ಸ್ವರ್ಣವಲ್ಲೀ ಶ್ರೀಗಳ ಚಾತುರ್ಮಾಸ್ಯ ಜುಲೈ 3 ರಿಂದ ಆರಂಭ

ಶಿರಸಿ: ಸೋಂದಾ ಸ್ವರ್ಣವಲ್ಲೀ ಮಠಾಧೀಶರಾದ ಶ್ರೀ ಗಂಗಾಧರೇಂದ್ರ ಸರಸ್ವತೀ‌ ಸ್ವಾಮಿಗಳ 33ನೇ ಚಾತುರ್ಮಾಸ್ಯ ವ್ರತಾಚರಣೆ ಜುಲೈ 3 ರಿಂದ ಸೆಪ್ಟೆಂಬರ್ 29ರ ವರೆಗೆ ನಡೆಯಲಿದೆ. ಶಿರಸಿ ನಗರದ ಯೋಗ ಮಂದಿರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಮಠದ ಆಡಳಿತ ಮಂಡಳಿ ಅಧ್ಯಕ್ಷ ವಿ.ಎನ್.ಹೆಗಡೆ ಬೊಮ್ಮನಳ್ಳಿ ತಿಳಿಸಿದ್ದಾರೆ. ಈ ಸಲ ಶ್ರಾವಣ‌ ಮಾಸ ಅಧಿಕ ಬಂದಿದ್ದರಿಂದ ಒಟ್ಟು … Continued

ಚಾತುರ್ಮಾಸದಲ್ಲಿ ಶಿಷ್ಯರಿಗೆ ಹಸಿರು ಪ್ರೀತಿ ಬಿತ್ತುತ್ತಿರುವ ಸ್ವರ್ಣವಲ್ಲೀ ಸ್ವಾಮೀಜಿ : ಶಿಷ್ಯರಿಗೆ ವೃಕ್ಷ ಮಂತ್ರಾಕ್ಷತೆ, ಈವರೆಗೆ 75 ಸಹಸ್ರಕ್ಕೂ ಅಧಿಕ ಸಸಿಗಳ ವಿತರಣೆ

ಶಿರಸಿ: ಬೇಡ್ತಿ ಅಘನಾಶಿನಿ ಕೊಳ್ಳ ಸಂರಕ್ಷಣೆಗೆ ಕಂಕಣ ಕಟ್ಟಿಕೊಂಡ ಪರಿಸರ ಪ್ರಿಯ ಸ್ವಾಮೀಜಿ ಎಂದೇ ಹೆಸರಾದ ಉತ್ತರ ಕನ್ನಡ ಜಿಲ್ಲೆ ಶಿರಸಿ ತಾಲೂಕಿನ ಸೋಂದಾ‌ ಸ್ವರ್ಣವಲ್ಲೀ‌ ಮಠಾಧೀಶರು‌ ಶಿಷ್ಯರಲ್ಲಿ ಪರಿಸರ ಜಾಗೃತಿ ಕಾರ್ಯ ಮಾಡುತ್ತಿದ್ದಾರೆ. ವನಸ್ಪತಿ ಗಿಡಗಳ‌ ಮಹತ್ವ, ಅವುಗಳ ಸಂರಕ್ಷಣೆಗೆ ಶಿಷ್ಯರು ಹಾಗೂ ಮಠದ ಭಕ್ತರಲ್ಲಿ ಮುತವರ್ಜಿ ವಹಿಸಲು ಸೂಚಿಸುತ್ತಿದ್ದಾರೆ. ಪವಿತ್ರ ಚಾತುರ್ಮಾಸ್ಯದ ಅವಧಿಯಲ್ಲಿ … Continued

ಶಿರಸಿ: ಸೋಂದಾ ಸ್ವರ್ಣವಲ್ಲೀ ಶ್ರೀಗಳಿಂದ 32ನೇ ಚಾತುರ್ಮಾಸ್ಯ ವ್ರತ ಸಂಕಲ್ಪ

ಶಿರಸಿ: ಹಸಿರು ಸ್ವಾಮೀಜಿ‌ ಎಂದೇ ಪ್ರಸಿದ್ಧರಾದ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಸೋಂದಾ ಸ್ವರ್ಣವಲ್ಲೀ ಮಠಾಧೀಶ ಶ್ರೀಗಂಗಾಧರೇಂದ್ರ‌ ಸರಸ್ವತೀ ಮಹಾಸ್ವಾಮಿಗಳು ಆಷಾಢ ಪೂರ್ಣಿಮೆ ಬುಧವಾರ (ಜುಲೈ 13) ಸ್ವರ್ಣವಲ್ಲಿಯಲ್ಲಿ 32ನೇ ಚಾತುರ್ಮಾಸ್ಯ ವ್ರತವನ್ನು ಸಂಕಲ್ಪಗೈದರು. ಶ್ರೀಮಠದಲ್ಲಿ ವಿರಾಜಮಾನವಾದ ಶ್ರೀ ವೇದವ್ಯಾಸರ ಅಧಿಷ್ಠಾನಕ್ಕೆ ಶ್ರೀಗಳವರು ಮಹಾಪೂಜೆ ನೆರವೇರಿಸಿದರು. ವ್ಯಾಸಪೂಜೆ ನೆರವೇರಿಸಿ ಚಾತುರ್ಮಾಸ್ಯ ವ್ರತ ಸಂಕಲ್ಪಿಸಿ ಶ್ರೀದೇವರ … Continued

ಏಪ್ರಿಲ್‌ 15ರಂದು ಸ್ವರ್ಣವಲ್ಲೀ ಮಠದ ರಾಜಗೋಪುರ ಸಮರ್ಪಣೆ

ಶಿರಸಿ: ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನ ಇನ್ನೊಂದು ದಾಖಲೆ ಕಾರ್ಯಕ್ಕೆ‌ ಸಾಕ್ಷಿಯಾಗಲಿದೆ. ವಿವಿಧ ಧಾರ್ಮಿಕ ಕಾರ್ಯಕ್ರಮಗಳ‌ ಮೂಲಕ ಬಹು‌ ನಿರೀಕ್ಷಿತ ಗೋಪುರದ ಸಮರ್ಪಣೆ ಕಾರ್ಯಕ್ರಮ ಏಪ್ರಿಲ್‌ 15ರಂದು ನಡೆಯಲಿದೆ. ಸ್ವರ್ಣವಲ್ಲೀ ಮಠಾಧೀಶರಾದ ಶ್ರೀ ಗಂಗಾಧರೇಂದ್ರ ಸರಸ್ವತೀ ಮಹಾಸ್ವಾಮಿಗಳವರ ಸಂಕಲ್ಪದಂತೆ ದ್ರಾವಿಡ ಶೈಲಿಯಲ್ಲಿ ಉತ್ತರ ದಿಕ್ಕಿನ ಏಳು ಅಂತಸ್ತಿನ ರಾಜಗೋಪುರ, ಮಹಾದ್ವಾರ … Continued