ನಾಲೆಗೆ ಹಾರಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆ

ಮಂಡ್ಯ: ಒಂದೇ ಕುಟುಂಬದ ಮೂವರು ವಿಷ ಸೇವಿಸಿ, ನಂತರ ವಿಸಿ ನಾಲೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಸೋಮವಾರ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಮೃತರನ್ನು ಮಾಸ್ತಪ್ಪ, ಪತ್ನಿ ರತ್ನಮ್ಮ ಹಾಗೂ ಮಗಳು ಲಕ್ಷ್ಮೀ ಎಂದು ಗುರುತಿಸಲಾಗಿದ್ದು, ದಂಪತಿಯ ಮೃತದೇಹ ಪತ್ತೆ ಆಗಿದೆ. ಮಗಳ ಮೃತದೇಹಕ್ಕಾಗಿ ಶೋಧಕಾರ್ಯ ಮುಂದುವರಿದಿದೆ. ಮೃತರು ಶ್ರೀರಂಗಪಟ್ಟಣದ ಗಂಜಾಂ … Continued

ಶ್ರೀರಂಗಪಟ್ಟಣ: ಐಸ್‌ ಕ್ರೀಂ ತಿಂದ ಬಳಿಕ ಅವಳಿ ಮಕ್ಕಳ ಸಾವು

ಮಂಡ್ಯ  : ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಬೆಟ್ಟಹಳ್ಳಿ ಗ್ರಾಮದಲ್ಲಿ ಐಸ್‌ಕ್ರೀಂ ತಿಂದ ಬಳಿಕ ಅವಳಿ ಮಕ್ಕಳು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಗ್ರಾಮದ ಪ್ರಸನ್ನ ಮತ್ತು ಪೂಜಾ ದಂಪತಿಯ ಒಂದೂವರೆ ವರ್ಷದ ಮಕ್ಕಳಾದ ತ್ರಿಶೂಲ್‌ ಮತ್ತು ತ್ರಿಶಾ ಎಂಬವರು ಮೃತರಾದ ಮಕ್ಕಳು ಎಂದು ಗುರುತಿಸಾಗಿದೆ. ಅವರೊಂದಿಗೆ ಐಸ್ ಕ್ರೀಂ ತಿಂದಿದ್ದ ಪೂಜಾ ಕೂಡ ಅಸ್ವಸ್ಥಗೊಂಡಿದ್ದಾರೆ ಎಂದು ಹೇಳಲಾಗಿದ್ದು. … Continued

ಶ್ರೀರಂಗಪಟ್ಟಣದ ಐತಿಹಾಸಿಕ ಮಸೀದಿಯಲ್ಲಿ ಮದರಸಾ ನಡೆಸುವ ಆರೋಪ: ಆಕ್ಷೇಪಣೆ ಸಲ್ಲಿಸಲು ಕೇಂದ್ರ, ರಾಜ್ಯಕ್ಕೆ ಹೈಕೋರ್ಟ್‌ ನೋಟಿಸ್‌

ಬೆಂಗಳೂರು : ಶ್ರೀರಂಗಪಟ್ಟಣದ ಪ್ರಸಿದ್ಧ ಜುಮ್ಮಾ ಮಸೀದಿಯು ಕೇಂದ್ರೀಯ ಸಂರಕ್ಷಿತ ಸ್ಮಾರಕವಾಗಿದ್ದು, ಅಲ್ಲಿ ಅನಧಿಕೃತ ಮದರಸಾ ನಡೆಸಲಾಗುತ್ತಿದ್ದು, ಅದನ್ನು ಮುಚ್ಚಿಸುವಂತೆ ಕೋರಿ ಸಲ್ಲಿಸಿರುವ ಅರ್ಜಿಗೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್‌ ಬುಧವಾರ ಕೇಂದ್ರ ಸಂಸ್ಕೃತಿ ಇಲಾಖೆ, ಭಾರತೀಯ ಪುರಾತತ್ವ ಇಲಾಖೆಯ ಮಹಾನಿರ್ದೇಶಕರು ಸೇರಿ ಏಳು ಪ್ರತಿವಾದಿಗಳಿಗೆ ನೋಟಿಸ್‌ ಜಾರಿ ಮಾಡಿದೆ. ರಾಮನಗರ ಜಿಲ್ಲೆಯ ಕನಕಪುರ ತಾಲ್ಲೂಕಿನ ಹೊಸ … Continued

ಭೀಕರ ಅಪಘಾತ : ನಾಲೆಗೆ ಕಾರು ಬಿದ್ದು ನಾಲ್ವರು ಮಹಿಳೆಯರು ಸಾವು

ಮಂಡ್ಯ : ಜಿಲ್ಲೆಯಲ್ಲಿ ತಡೆಗೋಡೆಯಿಲ್ಲದ ನಾಲೆಗೆ ಕಾರು ಬಿದ್ದ ಘಟನೆಯಲ್ಲಿ ನಾಲ್ವರು ಮಹಿಳೆಯರು ಮೃತಪಟ್ಟ ಘಟನೆ ಶ್ರೀರಂಗಪಟ್ಟಣ ತಾಲೂಕಿನ ಗಾಮನಹಳ್ಳಿ ಬಳಿ ಶನಿವಾರ ರಾತ್ರಿ ಸಂಭವಿಸಿದೆ. ಶ್ರೀರಂಗಪಟ್ಟಣ ತಾಲೂಕು ಗಾಮನಹಳ್ಳಿ ಗ್ರಾಮದ ಹೊರವಲಯದ ತುರುಗನೂರು ಬ್ರಾಂಚ್‌ನ ವಿಶ್ವೇಶ್ವರಯ್ಯ ಉಪ ನಾಲೆಗೆ ಕಾರು ಉರುಳಿ ಬಿದ್ದು ಈ ನಾಲ್ಕು ಮಂದಿ ಅಸುನೀಗಿದ್ದಾರೆ. ದೊಡ್ಡಮುಲಗೂಡು ಮತ್ತು ಗಾಮನಹಳ್ಳಿ ನಡುವೆ … Continued