ಸಿಂದಗಿ ವಿಧಾನಸಭೆ ಕ್ಷೇತ್ರದ ಅಭ್ಯರ್ಥಿ ಶಿವಾನಂದ ಪಾಟೀಲ ಹೃದಯಾಘಾತದಿಂದ ನಿಧನ

ವಿಜಯಪುರ : ಸಿಂದಗಿ ವಿಧಾನಸಭಾ ಕ್ಷೇತ್ರದ ಜೆಡಿಎಸ್‌ ಪಕ್ಷದ ಅಭ್ಯರ್ಥಿಯಾಗಿದ್ದ ಶಿವಾನಂದ ಪಾಟೀಲ ಶುಕ್ರವಾರ ತಡರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಈ ಕುರಿತು ಮಾಜಿ ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ ಅವರು ಶನಿವಾರ ಟ್ವೀಟ್‌ ಮಾಡಿದ್ದಾರೆ. ಹೃದಯಾಘಾತಕ್ಕೆ ಒಳಗಾದ ಅವರನ್ನು ತಕ್ಷಣವೇ ಆಸ್ಪತ್ರೆಗೆ ಸಾಗಿಸಲಾಗಿದ್ದು, ಶುಕ್ರವಾರ ರಾತ್ರಿ ಅವರು ಮೃತಪಟ್ಟಿದ್ದಾರೆ. ಶಿವಾನಂದ ಪಾಟೀಲ ಅವರು ಪತ್ನಿ, ಪುತ್ರ … Continued