ಸೂರ್ಯ ಉದಯಿಸುವುದು ಎಷ್ಟು ಸತ್ಯವೋ ಸತೀಶ ಜಾರಕಿಹೊಳಿ ಸಿಎಂ ಆಗುವುದು ಅಷ್ಟೇ ಸತ್ಯ: ಸಂಚಲನ ಮೂಡಿಸಿದ ಸವದತ್ತಿ ಶಾಸಕರ ಹೇಳಿಕೆ

ಬೆಳಗಾವಿ: ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ ಸ್ಥಾನದ ಬಗ್ಗೆ ಮುಸುಕಿನ ಗುದ್ದಾಟ ಇನ್ನೂ ನಿಂತಿಲ್ಲ. ಕಾಂಗ್ರೆಸ್‌ ಶಾಸಕರು ತಮ್ಮ ನಾಯಕರು ಮುಖ್ಯಮಂತ್ರಿಯಾಗುತ್ತಾರೆ ಎಂದು ಹೇಳುವುದು ಈಗ ಹೊಸ ಟ್ರೆಂಡ್‌ ಆಗಿ ಪರಿಣಮಿಸಿದೆ. ಈಗ ಮತ್ತೊಬ್ಬ ಕಾಂಗ್ರೆಸ್‌ ಶಾಸಕ ಕೂಡ ಈ ಬಗ್ಗೆ ಮಾತನಾಡಿದ್ದಾರೆ. ಕಾಂಗ್ರೆಸ್‌ನಲ್ಲಿ ಮತ್ತೆ ಮುಂದಿನ ಮುಖ್ಯಮಂತ್ರಿ ಬಗ್ಗೆ ಚರ್ಚೆ ಮಾಡುವುದು ಬೇಡ ಎಂದು ಕಾಂಗ್ರೆಸ್‌ ಹೈಕಮಾಂಡ್‌ … Continued

ನಾನು ಕೇಂದ್ರ ಸಚಿವನಾಗಿದ್ದಾಗ ಯಡಿಯೂರಪ್ಪ ಮಂತ್ರಿಯೂ ಆಗಿರಲಿಲ್ಲ: ಯತ್ನಾಳ ಗುಡುಗು

posted in: ರಾಜ್ಯ | 0

ಮೈಸೂರು: ‌ಬಿಜೆಪಿಯಲ್ಲಿ ಬಿ.ಎಸ್‌.ಯಡಿಯೂರಪ್ಪ ಮಂತ್ರಿನೂ ಆಗಿರಲಿಲ್ಲ, ನಾನಾಗಲೇ ಕೇಂದ್ರ ಸಚಿವನಾಗಿದ್ದೆ ಎಂದು ಬಿಎಸ್‌ವೈ ವಿರುದ್ಧ ಶಾಸಕ ಬಸನಗೌಡ ಪಾಟೀಲ ಯತ್ನಾಳ್‌ ಮತ್ತೆ ಗುಡುಗಿದರು. ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಹಿಂದೆಯೇ ಮುಖ್ಯಮಂತ್ರಿ ಆಗಬೇಕಿತ್ತು. ನಾನೇ ಕೆಲವು ಅವಕಾಶಗಳನ್ನು ಮಿಸ್ ಮಾಡಿಕೊಂಡಿದ್ದೇನೆ. ಸದಾನಂದಗೌಡ, ಜಗದೀಶ್ ಶೆಟ್ಟರ್‌ಗಿಂತ ನಾನು ಹಿರಿಯ. ಯಡಿಯೂರಪ್ಪ ಮಂತ್ರಿನೂ ಆಗಿರಲಿಲ್ಲ, ಆಗಲೇ … Continued

ಸಿಡಿ ಪ್ರಕರಣ: ಎಸ್‌ಐಟಿಗೆ ಲಿಖಿತ ಹೇಳಿಕೆ ನೀಡಿದ ಕಲ್ಲಹಳ್ಳಿ

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ಸಂಬಂಧ ದೂರುದಾರ ದಿನೇಶ್ ಕಲ್ಲಹಳ್ಳಿ “ದೂರು ವೃತ್ತಾಂತ”ದ ಬಗ್ಗೆ ಎಸ್‌ಐಟಿಗೆ ಮೂರು ಪುಟಗಳ ಹೇಳಿಕೆ ನೀಡಿದ್ದಾರೆ. ಮಾ. 2ರಂದು ದಿನೇಶ್ ಕಲ್ಲಹಳ್ಳಿ ಜನ ಸಂಪನ್ಮೂಲ ಸಚಿವರಾಗಿದ್ದ ರಮೇಶ್ ಜಾರಕಿಹೊಳಿ ವಿರುದ್ಧ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ಅವರಿಗೆ ದೂರು ನೀಡಿದ್ದರು. ದೂರು ದಾಖಲು ಮೊದಲೇ ಅಶ್ಲೀಲ … Continued

ಸಿಡಿ ಪ್ರಕರಣ: ಎಸ್‌ಐಟಿಗೆ ದಾಖಲಿಸಿದ ಜಾರಕಿಹೊಳಿ ಹೇಳಿಕೆಯಲ್ಲಿ ಇರುವುದೇನು?

ಬೆಂಗಳೂರು: ಸಚಿವ ಸ್ಥಾನಕ್ಕೆ ಕಾರಣವಾದ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ರಮೇಶ್ ಜಾರಕಿಹೊಳಿ ಅವರಿಂದ ವಿಶೇಷ ತನಿಖಾ ತಂಡ ಹೇಳಿಕೆ ದಾಖಲಿಸಿಕೊಂಡಿದೆ. ಅವರು ನೀಡಿದ ನಾಲ್ಕು ಪುಟಗಳ ಹೇಳಿಕೆಯಲ್ಲಿ ರಮೇಶ್ ಜಾರಕಿಹೊಳಿ ಕೆಲವು ಸ್ಫೋಟಕ ಸಂಗತಿಗಳನ್ನು ಬಿಚ್ಚಿಟ್ಟಿದ್ದಾರೆ ಎಂದು ತಿಳುದಬಂದಿದೆ. ಸದಾಶಿವನಗರ ಪೊಲೀಸ್ ಠಾಣೆಗೆ ನೀಡಿದ ದೂರಿನಲ್ಲಿ ಉಲ್ಲೇಖಿಸಿದ್ದ ಅಂಶಗಳನ್ನೇ ಆಧಾರವಾಗಿಟ್ಟುಕೊಂಡು ಅವರು ತಮ್ಮ ಹೇಳಿಕೆ ದಾಖಲಿಸಿದ್ದು, … Continued