ಶಿರಸಿ | ಜನವರಿ 21ರಂದು ‘ದಶರೂಪಕಗಳ ದಶಾವತಾರ’ ಯಕ್ಷಗಾನ ಸಂಶೋಧನಾ ಗ್ರಂಥ ಬಿಡುಗಡೆ

ಶಿರಸಿ : ಭರತನ ನಾಟ್ಯಶಾಸ್ತ್ರದ ಬೆಳಕಿನಲ್ಲಿ ಯಕ್ಷಗಾನದ ಪುನರ್ವ್ಯಾಖ್ಯಾನದ ಅವಶ್ಯಕತೆಯ ಹಿನ್ನೆಲೆಯಲ್ಲಿ ಹನ್ನೆರಡು ವರ್ಷಗಳಿಂದ ಅಧ್ಯಯನ ನಡೆಸಿದ ನಿವೃತ್ತ ಸಂಪಾದಕರು ಹಾಗೂ ಸಾಹಿತಿ ಅಶೋಕ ಹಾಸ್ಯಗಾರ ಅವರ ‘ದಶರೂಪಕಗಳ ದಶಾವತಾರ’ ಎಂಬ ಸಂಶೋಧನಾ ಗ್ರಂಥದ ಲೋಕಾರ್ಪಣೆ ಸಮಾರಂಭ ಜನವರಿ 21ರ ಮಂಗಳವಾರ ಸಂಜೆ 4 ಗಂಟೆಗೆ ನಗರದ ರಂಗಧಾಮ(ನೆಮ್ಮದಿ ಆವರಣ)ದಲ್ಲಿ ನಡೆಯಲಿದೆ. ಹೆಸರಾಂತ ವಿಮರ್ಶಕರು, ಮೀಮಾಂಸಕಾರರಾಗಿರುವ … Continued

ಶಿರಸಿ | ತಬಲಾ ಮಾಂತ್ರಿಕ ಝಾಕೀರ್ ಹುಸೇನಗೆ ಶ್ರದ್ಧಾಂಜಲಿ ; ಜ.19ರಂದು ʼಲಯ ವಂದನಾʼ ಕಾರ್ಯಕ್ರಮ

ಶಿರಸಿ : ತಬಲಾ ಮಾಂತ್ರಿಕ ಉಸ್ತಾದ್ ಝಾಕೀರ್ ಹುಸೇನ್ ಅವರಿಗೆ ಶಿಷ್ಯರಿಂದ, ಅಭಿಮಾನಿಗಳಿಂದ ಭಾವಪೂರ್ಣ ಶ್ರದ್ಧಾಂಜಲಿ ಅರ್ಪಿಸುವ ʼಲಯ ವಂದನಾʼ ಕಾರ್ಯಕ್ರಮ ನಗರದ ಟಿಆರ್‌ಸಿ ಸಭಾಭವನದಲ್ಲಿ ಜ.19ರ ಸಂಜೆ 5ಕ್ಕೆ ಆಯೋಜಿಸಲಾಗಿದೆ ಎಂದು ರಾಜದೀಪ ಟ್ರಸ್ಟ್ ಅಧ್ಯಕ್ಷ ದೀಪಕ ಹೆಗಡೆ ದೊಡ್ಡೂರು ತಿಳಿಸಿದ್ದಾರೆ. ಬುಧವಾರ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಅವರು, ಪಂಡಿತ … Continued

ವೀಡಿಯೊ…| ಉತ್ತರ ಕನ್ನಡ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಮನೆಯ ಅಂಗಳಕ್ಕೆ ನುಗ್ಗಿದ ಚಿರತೆ….!

ಶಿರಸಿ : ಉತ್ತರ ಕನ್ನಡದ ಬಿಜೆಪಿ ಸಂಸದ ಹಾಗೂ ವಿಧಾನಸಭೆ ಮಾಜಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿಯವರ ಸಂಸದರ ಮನೆ ಅಂಗಳಕ್ಕೆ ಚಿರತೆ ನುಗ್ಗಿದ್ದು, ನಿವಾಸಕ್ಕೆ ಸೋಮವಾರ (ಜ 13) ತಡರಾತ್ರಿ ಚಿರತೆ ನುಗ್ಗಿದೆ. ಸಂಸದ ಹೆಗಡೆ ನಿವಾಸದಲ್ಲಿ ಇರುವಾಗಲೇ ಈ ಘಟನೆ ನಡೆದಿದೆ ಎಂದು ವರದಿಯಾಗಿದ್ದು, ಸಿಸಿಟಿವಿ ದೃಶ್ಯದಲ್ಲಿಚಿರತೆ ಬಂದಿದ್ದು ಸೆರೆಯಾಗಿದೆ. ಸೋಮವಾರ ರಾತ್ರಿ … Continued

ಶಿರಸಿ ಹೈಟೆಕ್‌ ಆಸ್ಪತ್ರೆ | ಅನಂತಮೂರ್ತಿ ಹೆಗಡೆ ಹೋರಾಟಕ್ಕೆ ನನ್ನ ಸಂಪೂರ್ಣ ಬೆಂಬಲ; ಸತ್ಯಾಗ್ರಹ ಸ್ಥಳದಲ್ಲಿ ಸಂಸದ ಕಾಗೇರಿ ಘೋಷಣೆ

ಶಿರಸಿ : ನಗರದ ಹೈಟೆಕ್ ಆಸ್ಪತ್ರೆಗೆ ಸಂಬಂಧಿಸಿದಂತೆ ಹೋರಾಟಗಾರ ಅನಂತಮೂರ್ತಿ ಹೆಗಡೆ ನಡೆಸುತ್ತಿರುವ ಎಲ್ಲ ಹೋರಾಟಕ್ಕೆ, ಉಪವಾಸ ಸತ್ಯಾಗ್ರಹಕ್ಕೆ ನನ್ನ ಸಂಪೂರ್ಣ ಬೆಂಬಲವಿದ್ದು, ಅವರು ಸಮಾಜಕ್ಕೆ ಒಳ್ಳೆಯದಾಗುವ ಯಾವುದೇ ನಿರ್ಣಯ ಕೈಗೊಂಡರೂ ಅದನ್ನು ನಾನು ಬೆಂಬಲಿಸುತ್ತೇನೆ. ಜಿಲ್ಲಾ ಬಿಜೆಪಿ ಸಹ ಈ ನಿಟ್ಟಿನಲ್ಲಿ ಸದಾ ಅವರ ಬೆನ್ನಿಗೆ ನಿಲ್ಲುತ್ತದೆ ಎಂದು ಉತ್ತರ ಕನ್ನಡ ಸಂಸದ ವಿಶ್ವೇಶ್ವರ … Continued

ಶಿರಸಿ | ಮನೆಯ ಅಂಗಳಕ್ಕೇ ಬಂದ ಚಿರತೆ ; ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಶಿರಸಿ : ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ತಾಲೂಕಿನ ನೀರ್ನಳ್ಳಿಯ ಮನೆಯೊಂದರ ಅಂಗಳಕ್ಕೇ ರಾತ್ರಿ ಸಮಯದಲ್ಲಿ ಚಿರತೆ ಬಂದಿದೆ ಎಂದು ವರದಿಯಾಗಿದೆ. ಚಿರತೆಯ ಮನೆ ಅಂಗಳಿಗೆ ಬಂದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ರಾತ್ರಿ ಸುಮಾರು 12:30ರ ಸುಮಾರಿಗೆ ನೀರ್ನಳ್ಳಿಯ ರಾಮಚಂದ್ರ ಹೆಗಡೆ ಎಂಬವರ ಮನೆಯ ಅಂಗಳಕ್ಕೆ ಚಿರತೆ ಬಂದಿದೆ ಎಂದು ವರದಿಯಾಗಿದೆ.  ಆಕಡೆ ಈಕಡೆ ನೋಡುತ್ತ … Continued

ಶಿರಸಿ ಹೈಟೆಕ್ ಆಸ್ಪತ್ರೆ ವಿಚಾರದಲ್ಲಿ ಸತ್ಯಕ್ಕಾಗಿ ಆಗ್ರಹಿಸಿ ಜನವರಿ 13 ರಂದು ಉಪವಾಸ ಸತ್ಯಾಗ್ರಹ : ಅನಂತಮೂರ್ತಿ ಹೆಗಡೆ

ಶಿರಸಿ: ಶಿರಸಿ ಹೈಟೆಕ್ ಆಸ್ಪತ್ರೆಗೆ ಸಂಬಂಧಿಸಿ ಸತ್ಯಕ್ಕಾಗಿ ಆಗ್ರಹಿಸಿ ಜನವರಿ 13 ರಂದು ಬೆಳಿಗ್ಗೆ 9 ಗಂಟೆಗೆ ಬಿಡ್ಕಿ ಬಯಲಿನಲ್ಲಿರುವ ಮಹಾತ್ಮ ಗಾಂಧೀಜಿ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ನಂತರ ಶಿರಸಿ ನಗರದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ನಡೆಸಿ ತಹಶೀಲ್ದಾರರ ಕಚೇರಿಯಲ್ಲಿ ಉಪವಾಸ ಸತ್ಯಾಗ್ರಹ ಕೈಗೊಳ್ಳಲಾಗುತ್ತದೆ ಎಂದು ಸಾಮಾಜಿಕ ಹೋರಾಟಗಾರ ಅನಂತಮೂರ್ತಿ ಹೆಗಡೆ ಹೇಳಿದ್ದಾರೆ. ಬುಧವಾರ ಶಿರಸಿಯಲ್ಲಿ … Continued

ಶಿರಸಿ : ಯಕ್ಷಗಾನ ಭಾಗವತ ತ್ರ್ಯಂಬಕ ಹೆಗಡೆ ಇಡವಾಣಿಗೆ ಎಂ. ರಮೇಶ ಪ್ರಶಸ್ತಿ ಪ್ರದಾನ

ಶಿರಸಿ :  ಸರ್ಕಾರಗಳು ಯಾವುದೇ ಬರಲಿ ಅದು ಅದರ ನೆಲೆಯಲ್ಲಿ ಕೆಲಸ ಮಾಡಲಿ. ಆದರೆ ಸಮಾಜ ಕಲಾವಿದರನ್ನ ಯಾವತ್ತಿಗೂ ಕೈ ಬಿಡಬಾರದು. ಇದೇವೇಳೆ ಪ್ರೇಕ್ಷಕರ ಅಭಿರುಚಿಯನ್ನು ಉಳಿಸುವ ಹಾಗೂ ಅವರಲ್ಲಿ ಉತ್ತಮ ಅಭಿರುಚಿ ಬೆಳೆಸುವ ಜವಾಬ್ದಾರಿ ಕಲಾವಿದರಾದ ನಮ್ಮ ಮೇಲಿದೆ ಎಂಬುದನ್ನೂ ಅರಿಯಬೇಕು ಎಂದು ಶ್ರೀ ಇಡಗುಂಜಿ ಮಹಾಗಣಪತಿ ಯಕ್ಷಗಾನ ಮಂಡಳಿಯ ಸಂಚಾಲಕರಾದ ಶಿವಾನಂದ ಕೆರೆಮನೆ … Continued

ಕದಂಬ ಕನ್ನಡ ಜಿಲ್ಲೆ ರಚನೆಗೆ ಒತ್ತಾಯಿಸಿ ಬೆಳಗಾವಿ ಸುವರ್ಣಸೌಧದ ಮುಂದೆ ಹೋರಾಟ; ಸಿಎಂ ಗಮನಕ್ಕೆ ತರುವೆ ಎಂದ ಸಚಿವ ತಂಗಡಗಿ

ಬೆಳಗಾವಿ : ಕಳೆದ ಹತ್ತು ವರ್ಷಗಳಿಂದ ಉತ್ತರ ಕನ್ನಡದಲ್ಲಿ ಪ್ರತ್ಯೇಕ ಜಿಲ್ಲೆಗಾಗಿ ನಡೆಯುತ್ತಿರುವ ಹೋರಾಟ ಗಮನಕ್ಕಿದೆ. ನೂತನವಾಗಿ ಕದಂಬ ಕನ್ನಡ ಜಿಲ್ಲೆ ರಚನೆ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಂದಾಯ ಸಚಿವರ ಗಮನಕ್ಕೆ ತರಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ ಹೇಳಿದ್ದಾರೆ. ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯುತ್ತಿರುವ ಅಧಿವೇಶನದ ಸಂದರ್ಭದಲ್ಲಿ ಕದಂಬ ಕನ್ನಡ … Continued

ಪ್ರತ್ಯೇಕ ಕದಂಬ ಜಿಲ್ಲೆಯ ಹೋರಾಟ ಇದು ಜನರ ಅಗತ್ಯದ ಹೋರಾಟ ; ಅನಂತಮೂರ್ತಿ ಹೆಗಡೆ

ಶಿರಸಿ : ಉತ್ತರ ಕನ್ನಡ ಜಿಲ್ಲೆ ಅಖಂಡವಾಗಿರಬೇಕೆಂಬುದು ಒಂದಷ್ಟು ಜನರ ಆಶಯವಾಗಿದೆ. ಅದು ತಪ್ಪೆಂದು ನಾನು ಹೇಳುವುದಿಲ್ಲ, ಆದರೆ ಬಹುತೇಕರಿಗೆ ದೂರವಾಗಿರುವ ಜಿಲ್ಲಾ ಕೇಂದ್ರ ಕಾರವಾರದ ಬದಲು ಶಿರಸಿಯನ್ನು ಮಾಡುತ್ತಾರೆಯೇ ? ಜಿಲ್ಲೆ ಅಖಂಡವಾಗಿರಬೇಕು ಎಂದು ನಮ್ಮ ವಿರುದ್ಧ ಮಾತನಾಡಿದವರು ಜಿಲ್ಲೆಯ ಮಧ್ಯದ ಭಾಗವಾಗಿರುವ ಶಿರಸಿಗೆ ಜಿಲ್ಲಾ ಕೇಂದ್ರ ತರುತ್ತಾರೆಯೇ ? ಅದಕ್ಕೆ ಅವರು ಒಪ್ಪುವುದಿಲ್ಲ. … Continued

ಶಿರಸಿ, ಕುಮಟಾ ತಾಲೂಕಿನ ಪಶ್ಚಿಮ ಘಟ್ಟದ ಭಾಗದಲ್ಲಿ ಭೂಕಂಪನದ ಅನುಭವ

ಕಾರವಾರ : ಉತ್ತರ ಕನ್ನಡ (Uttar Kannada) ಜಿಲ್ಲೆಯಲ್ಲಿ ಕೆಲವಡೆ ಭೂ ಕಂಪನದ ಅನುಭವವಾಗಿದೆ ಎಂದು ವರದಿಯಾಗಿದೆ. ಜಿಲ್ಲೆಯ ಶಿರಸಿ ಹಾಗೂ ಕುಮಟಾ ತಾಲೂಕಿನ ದೇವಿಮನೆ ಘಟ್ಟ ಪ್ರದೇಶದ ಸುತ್ತಮುತ್ತ ಭೂಕಂಪನದ ಅನುಭವವಾಗಿದೆ ಎಂದು ಹೇಳಲಾಗಿದೆ. ಮೂರ್ನಾಲ್ಕು ಸೆಕೆಂಡುಗಳ ಕಾಲ​ ಭೂಮಿ ಕಂಪಿಸಿದ ಅನುಭವಾಗಿದೆ ಎಂದು ಹೇಳಲಾಗಿದೆ. ಶಿರಸಿ (Sirasi) ತಾಲೂಕಿನ ರಾಗಿಹೊಸಳ್ಳಿ, ಕಸಗೆ, ಬಂಡಲದಲ್ಲಿ … Continued