ಶಿರಸಿ ; ಪಡಿತರ ಅಕ್ಕಿ ಅಕ್ರಮ ಸಾಗಾಟ ; ಲಾರಿ ಸಮೇತ 473 ಚೀಲ ಅಕ್ಕಿ ವಶ

ಶಿರಸಿ: ಪಡಿತರ ವ್ಯವಸ್ಥೆಯಡಿ ಜನರಿಗೆ ವಿತರಿಸಬೇಕಾದ ಅಕ್ಕಿಯನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಆರೋಪದ ಮೇಲೆ  ಭಾರಿ ಪ್ರಮಾಣದ ಪಡಿತರ ಅಕ್ಕಿಯನ್ನು ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ನೀಲೇಕಣಿ ಬಳಿ ವಶಪಡಿಸಿಕೊಳ್ಳಲಾಗಿದೆ ಎಂದುವರದಿಯಾಗಿದೆ. ಪಡಿತರ ಅಕ್ಕಿಯ ಅಕ್ರಮ ಸಾಗಾಟದ ಜಾಲದ ವಿರುದ್ಧ ಶಿರಸಿ ತಾಲೂಕು ಆಡಳಿತ ಮತ್ತು ಪೊಲೀಸ್ ಇಲಾಖೆ ನಡೆಸಿದ ಮಿಂಚಿನ ಕಾರ್ಯಾಚರಣೆಯಲ್ಲಿ  ಸಿದ್ದಾಪುರದಿಂದ ಮಹಾರಾಷ್ಟ್ರದ … Continued

ಶಿರಸಿ : 46 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕಳ್ಳತನ ಪ್ರಕರಣದ ಆರೋಪಿ ಬಂಧನ

ಶಿರಸಿ: ಕಳ್ಳತನ ಪ್ರಕರಣಗಳಲ್ಲಿ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ಬರೋಬ್ಬರಿ 46 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಉತ್ತರ ಕನ್ನಡ ಜಿಲ್ಲೆಯ ಶಿರಸಿ ಹೊಸ ಮಾರುಕಟ್ಟೆ ಠಾಣೆ ಪೊಲೀಸರು ಪತ್ತೆಹಚ್ಚಿ ಬಂಧಿಸಿದ್ದಾರೆ. ಉಡುಪಿ ಜಿಲ್ಲೆಯ ಪರ್ಕಳ ಪೋಸ್ಟ್‌ ವ್ಯಾಪ್ತಿಯ ಹೇರ್ಗ ಗ್ರಾಮದ ನಿವಾಸಿ ಮಹಮ್ಮದ್ ಯೂಸುಫ್ (68) ಬಂಧಿತ ಆರೋಪಿ. ಶಿರಸಿ ಹೊಸ ಮಾರುಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ … Continued

ಶಿರಸಿ: ಪತ್ರಕರ್ತ ರವಿ ನಾಯ್ಕರಿಗೆ ʼಮಾಧ್ಯಮ ಶ್ರೀʼ ಪ್ರಶಸ್ತಿ- ನಾಲ್ವರಿಗೆ ವಿವಿಧ ದತ್ತಿನಿಧಿ ಪ್ರಶಸ್ತಿ ಪ್ರದಾನ

ಶಿರಸಿ: ಸುದೀರ್ಘ 25 ವರ್ಷ ಒಂದೇ ಪತ್ರಿಕೆಯಲ್ಲಿ ವಿವಿಧ ಹುದ್ದೆಗಳನ್ನು ನಿರ್ವಹಿಸಿ, ಪ್ರಸ್ತುತ  ಜನಮಾಧ್ಯಮ ದಿನ ಪತ್ರಿಕೆಯಲ್ಲಿಹಿರಿಯ ಉಪಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿರುವ ರವಿ ನಾಯ್ಕ ಅವರಿಗೆ ಶಿರಸಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಕೊಡಮಾಡುವ ಪ್ರತಿಷ್ಠಿತ ಮಾಧ್ಯಮ ಶ್ರೀ ಪ್ರಶಸ್ತಿಯನ್ನು ಸೋಮವಾರ ಪ್ರದಾನ ಮಾಡಲಾಯಿತು. ಅವರು ಸೋಮವಾರ ತಾಲೂಕಿನ ಗೌಡಳ್ಳಿಯ ಚಂದನ ಪದವಿಪೂರ್ವ ಕಾಲೇಜಿನ ಸಭಾಭವನದಲ್ಲಿ ಉತ್ತರ … Continued

ಶಿರಸಿ : ಮಳೆ ಅಬ್ಬರಕ್ಕೆ ಹಲವೆಡೆ ಹೊಳೆಯಂತಾದ ರಸ್ತೆಗಳು, ಬಡಾವಣೆಗಳು ಜಲಾವೃತ

ಶಿರಸಿ; ಉತ್ತರ ಕನ್ನಡ ಜಿಲ್ಲೆಯ ಹಲವೆಡೆ ಶುಕ್ರವಾರ ರಾತ್ರಿಯಿಂದ ಧಾರಾಕಾರ ಮಳೆಯಾಗುತ್ತಿದ್ದು, ಶಿರಸಿ ತಾಲೂಕಿನಲ್ಲಿ ಭಾರಿ ಮಳೆಯಾಗುತ್ತಿದ್ದು, ಜನಜೀವನದ ಮೇಲೆ ಪರಿಣಾಮ ಬೀರಿದೆ. ಹಲವೆಡೆ ಮನೆಗಳಿಗೆ ನೀರು ನುಗ್ಗಿದೆ. ರಸ್ತೆಗಳ ಮೇಲೆ ನೀರು ನಿಂತಿರುವುದರಿಂದ ವಾಹನ ಸಂಚಾರ ನಿಧಾನಗೊಂಡಿದ್ದು, ಗ್ರಾಮೀಣ ಪ್ರದೇಶಗಳಲ್ಲಿ ಸಾರ್ವಜನಿಕರು ಸಂಚಾರಕ್ಕೆ ತೊಂದರೆ ಅನುಭವಿಸುತ್ತಿದ್ದಾರೆ. ತಗ್ಗು ಪ್ರದೇಶಗಳಲ್ಲಿ ನೀರು ತುಂಬಿಕೊಂಡಿರುವ ಕಾರಣ ನಿವಾಸಿಗಳು … Continued

ಶಿರಸಿ : ವಾಹನ ಡಿಕ್ಕಿ ; ಕಾನಕುರಿ ಸಾವು

ಶಿರಸಿ: ಶಿರಸಿ-ಕುಮಟಾ ರಸ್ತೆಯ ಸಿರ್ಸಿಮಕ್ಕಿ ಸಮೀಪ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಕಾನಕುರಿ ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನಲ್ಲಿ ಭಾನುವಾರ ನಡೆದಿದೆ. ಸಿರಸಿಮಕ್ಕಿಯ ಸಮೀಪದ ರಾಷ್ಟ್ರೀಯ ಹೆದ್ದಾರಿ ಭಾಗದಲ್ಲಿ ಈ ಸಂಭವಿಸಿದ್ದು, ಕಾಡಿನಿಂದ ಬಂದ ಕಾನಕುರಿ ರಸ್ತೆ ದಾಟುವ ವೇಳೆ ಅಪರಿಚಿತ ವಾಹನ ವೇಗವಾಗಿ ಡಿಕ್ಕಿ ಹೊಡೆದು ಮೃತಪಟ್ಟಿರಬಹುದು ಎಂದು ಶಂಕಿಸಲಾಗಿದೆ. … Continued

ಶಿರಸಿ | ಈಜಲು ತೆರಳಿದ್ದ ಇಬ್ಬರು ನೀರುಪಾಲು

ಶಿರಸಿ :ಈಜಲು ತೆರಳಿದ್ದ ಇಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಉಂಚಳ್ಳಿ ಸಮೀಪದ ಮಾಸ್ತಿಜಡ್ಡಿ ಹಳ್ಳದಲ್ಲಿ ಭಾನುವಾರ ನಡೆದಿದೆ ಎಂದು ವರದಿಯಾಗಿದೆ. ಮಾಸ್ತಿಜಡ್ಡಿ ಗ್ರಾಮದ ಮದನ ಗಜಾನನ ನಾಯ್ಕ (೧೬) ಹಾಗೂ ಹೊನ್ನಾವರ ತಾಲೂಕಿನ ಹರ್ಷ ಮಂಜುನಾಥ ನಾಯ್ಕ(೧೯) ಮೃತ ಬಾಲಕರಾಗಿದ್ದು, ಇಬ್ಬರೂ ಮಾಸ್ತಿಜಡ್ಡಿಯಲ್ಲಿರುವ ಸುಮಾರು ೧೫ ಅಡಿ … Continued

ಶಿರಸಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ʼಮಾಧ್ಯಮ ಶ್ರೀʼ ಪ್ರಶಸ್ತಿಗೆ ಪತ್ರಕರ್ತ ರವಿ ನಾಯ್ಕ ಆಯ್ಕೆ

ಶಿರಸಿ: ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದಿಂದ ವಾರ್ಷಿಕವಾಗಿ ಕೊಡಮಾಡುವ ಮಾಧ್ಯಮ ಶ್ರೀ ಪ್ರಶಸ್ತಿಗೆ ಜನಮಾಧ್ಯಮ ದಿನಪತ್ರಿಕೆಯ ಹಿರಿಯ ಉಪಸಂಪಾದಕ ರವಿ ನಾಯ್ಕ ಅವರನ್ನು ಆಯ್ಕೆ ಮಾಡಲಾಗಿದೆ. ಇಲ್ಲಿನ ಪತ್ರಿಕಾ ಭವನದಲ್ಲಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಕೃಷ್ಣಮೂರ್ತಿ ಕೆರೆಗದ್ದೆ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕಾರಣಿ ಸಭೆಯಲ್ಲಿ ಮಾಧ್ಯಮ ಶ್ರೀ ಪ್ರಶಸ್ತಿಗೆ … Continued

ಭಾರಿ ಮಳೆ ಮುನ್ಸೂಚನೆ : ಉತ್ತರ ಕನ್ನಡ ಜಿಲ್ಲೆಯ ಐದು ತಾಲೂಕುಗಳಿಗೆ ಜುಲೈ 7ರಂದು ರಜೆ ಘೋಷಣೆ

ಶಿರಸಿ: ಭಾರಿ ಮಳೆ ಮುನ್ಸೂಚನೆ ಇರುವುದರಿಂದ ಉತ್ತರ ಕನ್ನಡ ಜಿಲ್ಲೆಯ ಶಿರಸಿ, ಸಿದ್ದಾಪುರ, ಯಲ್ಲಾಪುರ, ಜೋಯಿಡಾ ಹಾಗೂ ದಾಂಡೇಲಿ ತಾಲೂಕುಗಳ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಜುಲೈ 7 (ಮಂಗಳವಾರ)ರಂದು ರಜೆ ಘೋಷಣೆ ಮಾಡಲಾಗಿದೆ. ಉತ್ತರ ಕನ್ನಡ ಜಿಲ್ಲೆಗೆ ಮಂಗಳವಾರ ಹವಾಮಾನ ಇಲಾಖೆಯು ಅತ್ಯಂತ ಭಾರಿ ಮಳೆಯಾಗುವ ಸಾಧ್ಯತೆ ಇರುವ ಕಾರಣ ರೆಡ್‌ ಅಲರ್ಟ್‌ ಘೋಷಿಸಿದೆ. … Continued

ಶಿರಸಿ : ಮನೆಯಲ್ಲಿ ಮಲಗಿದ್ದಾಗ ಇಬ್ಬರು ಮಕ್ಕಳಿಗೆ ಕಚ್ಚಿದ ಹಾವು ; ಓರ್ವ ಸಾವು

ಶಿರಸಿ :  ಹಾವು ಕಚ್ಚಿ ಆರನೇ ತರಗತಿ ವಿದ್ಯಾರ್ಥಿಯೊಬ್ಬ ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಬನವಾಸಿ ವ್ಯಾಪ್ತಿಯ ಸಹಸ್ರಳ್ಳಿ ಗ್ರಾಮದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಆತನ ಸಹೋದರಿಗೂ ಹಾವು ಕಚ್ಚಿದ್ದು, ಸದ್ಯ ಆಕೆ ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿದ್ದಾಳೆ ಎಂದು ತಿಳಿದುಬಂದಿದೆ. ಈ ದುರ್ಘಟನೆ ಇಂದು, ಬುಧವಾರ ಮುಂಜಾನೆ ನಡೆದಿದೆ ಎಂದು ಹೇಳಲಾಗಿದ್ದು, ಮೃತ … Continued

ಬೇಡ್ತಿ, ಅಘನಾಶಿನಿ ನದಿ ತಿರುವು ಯೋಜನೆ ವಿರೋಧಿಸಿ ಸರ್ಕಾರಕ್ಕೆ 10 ಸಾವಿರಕ್ಕೂ ಅಧಿಕ ಪತ್ರ ಸಲ್ಲಿಕೆ

 ಶಿರಸಿ: ಬೇಡ್ತಿ-ವರದಾ ಹಾಗೂ ಅಘನಾಶಿನಿ-ವೇದಾವತಿ ನದಿ ತಿರುವು ಯೋಜನೆ ವಿರೋಧಿಸಿ ಉತ್ತರ ಕನ್ನಡ ಜಿಲ್ಲೆಯ ವಿವಿಧ ತಾಲೂಕುಗಳಿಂದ ಆಗಮಿಸಿದ್ದ ಜನರು ಸೋಮವಾರ ಶಿರಸಿಯ ಸಹಾಯಕ ಆಯುಕ್ತರ ಕಚೇರಿಗೆ ತೆರಳಿ ಮುಖ್ಯಮಂತ್ರಿಗೆ ಸುಮಾರು 10 ಸಾವಿರಕ್ಕೂ ಅಧಿಕ ಪತ್ರಗಳನ್ನು ಸಲ್ಲಿಸಿದರು. ಬೇಡ್ತಿ-ಅಘನಾಶಿನಿ ಕೊಳ್ಳ ಸಂರಕ್ಷಣಾ ಸಮಿತಿ ಹಾಗೂ ಜಿಲ್ಲೆಯ ವಿವಿಧ ಸಂಘಟನೆಗಳ ಸಮ್ಮುಖದಲ್ಲಿ ಸೇರಿದ್ದ ಸಾವಿರಾರು ಜನರು … Continued