ವೀಡಿಯೊಗಳು…| ಅದ್ಧೂರಿಯಿಂದ ನಡೆದ ಶಿರಸಿ ಮಾರಿಕಾಂಬಾ ರಥೋತ್ಸವ ; ಭಕ್ತ ಸಾಗರದ ಮಧ್ಯೆ ಜಾತ್ರಾ ಗದ್ದುಗೆಗೆ ಆಗಮಿಸಿದ ಮಾರಿಕಾಂಬಾ ದೇವಿ

ಶಿರಸಿ: ರಾಜ್ಯದ ಅತಿದೊಡ್ಡ ಜಾತ್ರೆಗಳಲ್ಲಿ ಒಂದಾದ ಶಿರಸಿಯ ಮಾರಿಕಾಂಬಾ ಜಾತ್ರೆಯ ಮಾರಿಕಾಂಬಾ ದೇವಿಯ ರಥೋತ್ಸವ ಜನಸ್ತೋಮದ ಮಧ್ಯೆ ಬುಧವಾರ ನಡೆಯಿತು. ಭಕ್ತಿ ಭಾವ ಹಾಗೂ ಭಕ್ತರ ಭಾವೋನ್ಮಾದ, ಜಯ ಘೋಷದ ಮಧ್ಯೆ ಬುಧವಾರ ಬೆಳಿಗ್ಗೆ ರಥೋತ್ಸವ ಶೋಭಾಯಾತ್ರೆಗೆ ಚಾಲನೆ ನೀಡಲಾಯಿತು. ನಸುಕಿನಲ್ಲಿ ರಥಾರೂಢಳಾದ ಸರ್ವಾಲಂಕಾರಭೂಷಿತೆ ಮಾರಿಕಾಂಬಾ ದೇವಿಯ ಶೋಭಾಯಾತ್ರೆ ಮೂಲಕ ಬಿಡಕಿಬೈಲಿನಲ್ಲಿ ಜಾತ್ರಾ ಗದ್ದುಗೆಗೆ ತೆರಳಿದಳು. … Continued

ದಕ್ಷಿಣ ಭಾರತದ ಪ್ರಸಿದ್ಧ ಶಿರಸಿ ಮಾರಿಕಾಂಬಾ ಜಾತ್ರೆ ಮಂಗಳವಾರ(ಮಾ.19)ದಿಂದ ಆರಂಭ

ಶಿರಸಿ : ಪ್ರತಿ ಎರಡು ವರ್ಷಗಳಿಗೊಮ್ಮೆ ನಡೆಯುವ ರಾಜ್ಯದ ಅತಿದೊಡ್ಡ ಜಾತ್ರೆಯಾದ ಶಿರಸಿ ಶ್ರೀ ಮಾರಿಕಾಂಬಾ ಜಾತ್ರೆ ಮಾರ್ಚ್‌ 19ರಂದು ಜಾತ್ರಾ ಮಹೋತ್ಸವ ಆರಂಭವಾಗಲಿದೆ. ರಥಕ್ಕೆ ಕಲಶ ಪ್ರತಿಷ್ಠೆ ಮಾರ್ಚ್‌ 19 ರಂದು ಮಧ್ಯಾಹ್ನ 12:27ಕ್ಕೆ ನಡೆಯಲಿದ್ದು, ಅದೇ ದಿನ ರಾತ್ರಿ 11:39ರಿಂದ ಕಲ್ಯಾಣ ಪ್ರತಿಷ್ಠೆ ನಡೆಯಲಿದೆ. ಬಣ್ಣ ಹಾಗೂ ಕಾವಿಯ ಕಲೆಯ ಸಾಂಪ್ರದಾಯಿಕ ಚಿತ್ರಗಳಿಂದ … Continued

ತಾಳಗುಪ್ಪ-ಶಿರಸಿ-ಹುಬ್ಬಳ್ಳಿ ನೂತನ ರೈಲು ಮಾರ್ಗದ ಅಂತಿಮ ಸ್ಥಳ ಸರ್ವೆ (FLS) ನಡೆಸಲು ಮಂಜೂರಿ ನೀಡಿದ ರೈಲ್ವೆ ಸಚಿವಾಲಯ

ಶಿರಸಿ: 3.95 ಕೋಟಿ ರೂ ವೆಚ್ಚದಲ್ಲಿ 158 ಕಿ.ಮೀ ಉದ್ದದ ತಾಳಗುಪ್ಪ-ಶಿರಸಿ-ಹುಬ್ಬಳ್ಳಿ ಹೊಸ ರೈಲು ಮಾರ್ಗದ ಅಂತಿಮ ಸ್ಥಳ ಸಮೀಕ್ಷೆ (Final Location Survey (FLS)) ನಡೆಸಲು ರೈಲ್ವೆ ಸಚಿವಾಲಯ ಮಂಜೂರಾತಿ ನೀಡಿದೆ. ಈ ಕುರಿತು ನವದೆಹಲಿಯ ಗತಿಶಕ್ತಿ ಭವನದಲ್ಲಿರುವ ರೈಲ್ವೆ ಮಂಡಳಿಯ ಜಂಟಿ ನಿರ್ದೇಶಕರಾದ ಅಭಿಷೇಕ ಎಂಬವರು ಹುಬ್ಬಳ್ಳಿಯ ನೈಋತ್ವ ರೈಲ್ವೆಯ ಪ್ರಧಾನ ವ್ಯವಸ್ಥಾಪಕರಿಗೆ … Continued

ಉತ್ತರ ಕನ್ನಡ ಜಿಲ್ಲೆಯಲ್ಲಿ ಮಂಗನ ಕಾಯಿಲೆಗೆ ಮತ್ತೊಂದು ಸಾವು

ಕಾರವಾರ : ಉತ್ತರ ಕನ್ನಡ ಜಿಲ್ಲೆಯಲ್ಲಿ ಮಂಗನ ಕಾಯಿಲೆ(KFD)ಗೆ ಮತ್ತೊಬ್ಬ ವ್ಯಕ್ತಿ ಸಾವಿಗೀಡಾಗಿದ್ದಾರೆ. ಜಿಲ್ಲೆಯ ಶಿರಸಿ ತಾಲೂಕಿನ 68 ವರ್ಷದ ವ್ಯಕ್ತಿಯೊಬ್ಬರು ಮಂಗನಕಾಯಿಲೆಯಿಂದ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಇದರಿಂದಾಗಿ ಜಿಲ್ಲೆಯಲ್ಲಿ ಮಂಗನ ಕಾಯಿಲೆಯಿಂದ ಮೃತಪಟ್ಟವರ ಸಂಖ್ಯೆ 3ಕ್ಕೆ ಏರಿದೆ. ಶಿರಸಿ ತಾಲೂಕಿನ ಹತ್ತರಗಿಯ ನವಿಲಗಾರ ಗ್ರಾಮದ 68 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಫೆ.22ರಂದು‌ … Continued

ಶಿರಸಿ : ಸುಗಾವಿ ಶಾಲೆ ʼಶತಮಾನೋತ್ಸವ ಸಂಭ್ರಮʼ ಉದ್ಘಾಟನೆ-ವಿದ್ಯಾರ್ಥಿಗಳಿದ್ದರೆ ಶಾಲೆಯಲ್ಲಿ ಇಂಗ್ಲಿಷ್‌ ಮೀಡಿಯಂಗೆ ಅನುಮತಿ ನೀಡಲು ಸಿದ್ಧ ಎಂದ ಡಿಡಿಪಿಐ

ಶಿರಸಿ : 114 ವರ್ಷಗಳ ಹಿಂದೆ ಸ್ಥಾಪನೆಯಾಗಿರುವ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಸುಗಾವಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶತಮಾನ ಸಂಭ್ರಮ ಕಾರ್ಯಕ್ರಮಕ್ಕೆ ಭಾನುವಾರ ಫೆ.25 ರಂದು ಬೆಳಿಗ್ಗೆ ಚಾಲನೆ ನೀಡಲಾಯಿತು. ಶಾಲೆಯ ನೂತನ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮವನ್ನು ಶಿರಸಿ ಶೈಕ್ಷಣಿಕ ಜಿಲ್ಲೆಯ ಡಿಡಿಪಿಐ ಬಸವರಾಜ ಪಿ. ಅವರು ಉದ್ಘಾಟಿಸಿದರು. ನಂತರ ಮಾತನಾಡಿದ … Continued

ಸುಗಾವಿ ಶಾಲೆಯ ʼಶತಮಾನೋತ್ಸವ ಸಂಭ್ರಮʼ ಕಾರ್ಯಕ್ರಮ ಭಾನುವಾರ ಉದ್ಘಾಟನೆ : ವಿವಿಧ ಕಾರ್ಯಕ್ರಮ ಆಯೋಜನೆ

ಶಿರಸಿ : ಅಪ್ಪಟ ಹಳ್ಳಿಯ ಪ್ರದೇಶದಲ್ಲಿ 114 ವರ್ಷಗಳ ಹಿಂದೆ ಸ್ಥಾಪನೆಯಾಗಿ ಸಾವಿರಾರು ವಿದ್ಯಾರ್ಥಿಗಳಿಗೆ ಕಲಿಕೆಯ ಮೂಲಕ ಭವಿಷ್ಯದ ಜೀವನಕ್ಕೆ ದಾರಿ ತೋರಿಸಿದ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ತಾಲೂಕಿನ ಸುಗಾವಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶತಮಾನ ಸಂಭ್ರಮ ಕಾರ್ಯಕ್ರಮವನ್ನು ಫೆ.25 ರ ಬೆಳಿಗ್ಗೆ 10 ಕ್ಕೆ ಶಾಲಾ ನೂತನ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ. … Continued

ವೀಡಿಯೊ..| ಸ್ವರ್ಣವಲ್ಲೀ ಮಠದಲ್ಲಿ ಶಿಷ್ಯ ಸ್ವೀಕಾರ ಸಂಪನ್ನ; 55ನೇ ಯತಿಗಳಾಗಿ ಶ್ರೀ ಆನಂದ ಬೋಧೇಂದ್ರ ಸರಸ್ವತೀ ಸ್ವಾಮೀಜಿ ನಿಯೋಜನೆ

ಶಿರಸಿ: 1300 ವರ್ಷಗಳ ಇತಿಹಾಸವಿರುವ ಶಂಕರಾಚಾರ್ಯರ ಪರಂಪರೆಯ ಶ್ರೀ ಸೋಂದಾ ಸ್ವರ್ಣವಲ್ಲೀ‌ ಮಹಾ‌ಸಂಸ್ಥಾನಕ್ಕೆ (Swarnavalli Mutt) ಉತ್ತರಾಧಿಕಾರಿಗಳ ಸನ್ಯಾಸ ಸ್ವೀಕಾರ ಕಾರ್ಯಕ್ರಮ ಗುರುವಾರ ನಡೆಯಿತು. ಶ್ರೀಮಠಕ್ಕೆ 55ನೇ ಯತಿಗಳಾಗಿ‌ ವಿದ್ವಾನ್ ನಾಗರಾಜ್ ಭಟ್ಟ ಗಂಗೆಮನೆ ಅವರು ಗುರುವಾರ ಸನ್ಯಾಸ ಗ್ರಹಣ‌ ಮಾಡಿದರು. ನಂತರ ಅವರಿಗೆ ಸ್ವರ್ಣವಲ್ಲೀ ಮಹಾಸಂಸ್ಥಾನದ 55ನೇ ಯತಿಗಳಾಗಿ ಶ್ರೀ ಗಂಗಾಧರೇಂದ್ರ ಸರಸ್ವತೀ ಸ್ವಾಮೀಜಿ … Continued

ಶಿರಸಿ: ಶಂಕರ ಪರಂಪರೆಯ ಸ್ವರ್ಣವಲ್ಲೀ‌ ಮಠದಲ್ಲಿ ಗುರುವಾರ ʼಶಿಷ್ಯ ಸ್ವೀಕಾರʼ

ಶಿರಸಿ: ಸೋಂದಾ‌ ಸ್ವರ್ಣವಲ್ಲೀ‌ ಮಹಾ ಸಂಸ್ಥಾನದಲ್ಲಿ ಶ್ರೀ ಗಂಗಾಧರೇಂದ್ರ ಸರಸ್ವತೀ ‌ಮಹಾ‌ಸ್ವಾಮೀಜಿ ಅವರ ಉತ್ತರಾಧಿಕಾರಿ ಹಾಗೂ ಶಿಷ್ಯ ಸ್ವೀಕಾರ ಕಾರ್ಯಕ್ರಮ ಗುರುವಾರ ಫೆ.೨೨ರಂದು‌ ನಡೆಯಲಿದೆ. ಶಿಷ್ಯ ಸ್ವೀಕಾರ ಕಾರ್ಯಕ್ರಮ ಫೆ.೧೮ರಿಂದ ಆರಂಭವಾಗಿರುವ ವಿವಿಧ ಧಾರ್ಮಿಕ‌ ಕಾರ್ಯಕ್ರಮಗಳ‌‌ ಮೂಲಕ ನಡೆಯುತ್ತಿದ್ದು, ಗುರುವಾರ (ಫೆ.೨೨) ಯಲ್ಲಾಪುರದ ಈರಾಪುರದ ಗಂಗೆಮನೆಯ ಬ್ರಹ್ಮಚಾರಿ ನಾಗರಾಜ ಭಟ್ಟ ಅವರು ಸಂಸ್ಥಾನದ ೫೫ನೇ ಯತಿಗಳಾಗಿ … Continued

ಶಿರಸಿ : ಸ್ವರ್ಣವಲ್ಲೀ ಮಠದ ಶಿಷ್ಯ ಸ್ವೀಕಾರ ಮಹೋತ್ಸವಕ್ಕೆ‌ ಚಾಲನೆ

 ಶಿರಸಿ: ಉತ್ತರ ಕನ್ನಡ ಜಿಲ್ಲೆಯ ಸೋಂದಾ ಸ್ವರ್ಣವಲ್ಲೀ ಮಹಾ ಸಂಸ್ಥಾನದ ಶ್ರೀ ಗಂಗಾಧರೇಂದ್ರ ಸರಸ್ವತೀ ಸ್ವಾಮೀಜಿ ಅವರ ಶಿಷ್ಯ ಸ್ವೀಕಾರ ವಿಧಿ ವಿಧಾನಗಳ ಐದು ದಿನಗಳ ಮಹೋತ್ಸವಕ್ಕೆ ಭಾನುವಾರ ಚಾಲನೆ‌ ನೀಡಲಾಗಿದೆ. ಶಿಷ್ಯ ಸ್ವೀಕಾರ ಮಹೋತ್ಸವದ ಧಾರ್ಮಿಕ ವಿಧಿ ವಿಧಾನಗಳು, ಧರ್ಮಸಭೆ, ಸಾಂಸ್ಕೃತಿಕ ‌ಕಾರ್ಯಕ್ರಮಗಳ ಮೂಲಕ ಸ್ವರ್ಣವಲ್ಲೀ ಚರಿತ್ರೆಯಲ್ಲಿ ದಾಖಲಾಗುವಂತೆ ಆರಂಭವಾಗಿದೆ. ಮಠದಲ್ಲಿ ನಿರ್ಮಾಣ ಮಾಡಲಾದ … Continued

ಶಿರಸಿ: ಸಾಧಕ ಕೃಷಿಕರಿಗೆ ಸೂಪರ್ ಸ್ಟಾರ್ ರೈತ ಪ್ರಶಸ್ತಿ ಪ್ರದಾನ

ಶಿರಸಿ: ಸಾಧಕ ರೈತರಿಗೆ ಪ್ರಶಸ್ತಿ ನೀಡಿ ಸನ್ಮಾನಿಸುವ ವಿಜಯ ಕರ್ನಾಟಕ ಪತ್ರಿಕೆಯ ಕಾರ್ಯಕ್ರಮ ನಗರದ ಎಪಿಎಂಸಿ ಮಾರುಕಟ್ಟೆ ಆವರಣದ ಪೂಗ ಭವನದಲ್ಲಿ ಬುಧವಾರ ನಡೆಯಿತು. ಉತ್ತರ ಕನ್ನಡ ಜಿಲ್ಲೆಯ ಶಿರಸಿ, ಸಿದ್ದಾಪುರ, ಯಲ್ಲಾಪುರ, ಮುಂಡಗೋಡ, ಕುಮಟಾ ಮತ್ತು ಅಂಕೋಲಾ ತಾಲೂಕಿನ 6 ಮಂದಿ ಕೃಷಿ ಸಾಧಕರಿಗೆ ಸೂಪರ್ ಸ್ಟಾರ್ ರೈತ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಶಿರಸಿಯ … Continued