ಸೂರ್ಯ ಗ್ರಹಣ ಮೋಕ್ಷ ಕಾಲ :ಸ್ವರ್ಣವಲ್ಲೀ ಮಠದ ಪ್ರಕಟಣೆ

ಶಿರಸಿ: ಗ್ರಹಣಮೋಕ್ಷ ಕಾಲಕ್ಕೆ ಉಂಟಾದ ಗೊಂದಲಕ್ಕೆ ಸಂಬಂಧಿಸಿ ಜ್ಯೋತಿಷ್ಯಾಸ್ತ್ರದ ವಿದ್ವಾಂಸರು ನೀಡಿದ ಸ್ಪಷ್ಟ ಅಭಿಪ್ರಾಯ ವಿಳಂಬವಾಗಿ ಸಿಕ್ಕಿದ್ದರಿಂದ ಮಂಗಳವಾರ ಸಂಭವಿಸಲಿರುವ ಸೂರ್ಯಗ್ರಹಣದ ವಿಷಯದಲ್ಲಿ ಸೋಂದಾ ಸ್ವರ್ಣವಲ್ಲೀ‌ ಮಹಾ ಸಂಸ್ಥಾನ ಮರು‌ ಪ್ರಕಟನೆ ನೀಡಿದೆ. ಜ್ಯೋತಿಷ್ಯಶಾಸ್ತ್ರದ ವಿದ್ವಾಂಸರ ಮತ್ತು ಖಗೋಳ ವಿಜ್ಞಾನಿಗಳ ಸ್ಪಷ್ಟ ಅಭಿಪ್ರಾಯ ತಡವಾಗಿ ಸಿಕ್ಕಿದ್ದರಿಂದ ಈ ತಿದ್ದುಪಡಿಯನ್ನು ಕೊಡಬೇಕಾಗಿ ಬಂದಿದೆ ಎಂದೂ ಶ್ರೀಮಠ ತಿಳಿಸಿದೆ. … Continued

ನಸುಕಿನ ಜಾವ ಬೆಂಗಳೂರು, ಮಂಗಳೂರು, ಶಿರಸಿ ಸೇರಿ ರಾಜ್ಯದ ಹಲವೆಡೆ ಏಕಕಾಲಕ್ಕೆ ಎನ್‌ಐಎ ದಾಳಿ

ಬೆಂಗಳೂರು: ಗುರುವಾರ ನಸುಕಿನ ಜಾವ ಬೆಂಗಳೂರು, ಮಂಗಳೂರು, ಶಿರಸಿ ಸೇರಿದಂತೆ ರಾಜ್ಯದ ಹಲವೆಡೆ ರಾಷ್ಟ್ರೀಯ ತನಿಖಾ ದಳದ (NIA) ಅಧಿಕಾರಿಗಳು ಏಕಕಾಲಕ್ಕೆ ದಾಳಿ ನಡೆಸಿದ್ದಾರೆ. ಪಿಎಫ್​ಐ, ಎಸ್​ಡಿಪಿಐ ಪದಾಧಿಕಾರಿಗಳ ಮನೆಗಳು ಹಾಗೂ ಪಿಎಫ್​ಐ ಕಚೇರಿಗಳ ಮೇಲೆ ದಾಳಿ ನಡೆಸಲಾಗಿದೆ. ಕರ್ನಾಟಕದಲ್ಲಿ ಬೆಂಗಳೂರು, ಶಿವಮೊಗ್ಗ, ಮಂಗಳೂರು, ಉತ್ತರ ಕನ್ನಡ, ಕೊಪ್ಪಳ ಹಾಗೂ ಕಲಬುರಗಿ ಜಿಲ್ಲೆಗಳಲ್ಲಿ ದಾಳಿಗಳನ್ನು ನಡೆಸಲಾಗಿದೆ. … Continued

ಶಿರಸಿಯಲ್ಲಿ ಪೆಟ್ರೋಲ್‌-ಡೀಸೆಲ್‌ ದರ ಹೆಚ್ಚಿರುವ ಬಗ್ಗೆ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದು ಗಮನಸೆಳೆದ ಡಾ.ರವಿಕಿರಣ ಪಟವರ್ಧನ್: ಇಳಿಯಿತು ದರ…!

ಶಿರಸಿ: ಸಾಮಾನ್ಯ ವ್ಯಕ್ತಿಯೊಬ್ಬರ ಸಮಾಜಮುಖಿ ಚಿಂತನೆಗೆ ಕೇಂದ್ರ ಸ್ಪಂದಿಸಿರುವ ಕೇಂದ್ರ ಸರ್ಕಾರ ಜನಸಾಮಾನ್ಯರಿಗೆ ಆಗುತ್ತಿದ್ದ ನಷ್ಟ ತಪ್ಪಿಸಿದೆ. ಸಮಾಜಮುಖಿ ಚಿಂತನೆಗಳಿಂದ ಗುರುತಿಸಿಕೊಂಡಿರುವ ಶಿರಸಿಯ ಖ್ಯಾತ ಆಯುರ್ವೇದ ವೈದ್ಯ ಡಾ.ರವಿಕಿರಣ ಪಟವರ್ಧನ, ಕಳೆದ ಜೂನ್ ಮೊದಲ ವಾರದಲ್ಲಿ ಶಿರಸಿಯಲ್ಲಿ ಕರ್ನಾಟಕದಲ್ಲಿಯೇ ಅತಿ ಹೆಚ್ಚು ಪೆಟ್ರೋಲ್ ಮತ್ತು ಡಿಸೇಲ್ ದರ ಇರುವುದನ್ನು ಉಲ್ಲೇಖಿಸಿ ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ … Continued

ಶಿರಸಿ: ಕರಡಿ ದಾಳಿಯಿಂದ ಉಪ್ಪಾಗೆ ಹಣ್ಣು ಸಂಗ್ರಹಕ್ಕೆ ಕಾಡಿಗೆ ಹೋಗಿದ್ದ ವ್ಯಕ್ತಿ ಸ್ಥಳದಲ್ಲೇ ಸಾವು

ಶಿರಸಿ: ಕರಡಿ ದಾಳಿಗೆ ವ್ಯಕ್ತಿ ಓರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ದೇವನಹಳ್ಳಿ ಗ್ರಾಮ ಪಂಚಾಯತ ವ್ಯಾಪ್ತಿಯ ಸುಂಡಳ್ಳಿ ಅರಣ್ಯ ಪ್ರದೇಶದಲ್ಲಿ ನಡೆದಿದೆ. ಕರಡಿ ದಾಳಿಯಿಂದ ಮೃತಪಟ್ಟ ವ್ಯಕ್ತಿಯನ್ನು ಓಂಕಾರ ಜೈನ್(52) ಎಂದು ಗುರುತಿಸಲಾಗಿದೆ. ಓಂಕಾರ್ ಅವರು ಮನೆಯ ಸಮೀಪದ ಕಾಡಿಗೆ ಉಪ್ಪಾಗೆ ಕಾಯಿ ಸಂಗ್ರಹಿಸಲು ಕಾಡಿಗೆ ಹೋದ ಸಂದರ್ಭದಲ್ಲಿ … Continued

ಚಾತುರ್ಮಾಸದಲ್ಲಿ ಶಿಷ್ಯರಿಗೆ ಹಸಿರು ಪ್ರೀತಿ ಬಿತ್ತುತ್ತಿರುವ ಸ್ವರ್ಣವಲ್ಲೀ ಸ್ವಾಮೀಜಿ : ಶಿಷ್ಯರಿಗೆ ವೃಕ್ಷ ಮಂತ್ರಾಕ್ಷತೆ, ಈವರೆಗೆ 75 ಸಹಸ್ರಕ್ಕೂ ಅಧಿಕ ಸಸಿಗಳ ವಿತರಣೆ

ಶಿರಸಿ: ಬೇಡ್ತಿ ಅಘನಾಶಿನಿ ಕೊಳ್ಳ ಸಂರಕ್ಷಣೆಗೆ ಕಂಕಣ ಕಟ್ಟಿಕೊಂಡ ಪರಿಸರ ಪ್ರಿಯ ಸ್ವಾಮೀಜಿ ಎಂದೇ ಹೆಸರಾದ ಉತ್ತರ ಕನ್ನಡ ಜಿಲ್ಲೆ ಶಿರಸಿ ತಾಲೂಕಿನ ಸೋಂದಾ‌ ಸ್ವರ್ಣವಲ್ಲೀ‌ ಮಠಾಧೀಶರು‌ ಶಿಷ್ಯರಲ್ಲಿ ಪರಿಸರ ಜಾಗೃತಿ ಕಾರ್ಯ ಮಾಡುತ್ತಿದ್ದಾರೆ. ವನಸ್ಪತಿ ಗಿಡಗಳ‌ ಮಹತ್ವ, ಅವುಗಳ ಸಂರಕ್ಷಣೆಗೆ ಶಿಷ್ಯರು ಹಾಗೂ ಮಠದ ಭಕ್ತರಲ್ಲಿ ಮುತವರ್ಜಿ ವಹಿಸಲು ಸೂಚಿಸುತ್ತಿದ್ದಾರೆ. ಪವಿತ್ರ ಚಾತುರ್ಮಾಸ್ಯದ ಅವಧಿಯಲ್ಲಿ … Continued

ಶಿರಸಿ: ಮನ್ ಕಿ ಬಾತ್‌ನಲ್ಲಿ ತಾರಗೋಡದ ಜೇನು ಕೃಷಿಕ ಮಧುಕೇಶ್ವರ ಹೆಗಡೆ ಸಾಧನೆ ಕೊಂಡಾಡಿದ ಪ್ರಧಾನಿ ಮೋದಿ

ಕಾರವಾರ: ಪ್ರಧಾನಿ ನರೇಂದ್ರ ಮೋದಿ ನಡೆಸಿದ 91ನೇ ಆವೃತ್ತಿಯ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ತಾರಗೋಡ ಗ್ರಾಮದ ಜೇನು ಕೃಷಿಕ ಮಧುಕೇಶ್ವರ ಹೆಗಡೆ ಅವರನ್ನು ಶ್ಲಾಘಿಸಿದ್ದಾರೆ. ತಮ್ಮ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಆರೋಗ್ಯ ಕ್ಷೇತ್ರದಲ್ಲಿ ಆಯುರ್ವೇದಿಕ್ ಔಷಧಿಗಳ ಮಹತ್ವ, ಜೇನು ಕೃಷಿ, ಜಾತ್ರೆ- ಸಂಸ್ಕೃತಿಗಳ ಬಗ್ಗೆ ಮಾತನಾಡಿರುವ … Continued

ಶಿರಸಿ: ಜುಲೈ 13ರಿಂದ ಸ್ವರ್ಣವಲ್ಲಿ ಶ್ರೀಗಳ ಚಾತುರ್ಮಾಸ್ಯ ಆರಂಭ

ಶಿರಸಿ: ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಸೋಂದಾ‌ ಸ್ವರ್ಣವಲ್ಲೀ‌ ಮಠದ ಮಠಾಧೀಶ ಶ್ರೀಗಂಗಾಧರೇಂದ್ರ ಸರಸ್ವತೀ ಮಹಾಸ್ವಾಮಿಗಳ 32ನೇ ಚಾತುರ್ಮಾಸ್ಯ ಜುಲೈ 13ರ ಆಷಾಢ ಪೂರ್ಣಿಮೆಯಿಂದ ಆರಂಭವಾಗಿ ಸೆಪ್ಟೆಂಬರ್‌ 10ರ ವರೆಗೆ ಸ್ವರ್ಣವಲ್ಲೀ ಮಠದಲ್ಲಿ ನಡೆಯಲಿದೆ. ಅಂದು ಶ್ರೀಗಳು ವ್ಯಾಸ ಪೂಜೆ‌ ಸಲ್ಲಿಸಿ ವ್ರತ ಸಂಕಲ್ಪ ಮಾಡಿದ ಬಳಿಕ ಶಿಷ್ಯರು ಶ್ರೀಗಳಿಗೆ ಪಾದಪೂಜೆ‌ ನಡೆಸಲಿದ್ದಾರೆ. ಮಧ್ಯಾಹ್ನ … Continued

ಶಿರಸಿ: ವರ್ಧಂತಿ ಉತ್ಸವದಂದು ರಕ್ತದಾನ ಮಾಡಿ ಪ್ರೇರಣೆಯಾದ ಸ್ವರ್ಣವಲ್ಲೀ ಗಂಗಾಧರೇಂದ್ರ ಸರಸ್ವತೀ ಸ್ವಾಮೀಜಿ

ಶಿರಸಿ: ಪರಿಸರ ಸ್ವಾಮೀಜಿ ಎಂದು ಹೆಸರಾದ ಸ್ವರ್ಣವಲ್ಲೀ ಮಠದ ಶ್ರೀ ಗಂಗಾಧರೇಂದ್ರ ಸರಸ್ವತೀ ಸ್ವಾಮೀಜಿಗಳ ವರ್ಧಂತಿ ಉತ್ಸವದ ಹಿನ್ನಲೆಯಲ್ಲಿ ಶಿರಸಿ ತಾಲೂಕಿನ ಸೋಂದಾದ ಶ್ರೀಮಠದಲ್ಲಿ ಮಠದ ಅಂಗ ಸಂಸ್ಥೆ ಗ್ರಾಮಾಭ್ಯುದಯ ಸಂಸ್ಥೆ ಹಮ್ಮಿಕೊಂಡ ಆರೋಗ್ಯ ತಪಾಸಣೆ ರಕ್ತದಾನ ಶಿಬಿರದಲ್ಲಿ ಶ್ರೀಗಳೇ ರಕ್ತದಾನ ಮಾಡುವ ಮೂಲಕ ಅನೇಕರಿಗೆ ಪ್ರೇರಣೆದಾಯಕರಾಗಿದ್ದಾರೆ. ಜೀವ ಉಳಿಸಿಕೊಳ್ಳುವ ಸಂದರ್ಭದಲ್ಲಿ ರಕ್ತಗಳ ಅಲಭ್ಯತೆ ಆದರೆ … Continued

ಬಾಲಚಂದ್ರ ಸಾಯಿಮನೆಗೆ ಪಾವನಾ ಪರಿಸರ ಪ್ರಶಸ್ತಿ

ಶಿರಸಿ: ಪಾವನಾ ಪರಿಸರ ಪ್ರತಿಷ್ಠಾನದಿಂದ ಕೊಡಲಾಗುತ್ತಿರುವ ಪ್ರತಿಷ್ಠಿತ “ಪಾವನಾ ಪರಿಸರ ಪ್ರಶಸ್ತಿ”ಯನ್ನು ಈ ಬಾರಿ ಕೃಷಿಕ-ಪರಿಸರ ವಿಜ್ಞಾನಿ ಬಾಲಚಂದ್ರ ಸಾಯಿಮನೆ ಅವರಿಗೆ ನೀಡಲಾಗುತ್ತಿದೆ. ಪ್ರಶಸ್ತಿಯು . ೫೦ ಸಾವಿರ ರೂ.ಗಳ ನಗದುಹಾಗೂ ಸ್ಮರಣಿಕೆಯನ್ನೊಳಗೊಂಡಿದೆ. ಜೂನ್‌ ೫ರಂದು “ವಿಶ್ವ ಪರಿಸರ ದಿನ”ದಂದು ಶಿರಸಿಯಲ್ಲಿ ನಡೆಯುವ ಸಮಾರಂಭದಲ್ಲಿ ಕರ್ನಾಟಕ ಉಚ್ಚ ನ್ಯಾಯಾಲಯದ ವಿಶ್ರಾಂತ ನ್ಯಾಯಮೂರ್ತಿ ಎಚ್‌. ಎನ್‌. ನಾಗಮೋಹನದಾಸ … Continued

ಶಿರಸಿ: ಖ್ಯಾತ ಆಯುರ್ವೇದ ವೈದ್ಯ ಡಾ.ಸಾಂಬಮೂರ್ತಿ ನಿಧನ

ಶಿರಸಿ: ಉತ್ತರ ಕನ್ನಡ ಜಿಲ್ಲೆಯ ಹೆಸರಾಂತ ಆಯುರ್ವೇದ ವೈದ್ಯರಾಗಿದ್ದ ಹಾಗೂ ಶಿರಸಿಯ ಸಮೀಕ್ಷಾ ಆಯುರ್ವೇದ ಚಿಕಿತ್ಸಾಲಯದ ಸಂಸ್ಥಾಪಕರಾಗಿದ್ದ ಡಾ.ಸಾಂಬಮೂರ್ತಿ ಗಾಯತ್ರಿ (57) ಇಂದು, ಸೋಮವಾರ  ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ. ಅವರು, ಪ್ರಖ್ಯಾತ ಆಯುರ್ವೇದ ತಜ್ಞೆ ಪತ್ನಿ ಡಾ.ಸಾವಿತ್ರಿ, ಪುತ್ರ ಸಂಯಮ ಹಾಗೂ ಪುತ್ರಿ ಸಂಜ್ಞಾ ಅವರನ್ನು ಅಗಲಿದ್ದಾರೆ. ಮೂಲತಃ ಗೋಕರ್ಣದವರಾದ ಡಾ.ಸಾಂಬಮೂರ್ತಿಯವರು ಗುರು ಶಿಷ್ಯ ಪರಂಪರೆಯಡಿ ತಮ್ಮ … Continued