ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿಯರ ಸರಣಿ ಸಾವು : ಲೋಕಾಯುಕ್ತದಿಂದ ಸ್ವಯಂಪ್ರೇರಿತ ಪ್ರಕರಣ ದಾಖಲು
ಬೆಂಗಳೂರು: ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿಯರ ಸರಣಿ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸುವಂತೆ ಲೋಕಾಯುಕ್ತ ಮುಖ್ಯ ನ್ಯಾಯಮೂರ್ತಿ ಬಿ.ಎಸ್.ಪಾಟೀಲ ಸೂಚಿಸಿದ್ದಾರೆ. ಲೋಕಾಯುಕ್ತ ಸಂಸ್ಥೆಯ ಪೊಲೀಸ್ ಅಧೀಕ್ಷಕರು, ಪೊಲೀಸ್ ಉಪಾಧೀಕ್ಷಕರು ಹಾಗೂ ಪೊಲೀಸ್ ನಿರೀಕ್ಷಕರಿಗೆ ಪ್ರತ್ಯೇಖವಾಗಿ ಸರ್ಚ್ ವಾರೆಂಟ್ಗಳನ್ನು ನೀಡಿ, ಬಳ್ಳಾರಿ ಜಿಲ್ಲಾಸ್ಪತ್ರೆ ಹಾಗೂ ಔಷಧ ಉಗ್ರಾಣವನ್ನು ತಪಾಸಣೆ ಮಾಡಿ ವರದಿ ಸಲ್ಲಿಸುವಂತೆ ಸೂಚಿಸಲಾಗಿದೆ. … Continued