ಹಿರಿಯ ಹಾರ್ಮೊನಿಯಂ ವಾದಕ, ಶತಾಯುಷಿ ಶ್ರೀಕೃಷ್ಣರಾವ್‌ ಕಲ್ಗುಂಡಿಕೊಪ್ಪ ನಿಧನ

ಶಿರಸಿ : ಉತ್ತರಕನ್ನಡ ಜಿಲ್ಲೆಯ ಹಿರಿಯ ಹಾರ್ಮೊನಿಯಂ ವಾದಕ, ಅತ್ಯುತ್ತಮ ಕೃಷಿಕ ಹಾಗೂ ಶತಾಯುಷಿ ಶ್ರೀಕೃಷ್ಣ ರಾವ್ ಕಲ್ಗೊಂಡಿಕೊಪ್ಪ (100) ಅವರು, ಶನಿವಾರ (ಆಗಸ್ಟ್‌ 16) ಬೆಳಗಿನ ಜಾವ ವಯೋಸಹಜ ಕಾಯಿಲೆಯಿಂದ ನಿಧನರಾಗಿದ್ದಾರೆ. ಶಿರಸಿ ತಾಲೂಕಿನ ಸುಗಾವಿ ಗ್ರಾಮದ ಕಲ್ಗೊಂಡಿಕೊಪ್ಪದ ನಿವಾಸಿಯಾಗಿದ್ದ ಮೃತ ಶ್ರೀಕೃಷ್ಣ ರಾವ್ ಕಲ್ಗೊಂಡಿಕೊಪ್ಪ ಅವರು ಪತ್ನಿ, ನಾಲ್ವರು ಪುತ್ರರು, ಮೂವರು ಪುತ್ರಿಯರು … Continued

ವೀಡಿಯೊಗಳು..| ಶಿರಸಿ ; ಸುಗಾವಿ ಬಳಿ ಚಿರತೆಗಳ ಓಡಾಟ ; ದೃಶ್ಯ ಕ್ಯಾಮರಾದಲ್ಲಿ ಸೆರೆ…

ಶಿರಸಿ : ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಸುಗಾವಿಯ ಸುತ್ತಮುತ್ತ ಚಿರತೆಗಳು ಓಡಾಡುತ್ತಿವೆ ಎಂದು ಸ್ಥಳೀಯರು ಹೇಳಿದ್ದಾರೆ. ಮೊದಲೆಲ್ಲ ಆಗೊಮ್ಮೆ ಈಗೊಮ್ಮೆ ಕಾಣಿಸಿಕೊಳ್ಳುತ್ತಿದ್ದ ಚಿರತೆಗಳು ಈಗ ಪದೇಪದೇ ಕಾಣಿಸಿಕೊಳ್ಳುತ್ತಿವೆ ಎಂದು ಅವರು ತಿಳಿಸಿದ್ದಾರೆ. ಗುರುವಾರ ಸುಗಾವಿ ಸಮೀಪದ ಓಣೀಕೇರಿ ಹೈಸ್ಕೂಲ್‌ ಬಳಿ ಹಾಗೂ ಸಮೀಪದ ಬಿದ್ರಳ್ಳಿ ಸೇತುವೆ ಹಾಗೂ ದೇವಸ್ಥಾನದ ಬಳಿ ಒಂದೇ ದಿನ … Continued

ಶಿರಸಿ : ಸುಗಾವಿ ಶಾಲೆ ʼಶತಮಾನೋತ್ಸವ ಸಂಭ್ರಮʼ ಉದ್ಘಾಟನೆ-ವಿದ್ಯಾರ್ಥಿಗಳಿದ್ದರೆ ಶಾಲೆಯಲ್ಲಿ ಇಂಗ್ಲಿಷ್‌ ಮೀಡಿಯಂಗೆ ಅನುಮತಿ ನೀಡಲು ಸಿದ್ಧ ಎಂದ ಡಿಡಿಪಿಐ

ಶಿರಸಿ : 114 ವರ್ಷಗಳ ಹಿಂದೆ ಸ್ಥಾಪನೆಯಾಗಿರುವ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಸುಗಾವಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶತಮಾನ ಸಂಭ್ರಮ ಕಾರ್ಯಕ್ರಮಕ್ಕೆ ಭಾನುವಾರ ಫೆ.25 ರಂದು ಬೆಳಿಗ್ಗೆ ಚಾಲನೆ ನೀಡಲಾಯಿತು. ಶಾಲೆಯ ನೂತನ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮವನ್ನು ಶಿರಸಿ ಶೈಕ್ಷಣಿಕ ಜಿಲ್ಲೆಯ ಡಿಡಿಪಿಐ ಬಸವರಾಜ ಪಿ. ಅವರು ಉದ್ಘಾಟಿಸಿದರು. ನಂತರ ಮಾತನಾಡಿದ … Continued

ಸುಗಾವಿ ಶಾಲೆಯ ʼಶತಮಾನೋತ್ಸವ ಸಂಭ್ರಮʼ ಕಾರ್ಯಕ್ರಮ ಭಾನುವಾರ ಉದ್ಘಾಟನೆ : ವಿವಿಧ ಕಾರ್ಯಕ್ರಮ ಆಯೋಜನೆ

ಶಿರಸಿ : ಅಪ್ಪಟ ಹಳ್ಳಿಯ ಪ್ರದೇಶದಲ್ಲಿ 114 ವರ್ಷಗಳ ಹಿಂದೆ ಸ್ಥಾಪನೆಯಾಗಿ ಸಾವಿರಾರು ವಿದ್ಯಾರ್ಥಿಗಳಿಗೆ ಕಲಿಕೆಯ ಮೂಲಕ ಭವಿಷ್ಯದ ಜೀವನಕ್ಕೆ ದಾರಿ ತೋರಿಸಿದ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ತಾಲೂಕಿನ ಸುಗಾವಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶತಮಾನ ಸಂಭ್ರಮ ಕಾರ್ಯಕ್ರಮವನ್ನು ಫೆ.25 ರ ಬೆಳಿಗ್ಗೆ 10 ಕ್ಕೆ ಶಾಲಾ ನೂತನ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ. … Continued

ಸುಗಾವಿ: ಕಾಡುನಾಯಿಗಳಿಂದ ತಪ್ಪಿಸಿಕೊಂಡು ಗ್ರಾಮದೊಳಕ್ಕೆ ಬಂದ ಜಿಂಕೆ ಮರಿ ರಕ್ಷಣೆ

ಶಿರಸಿ: ತಾಲೂಕಿನ ಸುಗಾವಿ ಗ್ರಾಮದಲ್ಲಿ ಕಾಡು ನಾಯಿಗಳ ದಾಳಿಯಿಂದ ತಪ್ಪಿಸಿಕೊಂಡ ತನ್ನನ್ನು ರಕ್ಷಿಸಿಕೊಳ್ಳಲು ಗ್ರಾಮದೊಳಕ್ಕೆ ಬಂದ ಜಿಂಕೆ ಮರಿಯನ್ನು ರಕ್ಷಿಸಿ ಪುನಃ ಕಾಡಿಗೆ ಬಿಡಲಾಗಿದೆ. ಕಾಡುನಾಯಿಗಳ (ಸೀಳುನಾಯಿಗಳು) ದಾಳಿಯಿಂದ ಜೀವತಪ್ಪಿಸಿಕೊಂಡು ಬಂದ ಜಿಂಕೆ ಮರಿ ಗ್ರಾಮದೊಳಕ್ಕೆ ಬಂದಿದೆ. ಜಿಂಕೆಮರಿ ಕಂಡ ನಾಯಿಗಳು  ಬೆನ್ನಟ್ಟಿವೆ. ಇದನ್ನು ಕಂಡ ಗ್ರಾಮಸ್ಥರು ಜಿಂಕೆಮರಿಯನ್ನು ನಾಯಿಗಳಿಂದ ರಕ್ಷಿಸಿದ್ದಾರೆ. ಸಂಜೆ 5ರ ಸುಮಾರಿಗೆ … Continued