ಪ್ರಜ್ವಲ್​ ರೇವಣ್ಣ ಪೆನ್​ಡ್ರೈವ್​ ಕೇಸ್: ಎಸ್ಐಟಿ ತಂಡಕ್ಕೆ 18 ಸಿಬ್ಬಂದಿ ನೇಮಕ

ಬೆಂಗಳೂರು: ರಾಜ್ಯದಲ್ಲಿ ತೀವ್ರ ಸಂಚಲನ ಮೂಡಿಸಿರುವ ಪ್ರಜ್ವಲ್​ ರೇವಣ್ಣ ಪೆನ್​ಡ್ರೈವ್ ವೀಡಿಯೊ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡಕ್ಕೆ(ಎಸ್ಐಟಿ) ಅಧಿಕಾರಿಗಳು ಹಾಗೂ ಸಿಬ್ಬಂದಿಯನ್ನ ಪೊಲೀಸ್ ಇಲಾಖೆ ನಿಯೋಜನೆ ಮಾಡಿ ಆದೇಶಿಸಿದೆ. ಪ್ರಕರಣದ ತನಿಖೆಗಾಗಿ ರಾಜ್ಯ ಸರ್ಕಾರವು ಎಸ್ಐಟಿ ಮುಖ್ಯಸ್ಥರನ್ನಾಗಿ ಬಿ.ಕೆ.ಸಿಂಗ್ ಅವರನ್ನು ನೇಮಿಸಿತ್ತು. ಹಾಗೂ ತಂಡಕ್ಕೆ ಮೈಸೂರು ಎಸ್ಪಿ ಸೀಮಾ ಲಾಟ್ಕರ್, ಹೆಚ್ಚುವರಿ ಎಸ್ಪಿ ಸುಮನ್ … Continued

ಪ್ರಜ್ವಲ್ ರೇವಣ್ಣ ವೀಡಿಯೊ ಪ್ರಕರಣ : ತನಿಖೆಗೆ ಎಡಿಜಿಪಿ ಬಿ.ಕೆ ಸಿಂಗ್ ನೇತೃತ್ವದಲ್ಲಿ ಎಸ್ಐಟಿ ರಚನೆ

ಬೆಂಗಳೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಕೇಳಿಬರುತ್ತಿರುವ ಲೈಂಗಿಕ ದೌರ್ಜನ್ಯದ ಪೆನ್ ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಭಾನುವಾರ ಎಡಿಜಿಪಿ ಬಿ.ಕೆ. ಸಿಂಗ್ ನೇತೃತ್ವದಲ್ಲಿ ವಿಶೇಷ ತನಿಖಾ ತಂಡವನ್ನು (SIT) ರಚಿಸಿದೆ. ಸರ್ಕಾರ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡು ಎಸ್ ಐಟಿ ತಂಡ ರಚಿಚಿಸಿದೆ. ತನಿಖೆಯಲ್ಲಿ ಹಸ್ತಕ್ಷೇಪ ಇಲ್ಲ ಎಂದು ಗೃಹ ಸಚಿವ ಡಾ … Continued

ಪ್ರಜ್ವಲ್ ರೇವಣ್ಣ ವೀಡಿಯೊ ಪ್ರಕರಣದ ತನಿಖೆಗೆ ಎಸ್​ಐಟಿ ರಚನೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಹಾಸನದ ಹಾಲಿ ಸಂಸದ ಪ್ರಜ್ವಲ್ ರೇವಣ್ಣ ಅವರಿಂದ ಮಹಿಳೆಯರಿಗೆ ಲೈಂಗಿಕ ದೌರ್ಜನ್ಯ ನಡೆದಿದೆ ಎಂಬ ಆರೋಪಿತ ಪ್ರಕರಣದ ತನಿಖೆಗೆ ಸರ್ಕಾರ ಎಸ್​ಐಟಿ (SIT) ರಚಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಕಟಿಸಿದ್ದಾರೆ. ಹೆಣ್ಣು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದೆ ಎಂದು ಹೇಳಲಾಗಿರುವ ಪೆನ್​ಡ್ರೈವ್ (Hassan pen drive cas) ಒಂದು ಬಹಿರಂಗಗೊಂಡಿದ್ದು, ಅದರ ಬಗ್ಗೆ … Continued

ತೆಲಂಗಾಣ ಶಾಸಕರ ಆಮಿಷ ಪ್ರಕರಣ: ಬಿಎಲ್‌ ಸಂತೋಷ ವಿಚಾರಣೆಗೆ ತೆಲಂಗಾಣ ಹೈಕೋರ್ಟ್‌ ತಡೆ

ಹೈದರಾಬಾದ್‌: ತೆಲಂಗಾಣದ ಟಿಆರ್‌ಎಸ್‌ನ ನಾಲ್ವರು ಶಾಸಕರನ್ನು ಖರೀದಿಸಲು ಸಂಚು ರೂಪಿಸಿದ ಆರೋಪದ ಪ್ರಕರಣದಲ್ಲಿ ಬಿಜೆಪಿಯ ಹಿರಿಯ ನಾಯಕ ಬಿ.ಎಲ್. ಸಂತೋಷ ಅವರನ್ನು ಸದ್ಯಕ್ಕೆ ಪ್ರಶ್ನಿಸಲಾಗುವುದಿಲ್ಲ ಎಂದು ತೆಲಂಗಾಣ ಹೈಕೋರ್ಟ್ ತಿಳಿಸಿದೆ. ಬಿ.ಎಲ್‌. ಸಂತೋಷ ಅವರಿಗೆ ನೀಡಲಾದ ಆರೋಪಗಳ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನೋಟಿಸ್‌ಗೆ ಡಿಸೆಂಬರ್ 5 ರವರೆಗೆ ತಡೆಯಾಜ್ಞೆ ನೀಡಿದೆ. ತೆಲಂಗಾಣ … Continued

ಶಾಸಕ ರಮೇಶ ಜಾರಕಿಹೊಳಿಗೆ ಎಸ್‌ಐಟಿ ನೊಟೀಸ್‌

ಬೆಳಗಾವಿ: ಶಾಸಕ ರಮೇಶ ಜಾರಕಿಹೊಳಿಗೆ ಸಂಬಂಧಿಸಿದ್ದೆನ್ನಲಾದ ಸಿಡಿ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದ (ಎಸ್ಐಟಿ) ಅಧಿಕಾರಿಗಳು ಎಪ್ರಿಲ್‌ ೨೦ರಂದು ಸಂಜೆ ೪:೦೦ ಗಂಟೆಗೆ ವಿಚಾರಣೆಗೆ ಹಾಜರಾಗುವಂತೆ ರಮೇಶ ಜಾರಕಿಹೊಳಿ ಅವರಿಗೆ ನೊಟೀಸ್‌ ನೀಡಿದ್ದಾರೆ. ಎಸ್‌ಐಟಿಯ ಇಬ್ಬರು ಅಧಿಕಾರಿಗಳು ಶುಕ್ರವಾರ ಬೆಳಗಾವಿಗೆ ಭೇಟಿ ನೀಡಿ ಖುದ್ದಾಗಿ ನೊಟೀಸ್‌ ನೀಡಲು ಬಂದಿದ್ದರು. ಆದರೆ ಅಧಿಕಾರಿಗಳಿಗೆ ಶಾಸಕರು … Continued

ಅನವಶ್ಯಕ ಹೇಳಿಕೆಯಿಂದ ತನಿಖೆಯ ಗಂಭೀರತೆ ಹಾಳು ಮಾಡಬೇಡಿ: ಬೊಮ್ಮಾಯಿ

ಬೆಂಗಳೂರು: ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದಲ್ಲಿ ತಮ್ಮ ಸರ್ಕಾರವನ್ನು ಟೀಕಿಸುತ್ತಿರುವ ಕಾಂಗ್ರೆಸ್ ಪಕ್ಷಕ್ಕೆ ಯಾವ ನೈತಿಕತೆ ಇದೆ ಎಂದು ಪ್ರಶ್ನಿಸಿರುವ ಗೃಹ,  ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಬಸವರಾಜ ಬೊಮ್ಮಾಯಿ, ಅನವಶ್ಯಕವಾಗಿ ಮಾತನಾಡಿ ಪ್ರಕರಣದ ತನಿಖೆಯ ಗಾಂಭೀರ್ಯತೆ ಹಾಳು ಮಾಡಬೇಡಿ ಎಂದು ಹೇಳಿದ್ದಾರೆ. ಬುಧವಾರ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,  ಎಸ್ಐಟಿ ತನಿಖೆ … Continued

ಪ್ರತಿಭಟನೆಗಳು ಎಸ್‌ಐಟಿ ತನಿಖೆ ಮೇಲೆ ಪ್ರಭಾವ ಬೀರಲ್ಲ: ಬೊಮ್ಮಾಯಿ

ಬೆಂಗಳೂರು: ರಮೇಶ ಜಾರಕಿಹೊಳಿ ಸಿಡಿ ವಿಚಾರಕ್ಕೆ ಸಂಬಂಧಿಸಿದಂತೆ ವಿವಿಧೆಡೆ ನಡೆಯುತ್ತಿರುವ ಪ್ರತಿಭಟನೆಗಳು ವಿಶೇಷ ತನಿಖಾ ದಳದ (ಎಸ್‌ಐಟಿ) ತನಿಖೆಯ ಮೇಲೆ ಯಾವುದೇ ರೀತಿಯ ಪ್ರಭಾವ ಬೀರುವುದಿಲ್ಲ ಎಂದು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು. ಭಾನುವಾರ ಬೆಂಗಳೂರಿನಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಪ್ರತಿಭಟನೆಗಳು ಅಲ್ಲಲ್ಲಿ‌ ನಡೆಯುತ್ತವೆ. ಅವುಗಳನ್ನು ಸ್ಥಳೀಯ … Continued

ಆರೋಪಿ ವಿಚಾರಣೆ ನಡೆಸದೆ ಸಂತ್ರಸ್ತೆ ಪೋಷಕರ ವಿಚಾರಣೆ ಎಷ್ಟು ಸರಿ: ವಕೀಲ ಜಗದೀಶ ಪ್ರಶ್ನೆ

ಬೆಂಗಳೂರು: ಅಶ್ಲೀಲ ಸಿಡಿ ಪ್ರಕರಣದಲ್ಲಿ ಆರೋಪಿಯನ್ನು ಈವರೆಗೂ ವಿಚಾರಣೆಗೆ ಒಳಪಡಿಸಿಲ್ಲ. ಆದರೆ ಸಂತ್ರಸ್ತೆಯ ಪೋಷಕರನ್ನು ವಿಚಾರಣೆ ನಡೆಸುತ್ತಿರುವುದು ಎಷ್ಟು ಸರಿಎಂದು ಯುವತಿ ಪರ ವಕೀಲ ಜಗದೀಶ್ ಪ್ರಶ್ನಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಸಚಿವ ರಮೇಶಜಾರಕಿಹೊಳಿ ಸಿಡಿ ಪ್ರಕರಣದ ಸಂಬಂಧ ಸಂತ್ರಸ್ತೆಯ ಪೋಷಕರು ಶನಿವಾರ ವಿಶೇಷ ತನಿಖಾ ತಂಡದ (ಎಸ್‌ಐಟಿ) ವಿಚಾರಣೆಗೆ ಹಾಜರಾಗಿದ್ದಾರೆ. ಹೀಗಾಗಿ … Continued

ಎಸ್‌ಐಟಿ ಮುಂದೆ ಸಿಡಿ ಯುವತಿ ತಂದೆ-ತಾಯಿ ಹಾಜರು

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರ ಸಿಡಿ ಪ್ರಕರಣ ಕ್ಷಣಕ್ಷಣಕ್ಕೂ ತಿರುವು ಪಡೆದುಲಕೊಳ್ಳುತ್ತಿದೆ. ಶನಿವಾರ ಬೆಳಿಗ್ಗೆ ಸಿಡಿಯಲ್ಲಿದ್ದ ಯುವತಿಯ ಹೇಳಿಕೆಯುಳ್ಳ ವಿಡಿಯೋ ಬಿಡಗಡೆಯಾಗಿ ಅದರಲ್ಲಿ ತಮ್ಮ ಕುಟುಂಬಕ್ಕೆ ರಕ್ಷಣೆ ಕೋರಿದ ಬೆನ್ನಲ್ಲೇ ಯುವತಿಯ ಪೋಷಕರು ವಿಶೇಷ ತನಿಖಾ ದಳದ ಮುಂದೆ ಶನಿವಾರ ಹಾಜರಾಗಿದ್ದು, ಪ್ರಕರಣ ಮತ್ತೊಂದು ಟ್ವಿಸ್ಟ್‌ ಪಡೆದಿದೆ. ಅಜ್ಞಾತ ಸ್ಥಳದಲ್ಲಿರುವ ಯುವತಿ ಶನಿವಾರ … Continued

ಯಾರೇ ದೂರು ಸಲ್ಲಿಸಿದರೂ ಎಸ್‌ಐಟಿಯಿಂದ ಪರಿಶೀಲನೆ

ಬೆಂಗಳೂರು; ಮಾಜಿ ಸಚಿವ ರಮೇಶ ಜಾರಕಿಹೊಳಿ‌ ಸಿಡಿ ಪ್ರಕರಣದ ಕುರಿತು ಯಾರೇ ದೂರು ಸಲ್ಲಿಸಿದರೂ ಅದನ್ನು ವಿಶೇಷ ತನಿಖಾ ದಳ (ಎಸ್‌ಐಟಿ) ಕಾನೂನಾತ್ಮಕವಾಗಿ ಪರಿಶೀಲನೆ ನಡೆಸಿ ಕ್ರಮ‌ಕೈಗೊಳ್ಳುತ್ತದೆ ಎಂದು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು. ಶುಕ್ರವಾರ ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಸಿಡಿಯಲ್ಲಿನ ಯುವತಿಯೇ ಆಗಲಿ, … Continued