ಅಶ್ಲೀಲ‌ ವೀಡಿಯೊ ಇಟ್ಟುಕೊಳ್ಳುವುದು ಅಪರಾಧ, ಡಿಲೀಟ್‌ ಮಾಡಿ : ಎಸ್‌ಐಟಿ ಮುಖ್ಯಸ್ಥರು

ಬೆಂಗಳೂರು: ಅಶ್ಲೀಲ ವೀಡಿಯೊಗಳನ್ನು ಜನರು ತಮ್ಮ ಬಳಿ ಇಟ್ಟುಕೊಳ್ಳುವುದು ಕೂಡ ಅಪರಾಧ ಎಂದು ಹಾಸನ ಪೆನ್‌ಡ್ರೈವ್‌ ಪ್ರಕರಣದ ಕುರಿತ ವಿಚಾರಣೆಗೆ ರಚನೆಯಾಗಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಮುಖ್ಯಸ್ಥರು ತಿಳಿಸಿದ್ದಾರೆ. ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, ” ಮಾಹಿತಿ ಮತ್ತು ತಂತ್ರಜ್ಞಾನ ಅಧಿನಿಯಮದಲ್ಲಿ ಯಾವುದೇ ವ್ಯಕ್ತಿ ಸಂದೇಶಗಳನ್ನು ರೂಪಿಸುವ, ಇಟ್ಟುಕೊಳ್ಳುವ, ಪ್ರಸಾರ ಮಾಡುವ … Continued

ಬಸವನಗುಡಿಯ ರೇವಣ್ಣ ನಿವಾಸದಲ್ಲಿ ಸ್ಥಳ ಮಹಜರು ನಡೆಸಿದ ಎಸ್‌ಐಟಿ

ಬೆಂಗಳೂರು: ಪ್ರಜ್ವಲ್‌ ರೇವಣ್ಣ ಅವರ ಆರೋಪಿತ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ಪೊಲೀಸರು ಬಸವನಗುಡಿಯಲ್ಲಿರುವ ಎಚ್.ಡಿ. ರೇವಣ್ಣ ನಿವಾಸಕ್ಕೆ ಲೈಂಗಿಕ ದೌರ್ಜನ್ಯ ಸಂತ್ರಸ್ತೆಯನ್ನು ಕರೆತಂದು ಸ್ಥಳ ಮಹಜರು ನಡೆಸಿದ್ದಾರೆ. ಸೋಮವಾರ ಬೆಳಿಗ್ಗೆ ರೇವಣ್ಣ ಅವರ ನಿವಾಸಕ್ಕೆ ನಾಲ್ವರು ಮಹಿಳಾ ಅಧಿಕಾರಿಗಳು ಸೇರಿದಂತೆ ೬ ಮಂದಿ ಅಧಿಕಾರಿಗಳು ಆಗಮಿಸಿ ಸಂತ್ರಸ್ತೆಯನ್ನು ಕರೆತಂದರು. ನಂತರ ಸಂತ್ರಸ್ತೆ ಹೇಳಿಕೆ … Continued

ಮೇ 7ರ ಚುನಾವಣೆ ಬಳಿಕ ಪ್ರಜ್ವಲ್ ರೇವಣ್ಣ ಭಾರತಕ್ಕೆ ?

ಬೆಂಗಳೂರು : ವಿದೇಶದಲ್ಲಿರುವ ಲೈಂಗಿಕ ದೌರ್ಜನ್ಯ ವೀಡಿಯೊದ ಪ್ರಕರಣ ಪ್ರಮುಖ ಆರೋಪಿ ಸಂಸದ ಪ್ರಜ್ವಲ್‌ ರೇವಣ್ಣ ಅವರು ಮೇ 7ರಂದು ರಾಜ್ಯದಲ್ಲಿ ಲೋಕಸಭೆ ಚುನಾವಣೆಯ ಎರಡನೇ ಹಂತದ ಮತದಾನ ಮುಗಿದ ನಂತರ ಭಾರತಕ್ಕೆ ವಾಪಸಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಕರ್ನಾಟಕದಲ್ಲಿ ಮೊದಲ ಹಂತದ ಚುನಾವಣೆ ಮುಗಿದ ದಿನವೇ, ಅಂದರೆ ಏಪ್ರಿಲ್ 26ರ ಮಧ್ಯರಾತ್ರಿಯೇ ಪ್ರಜ್ವಲ್‌ … Continued

ಲೈಂಗಿಕ ದೌರ್ಜನ್ಯ ಪ್ರಕರಣ: ಮಹಿಳೆ ಅಪಹರಣ ಪ್ರಕರಣದಲ್ಲಿ ಎಚ್.ಡಿ. ರೇವಣ್ಣ ಬಂಧನ

ಬೆಂಗಳೂರು : ಪ್ರಜ್ವಲ್ ರೇವಣ್ಣ ಮಹಿಳೆಯರ ಮೇಲೆ ನಡೆಸಿದ ಲೈಂಗಿಕ ದೌರ್ಜನ್ಯ ಆರೋಪಕ್ಕೆ ಹೊಂದಿಕೊಂಡ ಕ್ರಿಮಿನಲ್ ಪ್ರಕರಣದಲ್ಲಿ ಸಂತ್ರಸ್ತೆಯೊಬ್ಬರ ಅಪಹರಣದ ಪ್ರತ್ಯೇಕ ಎಫ್ಐಆರ್‌ಗೆ ಸಂಬಂಧಿಸಿದಂತೆ ಹೊಳೆನರಸೀಪುರ ಶಾಸಕ‌ ಎಚ್.ಡಿ. ರೇವಣ್ಣ ಅವರಿಗೆ ನ್ಯಾಯಾಲಯ ಮಧ್ಯಂತರ ನಿರೀಕ್ಷಣಾ ಜಾಮೀನು ನಿರಾಕರಿಸಿದ ಬೆನ್ನಲ್ಲೇ ಎಸ್‌ಐಟಿ ಅಧಿಕಾರಿಗಳು ಶನಿವಾರ ಸಂಜೆ ಅವರನ್ನು ವಶಕ್ಕೆ ಪಡೆದಿದ್ದಾರೆ. ಬೆಂಗಳೂರಿನ ಪದ್ಮನಾಭ ನಗರದಲ್ಲಿರುವ ಮಾಜಿ … Continued

ರೇವಣ್ಣ, ಪ್ರಜ್ವಲ್ ಎಸ್‌ಐಟಿ ವಿಚಾರಣೆಗೆ ಹಾಜರಾಗದಿದ್ದರೆ ಕಾನೂನು ಪ್ರಕಾರ ಬಂಧನ: ಗೃಹ ಸಚಿವ ಪರಮೇಶ್ವರ

ಕಲಬುರಗಿ: ಸಂಸದ ಪ್ರಜ್ವಲ್‌ ರೇವಣ್ಣ ವಿರುದ್ಧ ಎರಡನೇ ಪ್ರಕರಣ ದಾಖಲಾಗಿದ್ದು, ಈ ಪ್ರಕರಣಗಳಲ್ಲಿ ಯಾರನ್ನೂ ರಕ್ಷಿಸುವ ಮಾತೇ ಇಲ್ಲ. ನೋಟಿಸ್‌ಗೆ ಬೆಲೆ ನೀಡಿ ರೇವಣ್ಣ ಅವರು ತನಿಖೆಗೆ ಹಾಜರಾಗಬೇಕು. ಇಲ್ಲದಿದ್ದರೆ ಕಾನೂನಿನಂತೆ ಅವರನ್ನು ಬಂಧಿಸಲಾಗುತ್ತದೆ ಎಂದು ಗೃಹ ಸಚಿವ ಜಿ. ಪರಮೇಶ್ವರ ಹೇಳಿದ್ದಾರೆ. ಕಲಬುರಗಿ ನಗರ ಕಾಂಗ್ರೆಸ್‌ ಕಚೇರಿಯಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಗತ್ತೇ … Continued

ಎಸ್‌ಐಟಿ ನೋಟಿಸ್​: ವಿಚಾರಣೆಗೆ ಹಾಜರಾಗಲು ಸಮಯ ಕೇಳಿದ ಪ್ರಜ್ವಲ್‌ ; ಪತ್ರದಲ್ಲೇನಿದೆ..?

ಹಾಸನ : ಹಾಸನದ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಅವರ ವಿರುದ್ಧದ ಲೈಂಗಿಕ ದೌರ್ಜನ್ಯ ಪ್ರಕರಣದ ಕುರಿತಾದ ಎಸ್​ಐಟಿ ತನಿಖೆ ಚುರುಕುಗೊಂಡಿದ್ದು, ಪ್ರಜ್ವಲ್‌ ರೇವಣ್ಣ ಹಾಗೂ ಅವರ ತಂದೆ ಶಾಸಕ ಎಚ್‌.ಡಿ.ರೇವಣ್ಣ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಸ್‌ ಜಾರಿ ಮಾಡಿದೆ. ಇದರ ಬೆನ್ನಲ್ಲೇ ವಿಚಾರಣೆಗೆ ಹಾಜರಾಗಲು ಏಳು ದಿನ ಕಾಲಾವಕಾಶ ಬೇಕು ಎಂದು … Continued

ಪ್ರಜ್ವಲ್​ ರೇವಣ್ಣ ಪೆನ್​ಡ್ರೈವ್​ ಕೇಸ್: ಎಸ್ಐಟಿ ತಂಡಕ್ಕೆ 18 ಸಿಬ್ಬಂದಿ ನೇಮಕ

ಬೆಂಗಳೂರು: ರಾಜ್ಯದಲ್ಲಿ ತೀವ್ರ ಸಂಚಲನ ಮೂಡಿಸಿರುವ ಪ್ರಜ್ವಲ್​ ರೇವಣ್ಣ ಪೆನ್​ಡ್ರೈವ್ ವೀಡಿಯೊ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡಕ್ಕೆ(ಎಸ್ಐಟಿ) ಅಧಿಕಾರಿಗಳು ಹಾಗೂ ಸಿಬ್ಬಂದಿಯನ್ನ ಪೊಲೀಸ್ ಇಲಾಖೆ ನಿಯೋಜನೆ ಮಾಡಿ ಆದೇಶಿಸಿದೆ. ಪ್ರಕರಣದ ತನಿಖೆಗಾಗಿ ರಾಜ್ಯ ಸರ್ಕಾರವು ಎಸ್ಐಟಿ ಮುಖ್ಯಸ್ಥರನ್ನಾಗಿ ಬಿ.ಕೆ.ಸಿಂಗ್ ಅವರನ್ನು ನೇಮಿಸಿತ್ತು. ಹಾಗೂ ತಂಡಕ್ಕೆ ಮೈಸೂರು ಎಸ್ಪಿ ಸೀಮಾ ಲಾಟ್ಕರ್, ಹೆಚ್ಚುವರಿ ಎಸ್ಪಿ ಸುಮನ್ … Continued

ಪ್ರಜ್ವಲ್ ರೇವಣ್ಣ ವೀಡಿಯೊ ಪ್ರಕರಣ : ತನಿಖೆಗೆ ಎಡಿಜಿಪಿ ಬಿ.ಕೆ ಸಿಂಗ್ ನೇತೃತ್ವದಲ್ಲಿ ಎಸ್ಐಟಿ ರಚನೆ

ಬೆಂಗಳೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಕೇಳಿಬರುತ್ತಿರುವ ಲೈಂಗಿಕ ದೌರ್ಜನ್ಯದ ಪೆನ್ ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಭಾನುವಾರ ಎಡಿಜಿಪಿ ಬಿ.ಕೆ. ಸಿಂಗ್ ನೇತೃತ್ವದಲ್ಲಿ ವಿಶೇಷ ತನಿಖಾ ತಂಡವನ್ನು (SIT) ರಚಿಸಿದೆ. ಸರ್ಕಾರ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡು ಎಸ್ ಐಟಿ ತಂಡ ರಚಿಚಿಸಿದೆ. ತನಿಖೆಯಲ್ಲಿ ಹಸ್ತಕ್ಷೇಪ ಇಲ್ಲ ಎಂದು ಗೃಹ ಸಚಿವ ಡಾ … Continued

ಪ್ರಜ್ವಲ್ ರೇವಣ್ಣ ವೀಡಿಯೊ ಪ್ರಕರಣದ ತನಿಖೆಗೆ ಎಸ್​ಐಟಿ ರಚನೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಹಾಸನದ ಹಾಲಿ ಸಂಸದ ಪ್ರಜ್ವಲ್ ರೇವಣ್ಣ ಅವರಿಂದ ಮಹಿಳೆಯರಿಗೆ ಲೈಂಗಿಕ ದೌರ್ಜನ್ಯ ನಡೆದಿದೆ ಎಂಬ ಆರೋಪಿತ ಪ್ರಕರಣದ ತನಿಖೆಗೆ ಸರ್ಕಾರ ಎಸ್​ಐಟಿ (SIT) ರಚಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಕಟಿಸಿದ್ದಾರೆ. ಹೆಣ್ಣು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದೆ ಎಂದು ಹೇಳಲಾಗಿರುವ ಪೆನ್​ಡ್ರೈವ್ (Hassan pen drive cas) ಒಂದು ಬಹಿರಂಗಗೊಂಡಿದ್ದು, ಅದರ ಬಗ್ಗೆ … Continued

ತೆಲಂಗಾಣ ಶಾಸಕರ ಆಮಿಷ ಪ್ರಕರಣ: ಬಿಎಲ್‌ ಸಂತೋಷ ವಿಚಾರಣೆಗೆ ತೆಲಂಗಾಣ ಹೈಕೋರ್ಟ್‌ ತಡೆ

ಹೈದರಾಬಾದ್‌: ತೆಲಂಗಾಣದ ಟಿಆರ್‌ಎಸ್‌ನ ನಾಲ್ವರು ಶಾಸಕರನ್ನು ಖರೀದಿಸಲು ಸಂಚು ರೂಪಿಸಿದ ಆರೋಪದ ಪ್ರಕರಣದಲ್ಲಿ ಬಿಜೆಪಿಯ ಹಿರಿಯ ನಾಯಕ ಬಿ.ಎಲ್. ಸಂತೋಷ ಅವರನ್ನು ಸದ್ಯಕ್ಕೆ ಪ್ರಶ್ನಿಸಲಾಗುವುದಿಲ್ಲ ಎಂದು ತೆಲಂಗಾಣ ಹೈಕೋರ್ಟ್ ತಿಳಿಸಿದೆ. ಬಿ.ಎಲ್‌. ಸಂತೋಷ ಅವರಿಗೆ ನೀಡಲಾದ ಆರೋಪಗಳ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನೋಟಿಸ್‌ಗೆ ಡಿಸೆಂಬರ್ 5 ರವರೆಗೆ ತಡೆಯಾಜ್ಞೆ ನೀಡಿದೆ. ತೆಲಂಗಾಣ … Continued