬಗ್ಗೆ ಪರಿಶೀಲನೆ ನಡೆಸಲು … Continued

ಬೆಂಗಳೂರು ಗ್ರಾಮಾಂತರ ಜಿಲ್ಲೆ, ಬಾಗೇಪಲ್ಲಿ ಪಟ್ಟಣದ ಹೆಸರು ಬದಲಾವಣೆಗೆ ಸಚಿವ ಸಂಪುಟ ಅನುಮೋದನೆ

ಚಿಕ್ಕಬಳ್ಳಾಪುರ : ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ರಾಮನಗರ ಜಿಲ್ಲೆಯ ನಂತರ ಮತ್ತೊಂದು ಜಿಲ್ಲೆಯ ಹೆಸರು ಬದಲಾವಣೆಗೆ ಮುಂದಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯನ್ನು ಬೆಂಗಳೂರು ಉತ್ತರ ಜಿಲ್ಲೆ ಎಂದು ಮರು ನಾಮಕರಣ ಮಾಡಲು ಬುಧವಾರ ನಡೆದ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಇಂದು, ಬುಧವಾರ (ಜುಲೈ ೨) ನಂದಿ ಗಿರಿಧಾಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ … Continued

ಸೋನಿಯಾ ಗಾಂಧಿಗೆ ಸಿದ್ದರಾಮಯ್ಯರನ್ನು ಪರಿಚಯಿಸಿದ್ದೇ ನಾನು, ಲಾಟರಿ ಹೊಡೆದ್ರು ಸಿಎಂ ಆದ್ರು ; ಬಿ.ಆರ್. ಪಾಟೀಲ ಫೋನ್ ಕರೆ ಲೀಕ್‌

ಬೆಂಗಳೂರು : ಕರ್ನಾಟಕದ ಹಿರಿಯ ಕಾಂಗ್ರೆಸ್ ಶಾಸಕ ಬಿ.ಆರ್. ಪಾಟೀಲ ಈಗ ಮತ್ತೊಮ್ಮೆ ಸುದ್ದಿಯಲ್ಲಿದ್ದಾರೆ. ಅವರು ತಮ್ಮ ಆಪ್ತರೊಂದಿಗೆ ದೂರವಾಣಿ ಕರೆಯಲ್ಲಿ ಮಾತನಾಡಿರುವ ವೀಡಿಯೊ ವೈರಲ್ ಆಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸೋನಿಯಾ ಗಾಂಧಿ ಅವರಿಗೆ ಪರಿಚಯಿಸಿದ್ದು ತಾನೇ ಎಂದು ಹೇಳಿಕೊಂಡಿದ್ದಾರೆ ಮತ್ತು ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದು ಮುಖ್ಯಮಂತ್ರಿಯೂ ಎಂದು ಹೇಳಿದ್ದಾರೆ. ಮಂಡ್ಯ ಜಿಲ್ಲೆ … Continued

ಕರ್ನಾಟಕದಲ್ಲಿ ಸಿಎಂ ಬದಲಾವಣೆ ವಿಚಾರ: ನಿರ್ಧಾರ ತೆಗೆದುಕೊಳ್ಳುವುದು ಹೈಕಮಾಂಡ್ ಮಾತ್ರ ಎಂದ ಖರ್ಗೆ

ಬೆಂಗಳೂರು : ಕರ್ನಾಟಕದಲ್ಲಿ ಕೆಲ ಕಾಂಗ್ರೆಸ್ ನಾಯಕರು ಮುಖ್ಯಮಂತ್ರಿ ಬದಲಾವಣೆಯ ಬಗ್ಗೆ ಬಹಿರಂಗವಾಗಿ ಚರ್ಚಿಸುತ್ತಿರುವಾಗ, ಸೋಮವಾರ (ಜೂನ್ 30, 2025) ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಅಂತಹ ವಿಷಯಗಳ ಬಗ್ಗೆ ನಿರ್ಧಾರ ತೆಗೆದುಕೊಳ್ಳುವುದು ಪಕ್ಷದ ಹೈಕಮಾಂಡ್‌ಗೆ ಬಿಟ್ಟಿದ್ದು ಎಂದು ಹೇಳಿದ್ದಾರೆ ಮತ್ತು ಈ ವಿಚಾರದಲ್ಲಿ ಅನಗತ್ಯ ಸಮಸ್ಯೆಗಳನ್ನು ಸೃಷ್ಟಿಸಬೇಡಿ ಎಂದು ಪಕ್ಷದ ನಾಯಕರಿಗೆ ಹೇಳಿದ್ದಾರೆ. ಅಕ್ಟೋಬರ್‌ನಲ್ಲಿ … Continued

ಜಾತಿ ಗಣತಿ ವರದಿಗೆ ವಿರೋಧ, ಕೊನೆಗೂ ಮಣಿದ ಸರ್ಕಾರ : ʼಕೈʼಕಮಾಂಡ್ ಸೂಚನೆಯಂತೆ ಮರು ಸಮೀಕ್ಷೆಗೆ ನಿರ್ಧಾರ ; ಸಿಎಂ ಸಿದ್ದರಾಮಯ್ಯ ಘೋಷಣೆ

ನವದೆಹಲಿ: ಈ ಹಿಂದೆ ನಡೆಸಲಾಗಿದ್ದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ (ಜಾತಿ ಗಣತಿ)ವರದಿಗೆ ತೀವ್ರ ವಿರೋಧ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಮತ್ತೊಮ್ಮೆ ಜಾತಿ ಗಣತಿ ಸಮೀಕ್ಷೆ ನಡೆಸಲು ನಿರ್ಧರಿಸಿದೆ. ಜಾತಿ ಗಣತಿ ಕುರಿತಾಗಿ ರಾಜ್ಯ ಸರ್ಕಾರಕ್ಕೆ ಹೈಕಮಾಂಡ್ ನಾಯಕರು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರಿಗೆ ಸೂಚನೆ ನೀಡಿದ ಬೆನ್ನಲ್ಲೇ ದೆಹಲಿಯಲ್ಲೇ ಮುಖ್ಯಮಂತ್ರಿ … Continued

ಬೆಂಗಳೂರು ಕಾಲ್ತುಳಿತದ ಘಟನೆ : ಕಾಂಗ್ರೆಸ್‌ ಹೈಕಮಾಂಡ್‌ ನಿಂದ ಸಿದ್ದರಾಮಯ್ಯ, ಡಿಕೆ ಶಿವಕುಮಾರಗೆ ದೆಹಲಿಗೆ ಬುಲಾವ್‌…

ಬೆಂಗಳೂರು : ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿತ ಸಂಭವಿಸಿ 11 ಜನರು ಸಾವಿಗೀಡಾದ ಘಟನೆಯ ಕೆಲವು ದಿನಗಳ ನಂತರ, ಕಾಂಗ್ರೆಸ್ ಹೈಕಮಾಂಡ್ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ ಅವರಿಗೆ ದೆಹಲಿಗೆ ಬುಲಾವ್‌ ನೀಡಿದೆ ಎಂದು ತಿಳಿದುಬಂದಿದೆ. ಕಾಲ್ತುಳಿತ ಘಟನೆಯಿಂದ ಅಸಮಾಧಾನಗೊಂಡಿರುವ ಕಾಂಗ್ರೆಸ್ ಹೈಕಮಾಂಡ್  ಮಂಗಳವಾರ ಬೆಳಿಗ್ಗೆ ಸಿದ್ದರಾಮಯ್ಯ ಮತ್ತು ಶಿವಕುಮಾರ ಅವರಿಗೆ … Continued