ನೇಪಾಳ ಪ್ರವಾಹ ದುರಂತ: ಕರ್ನಾಟಕದ 8 ಮಂದಿ ಸೇರಿ ದಕ್ಷಿಣ ಭಾರತದ 168 ಜನರು ನಾಪತ್ತೆ

ನವದೆಹಲಿ: ಕೈಲಾಸ ಮಾನಸರೋವರ ಯಾತ್ರೆ ಸೇರಿದಂತೆ ವಿವಿಧ ಕಾರಣಕ್ಕೆ ನೇಪಾಳಕ್ಕೆ ತೆರಳಿದ್ದ ದಕ್ಷಿಣ ಭಾರತದ ಸುಮಾರು 168ಕ್ಕೂ ಹೆಚ್ಚು ಯಾತ್ರಿಕರು ಹಾಗೂ ಪ್ರವಾಸಿಗರು ಹಿಮ-ಬಂಡೆಗಳ ಕುಸಿತದಿಂದ ಉಂಟಾದ ಹಠಾತ್‌ ಭೀಕರ ಪ್ರವಾಹದ ಬಳಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಕೆಲವರು ಸಿಲುಕಿಕೊಂಡಿದ್ದು, ಕೆಲವರು ನಾಪತ್ತೆಯಾಗಿದ್ದಾರೆ ಹಾಗೂ ಇನ್ನೂ ಹಲವರ ಬಗ್ಗೆ ಮಾಹಿತಿ ಸಂಗ್ರಹಿಸುವ ಕಾರ್ಯ ಮುಂದುವರಿದಿದೆ. ನೇಪಾಳದ ರಸುವಾ … Continued

ಹವಾಮಾನ ಇಲಾಖೆಯಿಂದ ಸಿಹಿ ಸುದ್ದಿ; ಕರ್ನಾಟಕ ಸೇರಿ ದಕ್ಷಿಣ ಭಾರತದಲ್ಲಿ ಭಾರಿ ಮಳೆ ಸಾಧ್ಯತೆ !

ನವದೆಹಲಿ: ದೇಶದ ನೈಋತ್ಯ ಮುಂಗಾರು ಆಗಸ್ಟ್ ಮೊದಲಾರ್ಧದಲ್ಲಿ ಮತ್ತಷ್ಟು ಬಲಗೊಳ್ಳುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ತಿಳಿಸಿದೆ. ಕಳೆದ ಕೆಲವು ವಾರಗಳಿಂದ ದೇಶದ ಹಲವು ಭಾಗಗಳಲ್ಲಿ ಮಳೆ ಕೊರತೆ ಕಂಡುಬಂದಿದ್ದರೂ, ಮುಂಗಾರು ಮತ್ತೆ ಚುರುಕುಗೊಂಡಿರುವುದರಿಂದ ಪರಿಸ್ಥಿತಿ ವೇಗವಾಗಿ ಸುಧಾರಿಸುತ್ತಿದೆ. ಇದರ ಪರಿಣಾಮವಾಗಿ ದಕ್ಷಿಣ ಭಾರತ ಸೇರಿದಂತೆ ದೇಶದ ಬಹುತೇಕ ಭಾಗಗಳಲ್ಲಿ ಮುಂದಿನ ದಿನಗಳಲ್ಲಿ … Continued

ಸೆನ್ಯಾರ್’ ನಂತರ ದಕ್ಷಿಣ ಭಾರತಕ್ಕೆ ಈಗ ಮತ್ತೊಂದು ಚಂಡಮಾರುತದ ಭೀತಿ….

ನವದೆಹಲಿ : ಚಂಡಮಾರುತ ‘ಸೆನ್ಯಾರ್’ ದುರ್ಬಲಗೊಳ್ಳುತ್ತಿದ್ದರೂ, ಬಂಗಾಳಕೊಲ್ಲಿಯಲ್ಲಿ ಹೊಸ ಚಂಡಮಾರುತವೊಂದು ಸೃಷ್ಟಿಯಾಗುತ್ತಿದ್ದು, ತಮಿಳುನಾಡು ಮತ್ತು ಆಂಧ್ರಪ್ರದೇಶದ ಕರಾವಳಿ ಜಿಲ್ಲೆಗಳಿಗೆ ಎಚ್ಚರಿಕೆಯಿಂದಿರಲು ಭಾರತೀಯ ಹವಾಮಾನ ಇಲಾಖೆ (IMD) ಸೂಚನೆ ನೀಡಿದೆ. ಗುರುವಾರ ಬಿಡುಗಡೆ ಮಾಡಿದ ತನ್ನ ಬುಲೆಟಿನ್‌ನಲ್ಲಿ, ಹವಾಮಾನ ಇಲಾಖೆಯು ನೈಋತ್ಯ ಬಂಗಾಳಕೊಲ್ಲಿ ಮತ್ತು ಶ್ರೀಲಂಕಾ ಕರಾವಳಿಯನ್ನು ಆವರಿಸಿದ್ದ ವಾಯುಭಾರ ಕುಸಿತವು ತೀವ್ರ ವಾಯುಭಾರ ಕುಸಿತವಾಗಿ ಮಾರ್ಪಟ್ಟಿದೆ … Continued

ಲೋಕಸಭೆ ಚುನಾವಣೆ 2024: ದಕ್ಷಿಣ ಭಾರತದಲ್ಲಿ ಬಿಜೆಪಿಗೆ ಬಂಪರ್‌ ಸೀಟುಗಳು ? ಎಕ್ಸಿಟ್ ಪೋಲ್ ಗಳು ಹೇಳಿದ್ದೇನು..?

 ನವದೆಹಲಿ: ಲೋಕಸಭೆ ಚುನಾವಣೆ 2024ರ ಏಳನೇ ಮತ್ತು ಕೊನೆಯ ಹಂತವು ಶನಿವಾರ ಮುಕ್ತಾಯವಾದ ಮತಗಟ್ಟೆ ನಿರ್ಗಮನ ಸಮೀಕ್ಷೆ (Exit Poll 2024)ಗಳು ಹೊರಬಂದಿವೆ. ಇದು ಜೂನ್ 4 ರಂದು ಅಧಿಕೃತ ಎಣಿಕೆಯ ನಂತರ ಏನಾಗಲಿದೆ ಎಂಬುದರ ಕುರಿತು ನಮಗೆ ಕಲ್ಪನೆಯನ್ನು ನೀಡುತ್ತದೆ. ಎಲ್ಲ ಎಕ್ಸಿಟ್ ಪೋಲ್‌ಗಳು ಭಾರತೀಯ ಜನತಾ ಪಕ್ಷ (ಬಿಜೆಪಿ) ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ … Continued

ಕರ್ನಾಟಕದ ಈ ಪ್ರದೇಶಗಳೂ ಸೇರಿ ದಕ್ಷಿಣ ಭಾರತದಲ್ಲಿ ಭಾರೀ ಮಳೆ ಮುನ್ಸೂಚನೆ

ನವದೆಹಲಿ: ಭಾರತೀಯ ಹವಾಮಾನ ಇಲಾಖೆ (IMD) ಉತ್ತರ ಭಾರತಕ್ಕೆ ಉಷ್ಣ ಅಲೆಯ ಎಚ್ಚರಿಕೆ ನೀಡಿದ್ದು, ವಿಶೇಷವಾಗಿ ದೆಹಲಿ, ರಾಜಸ್ಥಾನ, ಪಂಜಾಬ್ ಮತ್ತು ಹರಿಯಾಣದ ಮೇಲೆ ಪರಿಣಾಮ ಬೀರುವ ನಿರೀಕ್ಷೆಯಿದೆ ಎಂದು ಗುರುವಾರ ಹೇಳಿದೆ. ಇದಕ್ಕೆ ವ್ಯತಿರಿಕ್ತವಾಗಿ, ದಕ್ಷಿಣ ಭಾರತದಲ್ಲಿ ಮೇ 22 ರವರೆಗೆ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿದೆ. ದಕ್ಷಿಣ ಭಾರತದಲ್ಲಿ ಮುಂದಿನ ಏಳು ದಿನಗಳ … Continued

ಸಿಹಿ ಸುದ್ದಿ ನೀಡಿದ ಹವಾಮಾನ ಇಲಾಖೆ : ನೈಋತ್ಯ ಮಾನ್ಸೂನ್ ಮುಂಚಿತವಾಗಿ ಆಗಮನ ; ಮುಂಗಾರು ಪೂರ್ವ ಮಳೆಯೂ ಜೋರು…!

ನವದೆಹಲಿ : ನೈಋತ್ಯ ಮಾನ್ಸೂನ್‌ ಮೇ 19ರೊಳಗೆ ಅಂದರೆ ಸಾಮಾನ್ಯವಾಗಿ ಆಗಮಿಸುವುದಕ್ಕಿಂತ ಮೂರು ದಿನ ಮುಂಚಿತವಾಗಿ ದಕ್ಷಿಣ ಅಂಡಮಾನ್ ಸಮುದ್ರ, ಬಂಗಾಳ ಕೊಲ್ಲಿಯ ಕೆಲವು ಭಾಗಗಳು ಮತ್ತು ನಿಕೋಬಾರ್ ದ್ವೀಪಗಳನ್ನು ಪ್ರವೇಶಿಸುವ ನಿರೀಕ್ಷೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಹೇಳಿದೆ. ನೈಋತ್ಯ ಮಾನ್ಸೂನ್‌ ಸಾಮಾನ್ಯವಾಗಿ ಮೇ 22 ರಂದು ಅಂಡಮಾನ್‌ ಮತ್ತು ನಿಕೋಬಾರ್‌ ದ್ವೀಪಕ್ಕೆ … Continued

ಜನಾಂಗೀಯ ಕಾಮೆಂಟ್‌ ವಿವಾದದ ಬೆನ್ನಲ್ಲೇ ಇಂಡಿಯನ್‌ ಓವರ್‌ಸೀಸ್‌ ಕಾಂಗ್ರೆಸ್‌ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ಸ್ಯಾಮ್‌ ಪಿತ್ರೋಡಾ

ನವದೆಹಲಿ : ಲೋಕಸಭೆ ಚುನಾವಣೆ ವೇಳೆ ತಮ್ಮ ಹೇಳಿಕೆ ಭಾರೀ ವಿವಾದ ಸೃಷ್ಟಿಸಿದ ಬೆನ್ನಲ್ಲೇ ಕಾಂಗ್ರೆಸ್ಸಿನ ಸಾಗರೋತ್ತರ ಘಟಕದ ಮುಖ್ಯಸ್ಥ ಸ್ಯಾಮ್ ಪಿತ್ರೋಡಾ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ. ಕಾಂಗ್ರೆಸ್‌ ಪಕ್ಷದ ಸಂವಹನ ಉಸ್ತುವಾರಿ ಜೈರಾಮ ರಮೇಶ ಅವರು ಈ ಬಗ್ಗೆ ಸೋಶಿಯಲ್‌ ಮೀಡಿಯಾ ಎಕ್ಸ್‌ನಲ್ಲಿ ಮಾಹಿತಿ ನೀಡಿದ್ದಾರೆ. ” ಸ್ಯಾಮ್ ಪಿತ್ರೋಡಾ … Continued

ವೀಡಿಯೊ..| ದಕ್ಷಿಣ ಭಾರತದವರು ಆಫ್ರಿಕನ್ನರಂತೆ, ಪೂರ್ವ ಭಾರತದವರು ಚೀನಿಗಳಂತೆ ಕಾಣ್ತಾರೆ….: ಭಾರೀ ವಿವಾದ ಸೃಷ್ಟಿಸಿದ ಪಿತ್ರೋಡಾ ಹೇಳಿಕೆ ; ಕಾಂಗ್ರೆಸ್ಸಿಗೆ ಮುಜುಗರ

ನವದೆಹಲಿ : ಸಾಗರೋತ್ತರ ಕಾಂಗ್ರೆಸ್​ ಅಧ್ಯಕ್ಷ ಸ್ಯಾಮ್ ಪಿತ್ರೋಡಾ(Sam Pitroda) ಮತ್ತೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ‘‘ಪೂರ್ವ ಭಾರತದವರು, ಚೀನೀಯರಂತೆಯೂ ದಕ್ಷಿಣ ಭಾರತದವರು ಆಫ್ರಿಕನ್ನರಂತೆಯೂ ಹಾಗೂ ಪಶ್ಚಿಮ ಭಾರತದವರು ಅರಬ್ಬರಂತೆಯೂ ಕಾಣುತ್ತಾರೆ’’ ಎಂದು ಆಂಗ್ಲ ಪತ್ರಿಕೆ ದಿ ಸ್ಟೇಟ್ಸ್‌ಮನ್‌ಗೆ ನೀಡಿದ ಸಂದರ್ಶನದಲ್ಲಿ ಸ್ಯಾಮ್ ಪಿತ್ರೋಡಾ ಹೇಳಿರುವುದು ಈಗ ಲೋಕಸಭಾ ಚುನಾವಣೆ ಮಧ್ಯೆ ಭಾರೀ ವಿವಾದ ಸೃಷ್ಟಿಸಿದೆ. … Continued

ಕರ್ನಾಟಕವೂ ಸೇರಿದಂತೆ ಕೆಲವು ರಾಜ್ಯಗಳಿಗೆ 2 ದಿನ ಬಿಸಿ ಗಾಳಿ, ಕೆಲವು ಕಡೆ “ತೀವ್ರ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ನವದೆಹಲಿ: ಪೂರ್ವ ಭಾರತ ಮತ್ತು ದಕ್ಷಿಣ ಭಾರತದ ಕೆಲವು ಭಾಗಗಳಲ್ಲಿ ಇನ್ನೆರಡು ದಿನಗಳಲ್ಲಿ ಬಿಸಿಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಇದೇ ವೇಳೆ ಭಾರತದ ಈಶಾನ್ಯ ಪ್ರದೇಶದಲ್ಲಿ ಏಪ್ರಿಲ್ 9 ರವರೆಗೆ ತೀವ್ರ ಮಳೆ ಮತ್ತು ಗುಡುಗು ಸಹಿತ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಹೇಳಿದೆ. ಒಡಿಶಾ, ಪಶ್ಚಿಮ ಬಂಗಾಳ, … Continued