ಸಿಡಿ ಹಗರಣ: ಈಗ ಮತ್ತೊಂದು ಸಿಡಿ ಬಿಡುಗಡೆ ಮಾಡಿದ ಯುವತಿ

ಬೆಂಗಳೂರು: ಮಾಜಿ ಸಚಿವ ರಮೇಶ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಡಿಯಲ್ಲಿರುವ ಯುವತಿಯದ್ದು ಎನ್ನಲಾದ ಮತ್ತೊಂದು ವಿಡಿಯೋ ಹೊರಗೆ ಬಂದಿದೆ. ನನ್ನ ತಂದೆ-ತಾಯಿ ಸ್ವ ಇಚ್ಛೆಯಿಂದ ಪೊಲೀಸ್ ದೂರು ನೀಡಿಲ್ಲ. ನಾನು ತಪ್ಪು ಮಾಡಿಲ್ಲ ಎಂದು ಅವರಿಗೆ ಗೊತ್ತಿದೆ. ಹಾಗಾಗಿ ಅವರು ಸ್ವಇಚ್ಛೆಯಿಂದ ದೂರು ನೀಡಲು ಸಾಧ್ಯವೇ ಇಲ್ಲ ಎಂದು ಅವಳಿ ಈ ವಿಡೊಯೋದಲ್ಲಿ ಹೇಳಿದ್ದಾಳೆ. … Continued

ಬೇರೆ ತನಿಖಾ ಸಂಸ್ಥೆಗೆ ಸಿಡಿ ಪ್ರಕರಣ ವಹಿಸುವುದಿಲ್ಲ: ಬೊಮ್ಮಾಯಿ

ಧಾರವಾಡ: ಸಿಡಿ ಪ್ರಕರಣದ ತನಿಖೆಯನ್ನು ವಿಶೇಷ ತನಿಖಾ ತಂಡ (ಎಸ್ ಐ ಟಿ) ಸಮರ್ಥವಾಗಿ  ನಡೆಸುತ್ತಿದೆ. ಹೀಗಾಗಿ  ಈ  ಪ್ರಕರಣದ ತನಿಖೆಯನ್ನು ಬೇರೆ ಸಂಸ್ಥೆ ಗೆ‌ ವಹಿಸುವುದಿಲ್ಲ ಎಂದು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವರಾದ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದರು. ಭಾನುವಾರ ಧಾರವಾಡದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು,  ಎಸ್ ಐ ಟಿ … Continued

ಸಿಡಿ ಪ್ರಕರಣ : ದೆಹಲಿಯಲ್ಲಿ ಎಸ್‍ಐಟಿ ಹುಡುಕಾಟ

ಬೆಂಗಳೂರು: ಸಿಡಿ ಪ್ರಕರಣದ ಕಿಂಗ್‍ಪಿನ್‍ಗಳು ಎನ್ನಲಾದ ಇಬ್ಬರು ವ್ಯಕ್ತಿಗಳು ಹಾಗೂ ಆ ಯುವತಿ ದೆಹಲಿಯಲ್ಲಿ ಇರಬಹುದೆಂಬ ಶಂಕೆ ಹಿನ್ನೆಲೆಯಲ್ಲಿ ಎಸ್‍ಐಟಿ ಪೊಲೀಸರು ದೆಹಲಿ ಹಾಗೂ ಸುತ್ತಮುತ್ತ ಶೋಧ ನಡೆಸುತ್ತಿದ್ದಾರೆ. ಕಿಂಗ್‍ಪಿನ್ ಎಂದು ಹೇಳಲಾದ ವ್ಯಕ್ತಿ ಬುಧವಾರ ವಿಡಿಯೋ ತುಣುಕು ಬಿಡುಗಡೆ ಮಾಡಿದ್ದಾರೆ. ಆ ವಿಡಿಯೋವನ್ನು ದೆಹಲಿಯಿಂದಲೇ ಅಪ್‍ಲೋಡ್ ಮಾಡಲಾಗಿದೆ ಎಂಬುದು ಎಸ್‍ಐಟಿ ಶಂಕೆ. ಈ ಹಿನ್ನೆಲೆಯಲ್ಲಿ … Continued

ಸಿಡಿ ಯುವತಿ ಮನೆಯಲ್ಲಿ ಸಿಕ್ಕ ಲಕ್ಷಾಂತರ ಹಣ ಎಲ್ಲಿಂದ ಬಂತು?: ಎಸ್‌ಐಟಿ ತನಿಖೆ

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಡಿ ಯುವತಿಯ ಆರ್‌.ಟಿ ನಗರ ನಿವಾಸದಲ್ಲಿ ಎಸ್‌ಐಟಿ ಅಧಿಕಾರಿಗಳು ಶೋಧ ನಡೆಸಿದ್ದು, ಈ ವೇಳೆ ಕೆಲವು ಮಹತ್ವದ ದಾಖಲೆಗಳು ಸಿಕ್ಕಿವೆ ಎನ್ನಲಾಗಿದೆ. ಯುವತಿಯ ಮನೆಯಲ್ಲಿ 23 ಲಕ್ಷ ರೂ. ನಗದು ಹಣ ಸಿಕ್ಕಿದೆ ಎನ್ನಲಾಗಿದ್ದು, ಕೆಲಸ ಕೊಡಿಸುವುದಾಗಿ ರಮೇಶ ಜಾರಕಿಹೊಳಿ ಮೋಸ ಮಾಡಿದ್ದಾರೆ … Continued

ಸಿಡಿ ಯುವತಿ ಮನೆ ಮೇಲೆ ಎಸ್ಐಟಿ ದಾಳಿ: 23 ಲಕ್ಷ ರೂ. ಪತ್ತೆ ?

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದ ಯುವತಿಯ ಆರ್​ಟಿ ನಗರದ ಮನೆ ಮೇಲೆ ಬುಧವಾರ ಎಸ್‌ಐಟಿ ತಂಡ ದಾಳಿ ಮಾಡಿ ರಾತ್ರಿ 10 ಗಂಟೆಯ ವರೆಗೂ ಮನೆ ಪರಿಶೀಲನೆ ನಡೆಸಿದೆ ಎಂದು ತಿಳಿದುಬಂದಿದೆ. ದಾಳಿ ವೇಳೆ ಯುವತಿ ಮನೆಯಲ್ಲಿ 23 ಲಕ್ಷ ರೂ. ಹಣ ಪತ್ತೆಯಾಗಿದ್ದು, ತನಿಖೆ ಕೈಗೊಳ್ಳಲಾಗಿದೆ ಎನ್ನಲಾಗಿದೆ. ಕಟ್ಟಡದ ಮಾಲೀಕರನ್ನು … Continued

ಸಿಡಿ ಪ್ರಕರಣ: ಎಸ್‌ಐಟಿಗೆ ಲಿಖಿತ ಹೇಳಿಕೆ ನೀಡಿದ ಕಲ್ಲಹಳ್ಳಿ

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ಸಂಬಂಧ ದೂರುದಾರ ದಿನೇಶ್ ಕಲ್ಲಹಳ್ಳಿ “ದೂರು ವೃತ್ತಾಂತ”ದ ಬಗ್ಗೆ ಎಸ್‌ಐಟಿಗೆ ಮೂರು ಪುಟಗಳ ಹೇಳಿಕೆ ನೀಡಿದ್ದಾರೆ. ಮಾ. 2ರಂದು ದಿನೇಶ್ ಕಲ್ಲಹಳ್ಳಿ ಜನ ಸಂಪನ್ಮೂಲ ಸಚಿವರಾಗಿದ್ದ ರಮೇಶ್ ಜಾರಕಿಹೊಳಿ ವಿರುದ್ಧ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ಅವರಿಗೆ ದೂರು ನೀಡಿದ್ದರು. ದೂರು ದಾಖಲು ಮೊದಲೇ ಅಶ್ಲೀಲ … Continued

ಸಿಡಿ ಪ್ರಕರಣ: ಎಸ್‌ಐಟಿಗೆ ದಾಖಲಿಸಿದ ಜಾರಕಿಹೊಳಿ ಹೇಳಿಕೆಯಲ್ಲಿ ಇರುವುದೇನು?

ಬೆಂಗಳೂರು: ಸಚಿವ ಸ್ಥಾನಕ್ಕೆ ಕಾರಣವಾದ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ರಮೇಶ್ ಜಾರಕಿಹೊಳಿ ಅವರಿಂದ ವಿಶೇಷ ತನಿಖಾ ತಂಡ ಹೇಳಿಕೆ ದಾಖಲಿಸಿಕೊಂಡಿದೆ. ಅವರು ನೀಡಿದ ನಾಲ್ಕು ಪುಟಗಳ ಹೇಳಿಕೆಯಲ್ಲಿ ರಮೇಶ್ ಜಾರಕಿಹೊಳಿ ಕೆಲವು ಸ್ಫೋಟಕ ಸಂಗತಿಗಳನ್ನು ಬಿಚ್ಚಿಟ್ಟಿದ್ದಾರೆ ಎಂದು ತಿಳುದಬಂದಿದೆ. ಸದಾಶಿವನಗರ ಪೊಲೀಸ್ ಠಾಣೆಗೆ ನೀಡಿದ ದೂರಿನಲ್ಲಿ ಉಲ್ಲೇಖಿಸಿದ್ದ ಅಂಶಗಳನ್ನೇ ಆಧಾರವಾಗಿಟ್ಟುಕೊಂಡು ಅವರು ತಮ್ಮ ಹೇಳಿಕೆ ದಾಖಲಿಸಿದ್ದು, … Continued

ರಮೇಶ ಜಾರಕಿಹೊಳಿ ಹೇಳಿಕೆ ದಾಖಲಿಸಿದ ಎಸ್‌ಐಟಿ

ಬೆಂಗಳೂರು: ಸೆಕ್ಸ್‌ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ತನಿಖೆಯನ್ನ ಆರಂಭಿಸಿದ್ದು, ಸೋಮವಾರ ರಾತ್ರಿ ಮಾಜಿ ಸಚಿವ ರಮೇಶ್‌ ಜಾರಕಿಹೊಳಿ ಹೇಳಿಕೆಯನ್ನು ವಿಶೇಷ ತನಿಖಾ ತಂಡವು ದಾಖಲಿಸಿಕೊಂಡಿದೆ. ರಮೇಶ್‌ ಜಾರಕಿಹೊಳಿ ಅವರ ಸುಮಾರು 4 ಪುಟಗಳ ಹೇಳಿಕೆಯನ್ನ ಎಸ್‌ಐಟಿ ದಾಖಲಿಸಿಕೊಂಡಿದೆ  ಎನ್ನಲಾಗಿದೆ. ಸಿಡಿ ಮಾಡಿದವರು ಎನ್ನುವವರಿಂದ ಹಣಕ್ಕಾಗಿ ಬೇಡಿಕೆ ಇಡಲಾಗಿತ್ತು ಎಂಬ ವಿಚಾರವೂ ಈ ಹೇಳಿಕೆಯಲ್ಲಿ ದಾಖಲಾಗಿದೆ … Continued

ಎಸ್‌ಐಟಿಗೆ ಸರ್ವ ಸ್ವಾತಂತ್ರ್ಯವನ್ನೂ ನೀಡಲಾಗಿದೆ: ಬೊಮ್ಮಾಯಿ

ಬೆಂಗಳೂರು : ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ರಚಿಸಲಾಗಿರುವ ವಿಶೇಷ ತನಿಖಾ ತಂಡಕ್ಕೆ (ಎಸ್‌ಐಟಿ) ಸರ್ವ ಸ್ವಾತಂತ್ರ್ಯವನ್ನೂ ನೀಡಲಾಗಿದೆ ಎಂದು ಗೃಹ ಹಾಗೂ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವರಾದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಬೆಂಗಳೂರಿನಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತನಿಖೆ ನಡೆಯುತ್ತರುವುದರಿಂದ ಈ ವಿಚಾರವಾಗಿ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಮೀಸಲಾತಿಗೆ … Continued