ಬೆಂಗಳೂರು ಕಾಲ್ತುಳಿತದ ಘಟನೆ : ಕಾಂಗ್ರೆಸ್‌ ಹೈಕಮಾಂಡ್‌ ನಿಂದ ಸಿದ್ದರಾಮಯ್ಯ, ಡಿಕೆ ಶಿವಕುಮಾರಗೆ ದೆಹಲಿಗೆ ಬುಲಾವ್‌…

ಬೆಂಗಳೂರು : ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿತ ಸಂಭವಿಸಿ 11 ಜನರು ಸಾವಿಗೀಡಾದ ಘಟನೆಯ ಕೆಲವು ದಿನಗಳ ನಂತರ, ಕಾಂಗ್ರೆಸ್ ಹೈಕಮಾಂಡ್ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ ಅವರಿಗೆ ದೆಹಲಿಗೆ ಬುಲಾವ್‌ ನೀಡಿದೆ ಎಂದು ತಿಳಿದುಬಂದಿದೆ. ಕಾಲ್ತುಳಿತ ಘಟನೆಯಿಂದ ಅಸಮಾಧಾನಗೊಂಡಿರುವ ಕಾಂಗ್ರೆಸ್ ಹೈಕಮಾಂಡ್  ಮಂಗಳವಾರ ಬೆಳಿಗ್ಗೆ ಸಿದ್ದರಾಮಯ್ಯ ಮತ್ತು ಶಿವಕುಮಾರ ಅವರಿಗೆ … Continued

ಬೆಂಗಳೂರು ಕಾಲ್ತುಳಿತದ ಘಟನೆ : ನೈತಿಕ ಹೊಣೆ ಹೊತ್ತು ಕೆಎಸ್‌ ಸಿಎ ಕಾರ್ಯದರ್ಶಿ, ಖಜಾಂಚಿ ರಾಜೀನಾಮೆ

ಬೆಂಗಳೂರು :  ಬೆಂಗಳೂರಿನ ಕಾಲ್ತುಳಿತದ ಘಟನೆಯಲ್ಲಿ 11 ಮಂದಿ ಸಾವಿಗೀಡಾದ ಘಟನೆಯ ಹಿನ್ನೆಲೆಯಲ್ಲಿ ತಕ್ಷಣದಿಂದ ಜಾರಿಗೆ ಬರುವಂತೆ ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ ​​(ಕೆಎಸ್‌ಸಿಎ) ಕಾರ್ಯದರ್ಶಿ ಎ ಶಂಕರ ಮತ್ತು ಖಜಾಂಚಿ ಇ ಜೈರಾಮ ರಾಜೀನಾಮೆಗಳನ್ನು ಸಲ್ಲಿಸಿದ್ದಾರೆ. ಗುರುವಾರ ರಾತ್ರಿ ಕೆಎಸ್‌ಸಿಎ ಅಧ್ಯಕ್ಷರಿಗೆ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿರುವುದಾಗಿ ಜಂಟಿ ಹೇಳಿಕೆಯಲ್ಲಿ ಶಂಕರ್ ಮತ್ತು ಜೈರಾಮ್ … Continued

ಬೆಂಗಳೂರು ಕಾಲ್ತುಳಿತ | ಮೃತರಲ್ಲಿ 3 ಹದಿಹರೆಯದವರು, ಒಬ್ಬಳಿಗೆ 13 ವರ್ಷ, ಆರು ಮಂದಿ 20-30 ವರ್ಷದವರು : ಎಲ್ಲರಿಗೂ 40 ವರ್ಷದೊಳಗೆ

ಬೆಂಗಳೂರು: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರೆಲ್ಲರೂ 40 ವರ್ಷಕ್ಕಿಂತ ಕಡಿಮೆ ವಯಸ್ಸಿನವರು, 13 ವರ್ಷದ ಬಾಲಕಿ ಮೃತರಲ್ಲಿ ಅತ್ಯಂತ ಕಿರಿಯಳು. ಮೃತರಲ್ಲಿ ಮೂವರು ಹದಿಹರೆಯದವರು ಮತ್ತು 20-30 ವರ್ಷ ವಯಸ್ಸಿನ ಆರು ಜನ ಸೇರಿದ್ದಾರೆ. 18 ವರ್ಷಗಳ ಕಾಯುವಿಕೆಯ ನಂತರ ಐಪಿಎಲ್ ಟ್ರೋಫಿಯನ್ನು ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಹುರಿದುಂಬಿಸಲು … Continued

ಬೆಂಗಳೂರು ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿತ ದುರಂತ : ಸ್ವಯಂಪ್ರೇರಿತ ಪ್ರಕರಣ ದಾಖಲಿಸಿದ ಹೈಕೋರ್ಟ್‌

ಬೆಂಗಳೂರು : ಆರ್‌ಸಿಬಿ ವಿಜಯೋತ್ಸವದ ವೇಳೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಬುಧವಾರ ಸಂಭವಿಸಿದ ಕಾಲ್ತುಳಿತದಲ್ಲಿ 11 ಜನರು ಸಾವಿಗೀಡಾದ ಘಟನೆಗೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ಗುರುವಾರ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿದೆ. ಹಂಗಾಮಿ ಮುಖ್ಯ ನ್ಯಾಯಮೂರ್ತಿ ವಿ. ಕಾಮೇಶ್ವರ ರಾವ್ ಮತ್ತು ನ್ಯಾಯಮೂರ್ತಿ ಸಿ.ಎಂ. ಜೋಶಿ ಅವರ ಪೀಠವು ರಾಜ್ಯ ಸರ್ಕಾರದಿಂದ ಈ ಬಗ್ಗೆ ವಸ್ತುಸ್ಥಿತಿ … Continued

ವೀಡಿಯೊ..| ಬೆಂಗಳೂರು ಕಾಲ್ತುಳಿತ ; ಮಾಧ್ಯಮಗಳ ಮುಂದೆ ಕಣ್ಣೀರಿಟ್ಟ ಡಿಕೆ ಶಿವಕುಮಾರ

ಬೆಂಗಳೂರು: ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ಕಾಲ್ತುಳಿದಲ್ಲಿ 11 ಜನರು ಸಾವಿಗೀಡಾದ ದುರಂತದ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡುವಾಗ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಕಣ್ಣೀರಿಟ್ಟಿದ್ದಾರೆ. ಶಿವಕುಮಾರ ಅವರು ತಾವು ಕಂಡ ಹೃದಯ ವಿದ್ರಾವಕ ದೃಶ್ಯಗಳನ್ನು ವಿವರಿಸಿದ್ದಾರೆ. ʼಕಾಲ್ತುಳಿತದಲ್ಲಿ (Bengaluru Stampede) “ನಾನು ಮಕ್ಕಳ ಬಗ್ಗೆ ಚಿಂತಿತನಾಗಿದ್ದೇನೆ, ಅವರು 15 ವರ್ಷ ವಯಸ್ಸಿನವರು ಎಂದು ನಾನು ನೋಡಿದೆ. … Continued

ಬೆಂಗಳೂರು| ಆರ್‌ ಸಿಬಿ ಸಂಭ್ರಮಾಚರಣೆ ; ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತದಲ್ಲಿ ಹಲವರ ಸಾವು ; ಅನೇಕರು ಅಸ್ವಸ್ಥ

ಬೆಂಗಳೂರು: ಇಂಡಿಯನ್ ಪ್ರೀಮಿಯರ್ ಲೀಗ್ (IPL) ಗೆಲುವಿನ ನಂತರ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡದ  ಅದ್ಧೂರಿ ಆಚರಣೆಗೆ ಆಗಮಿಸಬೇಕಿದ್ದ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಬುಧವಾರ ಸಂಭವಿಸಿದ ಕಾಲ್ತುಳಿತದಲ್ಲಿ ಕಾಲ್ತುಳಿತದಲ್ಲಿ 10 ಜನರು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. 20 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಕುಸಿದು ಬಿದ್ದವರನ್ನು ಭದ್ರತಾ ಸಿಬ್ಬಂದಿ ಹೊರಗೆ ಕರೆದೊಯ್ಯುತ್ತಿರುವ ನಾಟಕೀಯ ದೃಶ್ಯಗಳು … Continued

ಉತ್ತರ ಗೋವಾದ ಲೈರೈ ದೇವಿ ಜಾತ್ರೆಯಲ್ಲಿ ಕಾಲ್ತುಳಿತ : 7 ಸಾವು, 50 ಕ್ಕೂ ಹೆಚ್ಚು ಜನರಿಗೆ ಗಾಯ

ಪಣಜಿ : ಉತ್ತರ ಗೋವಾದ ಶಿರ್ಗಾಂವ್ ಗ್ರಾಮದಲ್ಲಿ ಲೈರೈ ದೇವಿ ವಾರ್ಷಿಕ ಜಾತ್ರೆಯ ವೇಳೆ ಶನಿವಾರ ಮುಂಜಾನೆ ಸಂಭವಿಸಿದ ಕಾಲ್ತುಳಿತದಲ್ಲಿ ಕನಿಷ್ಠ ಏಳು ಜನರು ಮೃತಪಟ್ಟಿದ್ದಾರೆ ಮತ್ತು 50 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ದೇವಾಲಯದಲ್ಲಿ ಶತಮಾನಗಳಷ್ಟು ಹಳೆಯದಾದ ಆಚರಣೆಯನ್ನು ವೀಕ್ಷಿಸಲು ಮತ್ತು ಅದರಲ್ಲಿ ಭಾಗವಹಿಸಲು ಸಾವಿರಾರು ಭಕ್ತರು ಮೆರವಣಿಗೆಯಲ್ಲಿ ಭಾಗವಹಿಸಿದ್ದಾಗ ನೂಕುನುಗ್ಗಲು … Continued

ವಿವಿಐಪಿ ಪಾಸ್‌ ಗಳು ರದ್ದು, ಕುಂಭಮೇಳ ಪ್ರದೇಶಕ್ಕೆ ವಾಹನಗಳಿಲ್ಲ ಪ್ರವೇಶ : ಮಹಾಕುಂಭದಲ್ಲಿ ಕಾಲ್ತುಳಿತದ ಜನಸಂದಣಿ ನಿರ್ವಹಣೆ ಕ್ರಮಗಳು ಜಾರಿ

ಪ್ರಯಾಗರಾಜ್: ಉತ್ತರ ಪ್ರದೇಶದ ಪ್ರಯಾಗರಾಜ್‌ನ ಮಹಾಕುಂಭ ಮೇಳದ ಸಂಗಮ ಪ್ರದೇಶದಲ್ಲಿ ಬುಧವಾರ ನಸುಕಿನ ಜಾವ ಕಾಲ್ತುಳಿತದಲ್ಲಿ 30 ಜನರು ಮೃತಪಟ್ಟ ಹಾಗೂ ಇತರ 60 ಜನರು ಗಾಯಗೊಂಡ ಒಂದು ದಿನದ ನಂತರ, ರಾಜ್ಯ ಸರ್ಕಾರವು ಸುರಕ್ಷತಾ ದೃಷ್ಟಿಯಿಂದ ಕಟ್ಟುನಿಟ್ಟಿನ ಕ್ರಮಗಳನ್ನು ಜಾರಿಗೆ ತಂದಿದೆ. ಇಡೀ ಜಾತ್ರೆ ಪ್ರದೇಶವನ್ನು ವಾಹನ ರಹಿತ ವಲಯ ಎಂಬ ಘೋಷಣೆ ಸೇರಿದಂತೆ … Continued

ʼಮೌನಿ ಅಮಾವಾಸ್ಯೆ’ಯಂದು ಮಹಾಕುಂಭ ಕಾಲ್ತುಳಿತ : 1954ರಿಂದ ಕುಂಭಮೇಳದಲ್ಲಿ ಸಂಭವಿಸಿದ ಪ್ರಮುಖ ಕಾಲ್ತುಳಿತದ ಘಟನೆಗಳು…

ನವದೆಹಲಿ: ‘ಮೌನಿ ಅಮಾವಾಸ್ಯೆ’ ಸಂದರ್ಭದಲ್ಲಿ ಪವಿತ್ರ ಸ್ನಾನ ಮಾಡಲು ಲಕ್ಷಾಂತರ ಯಾತ್ರಾರ್ಥಿಗಳು ಒಟ್ಟಾಗಿ ಸೇರಿದ್ದರಿಂದ ಮಹಾಕುಂಭದ ಸಂಗಮ ಪ್ರದೇಶದಲ್ಲಿ ಬುಧವಾರ ಮುಂಜಾನೆ ಕಾಲ್ತುಳಿತ ಸಂಭವಿಸಿದೆ. ಈ ಘಟನೆಯಲ್ಲಿ ಕನಿಷ್ಠ 30 ಮಂದಿ ಮೃತಪಟ್ಟಿದ್ದು, 60 ಮಂದಿ ಗಾಯಗೊಂಡಿದ್ದಾರೆ. ಕುಂಭಮೇಳದ ಸಮಯದಲ್ಲಿ ಅತ್ಯಂತ ಮಂಗಳಕರ ಸಮಯವೊಂದರಲ್ಲಿ ಅಪಾರ ಸಂಖ್ಯೆಯ ಭಕ್ತರಿಂದ ಸ್ನಾನಕ್ಕಾಗಿ ನೂಕುನುಗ್ಗಲು ಉಂಟಾದ ಕಾರಣ ಈ … Continued

ಮಹಾಕುಂಭ ಕಾಲ್ತುಳಿತದಲ್ಲಿ 30 ಸಾವು, 60 ಮಂದಿಗೆ ಗಾಯ

ಪ್ರಯಾಗರಾಜ್: ಉತ್ತರ ಪ್ರದೇಶದ ಪ್ರಯಾಗರಾಜ್‌ನ ಮಹಾಕುಂಭ ಮೇಳದಲ್ಲಿ ಬೆಳಗಿನ ಜಾವ ಸಂಭವಿಸಿದ ಕಾಲ್ತುಳಿತದಲ್ಲಿ 30 ಜನರು ಮೃತಪಟ್ಟಿದ್ದಾರೆ ಎಂದು ಮಹಾಕುಂಭದ ಉಪ ಮಹಾನಿರೀಕ್ಷಕ (ಡಿಐಜಿ) ವೈಭವ ಕೃಷ್ಣ ತಿಳಿಸಿದ್ದಾರೆ. ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಪೊಲೀಸ್ ಅಧಿಕಾರಿ ವೈಭವ್ ಕೃಷ್ಣ ಅವರು, 25 ಶವಗಳನ್ನು ಗುರುತಿಸಲಾಗಿದೆ, ಘಟನೆಯಲ್ಲಿ 60 ಮಂದಿ ಗಾಯಗೊಂಡಿದ್ದಾರೆ. ಹಲವರು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು … Continued