ವಾಲಿಬಾಲ್ ಆಡುತ್ತಿದ್ದಾಗ ಏಕಾಏಕಿ ಕುಸಿದು ಬಿದ್ದು 10ನೇ ತರಗತಿ ವಿದ್ಯಾರ್ಥಿ ಸಾವು

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಸುರತ್ಕಲ್ ಸಮೀಪದ ಸುರಿಂಜೆ ಗ್ರಾಮದಲ್ಲಿ ಸ್ನೇಹಿತರೊಂದಿಗೆ ವಾಲಿಬಾಲ್ ಆಡುತ್ತಿದ್ದ ವೇಳೆ 15 ವರ್ಷದ ಬಾಲಕ ಏಕಾಏಕಿ ಕುಸಿದು ಬಿದ್ದು ಮೃತಪಟ್ಟಿರುವ ದುರ್ಘಟನೆ ನಡೆದಿದೆಎಂದು ವರದಿಯಾಗಿದೆ. ಮೃತ ಬಾಲಕನನ್ನು ಲಿಖಿತ್ ಅಮೀನ್ ಎಂದು ಗುರುತಿಸಲಾಗಿದ್ದು, ಆತ ಸುರಿಂಜೆಯ ಕೋಟೆ ಬೊಳ್ಳಾರು ಸರ್ಕಾರಿ ಪ್ರೌಢಶಾಲೆಯ ಎಸ್‌ಎಸ್‌ಎಲ್‌ಸಿ (10ನೇ ತರಗತಿ) ವಿದ್ಯಾರ್ಥಿ. ಸುರಿಂಜೆ … Continued

ಬೀದರ : ಶಾಲೆಯ 4ನೇ ಮಹಡಿಯಿಂದ ಬಿದ್ದು ವಿದ್ಯಾರ್ಥಿ ಸಾವು ; ಕಿರುಕುಳ ಕಾರಣ ಎಂದು ಪೋಷಕರ ಆರೋಪ

ಬೀದರ : ಹತ್ತನೇ ತರಗತಿ ವಿದ್ಯಾರ್ಥಿಯೊಬ್ಬ ಶಾಲಾ ಕಟ್ಟಡದ ನಾಲ್ಕನೇ ಮಹಡಿಯಿಂದ ಬಿದ್ದು ಮೃತಪಟ್ಟ ಘಟನೆ ಬೀದರಿನಲ್ಲಿ ಬುಧವಾರ ನಡೆದಿದೆ ಎಂದು ವರದಿಯಾಗಿದೆ. ಈ ಘಟನೆಗೆ ಶಾಲೆಯವರ ಮಾನಸಿಕ ಕಿರುಕುಳ ಕಾರಣ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಬೀದರಿನ ಪ್ರತಾಪ ನಗರದ ಬಳಿಯಿರುವ ಖಾಸಗಿ ಶಾಲೆಯೊಂದರಲ್ಲಿ ಬುಧವಾರ (ಜೂನ್ 10)ರಂದು ಈ ಘಟನೆ ಸಂಭವಿಸಿದೆ. ಶಾಂತಿನಗರದ ನಿವಾಸಿಯಾದ … Continued