ರಾಮ ಮಂದಿರ ಕಾಣಿಕೆ ಕಳವು ಪ್ರಕರಣ: ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಗೆ ಆರ್‌ಎಸ್‌ಎಸ್ ಒತ್ತಾಯ, ಎಸ್‌ಐಟಿ ತನಿಖೆಗೆ ಬೆಂಬಲ

ಅಯೋಧ್ಯೆ: ಅಯೋಧ್ಯೆಯ ಶ್ರೀ ರಾಮಲಲ್ಲಾ ಮಂದಿರದ ಕಾಣಿಕೆ ಹುಂಡಿಗಳಿಂದ ಹಣ ಕಳವು ನಡೆದಿರುವ ಆರೋಪದ ಕುರಿತು ಸಮಗ್ರ ತನಿಖೆ ನಡೆಸಿ, ತಪ್ಪಿತಸ್ಥರು ಯಾರೆಂದು ತನಿಖೆಯಲ್ಲಿ ಸಾಬೀತಾದರೆ ಅವರಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಆಗ್ರಹಿಸಿದೆ. ಇದೇ ವೇಳೆ, ಈ ವಿವಾದವನ್ನು “ಹಿಂದೂ ವಿರೋಧಿ ಹಾಗೂ ರಾಷ್ಟ್ರವಿರೋಧಿ ಶಕ್ತಿಗಳು” ದುರುಪಯೋಗಪಡಿಸಿಕೊಳ್ಳಲು ಯತ್ನಿಸುತ್ತಿವೆ … Continued

ಧರ್ಮಸ್ಥಳ ಪ್ರಕರಣದ ತನಿಖಾ ತಂಡದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ

ಮಂಗಳೂರು : ಧರ್ಮಸ್ಥಳ ಗ್ರಾಮದ ವಿವಾದಿತ ಶವ ಹೂತಿಟ್ಟ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದ ಅಧಿಕಾರಿಗಳು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು ಚಾರ್ಮಾಡಿ ಘಾಟಿಯಲ್ಲಿ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಮಂಗಳವಾರ ನಡೆದಿದೆ ಎಂದು ವರದಿಯಾಗಿದೆ. ಈ ಘಟನೆಯಲ್ಲಿ ನಾಲ್ವರು ಪೊಲೀಸ್‌ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಧರ್ಮಸ್ಥಳದ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ … Continued

ಧರ್ಮಸ್ಥಳ ಪ್ರಕರಣ; ಎಸ್‌ಐಟಿ ತನಿಖೆಗೆ ನೀಡಿದ್ದ ಮಧ್ಯಂತರ ತಡೆಯಾಜ್ಞೆ ತೆರವು

ಬೆಂಗಳೂರು : ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿಡಲಾಗಿದೆ ಎನ್ನಲಾದ ಪ್ರಕರಣದ (Dharmasthala case) ಬಗ್ಗೆ ಎಸ್‌ಐಟಿ ತನಿಖೆಗೆ ನೀಡಿದ್ದ ಮಧ್ಯಂತರ ತಡೆಯಾಜ್ಞೆಯನ್ನು ಹೈಕೋರ್ಟ್ ತೆರವುಗೊಳಿಸಿದೆ. ಧರ್ಮಸ್ಥಳದಲ್ಲಿ ಅಸಹಜ ಸಾವುಗಳಿಗೆ ಸಂಬಂಧಿಸಿದ ಹಲವಾರು ಶವಗಳನ್ನು ಹೂಳಲಾಗಿದೆ ಎನ್ನಲಾದ ಪ್ರಕರಣ ಕುರಿತು ಧರ್ಮಸ್ಥಳ ಪೊಲೀಸ್‌ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್‌ಗೆ ಸಂಬಂಧಿಸಿದ ಮುಂದಿನ ಎಲ್ಲ ಪ್ರಕ್ರಿಯೆಗೆ ನೀಡಿದ್ದ ತಡೆಯಾಜ್ಞೆಯನ್ನು ಹೈಕೋರ್ಟ್‌ … Continued

ಆಳಂದ ಸೇರಿ ರಾಜ್ಯದ ಎಲ್ಲ ಮತಗಳ್ಳತನ ಪ್ರಕರಣಗಳ ತನಿಖೆಗೆ ಎಸ್‌ಐಟಿ ರಚಿಸಿದ ರಾಜ್ಯ ಸರ್ಕಾರ

ಬೆಂಗಳೂರು : ಕಲಬುರಗಿ ಜಿಲ್ಲೆಯ ಆಳಂದ‌ ವಿಧಾನಸಭಾ ಕ್ಷೇತ್ರ ಹಾಗೂ ಬೆಂಗಳೂರಿನ ಮಹದೇವಪುರ ಕ್ಷೇತ್ರ ಸೇರಿದಂತೆ ರಾಜ್ಯದ ಎಲ್ಲ ಆರೋಪಿತ ಮತಗಳ್ಳತನ ಪ್ರಕರಣಗಳನ್ನ ತನಿಖೆ ನಡೆಸಲು ರಾಜ್ಯ ಸರ್ಕಾರ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚನೆ ಮಾಡಿ ಆದೇಶ ಹೊರಡಿಸಿದೆ. ಸಿಐಡಿ ವಿಭಾಗದ ಹೆಚ್ಚುವರಿ ಪೊಲೀಸ್‌ ಮಹಾನಿರ್ದೇಶಕ ಬಿ.ಕೆ ಸಿಂಗ್‌ ನೇತೃತ್ವದಲ್ಲಿ ಸರ್ಕಾರ ಎಸ್‌ಐಟಿ ರಚನೆ … Continued

ಧರ್ಮಸ್ಥಳ ಪ್ರಕರಣ | ಮಾಸ್ಕ್‌ ಮ್ಯಾನ್‌ ಚಿನ್ನಯ್ಯ ವಿರುದ್ಧ ಹೊಸ ಸೆಕ್ಷನ್ ಹಾಕಿದ ಎಸ್‌ಐಟಿ

ಮಂಗಳೂರು : ಧರ್ಮಸ್ಥಳದಲ್ಲಿ ಶವಗಳ ಹೂತಿಟ್ಟ ಆರೋಪಿತ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (SIT) ತನ್ನ ತನಿಖೆಯನ್ನು ವಿಸ್ತರಿಸಿದ್ದು, ಮಾಸ್ಕ್ ಮ್ಯಾನ್ ಚಿನ್ನಯ್ಯನ (Chinnayya) ವಿರುದ್ಧ ಹೊಸ ಸೆಕ್ಷನ್‌ಗಳನ್ನು ಹಾಕಿದೆ. ಸುಳ್ಳು ಸಾಕ್ಷ್ಯಾಧಾರ, ನಕಲಿ ದಾಖಲೆ ಮತ್ತು ಸುಳ್ಳು ಸಾಕ್ಷ್ಯಾಧಾರಗಳ ಸೃಷ್ಟಿಗೆ ಸಂಬಂಧಿಸಿದಂತೆ ದೂರುದಾರನ ವಿರುದ್ಧ ಭಾರತೀಯ ನ್ಯಾಯ ಸಂಹಿತಾ (BNS) ಅಡಿಯಲ್ಲಿ … Continued

ಧರ್ಮಸ್ಥಳ ಪ್ರಕರಣ | ಮಹೇಶ ಶೆಟ್ಟಿ ತಿಮರೋಡಿ ನಿವಾಸದ ಮೇಲೆ ಎಸ್‌ಐಟಿ ದಾಳಿ : ಆರೋಪಿ ಚಿನ್ನಯ್ಯನ ಮೊಬೈಲ್‌ ಪತ್ತೆ…?

ಮಂಗಳೂರು : ಧರ್ಮಸ್ಥಳದಲ್ಲಿ ಹಲವಾರು ಶವಗಳನ್ನು ಹೂತು ಹಾಕಲಾಗಿದೆ ಎಂಬ ಆರೋಪಿತ ಪ್ರಕರಣಕ್ಕೆ ಸಂಬಂಧಿಸಿದಂತೆ, ದೂರುದಾರ ಚಿನ್ನಯ್ಯಗೆ ಆಶ್ರಯ ನೀಡಿದ ಆರೋಪದ ಮೇಲೆ ಉಜಿರೆಯಲ್ಲಿರುವ ಮಹೇಶ ಶೆಟ್ಟಿ ತಿಮರೋಡಿ ಅವರ ನಿವಾಸದ ಮೇಲೆ ವಿಶೇಷ ತನಿಖಾ ತಂಡ (ಎಸ್‌ಐಟಿ) ಮಂಗಳವಾರ (ಆಗಸ್ಟ್ 26) ದಾಳಿ ನಡೆಸಿದೆ ಎಸ್‌ಐಟಿಯಿಂದ ಬೆಳಿಗ್ಗೆ 9:20 ರ ಸುಮಾರಿಗೆ ದಾಳಿ ನಡೆದಿದ್ದು, … Continued

ವೀಡಿಯೊ…| ಧರ್ಮಸ್ಥಳ ಪ್ರಕರಣ | ತನಿಖೆ ಆರಂಭಿಕ ಹಂತದಲ್ಲೇ ಎಡವಿದೆ ; ತಮ್ಮದೇ ಸರ್ಕಾರ ಟೀಕಿಸಿದ ಕಾಂಗ್ರೆಸ್‌ ಶಾಸಕ

ಬೆಂಗಳೂರು: ಧರ್ಮಸ್ಥಳ ಪ್ರಕರಣ ಕುರಿತು ದೇಶಾದ್ಯಂತ ತೀವ್ರ ಚರ್ಚೆಯಾಗುತ್ತಿದ್ದು, ಕಾಂಗ್ರೆಸ್ ನಾಯಕ ಹಾಗೂ ಮಾಜಿ ಸಹಕಾರ ಸಚಿವ ಕೆ. ಎನ್. ರಾಜಣ್ಣ ಭಾನುವಾರ ತಮ್ಮದೇ ಕಾಂಗ್ರೆಸ್‌ ಸರ್ಕಾರದ ನಿರ್ಧಾರವನ್ನು ಟೀಕಿಸಿದ್ದಾರೆ… ಧರ್ಮಸ್ಥಳ ದೇವಸ್ಥಾನ ವ್ಯಾಪ್ತಿಯಲ್ಲಿ ಶವ ಹೂತಿರುವುದಾಗಿ ದೂರು ನೀಡಲು‌ ಬಂದ ವ್ಯಕ್ತಿಯು ತಂದಿದ್ದ ತಲೆ ಬುರುಡೆಯ ಪೂರ್ವಾಪರಗಳನ್ನು ವಿಚಾರಿಸದೆ ತನಿಖೆಗೆ ಆದೇಶಿಸಿದ್ದು ಸರಿಯಾದ ಕ್ರಮವಲ್ಲ … Continued

ಧರ್ಮಸ್ಥಳ ಪ್ರಕರಣ : ಸತತ 5 ಗಂಟೆ ಯೂ ಟ್ಯೂಬರ್‌ ಸಮೀರ್‌ ವಿಚಾರಣೆ

ಮಂಗಳೂರು : ಧರ್ಮಸ್ಥಳದ ವಿರುದ್ಧ ಅಪಪ್ರಚಾರ ಆರೋಪ ಪ್ರಕರಣಕ್ಕೆ (Dharmasthala case) ಸಂಬಂಧಿಸಿ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಠಾಣೆಗೆ ಹಾಜರಾಗಿದ್ದ ಯೂಟ್ಯೂಬರ್‌ ಎಂ.ಡಿ. ಸಮೀರ್ ಸತತ 5 ಗಂಟೆ ವಿಚಾರಣೆ ಎದುರಿಸಿದ್ದಾನೆ. ಸಮೀರ್ ವಾಯ್ಸ್ ಸ್ಯಾಂಪಲ್ ಪಡೆದಿರುವ ಪೊಲೀಸರು, ಸೋಮವಾರವೂ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದಾರೆ ಎಂದು ತಿಳಿದಿಬಂದಿದ್ದು, ಮೊಬೈಲ್ ಹಾಗೂ ಯೂಟ್ಯೂಬ್‌ಗೆ ವೀಡಿಯೊ ಅಪ್‌ಲೋಡ್ … Continued

ಧರ್ಮಸ್ಥಳ ಶವ ಹೂತ ಪ್ರಕರಣ : ದೂರುದಾರ(ಮಾಸ್ಕ್‌ಮ್ಯಾನ್‌)ನನ್ನು 10 ದಿನ ಎಸ್‌ಐಟಿ ಕಸ್ಟಡಿಗೆ ನೀಡಿದ ನ್ಯಾಯಾಲಯ

ಬೆಳ್ತಂಗಡಿ : ಧರ್ಮಸ್ಥಳ ಗ್ರಾಮದಲ್ಲಿ ನಡೆದಿದೆ ಎನ್ನಲಾದ ಅಪರಾಧ ಕೃತ್ಯಗಳಿಗೆ ಸಂಬಂಧಿಸಿದ ಮೃತದೇಹಗಳನ್ನು ಹೂಳಿರುವುದಾಗಿ ಹೇಳಿಕೆ ನೀಡಿದ್ದ ಹಾಗೂ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚನೆಗೆ ಕಾರಣನಾಗಿದ್ದ ಸಾಕ್ಷಿ ದೂರುದಾರನಾದ ಸಿ.ಎನ್‌. ಚಿನ್ನಯ್ಯನನ್ನು ಬೆಳ್ತಂಗಡಿ ನ್ಯಾಯಾಲಯವು 10 ದಿನ ವಿಶೇಷ ತನಿಖಾ ದಳ(ಎಸ್‌ಐಟಿ)ದ ವಶಕ್ಕೆ ನೀಡಿದೆ. ಧರ್ಮಸ್ಥಳದಲ್ಲಿ ಸ್ವಚ್ಛತಾ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದಾಗ ಅನೇಕ ಶವಗಳನ್ನು … Continued

ಧರ್ಮಸ್ಥಳದಲ್ಲಿ ಶವ ಹೂತ ಪ್ರಕರಣ : ಎಸ್‌ಐಟಿ ಅಧಿಕಾರಿಗಳಿಂದ ಮಾಸ್ಕ್ ಮ್ಯಾನ್ ಬಂಧನ

ಮಂಗಳೂರು: ಧರ್ಮಸ್ಥಳದಲ್ಲಿ ಶವಗಳ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣಕ್ಕೆ ಹೊಸ ತಿರುವು ಸಿಗುತ್ತಿದೆ. ಹಲವು ವರ್ಷಗಳ ಹಿಂದೆ ಅನೇಕ ಶವಗಳನ್ನು ಶವಗಳನ್ನು ತಾನು ಹೂತಿದ್ದೆ ಎಂದು ಪೊಲೀಸರ ಮುಂದೆ ಹೇಳಿಕೆ ನೀಡಿ ಎಸ್ ಐಟಿ ಅಧಿಕಾರಿಗಳ ಮುಂದೆ ಶೋಧಕಾರ್ಯಕ್ಕೆ ಹೋಗುತ್ತಿದ್ದ ಮುಖವಾಡ ತೊಟ್ಟ ಅನಾಮಿಕನನ್ನು ಶನಿವಾರ ಪೊಲೀಸರು ಬಂಧಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಸುಳ್ಳು ಮಾಹಿತಿ ನೀಡಿದ್ದ … Continued