ವಿಡಿಯೋ | ಶ್ರೀನಗರ ಗಾಲ್ಫ್ ಮೈದಾನಕ್ಕೆ ನುಗ್ಗಿ ಬಾವುಟ ಹೊತ್ತೊಯ್ದ ಕರಡಿಗಳು…!

ಶ್ರೀನಗರ : ಗಾಲ್ಫ್ ಮೈದಾನ ಪ್ರವೇಶಿಸಿದ ಎರಡು ದೈತ್ಯ ಕರಡಿಗಳು, ಕ್ರೀಡಾಂಗಣವನ್ನೇ ತಮ್ಮ ಆಟದ ಮೈದಾನವನ್ನಾಗಿ ಮಾಡಿಕೊಂಡ ವಿಚಿತ್ರ ಹಾಗೂ ತಮಾಷೆಯ ಘಟನೆಯೊಂದು ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದಿದೆ. ಶ್ರೀನಗರದ ವಿಶ್ವಪ್ರಸಿದ್ಧ ರಾಯಲ್ ಸ್ಪ್ರಿಂಗ್ಸ್ ಗಾಲ್ಫ್ ಕೋರ್ಸ್ (RSGC) ನಲ್ಲಿ ಗಾಲ್ಫ್ ಆಟಗಾರರು ಆಟದಲ್ಲಿ ಮಗ್ನರಾಗಿದ್ದಾಗ, ಅನಿರೀಕ್ಷಿತವಾಗಿ ಎರಡು ಕರಡಿಗಳು ಗಾಲ್ಫ್‌ ಮೈದಾನದೊಳಗೆ ಪ್ರವೇಶಿಸಿವೆ. ಅಲ್ಲಿ … Continued

ಶ್ರೀನಗರ ವಿಮಾನ ನಿಲ್ದಾಣದಲ್ಲಿ ಸ್ಯಾಟಲೈಟ್ ಸಾಧನ ಹೊಂದಿದ್ದ ಅಮೆರಿಕ ಪ್ರಜೆ ವಶಕ್ಕೆ

ನವದೆಹಲಿ: ಶ್ರೀನಗರ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಾಡಿಕೆಯ ತಪಾಸಣೆಯ ವೇಳೆ, ನಿಷೇಧಿತ ಸ್ಯಾಟಲೈಟ್ ಟ್ರ್ಯಾಕಿಂಗ್ ಸಾಧನವನ್ನು (Satellite tracking device) ಹೊಂದಿದ್ದ ಇಬ್ಬರು ವ್ಯಕ್ತಿಗಳನ್ನು ಭದ್ರತಾ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ ಎಂದು ಮೂಲಗಳು ತಿಳಿಸಿವೆ. ಈ ಘಟನೆ ನಡೆದ ಕೂಡಲೇ ಅಧಿಕಾರಿಗಳು ಕಾರ್ಯಪ್ರವೃತ್ತರಾಗಿದ್ದು, ಹೆಚ್ಚಿನ ತನಿಖೆಗಾಗಿ ಇಬ್ಬರನ್ನೂ ಪೊಲೀಸರಿಗೆ ಒಪ್ಪಿಸಿದ್ದಾರೆ. ವಶಕ್ಕೆ ಪಡೆದವರಲ್ಲಿ ಒಬ್ಬರನ್ನು ಅಮೆರಿಕದ … Continued

ವೀಡಿಯೊ | ಶ್ರೀನಗರ : ಜೋಜಿಲಾ ಪಾಸ್‌ನಲ್ಲಿ ಭೀಕರ ಹಿಮಪಾತ ; ಸಿಲುಕಿಕೊಂಡ ವಾಹನಗಳು, 7 ಮಂದಿ ಸಾವು, ಐವರಿಗೆ ಗಂಭೀರ ಗಾಯ

ಶ್ರೀನಗರ : ಶ್ರೀನಗರ-ಲೇಹ್ ಹೆದ್ದಾರಿಯ ಜೋಜಿಲಾ ಪಾಸ್ ಬಳಿ ಶುಕ್ರವಾರ ಸಂಭವಿಸಿದ ಭೀಕರ ಹಿಮಪಾತಕ್ಕೆ (Avalanche) ಕನಿಷ್ಠ ಏಳು ಜನರು ಮೃತಪಟ್ಟಿದ್ದು, ಐವರು ತೀವ್ರವಾಗಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.  ಹಿಮದ ರಾಶಿಯ ಅಡಿಯಲ್ಲಿ ಹಲವು ಪ್ರಯಾಣಿಕ ವಾಹನಗಳು ಸಿಲುಕಿಕೊಂಡಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಭೀತಿ ಎದುರಾಗಿದೆ. ಲಡಾಖ್ ಭಾಗದ ಜೋಜಿಲಾ ಪಾಸ್‌ನಲ್ಲಿ ಹಠಾತ್ ಹಿಮ ಕುಸಿತ … Continued

ಪ್ರತಿಕೂಲ ಹವಾಮಾನ ಪರಿಸ್ಥಿತಿಯಲ್ಲಿ ಇಂಡಿಗೋ ವಿಮಾನವು ಅದರ ವಾಯುಪ್ರದೇಶ ಬಳಸಲು ಮಾಡಿದ ಮನವಿ ತಿರಸ್ಕರಿಸಿದ ಪಾಕಿಸ್ತಾನ

 ನವದೆಹಲಿ: ದೆಹಲಿಯಿಂದ ಶ್ರೀನಗರಕ್ಕೆ ಹಾರುತ್ತಿದ್ದ ಇಂಡಿಗೋ ವಿಮಾನವು, ಆಕಾಶದಲ್ಲಿ ತೀವ್ರ ಆಲಿಕಲ್ಲು ಮಳೆ ಹಾಗೂ ಬಿರುಗಾಳಿಗೆ ತುತ್ತಾದ ನಂತರ ಪ್ರಕ್ಷುಬ್ಧತೆ ತಪ್ಪಿಸಲು ಪಾಕಿಸ್ತಾನದ ವಾಯುಪ್ರದೇಶವನ್ನು ಸ್ವಲ್ಪ ಸಮಯ ಪ್ರವೇಶಿಸಲು ಅನುಮತಿ ಕೋರಿತ್ತು, ಆದರೆ ಪಾಕಿಸ್ತಾನದ ಲಾಹೋರ್ ವಾಯು ಸಂಚಾರ ನಿಯಂತ್ರಣವು ತುರ್ತು ಸಂದರ್ಭದ ಈ ಮನವಿಯನ್ನು ತಿರಸ್ಕರಿಸಿದೆ ಎಂದು ಪಿಟಿಐ ಗುರುವಾರ ವರದಿ ಮಾಡಿದೆ. 6E … Continued

ಮನೆಯಲ್ಲಿ ಉಸಿರುಗಟ್ಟಿ ಒಂದೇ ಕುಟುಂಬದ ಐವರು ಸಾವು

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಶ್ರೀನಗರ ಜಿಲ್ಲೆಯಲ್ಲಿ ಭಾನುವಾರ ಒಂದೇ ಕುಟುಂಬದ ಐವರು ಉಸಿರುಗಟ್ಟಿ ಸಾವಿಗೀಡಾಗಿದ್ದಾರೆ. ಶ್ರೀನಗರ ಜಿಲ್ಲೆಯ ಪಂದ್ರಾಥಾನ್ ಪ್ರದೇಶದಲ್ಲಿ ದಂಪತಿ ಮತ್ತು ಅವರ 3 ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಐವರು ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. “ಮೂಲತಃ ಬಾರಾಮುಲ್ಲಾ ಜಿಲ್ಲೆಯಿಂದ ಬಂದಿರುವ ಕುಟುಂಬವು ಪಂದ್ರಾಥಾನ್ ಪ್ರದೇಶದಲ್ಲಿ ಬಾಡಿಗೆ ವಸತಿಗೃಹದಲ್ಲಿ ವಾಸಿಸುತ್ತಿತ್ತು. … Continued

ಹಿರಿಯ ಅಧಿಕಾರಿ ವಿರುದ್ಧ ಅತ್ಯಾಚಾರದ ಪ್ರಕರಣ ದಾಖಲಿಸಿದ ಐಎಎಫ್ ಅಧಿಕಾರಿ

ಶ್ರೀನಗರ: ಭಾರತೀಯ ವಾಯುಪಡೆಯ ಮಹಿಳಾ ಫ್ಲೈಯಿಂಗ್ ಅಧಿಕಾರಿಯೊಬ್ಬರು ವಿಂಗ್ ಕಮಾಂಡರ್ ಮೇಲೆ ಲೈಂಗಿಕ ದೌರ್ಜನ್ಯದ ಆರೋಪ ಹೊರಿಸಿ ಪೊಲೀಸ್ ದೂರು ದಾಖಲಿಸಿದ್ದಾರೆ. ದೂರಿನ ಆಧಾರದ ಮೇಲೆ ಜಮ್ಮು ಮತ್ತು ಕಾಶ್ಮೀರದ ಬುದ್ಗಾಮ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ವಿಂಗ್ ಕಮಾಂಡರ್ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 376(2) ರ ಅಡಿಯಲ್ಲಿ ಪೊಲೀಸ್ ಸ್ಟೇಷನ್ ಬದ್ಗಾಮ್‌ನಲ್ಲಿ … Continued

ಜೂನ್ 21ರಂದು ಅಂತಾರಾಷ್ಟ್ರೀಯ ಯೋಗ ದಿನಾಚರಣೆ : ಕಾಶ್ಮೀರದ ಶ್ರೀನಗರದಲ್ಲಿ ನಡೆಯುವ ಯೋಗ ದಿನಾಚರಣೆಯಲ್ಲಿ ಪ್ರಧಾನಿ ಮೋದಿ ಭಾಗಿ

ನವದೆಹಲಿ: ಈ ವರ್ಷದ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮವನ್ನು ಜೂನ್ 21 ರಂದು ಶ್ರೀನಗರದ ಶೇರ್-ಇ-ಕಾಶ್ಮೀರ್ ಇಂಟರ್ನ್ಯಾಷನಲ್ ಕಾನ್ಫರೆನ್ಸ್ ಸೆಂಟರ್ (ಎಸ್‌ಕೆಐಸಿಸಿ) ನಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಆಯೋಜಿಸಲಾಗುವುದು ಎಂದು ಆಯುಷ್ ಖಾತೆ ಸಚಿವ ಪ್ರತಾಪರಾವ್‌ ಜಾಧವ್ ಮಂಗಳವಾರ ತಿಳಿಸಿದ್ದಾರೆ. . ಜಾಧವ್ ಅವರು, ಆಯುಷ್ ರಾಜ್ಯ ಸಚಿವ (ಸ್ವತಂತ್ರ ಉಸ್ತುವಾರಿ), ಈ ವರ್ಷದ … Continued

ಲೋಕಸಭೆ ಚುನಾವಣೆ 2024: 1996ರ ನಂತರ ಶ್ರೀನಗರದಲ್ಲಿ ಅತಿ ಹೆಚ್ಚು ಮತದಾನ…!

ಶ್ರೀನಗರ : 2024 ರ ಲೋಕಸಭೆ ಚುನಾವಣೆಯ ನಾಲ್ಕನೇ ಹಂತವು ಶ್ರೀನಗರ ಸಂಸದೀಯ ಕ್ಷೇತ್ರದಲ್ಲಿ ರಾತ್ರಿ 8 ಗಂಟೆಯವರೆಗೆ ನಡೆದಿದ್ದು, ಅಭೂತಪೂರ್ವ 37.99%ರಷ್ಟು ಮತದಾನವಾಗಿದೆ, ಇದು ಕಳೆದ ಐದು ಚುನಾವಣೆಗಳಲ್ಲಿ ಅತ್ಯಧಿಕ ಮತದಾನವಾಗಿದೆ. ಕಾಶ್ಮೀರದ ಮೂರು ಸಂಸದೀಯ ಕ್ಷೇತ್ರಗಳಲ್ಲಿ ಒಂದಾದ ಶ್ರೀನಗರವು ಸೋಮವಾರ ದೇಶಾದ್ಯಂತ ಲೋಕಸಭೆ ಚುನಾವಣೆಯ 4 ನೇ ಹಂತದ ಮತದಾನದಲ್ಲಿ 96 ಸ್ಥಾನಗಳಲ್ಲಿ … Continued