ಸೇನಾ ಹೆಲಿಕಾಪ್ಟರ್ ದುರಂತ : ಬದುಕುಳಿದ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ಗೆ ಬೆಂಗಳೂರಲ್ಲಿ ಚಿಕಿತ್ಸೆ
ಬೆಂಗಳೂರು: ತಮಿಳುನಾಡಿನ ಕುನೂರ್ನಲ್ಲಿ ಬುಧವಾರ ನಡೆದ ಸೇನಾ ಹೆಲಿಕಾಪ್ಟರ್ ದುರಂತದಲ್ಲಿ ಬದುಕುಳಿದ ಏಕಮಾತ್ರ ವ್ಯಕ್ತಿ ಭಾರತೀಯ ವಾಯುಪಡೆ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಅವರನ್ನು ಗುರುವಾರ ವಿಶೇಷ ಏರ್ ಅಂಬುಲೆನ್ಸ್ ಮೂಲಕ ಬೆಂಗಳೂರಿನ ಕಮಾಂಡೋ ಆಸ್ಪತ್ರೆಗೆ ತರಲಾಗಿದೆ. ತಮಿಳುನಾಡಿನ ವೆಲ್ಲಿಂಗ್ಟನ್ನಲ್ಲಿರುವ ಸೇನಾ ಆಸ್ಪತ್ರೆಯಿಂದ ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಬೆಂಗಳೂರಿಗೆ ಸ್ಥಳಾಂತರಿಸಲಾಗುತ್ತಿದೆ ಎಂದು ಅವರ ತಂದೆ ತಿಳಿಸಿದ್ದಾರೆ. … Continued