ಯಾವುದೇ ವಸ್ತು- ಸಂಗತಿ ವರ್ತಮಾನಕ್ಕೆ ಅನ್ವಯವಾದರೆ ಅದು ಪ್ರಸ್ತುತವಾಗುತ್ತದೆ ; ʼಪುರುಷ ಸೂಕ್ತ ಕೃತಿʼ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ನಾರಾಯಣ ಯಾಜಿ

ಶಿರಸಿ : ಯಾವುದೇ ಕೃತಿಗಳು, ವಸ್ತು- ಸಂಗತಿಗಳು ವರ್ತಮಾನಕ್ಕೆ ಅನ್ವಯವಾಗುವಂತಿದ್ದರೆ ಅದು ಎಲ್ಲ ಕಾಲಕ್ಕೂ ಪ್ರಸ್ತುತವಾಗುತ್ತವೆ. ರಘುಪತಿ ಹೆಗಡೆ ಬೆಳ್ಳಿಕೇರಿಯವರ ಕೃತಿಯಾದ “ಪುರುಷ ಸೂಕ್ತ” ಕೃತಿ ಪ್ರಸ್ತುತ ಕಾಲದಲ್ಲಿ ಅಗತ್ಯವಾಗಿ ತಿಳಿದುಕೊಳ್ಳಲೇ ಬೇಕಾದ ವೈಜ್ಞಾನಿಕ ವಿಷಯಗಳನ್ನು ಒಳಗೊಂಡ ಒಂದು ಕೃತಿಯಾಗಿದೆ. ಇದಕ್ಕೆ ಕಾರಣ ಅವರು ಆರಿಸಿಕೊಂಡಿರುವ ವಸ್ತು ಎಂದು ಲೇಖಕ, ಖ್ಯಾತ ತಾಳಮದ್ದಲೆ ಅರ್ಥಧಾರಿ ನಾರಾಯಣ … Continued

ವೀಡಿಯೊ..| ಶಿರಸಿ ; ಬಾವಿಗೆ ಬಿದ್ದ ಚಿರತೆಯ ರಕ್ಷಣೆ

ಶಿರಸಿ :ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಉಂಚಳ್ಳಿ ಗ್ರಾಮ ಪಂಚಾಯತ ವ್ಯಾಪ್ತಿಯ ಕೆರೆಕೊಪ್ಪದಲ್ಲಿ ತಡರಾತ್ರಿ ಬಾವಿಗೆ ಬಿದ್ದಿದ್ದ ಚಿರತೆಯೊಂದನ್ನು ಅರಣ್ಯ ಇಲಾಖೆಯವರು ದೀರ್ಘ ಕಾರ್ಯಾಚರಣೆಯ ನಂತರ ರಕ್ಷಿಸಿದ್ದಾರೆ. ಸ್ಥಳೀಯ ಸುರೇಶ ಹೆಗಡೆ ಎಂಬವರ ಮನೆಯ ಬಾವಿಗೆ ಬಿದ್ದಿದ್ದ ಚಿರತೆ ಕಂಡ ಮನೆಯವರು ಒಂದು ಕ್ಷಣ ಗಾಬರಿಗೊಂಡಿದ್ದರು. ನಂತರ ಈ ವಿಷಯವನ್ನು ಅರಣ್ಯ ಇಲಾಖೆಯವರ ಗಮನಕ್ಕೆ … Continued

ʼಪುರುಷ ಸೂಕ್ತʼ ಮಂತ್ರವು ವಿಜ್ಞಾನದ ʼಸೃಷ್ಟಿ ತತ್ವʼದ ಬಗ್ಗೆ ಹೇಳುತ್ತವೆ ; ಇದರ ಮಂತ್ರಗಳಲ್ಲಿದೆ ಖಗೋಳ ಭೌತ ವಿಜ್ಞಾನ : ನನ್ನ ಪುಸ್ತಕದಲ್ಲಿ ಇದರ ಬಗ್ಗೆ ಹೇಳಿದ್ದೇನೆ | ಆರ್‌.ಎಸ್‌.ಹೆಗಡೆ ಬೆಳ್ಳೆಕೇರಿ

ರಘುಪತಿ ಯಾಜಿ ಪುರುಷ ಸೂಕ್ತದ ಹಲವು ಮಂತ್ರಗಳು ವಿಶ್ವದ ಎಲ್ಲ ಭೌತಿಕ ಚೈತನ್ಯದ ಸೃಷ್ಟಿಗಳ ಕುರಿತಾಗಿ ವರ್ಣಿಸುತ್ತವೆ. ನಂತರ ಭೂಮಿಯ ಮೇಲಿನ ರಸೋತ್ಪತ್ತಿ -ಜೀವೋತ್ಪತ್ತಿಗಳ ವರ್ಣನೆ, ಉಪಾಸನೆ ಹಾಗೂ ಕರ್ಮಗಳ ಬಗ್ಗೆ ವಿವರಿಸುತ್ತವೆ. ಅಂತಿಮವಾಗಿ ‘ಮೋಕ್ಷ’ ಮಾರ್ಗದ ಬಗ್ಗೆ ಹೇಳುತ್ತದೆ. ಈ ಸೂಕ್ತದ ಮಂತ್ರಗಳಲ್ಲಿರುವ ವರ್ಣನೆಗಳು ಇಂದಿನ ಖಗೋಳ ಭೌತ ವಿಜ್ಞಾನ ಹಾಗೂ ಜೀವ ವಿಜ್ಞಾನ … Continued

ಶಿರಸಿ : ಬೆಣ್ಣೆಹೊಳೆ ಜಲಪಾತಕ್ಕೆ ಹೋಗಿದ್ದ ಓರ್ವ ನಾಪತ್ತೆ

ಶಿರಸಿ : ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಬಂಡಲ ಸಮೀಪದ ಬೆಣ್ಣೆಹೊಳೆ ಜಲಪಾತ ನೋಡಲು ಭಾನುವಾರ ತೆರಳಿದ್ದ ನಾಲ್ವರು ವಿದ್ಯಾರ್ಥಿಗಳ ಪೈಕಿ ವಿದ್ಯಾರ್ಥಿಯೊಬ್ಬ ನಾಪತ್ತೆಯಾಗಿದ್ದಾನೆ ಎಂದು ವರದಿಯಾಗಿದೆ. ನಾಪತ್ತೆಯಾಗಿದ್ದಿನ್ನೋರ್ವ ವಿದ್ಯಾರ್ಥಿಯನ್ನು ಶೋಧ ಕಾರ್ಯಾಚರಣೆ ನಡೆಸಿ ಪತ್ತೆ ಹಚ್ಚಲಾಗಿದೆ ಎಂದು ಹೇಳಲಾಗಿದೆ. ನಗರದ ಅರಣ್ಯ ಪದವಿ ಕಾಲೇಜಿನ ರಾಹುಲ್ ಎಂಬಾತ ನೀರಿನಲ್ಲಿ ಕಣ್ಮರೆಯಾದ ವಿದ್ಯಾರ್ಥಿ. ಎನ್ನಲಾಗಿದೆ. … Continued

ಶಿರಸಿ : ಏರ್‌ ಗನ್‌ ನಿಂದ ಗುಂಡು ಹಾರಿ ಬಾಲಕ ಸಾವು

ಶಿರಸಿ: ಎರಡು ಮಕ್ಕಳು ಆಟವಾಡುತ್ತಿದ್ದಾಗ ಆಕಸ್ಮಾತ್‌ ಆಗಿ ಏರ್ ಗನ್ ಗುಂಡು ಹಾರಿ ಒಂಬತ್ತು ವರ್ಷದ ಬಾಲಕನೊಬ್ಬ ಸ್ಥಳದಲ್ಲೇ ಮೃತಟ್ಟ ಹೃದಯ ವಿದ್ರಾವಕ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಚಿಪಗಿ ಸಮೀಪದ ಸೋಮನಳ್ಳಿ ಗ್ರಾಮದಲ್ಲಿ ಶುಕ್ರವಾರ ನಡೆದಿದೆ ಎಂದು ವರದಿಯಾಗಿದೆ. ಸೋಮನಳ್ಳಿಯ ರಾಘವೇಂದ್ರ ಹೆಗಡೆ ಎಂಬವರ ಮನೆಯಲ್ಲಿ ಕೆಲಸ ಮಾಡಲು ಬಸಪ್ಪ ಉಂಡಿಯರ್ ಕುಟುಂಬ … Continued

ಶಿರಸಿ : ಕೆರೆಗೆ ಹಾರಿ ವಿದ್ಯಾರ್ಥಿನಿ ಆತ್ಮಹತ್ಯೆ

ಶಿರಸಿ: ವಿದ್ಯಾರ್ಥಿನಿಯೊಬ್ಬಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಇಸಳೂರು ಗ್ರಾಮದಲ್ಲಿ ನಡೆದಿದೆ ಎಂದು ವರದಿಯಾಗಿದೆ. ವಿದ್ಯಾರ್ಥಿನಿಯ ಮೃತ ದೇಹ ಇಸಳೂರು ಕೆರೆಯಲ್ಲಿ ಪತ್ತೆಯಾಗಿದೆ ಎಂದು ಹೇಳಲಾಗಿದೆ. ಮೃತ ವಿದ್ಯಾರ್ಥಿನಿಯನ್ನು ಪ್ರಥಮ ವರ್ಷದ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಸ್ನೇಹಾ (17) ಎಂದು ಗುರುತಿಸಲಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು … Continued

ವೀಡಿಯೊ…| ಶಿರಸಿ : ಆಹಾರವೆಂದು ಭಾವಿಸಿ ‘ನಾಡ ಬಾಂಬ್‌’ ತಿನ್ನಲು ಹೋದ ಆಕಳು ; ಸ್ಫೋಟಕ್ಕೆ ಛಿದ್ರಗೊಂಡ ಮುಖ…

ಶಿರಸಿ: ಅಕ್ರಮ ಚಟುವಟಿಕೆಗಳಿಗಾಗಿ ಇರಿಸಲಾಗಿದ್ದ ನಾಡ ಬಾಂಬ್‌ ಸಿಡಿದು ಹಸುವೊಂದು ಮಾರಣಾಂತಿಕವಾಗಿ ಗಾಯಗೊಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ತಾಲೂಕಿನ ಮಳಲಿ ಗ್ರಾಮದ ಹೊಸಮನೆ ಬಳಿ ನಡೆದಿದೆ ಎಂದು ವರದಿಯಾಗಿದೆ. ಶಿರಸಿ ತಾಲೂಕಿನ ಹೊಸಮನೆ ನಿವಾಸಿ ಲಕ್ಷ್ಮಣ ಗೌಡ ಎಂಬವರಿಗೆ ಸೇರಿದ ಈ ಆಕಳು, ಅಕೇಶಿಯಾ ತೋಪಿನಲ್ಲಿ ಮೇಯುತ್ತಿದ್ದಾಗ ಆಹಾರವೆಂದು ತಿಳಿದು ಅಲ್ಲಿ ಇರಿಸಲಾಗಿದ್ದ ನಾಡ … Continued

ಶಿರಸಿ : 35 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಶಿರಸಿ: ಹಳೆಯ ಪ್ರಕರಣವೊಂದರಲ್ಲಿ ಬೇಕಾಗಿದ್ದ ಕಳೆದ ಸುಮಾರು 35 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯೊಬ್ಬನನ್ನು ಉತ್ತರ ಕನ್ನಡ ಜಿಲ್ಲೆಯ ಶಿರಸಿ ಪೊಲೀಸರು ಪತ್ತೆ ಹಚ್ಚಿ ಬಂಧಿಸಿದ್ದಾರೆ. ಪ್ರಸ್ತುತ ನವದೆಹಲಿಯಲ್ಲಿ ವಾಸವಾಗಿದ್ದು, ದಾಂಡೇಲಿಗೆ ಬರುವ ಬಗ್ಗೆ ಖಚಿತ ಮಾಹಿತಿ ದೊರಕಿತ್ತು. ಅಲ್ಲಿ ಆರೋಪಿಯನ್ನು ಬಂಧಿಸಿದ್ದಾರೆ. 1990ರ ನವೆಂಬರ್ 29 ರಂದು ಶಿರಸಿಯ ಐದು ರಸ್ತೆಯ ಬಳಿ ದಿನಕರ ನಾರಾಯಣ … Continued

ಹಿರಿಯ ಹಾರ್ಮೊನಿಯಂ ವಾದಕ, ಶತಾಯುಷಿ ಶ್ರೀಕೃಷ್ಣರಾವ್‌ ಕಲ್ಗುಂಡಿಕೊಪ್ಪ ನಿಧನ

ಶಿರಸಿ : ಉತ್ತರಕನ್ನಡ ಜಿಲ್ಲೆಯ ಹಿರಿಯ ಹಾರ್ಮೊನಿಯಂ ವಾದಕ, ಅತ್ಯುತ್ತಮ ಕೃಷಿಕ ಹಾಗೂ ಶತಾಯುಷಿ ಶ್ರೀಕೃಷ್ಣ ರಾವ್ ಕಲ್ಗೊಂಡಿಕೊಪ್ಪ (100) ಅವರು, ಶನಿವಾರ (ಆಗಸ್ಟ್‌ 16) ಬೆಳಗಿನ ಜಾವ ವಯೋಸಹಜ ಕಾಯಿಲೆಯಿಂದ ನಿಧನರಾಗಿದ್ದಾರೆ. ಶಿರಸಿ ತಾಲೂಕಿನ ಸುಗಾವಿ ಗ್ರಾಮದ ಕಲ್ಗೊಂಡಿಕೊಪ್ಪದ ನಿವಾಸಿಯಾಗಿದ್ದ ಮೃತ ಶ್ರೀಕೃಷ್ಣ ರಾವ್ ಕಲ್ಗೊಂಡಿಕೊಪ್ಪ ಅವರು ಪತ್ನಿ, ನಾಲ್ವರು ಪುತ್ರರು, ಮೂವರು ಪುತ್ರಿಯರು … Continued

ಶಿರಸಿ | ಕೂಲಿ ಹಣ ಕೊಡಲಿಲ್ಲವೆಂದು ಸಲಾಕೆಯಿಂದ ಹೊಡೆದು ವ್ಯಕ್ತಿಯ ಕೊಲೆ

ಶಿರಸಿ : ಕೂಲಿ ಹಣ ನೀಡಿಲ್ಲ ಎಂದು ಸಲಾಕೆಯಿಂದ ಹೊಡೆದು ವ್ಯಕ್ತಿಯೊಬ್ಬನನ್ನು ಕೊಲೆ ಮಾಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಕಮಾಟಗೇರಿಯಲ್ಲಿ ನಡೆದಿದೆ ಎಂದು ವರದಿಯಾಗಿದೆ. ಕಮಾಟಗೇರಿಯ ರವೀಶ ಗಣಪತಿ ಚನ್ನಯ್ಯ (40) ಕೊಲೆಯಾದ ವ್ಯಕ್ತಿ ಎಂದು ಗುರುತಿಸಲಾಗಿದೆ. ಕಮಾಟಗೇರಿಯ ಮಂಜುನಾಥ ಬಸ್ಯಾ ಚನ್ನಯ್ಯ ಎಂಬಾತ ಕೊಲೆ ಮಾಡಿದ ಆರೋಪಿಯಾಗಿದ್ದು, ಪೊಲೀಸರು ಈತನನ್ನು … Continued