ಶಿರಸಿ ; ಹಾಸ್ಟೆಲ್ ಶೌಚಾಲಯದಲ್ಲಿ ಮಗುವಿಗೆ ಜನ್ಮ ನೀಡಿದ ಬಾಲಕಿ

ಶಿರಸಿ: ಸರ್ಕಾರಿ ಬಾಲಕಿಯರ ಹಾಸ್ಟೆಲ್‌ನಲ್ಲಿದ್ದ 9ನೇ ತರಗತಿ ವಿದ್ಯಾರ್ಥಿನಿಯು ಮಗುವಿಗೆ ಜನ್ಮ ನೀಡಿರುವ ಆಘಾತಕಾರಿ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಬಂಡಲ ಬಳಿ ನಡೆದಿದೆ ಎಂದು ವರದಿಯಾಗಿದೆ. ಟಾಯ್ಲೆಟ್‌ನಲ್ಲಿ ಸ್ವಯಂ ಹೆರಿಗೆ ಮಾಡಿಕೊಂಡ ಬಳಿಕ ಹೆದರಿದ ಬಾಲಕಿ ನವಜಾತ ಶಿಶುವನ್ನು ಕಿಟಕಿಯಿಂದ ಎಸೆದಿದ್ದಾಳೆ ಎನ್ನಲಾಗಿದ್ದು, ಇದರಿಂದ ಮಗು ಮೃತಪಟ್ಟಿದೆ ಎಂದು ತಿಳಿದುಬಂದಿದೆ. ಹಾಸ್ಟೆಲ್‌ನ … Continued

ಶಿರಸಿ : ಹಿರಿಯ ಪತ್ರಕರ್ತ ಪಿ.ಎಸ್.ಸದಾನಂದ ನಿಧನಕ್ಕೆ ಪತ್ರಕರ್ತರ ಸಂಘದಿಂದ ಶ್ರದ್ಧಾಂಜಲಿ

ಶಿರಸಿ: ಮಂಗಳವಾರ ನಿಧನರಾದ ಹಿರಿಯ ಪತ್ರಕರ್ತ ಹಾಗೂ ಲೋಕಧ್ವನಿ ಪತ್ರಿಕೆಯ ಮಾಜಿ ಸಂಪಾದಕ ಪಿ.ಎಸ್.ಸದಾನಂದ ಅವರಿಗೆ ಬುಧವಾರ ನಗರದ ಪತ್ರಿಕಾಭವನದಲ್ಲಿ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಶಿರಸಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘವು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸಹಕಾರದಲ್ಲಿ ಶ್ರದ್ಧಾಂಜಲಿ ಸಭೆ ಆಯೋಜಿಸಿತ್ತು. ಪಿ.ಎಸ್.ಸದಾನಂದ ಅವರು ಸುದೀರ್ಘ ಅವಧಿಯವರೆಗೆ ಪತ್ರಿಕಾ ಕ್ಷೇತ್ರದಲ್ಲಿ ನಿಷ್ಠೆ ಹಾಗೂ ಪ್ರಾಮಾಣಿಕತೆಯಿಂದ ಸಲ್ಲಿಸಿದ … Continued

ಲೋಕಧ್ವನಿ ಪತ್ರಿಕೆ ಮಾಜಿ ಸಂಪಾದಕ ಪಿ.ಎಸ್‌. ಸದಾನಂದ ನಿಧನ

ಮುಂಡಗೋಡ: ಹಿರಿಯ ಪತ್ರಕರ್ತ ಹಾಗೂ ಲೋಕಧ್ವನಿ ಪತ್ರಿಕೆಯ ಮಾಜಿ ಸಂಪಾದಕ ಪಿ.ಎಸ್‌. ಸದಾನಂದ (75) ಅವರು ಮಂಗಳವಾರ ಸಂಜೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ಸದಾನಂದ ಅವರು ಪತ್ನಿ, ಪುತ್ರಿ, ಪುತ್ರ ಹಾಗೂ ಬಂಧು ಬಳಗದವರನ್ನು ಅಗಲಿದ್ದಾರೆ. ಪಿ.ಎಸ್. ಸದಾನಂದ ಅವರು ಮುಂಡಗೋಡ ತಾಲೂಕಿನ ನ್ಯಾಸರ್ಗಿ ಗ್ರಾಮದವರು. ಲೋಕಧ್ವನಿ ಪತ್ರಿಕೆ ಸಂಸ್ಥಾಪಕರಾದ ಗೋಪಾಲಕೃಷ್ಣ ಆನವಟ್ಟಿಯವರ ಕಾಲದಿಂದಲೂ ಅವರು ಲೋಕಧ್ವನಿ … Continued

ಅಡಕೆ ತೋಟಗಳಿಗೆ ರಾಸಾಯನಿಕ ಸಿಂಪಡಣೆ : ಜೇನು ಸಂಕುಲಗಳು ನಾಶ

ಶಿರಸಿ: ಪಶ್ಚಿಮ ಘಟ್ಟಗಳ ಜೀವವೈವಿಧ್ಯದ ತವರೂರಾದ ಮಲೆನಾಡಿನಲ್ಲಿ ಪ್ರಕೃತಿ ಮತ್ತು ಕೃಷಿ ಒಂದಕ್ಕೊಂದು ಪೂರಕವಾಗಿ ಸಾಗುತ್ತಾ ಬಂದಿವೆ. ಆದರೆ, ಇತ್ತೀಚಿನ ದಿನಗಳಲ್ಲಿ ಶಿರಸಿ ಸುತ್ತಮುತ್ತಲಿನ ಅನೇಕ ಕಡೆ ಜೇನುನೊಣಗಳ ಸಾಮೂಹಿಕ ಸಾವಿನ ಘಟನೆಗಳು ಕೃಷಿ ಮತ್ತು ಈ ಸೂಕ್ಷ್ಮ ಪರಿಸರ ವ್ಯವಸ್ಥೆಯ ಸಮತೋಲನ ಬಿಗಡಾಯಿಸುತ್ತಿರುವುದಕ್ಕೆ ಮುನ್ಸೂಚನೆಯಂತೆ ಕಂಡುಬರುತ್ತಿದೆ. ಅಡಕೆ ಮುಗುಳು (ಹೂಗೊಂಚಲು) ಉದುರದಂತೆ ತಡೆಯಲು ಮತ್ತು … Continued

ಶಿರಸಿ : ಕವಿ ದಿನೇಶ ಅಮ್ಮಿನಳ್ಳಿಗೆ ʼಕರ್ನಾಟಕ ಅಚೀವರ್ಸ್ ಬುಕ್ ಆಫ್ ರೆಕಾರ್ಡ್ʼ ಗೌರವ

ಶಿರಸಿ : ಸಾಹಿತ್ಯ ಕ್ಷೇತ್ರದಲ್ಲಿ ಗೈದ ವಿಶೇಷ ಸಾಧನೆಗಾಗಿ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಅಮ್ಮಿನಳ್ಳಿಯ ದಿನೇಶ ಮಡಿವಾಳ ಅವರಿಗೆ ಪ್ರತಿಷ್ಠಿತ “ಕರ್ನಾಟಕ ಅಚೀವರ್ಸ್ ಬುಕ್ ಆಫ್ ರೆಕಾರ್ಡ್” ಗೌರವ ಲಭಿಸಿದೆ. ಉದಯಿಸುವ ಸೂರ್ಯನನ್ನು ಮೂಲ ವಸ್ತುವಾಗಿರಿಸಿಕೊಂಡು ಚಳಿ ಮಳೆ ಬೇಸಿಗೆ ಕಾಲಕ್ಕೆ ತಕ್ಕಂತೆ ಸೂರ್ಯೋದಯ ಸಮಯದ ನಿಸರ್ಗ ಚಿತ್ರಣವನ್ನು ವರ್ಣಿಸುತ್ತ ಈ ಒಂದೇ … Continued

ಶಿರಸಿ : ಮೇ 8ರಂದು ರಾಘವೇಂದ್ರ ಮಠದಲ್ಲಿ ವಿಶೇಷ ಧಾರ್ಮಿಕ ಕಾರ್ಯಕ್ರಮ

ಶಿರಸಿ : ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ರಾಘವೇಂದ್ರ ಮಠದಲ್ಲಿ ಮೇ 7 ಹಾಗೂ 8ರಂದು ಎರಡು ದಿನಗಳ ಕಾಲ ವಿಶೇಷ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ. ಮೇ 7ರಂದು ಗುರುವಾರ ರಾಘವೇಂದ್ರ ಮಠದ ಶ್ರೀ ಗುರುರಾಯರ ಸನ್ನಿಧಿಯಲ್ಲಿ ನೂತನ ನಾಗಪ್ರತಿಷ್ಠೆಯ ಅಂಗವಾಗಿ  ಧಾರ್ಮಿಕ ವಿಧಿವಿಧಾನಗಳು ಹಾಗೂ ಮೇ 8ರಂದು ಶುಕ್ರವಾರ ನಾಗಪ್ರತಿಷ್ಠೆ,  ಹೊಸದಾಗಿ ನಿರ್ಮಿಸಲಾದ ಬಾವಿಯಲ್ಲಿ … Continued

ಶಿರಸಿ : ಆಯುರ್ವೇದ ವೈದ್ಯನ ಕೊಲೆ ಆರೋಪಿಯನ್ನು ಬಂಧಿಸಿದ ಪೊಲೀಸರು ; ಚಿನ್ನದ ಆಸೆಗೆ ಪರಿಚಯಸ್ಥನಿಂದಲೇ ಕೊಲೆ

ಶಿರಸಿ : ಉತ್ತರ ಕನ್ನಡ ಜಿಲ್ಲೆಯ ಶಿರಸಿಯ(sirsi) ಕೆ.ಹೆಚ್.ಬಿ ಕಾಲೋನಿಯಲ್ಲಿ ಮದುವೆ ಸಿದ್ಧತೆಯಲ್ಲಿದ್ದ ವೈದ್ಯರನ್ನು ಹತ್ಯೆ ಮಾಡಿದ ಆರೋಪಿಯನ್ನು ಶಿರಸಿ ಮಾರುಕಟ್ಟೆ ಠಾಣೆ ಪೊಲೀಸರು ಬಂಗಾರದ ಸಮೇತ ಬಂಧಿಸಿದ್ದಾರೆ. ಡಾ. ರಮೇಶ್ ಕಲಗುಟಕರ (51) ಅವರನ್ನು ಕೊಲೆ ಮಾಡಿದ ಆರೋಪದ ಮೇಲೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಮೂಲದ ಮಂಜುನಾಥ ಪಿ.ಎಲ್‌. (70) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. … Continued

ಶಿರಸಿ : ಆಯುರ್ವೇದ ವೈದ್ಯನ ಕೊಲೆ

ಶಿರಸಿ:  ಆಯುರ್ವೇದ  ವೈದ್ಯರೊಬ್ಬರ ತಲೆಗೆ ಮಾರಕಾಸ್ತ್ರಗಳಿಂದ ತಲೆಗೆ ಹೊಡೆದು ಕೊಲೆಗೈದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ನಗರದ ನ್ಯೂ ಕೆ.ಎಚ್.ಬಿ. ಕಾಲೋನಿಯ ಮನೆಯೊಂದರದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಮೂಲತಃ ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಹಾಲಿ ಶಿರಸಿ ನಗರದ ಕೆ.ಎಚ್.ಬಿ ಕಾಲೋನಿ ನಿವಾಸಿಯಾಗಿರುವ ರಮೇಶ ಕಲಘುಟಕರ್ (51) ಕೊಲೆಯಾದ ಆಯುರ್ವೇದ ವೈದ್ಯ ಎಂದುಗುರುತಿಸಲಾಗಿದೆ. ಶನಿವಾರ … Continued

ಶಿರಸಿ : ಎರಡು ಬಸ್‌ಗಳ ನಡುವೆ ಡಿಕ್ಕಿ ; ಹಲವರಿಗೆ ಗಾಯ

ಶಿರಸಿ : ಉತ್ತರ ಕನ್ನಡ ಜಿಲ್ಲೆಯ ಶಿರಸಿ-ಕುಮಟಾ ಹೆದ್ದಾರಿಯಲ್ಲಿ ಕೊಳಗಿಬೀಸ್ ಬಳಿ ಎರಡು ಬಸ್‌ಗಳ ನಡುವೆ ಶುಕ್ರವಾರ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಸುಮಾರು 15ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯಗಳಾಗಿವೆ ಎಂದು ವರದಿಯಾಗಿದೆ. ಭಟ್ಕಳದಿಂದ ಹುಬ್ಬಳ್ಳಿ ಮಾರ್ಗವಾಗಿ ಮುದ್ದೆಬಿಹಾಳಕ್ಕೆ ಹೋಗುತ್ತಿದ್ದ ಎನ್‌ಡಬ್ಲ್ಯುಕೆಆರ್‌ಟಿಸಿ ಬಸ್‌ ಮತ್ತು ಶಿರಸಿ ಕಡೆಯಿಂದ ಹೋಗುತ್ತಿದ್ದ ಖಾಸಗಿ ಬಸ್‌ ನಡುವೆ ಡಿಕ್ಕಿ ಸಂಭವಿಸಿದ್ದು, ಡಿಕ್ಕಿಯ … Continued

ಮಲೆನಾಡಿನ ಪಾರಂಪರಿಕ ಆಹಾರ ಪದ್ಧತಿ ಉಳಿಸಲು ‘ಎಥ್ನಿಕ್‌ ಫುಡ್‌ ಪ್ರವಾಸೋದ್ಯಮ’ ಇಂದಿನ ಅಗತ್ಯ

ಶಿರಸಿ : ಮಲೆನಾಡಿನ ಪಾರಂಪರಿಕ ಆಹಾರ ಪದ್ಧತಿ ನಶಿಸುತ್ತಿರುವ ಈ ಸಂದರ್ಭದಲ್ಲಿ ಎಥ್ನಿಕ್‌ ಫುಡ್‌ ಪ್ರವಾಸೋದ್ಯಮ (ethnic Tourism) ಪ್ರಚುರಪಡಿಸುವ ಮೂಲಕ ಅದನ್ನು ಉಳಿಸಿಕೊಳ್ಳುವ ಕೆಲಸ ಮಾಡಬೇಕಿದೆ ಎಂದು ಕದಂಬ ಮಾರ್ಕೆಟಿಂಗ್ ಸಹಕಾರಿ ಸಂಘದ ಸಲಹೆಗಾರ ವಿಶ್ವೇಶ್ವರ ಭಟ್ ಕೋಟೆಮನೆ ಹೇಳಿದ್ದಾರೆ. ಅವರು ಉತ್ತರ ಕನ್ನಡ ಜಿಲ್ಲೆಯ ಶಿರಸಿ ನಗರದ ತೋಟಗಾರಿಕಾ ಇಲಾಖೆ ಸಭಾಭವನದಲ್ಲಿ ಸೋಮವಾರ … Continued