ವೀಡಿಯೊ…| ಶಿರಸಿ : ಆಹಾರವೆಂದು ಭಾವಿಸಿ ‘ನಾಡ ಬಾಂಬ್‌’ ತಿನ್ನಲು ಹೋದ ಆಕಳು ; ಸ್ಫೋಟಕ್ಕೆ ಛಿದ್ರಗೊಂಡ ಮುಖ…

ಶಿರಸಿ: ಅಕ್ರಮ ಚಟುವಟಿಕೆಗಳಿಗಾಗಿ ಇರಿಸಲಾಗಿದ್ದ ನಾಡ ಬಾಂಬ್‌ ಸಿಡಿದು ಹಸುವೊಂದು ಮಾರಣಾಂತಿಕವಾಗಿ ಗಾಯಗೊಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ತಾಲೂಕಿನ ಮಳಲಿ ಗ್ರಾಮದ ಹೊಸಮನೆ ಬಳಿ ನಡೆದಿದೆ ಎಂದು ವರದಿಯಾಗಿದೆ. ಶಿರಸಿ ತಾಲೂಕಿನ ಹೊಸಮನೆ ನಿವಾಸಿ ಲಕ್ಷ್ಮಣ ಗೌಡ ಎಂಬವರಿಗೆ ಸೇರಿದ ಈ ಆಕಳು, ಅಕೇಶಿಯಾ ತೋಪಿನಲ್ಲಿ ಮೇಯುತ್ತಿದ್ದಾಗ ಆಹಾರವೆಂದು ತಿಳಿದು ಅಲ್ಲಿ ಇರಿಸಲಾಗಿದ್ದ ನಾಡ … Continued

ಶಿರಸಿ : 35 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಶಿರಸಿ: ಹಳೆಯ ಪ್ರಕರಣವೊಂದರಲ್ಲಿ ಬೇಕಾಗಿದ್ದ ಕಳೆದ ಸುಮಾರು 35 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯೊಬ್ಬನನ್ನು ಉತ್ತರ ಕನ್ನಡ ಜಿಲ್ಲೆಯ ಶಿರಸಿ ಪೊಲೀಸರು ಪತ್ತೆ ಹಚ್ಚಿ ಬಂಧಿಸಿದ್ದಾರೆ. ಪ್ರಸ್ತುತ ನವದೆಹಲಿಯಲ್ಲಿ ವಾಸವಾಗಿದ್ದು, ದಾಂಡೇಲಿಗೆ ಬರುವ ಬಗ್ಗೆ ಖಚಿತ ಮಾಹಿತಿ ದೊರಕಿತ್ತು. ಅಲ್ಲಿ ಆರೋಪಿಯನ್ನು ಬಂಧಿಸಿದ್ದಾರೆ. 1990ರ ನವೆಂಬರ್ 29 ರಂದು ಶಿರಸಿಯ ಐದು ರಸ್ತೆಯ ಬಳಿ ದಿನಕರ ನಾರಾಯಣ … Continued

ಹಿರಿಯ ಹಾರ್ಮೊನಿಯಂ ವಾದಕ, ಶತಾಯುಷಿ ಶ್ರೀಕೃಷ್ಣರಾವ್‌ ಕಲ್ಗುಂಡಿಕೊಪ್ಪ ನಿಧನ

ಶಿರಸಿ : ಉತ್ತರಕನ್ನಡ ಜಿಲ್ಲೆಯ ಹಿರಿಯ ಹಾರ್ಮೊನಿಯಂ ವಾದಕ, ಅತ್ಯುತ್ತಮ ಕೃಷಿಕ ಹಾಗೂ ಶತಾಯುಷಿ ಶ್ರೀಕೃಷ್ಣ ರಾವ್ ಕಲ್ಗೊಂಡಿಕೊಪ್ಪ (100) ಅವರು, ಶನಿವಾರ (ಆಗಸ್ಟ್‌ 16) ಬೆಳಗಿನ ಜಾವ ವಯೋಸಹಜ ಕಾಯಿಲೆಯಿಂದ ನಿಧನರಾಗಿದ್ದಾರೆ. ಶಿರಸಿ ತಾಲೂಕಿನ ಸುಗಾವಿ ಗ್ರಾಮದ ಕಲ್ಗೊಂಡಿಕೊಪ್ಪದ ನಿವಾಸಿಯಾಗಿದ್ದ ಮೃತ ಶ್ರೀಕೃಷ್ಣ ರಾವ್ ಕಲ್ಗೊಂಡಿಕೊಪ್ಪ ಅವರು ಪತ್ನಿ, ನಾಲ್ವರು ಪುತ್ರರು, ಮೂವರು ಪುತ್ರಿಯರು … Continued

ಶಿರಸಿ | ಕೂಲಿ ಹಣ ಕೊಡಲಿಲ್ಲವೆಂದು ಸಲಾಕೆಯಿಂದ ಹೊಡೆದು ವ್ಯಕ್ತಿಯ ಕೊಲೆ

ಶಿರಸಿ : ಕೂಲಿ ಹಣ ನೀಡಿಲ್ಲ ಎಂದು ಸಲಾಕೆಯಿಂದ ಹೊಡೆದು ವ್ಯಕ್ತಿಯೊಬ್ಬನನ್ನು ಕೊಲೆ ಮಾಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಕಮಾಟಗೇರಿಯಲ್ಲಿ ನಡೆದಿದೆ ಎಂದು ವರದಿಯಾಗಿದೆ. ಕಮಾಟಗೇರಿಯ ರವೀಶ ಗಣಪತಿ ಚನ್ನಯ್ಯ (40) ಕೊಲೆಯಾದ ವ್ಯಕ್ತಿ ಎಂದು ಗುರುತಿಸಲಾಗಿದೆ. ಕಮಾಟಗೇರಿಯ ಮಂಜುನಾಥ ಬಸ್ಯಾ ಚನ್ನಯ್ಯ ಎಂಬಾತ ಕೊಲೆ ಮಾಡಿದ ಆರೋಪಿಯಾಗಿದ್ದು, ಪೊಲೀಸರು ಈತನನ್ನು … Continued

ಶಿರಸಿಯಲ್ಲಿ ಬೃಹತ್ ಸೈಬರ್ ವಂಚನೆ : ಮುಂಬೈ ಪೊಲೀಸರ ಸೋಗಿನಲ್ಲಿ ವ್ಯಕ್ತಿಯಿಂದ 89.90 ಲಕ್ಷ ರೂ. ಲಪಟಾಯಿಸಿದ ವಂಚಕರು…!

ಶಿರಸಿ: ಸೈಬರ್ ವಂಚಕರ ಜಾಲಕ್ಕೆ ಸಿಕ್ಕಿಹಾಕಿಕೊಂಡು ವ್ಯಕ್ತಿಯೊಬ್ಬರು ಬರೋಬ್ಬರಿ 89.90 ಲಕ್ಷ ರೂ. ಕಳೆದುಕೊಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ನಡೆದಿದೆ ಎಂದು ವರದಿಯಾಗಿದೆ. ಈ ಸಂಬಂಧ ಶಿರಸಿಯ ಹೊಸಮಾರುಕಟ್ಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಶಿರಸಿಯ ಪ್ರಗತಿ ನಗರದ ರವೀಂದ್ರ ಕೃಷ್ಣ ಹೆಗಡೆ ಎಂಬವರು ಈ ಸಂಬಂಧ ದೂರು ದಾಖಲಿಸಿದ್ದಾರೆ. ಅವರಿಗೆ ಅಪರಿಚಿತ … Continued

ವೀಡಿಯೊ..| ಶಿರಸಿ-ಕುಮಟಾ ಹೆದ್ದಾರಿಯ ದೇವಿಮನೆ ಘಟ್ಟದ ದೇವಸ್ಥಾನದ ಬಳಿ ಭೂ ಕುಸಿತ

ಶಿರಸಿ: ಉತ್ತರ ಕನ್ನಡ ಜಿಲ್ಲೆಯ ಶಿರಸಿ-ಕುಮಟಾ ಹೆದ್ದಾರಿಯ ದೇವಿಮನೆ ಘಟ್ಟದ ದೇವಸ್ಥಾನದ ಬಳಿ  ಭಾನುವಾರ ಭೂ ಕುಸಿತ ಉಂಟಾಗಿದೆ ಎಂದು ವರದಿಯಾಗಿದೆ. ನಿರಂತರವಾಗಿ ವಿಪರೀತ ಮಳೆ ಸುರಿಯುತ್ತಿರುವುದರಿಂದ ಭೂ ಕುಸಿತವಾಗಿದೆ. ದೇವಿ ಮನೆಯ ಕ್ಷೇತ್ರ ಪಾಲೇಶ್ವರ ದೇವಸ್ಥಾನಕ್ಕೆ ಇಳಿಯುವ ಮೆಟ್ಟಿಲುಗಳಿಗೆ ಸಮೀಪದಲ್ಲಿ ಭೂ ಕುಸಿತ ಉಂಟಾಗಿದೆ. ದೇವಸ್ಥಾನದ ಮೆಟ್ಟಿಲುಗಳಿಂದ ಸುಮಾರು 20-25 ಅಡಿಗಳಷ್ಟು ದೂರದಲ್ಲಿ ಭೂ … Continued

ಶಿರಸಿ | ಇಸ್ಪೀಟ್ ಜೂಜಾಟದ ಮೇಲೆ ದಾಳಿ : 19 ಮಂದಿ ಬಂಧನ ; ₹49.50 ಲಕ್ಷ ನಗದು ವಶಕ್ಕೆ

ಶಿರಸಿ: ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಭೈರುಂಬೆ ಗ್ರಾಮ ಪಂಚಾಯತ ವ್ಯಾಪ್ತಿಯ ಅಗಸಾಲ ಗ್ರಾಮದ ಸಮೀಪದ ಹೋಂ ಸ್ಟೇ ಬಳಿ ಅಕ್ರಮವಾಗಿ ನಡೆಯುತ್ತಿದ್ದ ಅಂದರ್‌-ಬಾಹರ್‌ ಇಸ್ಪೀಟ್ ಜೂಜಾಟದ ಅಡ್ಡೆ ಮೇಲೆ ಗ್ರಾಮೀಣ ಠಾಣೆಯ ಪೊಲೀಸರು ದಾಳಿ ನಡೆಸಿ 49 ಲಕ್ಷ ನಗದು, ನಾಲ್ಕು ಕಾರುಗಳನ್ನು ವಶಕ್ಕೆ ಪಡೆದುಕೊಂಡಿದ್ದು, ಪ್ರಕರಣ ದಾಖಲಿಸಿದ್ದಾರೆ. ಖಚಿತ ಮಾಹಿತಿ ಆಧರಿಸಿ … Continued

ಮಾಜಿ ಸಂಸದ ಅನಂತಕುಮಾರ ಹೆಗಡೆಗೆ ಜೀವ ಬೆದರಿಕೆ : ದೂರು ದಾಖಲು

ಶಿರಸಿ: ಉತ್ತರಕನ್ನಡದ ಮಾಜಿ ಸಂಸದ ಅನಂತಕುಮಾರ ಹೆಗಡೆಗೆ ಅಪರಿಚಿತ ವ್ಯಕ್ತಿಯೊಬ್ಬ ಇ-ಮೇಲ್ ಮೂಲಕ ಜೀವ ಬೆದರಿಕೆ ಹಾಕಿದ್ದು, ಈ ಸಂಬಂಧ ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ದೂರು ದಾಖಲಾಗಿದೆ. ಮಾಜಿ ಸಂಸದ ಅನಂತಕುಮಾರ ಹೆಗಡೆ ಅವರ ಆಪ್ತ ಕಾರ್ಯದರ್ಶಿ ಸುರೇಶ ಶೆಟ್ಟಿ ಅವರು ಬೆದರಿಕೆಯ ಇ ಮೇಲ್‌ ಬಂದಿದ್ದರ ಬಗ್ಗೆ ಶಿರಸಿ ಮಾರುಕಟ್ಟೆ ಪೊಲೀಸ್ ಠಾಣೆಯಲ್ಲಿ … Continued

ಶಿರಸಿ : ನಗರಸಭೆ ಸದಸ್ಯ, ಅಧಿಕಾರಿ ಲೋಕಾಯುಕ್ತ ಬಲೆಗೆ

ಶಿರಸಿ : ಜಾಗದ ವಿಷಯವೊಂದಕ್ಕೆ ಸಂಬಂಧಿಸಿದಂತೆ ₹3 ಲಕ್ಷ ಲಂಚ ಸ್ವೀಕರಿಸುತ್ತಿದ್ದಾಗ, ಶಿರಸಿ ನಗರಸಭೆಯ ಹಾಲಿ ಸದಸ್ಯ ಹಾಗೂ ಮಾಜಿ ಅಧ್ಯಕ್ಷ ಗಣಪತಿ ನಾಯ್ಕ ಮತ್ತು ನಗರಸಭೆಯ ಕಂದಾಯ ಅಧಿಕಾರಿ ಆರ್. ಎಂ. ವರ್ಣೇಕರ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ನಗರಸಭೆಯ ಕಂದಾಯ ಅಧಿಕಾರಿ ಆರ್ ಎಂ.ವೆರ್ಣೇಕರ ಹಾಗೂ ಸದಸ್ಯ ಗಣಪತಿ ನಾಯ್ಕ ದೂರುದಾರರಾದ ರಮೇಶ … Continued

ಕೃತಿಕಾರ ಕೃತಿಯ ಒಳಹೊಕ್ಕು ತಲ್ಲೀನವಾದರೆ ಅತ್ಯುತ್ತಮ ಕೃತಿಗಳು ಹೊರಬರಲು ಸಾಧ್ಯ ; ‘ಕರ್ಮಫಲ’ ಕಾದಂಬರಿ ಬಿಡುಗಡೆ ಕಾರ್ಯಕ್ರಮದಲ್ಲಿ ನಟ ಸುಚೇಂದ್ರಪ್ರಸಾದ

ಶಿರಸಿ : ಕೃತಿಯಲ್ಲಿ ಕೃತಿಕಾರ ತಲ್ಲೀನವಾದರೆ ಮಾತ್ರ ಅತ್ಯುತ್ತಮ, ಜೀವಂತಿಕೆ ಇರುವ ಕೃತಿಗಳು ಹೊರಬರಲು ಸಾಧ್ಯ. ಬರಹಗಾರನ ತಲ್ಲಣ, ತುಡಿತದ ಸಂವಹನದಿಂದ ಕೃತಿ ರಚನೆ ಸಾಧ್ಯವಾಗುತ್ತದೆ. ಆದರೆ ಅಂಥ ಕೃತಿಗಳು ಅಧ್ಯಯನಶೀಲವೂ ಆಗುವ ಅಗತ್ಯವಿದೆ ಎಂದು ವಾಗ್ಮಿ, ಖ್ಯಾತ ನಟ, ನಿರ್ದೇಶಕ ಸುಚೇಂದ್ರಪ್ರಸಾದ ತ್ರಿವೇದಿ ಹೇಳಿದರು. ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ರಂಗಧಾಮದಲ್ಲಿ ಭಾನುವಾರ ನಡೆದ … Continued