ಉಡುಪಿ : ರಸ್ತೆಯಲ್ಲೇ ಪೆಟ್ರೋಲ್‌ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಯುವಕ

ಉಡುಪಿ : ಯುವಕನೊಬ್ಬ ಮೈಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಉಡುಪಿಯ ಜನನಿಬಿಡ ಕಲ್ಸಂಕ ವೃತ್ತದ ಬಳಿ ಭಾನುವಾರ ಸಂಜೆ ಸಂಭವಿಸಿದೆ ಎಂದು ವರದಿಯಾಗಿದೆ. ಯುವಕನನ್ನು ತಕ್ಷಣವೇ ರಕ್ಷಿಸಲಾಗಿದೆ. ಬಾಟಲಿಯಲ್ಲಿ ಪೆಟ್ರೋಲ್ ಹಿಡಿದು ಬಂದಿದ್ದ ವ್ಯಕ್ತಿ, ಕಲ್ಸಂಕ ವೃತ್ತದ ಬಳಿ ಕಿರುಚಾಡುತ್ತ ಮೈಮೇಲೆ ಪೆಟ್ರೋಲ್ ಸುರಿದುಕೊಳ್ಳಲು ಯತ್ನಿಸಿದ್ದಾನೆ. ಈ ವೇಳೆ ಅಲ್ಲಿಯೇ … Continued

ಶೂಟ್ ಮಾಡಿಕೊಂಡು ಪಂಜಾಬ್‌ ಮಾಜಿ ಐಪಿಎಸ್ ಅಧಿಕಾರಿ ಆತ್ಮಹತ್ಯೆಗೆ ಯತ್ನ : ಸ್ಥಿತಿ ಗಂಭೀರ

ಪಟಿಯಾಲ: ಪಂಜಾಬ್ ಕೆಡರ್‌ನ ನಿವೃತ್ತ ಐಪಿಎಸ್ ಅಧಿಕಾರಿ ಅಮರ ಸಿಂಗ್ ಚಾಹಲ್ ಅವರು ಸೋಮವಾರ ಪಟಿಯಾಲದಲ್ಲಿರುವ ತಮ್ಮ ನಿವಾಸದಲ್ಲಿ ತಾವೇ ಗುಂಡು ಹಾರಿಸಿಕೊಳ್ಳುವ ಮೂಲಕ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ತೀವ್ರವಾಗಿ ಗಾಯಗೊಂಡಿರುವ ಅವರನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸದ್ಯ ಅವರ ಸ್ಥಿತಿ ಚಿಂತಾಜನಕವಾಗಿದೆ. ಆನ್‌ಲೈನ್ ವಂಚನೆಯೇ ಕಾರಣ? ಘಟನೆಗೆ ನಿಖರವಾದ ಕಾರಣಗಳು ಇನ್ನೂ … Continued

ಬೆಂಗಳೂರು : ಒಂದೇ ಕುಟುಂಬದ ನಾಲ್ವರಿಂದ ಆತ್ಮಹತ್ಯೆಗೆ ಯತ್ನ, ಮೂವರು ಸಾವು

ಬೆಂಗಳೂರು : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಗೋನಕನಹಳ್ಳಿ ಗ್ರಾಮದಲ್ಲಿ ಆಘಾತಕಾರಿ ಘಟನೆ ನಡೆದ ವರದಿಯಾಗಿದೆ. ಸಾಲಬಾಧೆ ತಾಳಲಾರದೇ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನಿಸಿದ್ದು, ಈ ಪೈಕಿ ಮೂವರು ಸಾವಿಗೀಡಾದ ಘಟನೆ ಹೊಸಕೋಟೆ (Hosakote) ತಾಲೂಕಿನ ಗೊಣಕನಹಳ್ಳಿಯಲ್ಲಿ ಗ್ರಾಮದಲ್ಲಿ ನಡೆದಿದೆ. ಈ ಹಿಂದೆ ಪತಿ ಅಪಘಾತದಲ್ಲಿ ಗಾಯಗೊಂಡಿದ್ದ ಕಾರಣ ಚಿಕಿತ್ಸೆಗಾಗಿ ಕುಟುಂಬ ಸಾಲ … Continued

ವಿಧಾನಸೌಧದ ಮುಂದೆ ವಿಷ ಸೇವಿಸಲು ಯತ್ನಿಸಿದ ಯುವಕ

ಬೆಂಗಳೂರು: ವಿಧಾನಸೌಧದ ಮುಂದೆಯೇ ಯುವಕನೊಬ್ಬ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಭದ್ತರಾ ಸಿಬ್ಬಂದಿ ಆತನನ್ನು ವಶಕ್ಕೆ ಪಡೆದಿದ್ದಾರೆ ಎಂದು ವರದಿಯಾಗಿದೆ. ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ಮೂಲದ ಸಂಜಯ ಎಂಬಾತ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದವ ಎಂದು ಹೇಳಲಾಗಿದೆ. ಕೂಡಲೇ ವಿಧಾನಸೌಧ ಠಾಣೆಯ ಪೊಲೀಸರು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಪ್ಲಾಸ್ಟಿಕ್ ಕವರ್‌ನಲ್ಲಿ ವಿಷದ ಸಣ್ಣ ಬಾಟಲು ಹಾಗೂ ಕೆಲವು … Continued

ಹಂಪಿ ಪ್ರವಾಸಕ್ಕೆ ಬಂದಿದ್ದ ಒಂದೇ ಕುಟುಂಬದ ನಾಲ್ವರಿಂದ ಆತ್ಮಹತ್ಯೆಗೆ ಯತ್ನ; ಒಬ್ಬರ ಸಾವು

ಹೊಸಪೇಟೆ: ಹಂಪಿಗೆ ಪ್ರವಾಸ ಬಂದಿದ್ದ ಕೊಟ್ಟೂರಿನ ಕುಟುಂಬವೊಂದರ ನಾಲ್ವರು ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದ್ದು, ಅವರಲ್ಲಿ ಓರ್ವರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಚಂದ್ರಯ್ಯ ಮತ್ತು ಅವರ ಕುಟುಂಬದ ಸದಸ್ಯರು ಹಂಪಿ ಕಮಲಾಪುರ ಸಮೀಪದ ಸರಸ್ವತಿ ದೇವಸ್ಥಾನದ ಬಳಿ ಬುಧವಾರ ವಿಷ ಸೇವಿಸಿದ್ದು, ಇವರಲ್ಲಿ ಚಂದ್ರಯ್ಯ (43) ಎಂಬುವವರು ಮೃತಪಟ್ಟಿದ್ದಾರೆ. ಪತ್ನಿ ಸೌಮ್ಯ (38), … Continued

ಖ್ಯಾತ ಹಿನ್ನೆಲೆ ಗಾಯಕಿ ಕಲ್ಪನಾ ರಾಘವೇಂದ್ರ ಆತ್ಮಹತ್ಯೆಗೆ ಯತ್ನ; ಆಸ್ಪತ್ರೆಗೆ ದಾಖಲು

ಹೈದರಾಬಾದ್‌ : ದಕ್ಷಿಣ ಭಾರತದ ಖ್ಯಾತ ಹಿನ್ನೆಲೆ ಗಾಯಕಿ ಹಾಗೂ ಗಾಯಕ ಟಿ.ಎಸ್.ರಾಘವೇಂದ್ರ ಅವರ ಪುತ್ರಿ ಕಲ್ಪನಾ ರಾಘವೇಂದ್ರ ಅವರು ಹೈದರಾಬಾದ್‌ನ ತಮ್ಮ ಮನೆಯಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ಕಲ್ಪನಾ ರಾಘವೇಂದ್ರ ಅವರು ಆತ್ಮಹತ್ಯೆಗೆ ಯತ್ನಿಸಿದ ಶಂಕೆ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ. ‘ವರದಿಗಳ ಪ್ರಕಾರ, ಆಕೆ ಹೈದರಾಬಾದ್‌ನಲ್ಲಿರುವ ತಮ್ಮ ಮನೆಯಲ್ಲಿ ಪ್ರಜ್ಞಾಹೀನ … Continued

ಸಂಸತ್‌ ಭವನದ ಬಳಿ ಬೆಂಕಿ ಹಚ್ಚಿಕೊಂಡ ವ್ಯಕ್ತಿ ; ಸ್ಥಿತಿ ಗಂಭೀರ

ನವದೆಹಲಿ: ದೆಹಲಿಯ ಸಂಸತ್ ಭವನದ (Parliament Building) ಬಳಿ ವ್ಯಕ್ತಿಯೊಬ್ಬ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ ಎಂದು ವರದಿಯಾಗಿದೆ. ತಕ್ಷಣವೇ ರೈಲ್ವೆ ಪೊಲೀಸ್, ಅಲ್ಲಿದ್ದವರು ಬೆಂಕಿಯನ್ನು ನಂದಿಸಿದ್ದಾರೆ. ಬೆಂಕಿ ಹಚ್ಚಿಕೊಂಡಿದ್ದ ವ್ಯಕ್ತಿಯನ್ನು ರಾಮಮನೋಹರ ಲೋಹಿಯಾ ಆಸ್ಪತ್ರೆಗೆ ದಾಖಲಿಸಲಾಗಿದ್ದು ಶೇ.95 ರಷ್ಟು ದೇಹ ಸುಟ್ಟುಹೋಗಿದೆ. ಉತ್ತರ ಪ್ರದೇಶದ ಬಾಗ್‌ಪತ್‌ನ ಜಿತೇಂದ್ರ ಎಂದು ಗುರುತಿಸಲಾದ ವ್ಯಕ್ತಿ, … Continued

ಡ್ರೋನ್ ಟೆಕ್ನಿಷಿಯನ್ ಆತ್ಮಹತ್ಯೆ ಯತ್ನ ; ಸಚಿವ ಜಮೀರ್ ಅಹ್ಮದ್‌ ಪುತ್ರನ ವಿರುದ್ಧ ದೂರು

ಬೆಂಗಳೂರು : ವಸತಿ ಸಚಿವ ಜಮೀರ್ ಅಹ್ಮದ್ ಪುತ್ರ ಹಾಗೂ ಚಿತ್ರನಟ ಜೈದ್ ಖಾನ್ ವಿರುದ್ಧ ಮಾಗಡಿ ರಸ್ತೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ವರದಿ ಪ್ರಕಾರ, ಚಿತ್ರತಂಡದ ಡ್ರೋನ್ ಟೆಕ್ನಿಷಿಯನ್ ಸಂತೋಷ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ನಂತರ ಅವರ ತಾಯಿ ಸ್ಥಳೀಯರ ನೆರವಿನಿಂದ ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದರು. ಇದಕ್ಕೆ ಕಲ್ಟ್ ಚಿತ್ರದ ನಾಯಕ ಜೈದ್ ಖಾನ್ … Continued

ನಿಖಿಲ್‌ ಕುಮಾರಸ್ವಾಮಿ ಸೋಲಿನಿಂದ ಮನನೊಂದು ಆತ್ಮಹತ್ಯೆಗೆ ಯತ್ನಿಸಿದ ಅಭಿಮಾನಿ

ರಾಮನಗರ: ಚನ್ನಪಟ್ಟಣ ಉಪಚುನಾವಣೆಯಲ್ಲಿ (Channapatna Bypoll) ಜೆಡಿಎಸ್‌ ಅಭ್ಯರ್ಥಿ ನಿಖಿಲ್‌ ಕುಮಾರಸ್ವಾಮಿ ಅವರ ಸೋಲಿನಿಂದ ಮನನೊಂದು ಅಭಿಮಾನಿಯೊಬ್ಬ ಆತ್ಮಹತ್ಯೆಗೆ ಯತ್ನಿಸಿದ ಘಟನೆ ವರದಿಯಾಗಿದೆ. ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಕೂಡ್ಲೂರು ಸಮೀಪ ಶ್ರೀರಾಮಪುರದಲ್ಲಿ ಈ ಘಟನೆ ನಡೆದಿದ್ದು, ನಿಖಿಲ್‌ ಅಭಿಮಾನಿ ಎಂದು ಹೇಳಿಕೊಂಡ ವ್ಯಕ್ತಿಯೊಬ್ಬ ಪತ್ರ ಬರೆದಿಟ್ಟು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ ಎಂದು ಹೇಳಲಾಗಿದೆ. ಈತನನ್ನು … Continued

ಬೆಂಗಳೂರು | ಇಬ್ಬರು ಪುಟ್ಟ ಮಕ್ಕಳ ಉಸಿರುಗಟ್ಟಿಸಿ ಕೊಲೆ ; ಆತ್ಮಹತ್ಯೆಗೆ ಯತ್ನಿಸಿದ ತಾಯಿ…! ಆರೋಪ-ಪ್ರತ್ಯಾರೋಪ

ಬೆಂಗಳೂರು: ಇಬ್ಬರು ಪುಟ್ಟ ಮಕ್ಕಳನ್ನು ಉಸಿರುಗಟ್ಟಿಸಿ ಸಾಯಿಸಲಾಗಿದೆ. ತಾಯಿ ಆತ್ಮಹತ್ಯೆಗೆ ಯತ್ನಿಸಿದ ಆಘಾತಕಾರಿ ಘಟನೆ ನಗರದ ಸುಬ್ರಮಣ್ಯಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ ಎಂದು ವರದಿಯಾಗಿದೆ. ಮೃತ ಮಕ್ಕಳನ್ನು ಶುಭಂ ಸಾಹು (7), ಶಿಯಾ ಸಾಹು (3) ಎಂದು ಗುರುತಿಸಲಾಗಿದೆ. ಆತ್ಮಹತ್ಯೆಗೆ ಯತ್ನಿಸಿದ ತಾಯಿಯನ್ನು ಮಮತಾ ಸಾಹು ಎಂದು ಗುರುತಿಸಲಾಗಿದೆ. ಜಾರ್ಖಂಡ ಮೂಲದ ಮಮತಾ ದಂಪತಿ … Continued