ಬೆಳಗಾವಿ: ರಮೇಶ ಜಾರಕಿಹೊಳಿ ರಾಜೀನಾಮೆ ಅಂಗೀಕಾರದ ಬೆನ್ನಲ್ಲೇ ಬೆಂಬಲಿಗರಿಂದ ಬಸ್‌ಗಳಿಗೆ ಕಲ್ಲು ತೂರಾಟ

ಬೆಳಗಾವಿ: ರಮೇಶ್ ಜಾರಕಿಹೊಳಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ ಬೆಳಗಾವಿ ಜಿಲ್ಲೆಯಲ್ಲಿ ಅವರ ಬೆಂಬಲಿಗರ ಆಕ್ರೋಶ ಭುಗಿಲೆದ್ದಿದೆ. ಅವರು ಯಾವುದೇ ಕಾರಣಕ್ಕೂ ರಮೇಶ ಜಾರಕಿಹೊಳಿ ರಾಜೀನಾಮೆ ಅಂಗೀಕಾರ ಮಾಡಬಾರದು ಹಾಗೂ ಅವರು ರಾಜೀನಾಮೆ ಹಿಂಪಡೆಯಬೇಕೆಂದು ಪ್ರತಿಭಟನೆ ನಡೆಸಿ ಒತ್ತಾಯಿಸುತ್ತಿದ್ದಾರೆ. ಬೆಳಗಾವಿ, ಗೋಕಾಕಿನ ಕೆಲವೆಡೆ ಮಾರ್ಕೆಟ್ ಬಂದ್ ಮಾಡಿಸುತ್ತಿದ್ದರೆ, ಇನ್ನು ಹಲವಡೆ ಬಸ್ ಗಳ ಮೇಲೆ … Continued