ಹಾರ್ಮುಜ್ ಜಲಸಂಧಿ ಈಗ ಅಮೆರಿಕ ನಿಯಂತ್ರಣದಲ್ಲಿ : ಭದ್ರತೆಗಾಗಿ ವಾಣಿಜ್ಯ ಹಡಗುಗಳಿಂದ 20% ಶುಲ್ಕ ವಸೂಲಿ; ಟ್ರಂಪ್‌ ಘೋಷಣೆ

ವಾಷಿಂಗ್ಟನ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸೋಮವಾರ ಮಹತ್ವದ ಘೋಷಣೆ ಮಾಡಿದ್ದು, ಹಾರ್ಮುಜ್ ಜಲಸಂಧಿಯ (Strait of Hormuz) ಮೂಲಕ ಸಾಗುವ ಎಲ್ಲ ಸರಕು ಸಾಗಣೆಯ ಮೇಲೆ ಅಮೆರಿಕವು ಇನ್ನು ಮುಂದೆ 20 ಪ್ರತಿಶತ ಶುಲ್ಕ ವಿಧಿಸಲಿದೆ ಎಂದು ಪ್ರಕಟಿಸಿದ್ದಾರೆ. ತಮ್ಮ ಸಾಮಾಜಿಕ ಜಾಲತಾಣ ಟ್ರೂತ್ ಸೋಷಿಯಲ್ (Truth Social) ನಲ್ಲಿ ಈ ಕುರಿತು ಪ್ರಕಟಣೆ … Continued

ಹಾರ್ಮುಜ್ ಜಲಸಂಧಿ ಮತ್ತೆ ಬಂದ್ : ವಾಣಿಜ್ಯ ಹಡಗಿನ ಮೇಲೆ ಇರಾನ್ ದಾಳಿ, ಅಮೆರಿಕದಿಂದ ಇರಾನ್‌ ಮೇಲೆ ಭಾರಿ ವಾಯುದಾಳಿ

ವಾಷಿಂಗ್ಟನ್: ಹಾರ್ಮುಜ್ ಜಲಸಂಧಿಯನ್ನು (Strait of Hormuz) “ಮುಂದಿನ ಆದೇಶದವರೆಗೆ” ಮುಚ್ಚುವುದಾಗಿ ಇರಾನ್ ಘೋಷಿಸಿದ ಬೆನ್ನಲ್ಲೇ, ಹಾಗೂ ಆ ಜಲಸಂಧಿಯಲ್ಲಿ ಸಂಚರಿಸುತ್ತಿದ್ದ ಸೈಪ್ರಸ್ ಧ್ವಜದ ಎಂ/ವಿ ಜಿಎಫ್‌ಎಸ್ ಗ್ಯಾಲಕ್ಸಿ (M/V GFS Galaxy) ಕಂಟೇನರ್ ಹಡಗಿನ ಮೇಲೆ ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಪಡೆಗಳು ದಾಳಿ ನಡೆಸಿದ ನಂತರ, ಅಮೆರಿಕ ಇರಾನ್ ವಿರುದ್ಧ … Continued

ಇರಾನ್‌ ಜೊತೆಗಿನ ಒಪ್ಪಂದ ಮುಗಿದ ಅಧ್ಯಾಯ ಎಂದು ಟ್ರಂಪ್‌ ಘೋಷಣೆ ; ಕಚ್ಚಾ ತೈಲ ಬೆಲೆ ದಿಢೀರ್‌ ಏರಿಕೆ

ಅಂಕಾರಾ (ಟರ್ಕಿ): ಅಮೆರಿಕ ಮತ್ತು ಇರಾನ್ ನಡುವಿನ ಉದ್ವಿಗ್ನತೆ ಮತ್ತೊಮ್ಮೆ ತೀವ್ರಗೊಂಡಿದ್ದು, ಪರಸ್ಪರ ದಾಳಿಗಳ ಬಳಿಕ ಇರಾನ್‌ ಜೊತೆಗಿನ ಮಧ್ಯಂತರ ಕದನ ವಿರಾಮ (Ceasefire) ‘ಅಂತ್ಯಗೊಂಡಿದೆ’ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬುಧವಾರ (ಜುಲೈ 8) ಘೋಷಿಸಿದ್ದಾರೆ. ಇರಾನ್‌ನ ನಾಯಕತ್ವವನ್ನು “ಅನಾರೋಗ್ಯಪೀಡಿತರು” ಎಂದು ಟೀಕಿಸಿದ ಅವರು, “ಅವರ ಜೊತೆ ಮಾತುಕತೆ ನಡೆಸುವುದೇ ಸಮಯ ವ್ಯರ್ಥ” … Continued

24 ಗಂಟೆಗಳಲ್ಲಿ ಹೋರ್ಮುಜ್ ಜಲಸಂಧಿಯಲ್ಲಿ ಮೂರನೇ ಹಡಗಿನ ಮೇಲೆ ದಾಳಿ

#Karnataka  #Rain  #HeavyRain  #Weather 24 ಗಂಟೆಗಳಲ್ಲಿ ಮೂರನೇ ಟ್ಯಾಂಕರ್ ಮೇಲೂ ದಾಳಿ: ಹೋರ್ಮುಜ್ ಜಲಸಂಧಿಯಲ್ಲಿ ಉದ್ವಿಗ್ನತೆ ಮತ್ತಷ್ಟು ತೀವ್ರ ಲಂಡನ್/ದೋಹಾ: ಕಳೆದ 24 ಗಂಟೆಗಳ ಅವಧಿಯಲ್ಲಿ ಹೋರ್ಮುಜ್ ಜಲಸಂಧಿಯಲ್ಲಿ ಮೂರನೇ ತೈಲ ಟ್ಯಾಂಕರ್ ಮೇಲೆ ಕ್ಷಿಪಣಿ/ಡ್ರೋನ್ ದಾಳಿ ನಡೆದಿದ್ದು, ಈ ಕುರಿತು ಬ್ರಿಟನ್‌ನ ಸಮುದ್ರ ವ್ಯಾಪಾರ ಕಾರ್ಯಾಚರಣೆಗಳ ಸಂಸ್ಥೆ (UKMTO) ಮಂಗಳವಾರ ಮಾಹಿತಿ ನೀಡಿದೆ. … Continued

ಕೇಂದ್ರದಿಂದ ಗುಡ್‌ನ್ಯೂಸ್ ; ವಾಣಿಜ್ಯ ಬಳಕೆ ಎಲ್‌ಪಿಜಿ ಮೇಲಿನ ನಿರ್ಬಂಧ ತೆಗೆದುಹಾಕಿದ ಸರ್ಕಾರ ; ಪೂರೈಕೆ ಸಹಜ ಸ್ಥಿತಿಗೆ

ನವದೆಹಲಿ: ಇರಾನ್‌-ಅಮೆರಿಕ ಸಂಘರ್ಷದ ಕಾರಣ ತಲೆದೋರಿದ್ದ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ವಾಣಿಜ್ಯ ಬಳಕೆಯ ಎಲ್‌ಪಿಜಿ (ಅಡುಗೆ ಅನಿಲ) ಮೇಲೆ ಹೇರಲಾಗಿದ್ದ ಎಲ್ಲಾ ನಿರ್ಬಂಧಗಳನ್ನು ಕೇಂದ್ರ ಸರ್ಕಾರವು ಗುರುವಾರ ತೆಗೆದುಹಾಕಿದೆ. ದೇಶೀಯ ಉತ್ಪಾದನೆಯಲ್ಲಿನ ಸುಧಾರಣೆ ಹಾಗೂ ಆಮದು ಮಾಡಿಕೊಳ್ಳಲಾದ ಎಲ್‌ಪಿಜಿ ಹೊತ್ತ ಹಡಗುಗಳು ಶೀಘ್ರದಲ್ಲೇ ಭಾರತಕ್ಕೆ ತಲುಪಲಿರುವ ಹಿನ್ನೆಲೆಯಲ್ಲಿ, ವಾಣಿಜ್ಯ ಎಲ್‌ಪಿಜಿ ಪೂರೈಕೆಯನ್ನು ಇರಾನ್‌ ಯುದ್ಧದ ಮೊದಲಿಗೆ ಇದ್ದ … Continued

ಇರಾನ್-ಅಮೆರಿಕ ಒಪ್ಪಂದದ ನಂತ್ರ ಹಾರ್ಮುಜ್ ಜಲಸಂಧಿ ದಾಟಿದ ಭಾರತಕ್ಕೆ ಬರುವ 11 ಹಡಗುಗಳು ; ಇನ್ನೂ 10 ಹಡಗುಗಳು ಬಾಕಿ

ನವದೆಹಲಿ: ಅಮೆರಿಕ ಮತ್ತು ಇರಾನ್ ನಡುವೆ ಜೂನ್ 17 ರಂದು ಸಹಿಯಾದ ಶಾಂತಿ ಒಪ್ಪಂದದ (MoU) ಬೆನ್ನಲ್ಲೇ, ಆಯಕಟ್ಟಿನ ಜಾಗತಿಕ ಜಲಮಾರ್ಗವಾದ ಹಾರ್ಮುಜ್ ಜಲಸಂಧಿ (Strait of Hormuz) ಮೂಲಕ ಹಡಗುಗಳ ಸಂಚಾರವು ಮತ್ತೆ ಚೇತರಿಸಿಕೊಳ್ಳಲು ಆರಂಭಿಸಿದೆ. ಈ ಒಪ್ಪಂದದ ನಂತರ ಭಾರತಕ್ಕೆ ಬರಬೇಕಿದ್ದ 11 ಸರಕು ಸಾಗಣೆ ಹಡಗುಗಳು ಸುರಕ್ಷಿತವಾಗಿ ಈ ಜಲಮಾರ್ಗವನ್ನು ದಾಟಿವೆ. … Continued

ಲೆಬನಾನ್ ಮೇಲೆ ಇಸ್ರೇಲ್ ದಾಳಿ: ಮತ್ತೆ ಹಾರ್ಮುಜ್ ಜಲಸಂಧಿ ಮುಚ್ಚಿದ ಇರಾನ್

ತೆಹ್ರಾನ್‌ : ಇರಾನ್ ಮತ್ತು ಅಮೆರಿಕ ನಡುವೆ ಎರಡು ದಿನಗಳ ಹಿಂದಷ್ಟೇ ಆಗಿದ್ದ ಮಧ್ಯಂತರ ಒಪ್ಪಂದಕ್ಕೆ ಭಾರಿ ಹಿನ್ನಡೆಯಾಗಿದ್ದು, ಇರಾನ್ ಶನಿವಾರ ಮಹತ್ವದ ಜಲಮಾರ್ಗವಾದ ಹಾರ್ಮುಜ್ ಜಲಸಂಧಿ (Strait of Hormuz) ಸಮುದ್ರ ಮಾರ್ಗವನ್ನು ಮತ್ತೆ ಮುಚ್ಚಿರುವುದಾಗಿ ಪ್ರಕಟಿಸಿದೆ. ಲೆಬನಾನ್ ಮೇಲಿನ ಇಸ್ರೇಲ್ ದಾಳಿ ಮತ್ತು ಅಮೆರಿಕ ತನ್ನ ಭರವಸೆಗಳನ್ನು ಈಡೇರಿಸುವಲ್ಲಿ ತೋರಿರುವ “ನಂಬಿಕೆ ದ್ರೋಹ”ವೇ … Continued

ಇರಾನ್‌-ಅಮೆರಿಕ ಶಾಂತಿ ಒಪ್ಪಂದಕ್ಕೆ ಪೆಜೆಶ್ಕಿಯಾನ್-ಟ್ರಂಪ್ ಸಹಿ ; ತಕ್ಷಣದಿಂದ ಹಾರ್ಮುಜ್ ಜಲಸಂಧಿ ಓಪನ್‌ ; 14 ಅಂಶಗಳ ಒಪ್ಪಂದದಲ್ಲಿ ಏನಿದೆ?

ವಾಷಿಂಗ್ಟನ್/ ತೆಹ್ರಾನ್‌ : ಅಮೆರಿಕ ಮತ್ತು ಇರಾನ್ ನಡುವಿನ ದೀರ್ಘಾವಧಿಯ ಸಂಘರ್ಷಕ್ಕೆ ಕೊನೆಗೂ ತಾತ್ಕಾಲಿಕ ತೆರೆ ಬಿದ್ದಿದೆ. ವಾರಗಳ ಕಾಲ ನಡೆದ ರಾಜತಾಂತ್ರಿಕ ಚರ್ಚೆಗಳ ನಂತರ, ಎರಡೂ ದೇಶಗಳು ಐತಿಹಾಸಿಕ ಶಾಂತಿ ಒಪ್ಪಂದದ ಜ್ಞಾಪಕ ಪತ್ರಕ್ಕೆ (Peace Memorandum) ಅಧಿಕೃತವಾಗಿ ಸಹಿ ಹಾಕಿವೆ. ಫ್ರಾನ್ಸ್‌ನಲ್ಲಿ ನಡೆದ ಜಿ7 (G7) ಶೃಂಗಸಭೆಯ ಸಂದರ್ಭದಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ … Continued

ಹಾರ್ಮುಜ್ ಜಲಸಂಧಿ ಸಂಘರ್ಷ : ಭಾರತದ ಪ್ರತಿಭಟನೆಗೆ ದಿಗ್ಬಂಧನ ಉಲ್ಲಂಘಿಸಿದರೆ ಸಹಿಸುವುದಿಲ್ಲ ಎಂದ ಅಮೆರಿಕ

ನವದೆಹಲಿ : ಅಮೆರಿಕ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರುಬಿಯೋ ಶನಿವಾರ ಭಾರತದ ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ ಅವರ ಜೊತೆ ಮಾತುಕತೆ ನಡೆಸಿದ್ದು, ಸಂಘರ್ಷ ಪೀಡಿತ ಹಾರ್ಮುಜ್ ಜಲಸಂಧಿಯಲ್ಲಿನ ದಿಗ್ಬಂಧನವನ್ನು ಯಾವುದೇ ಕಾರಣಕ್ಕೂ ಉಲ್ಲಂಘಿಸುವುದನ್ನು ಅಮೆರಿಕ ಸಹಿಸುವುದಿಲ್ಲ ಎಂದು ತಿಳಿಸಿದ್ದಾರೆ. ಒಮಾನ್‌ ಕರಾವಳಿಯಲ್ಲಿ ಇತ್ತೀಚೆಗೆ ಅಮೆರಿಕ ನಡೆಸಿದ ದಾಳಿಯಲ್ಲಿ ಮೂವರು ಭಾರತೀಯ ನಾವಿಕರು ಸಾವಿಗೀಡಾಗಿದ್ದಕ್ಕೆ … Continued

ಒಮಾನ್ ಕರಾವಳಿಯಲ್ಲಿ ಹಡಗಿನ ಮೇಲೆ ಅಮೆರಿಕ ಪಡೆಗಳ ದಾಳಿ: ನಾಪತ್ತೆಯಾಗಿದ್ದ ಮೂವರು ಭಾರತೀಯ ನಾವಿಕರು ಸಾವು

ನವದೆಹಲಿ: ಒಮಾನ್ ಕರಾವಳಿಯ ಬಳಿ ಅಮೆರಿಕ ಸೇನಾ ಪಡೆಗಳು ನಡೆಸಿದ ಭೀಕರ ದಾಳಿಗೆ ತುತ್ತಾಗಿದ್ದ ‘ಎಂಟಿ ಸೆಟ್ಟೆಬೆಲ್ಲೊ’ (MT Settebello) ತೈಲ ಟ್ಯಾಂಕರ್‌ನಲ್ಲಿದ್ದ, ಆರಂಭದಲ್ಲಿ ನಾಪತ್ತೆಯಾಗಿದ್ದಾರೆ ಎನ್ನಲಾಗಿದ್ದ ಮೂವರು ಭಾರತೀಯ ನಾವಿಕರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಈ ವಿಷಯವನ್ನು ಕೇಂದ್ರ ಹಡಗು ಮತ್ತು ಜಲಸಾರಿಗೆ ಸಚಿವ ಸರ್ಬಾನಂದ ಸೋನೋವಾಲ್ ಅವರು ಅಧಿಕೃತವಾಗಿ ದೃಢಪಡಿಸಿದ್ದು, ಮೃತಪಟ್ಟ ಮೂವರು … Continued