ನ್ಯಾಯಾಧೀಶರ ಶಿಫಾರಸುಗಳನ್ನು ತಡೆಹಿಡಿಯುತ್ತಿರುವ ಕೇಂದ್ರದ ಬಗ್ಗೆ ಸುಪ್ರೀಂ ಕೋರ್ಟ್ ಕೊಲಿಜಿಯಂ ಕಳವಳ

ನವದೆಹಲಿ : ನ್ಯಾಯಮೂರ್ತಿಗಳ ಹೆಸರನ್ನು ತಡೆಹಿಡಿಯುವುದು ಅಭ್ಯರ್ಥಿಗಳ ಹಿರಿತನಕ್ಕೆ ಧಕ್ಕೆ ತರುತ್ತದೆ ಎಂದು ಹೇಳಿರುವ ಸುಪ್ರೀಂ ಕೋರ್ಟ್ ಕೊಲಿಜಿಯಂ, ಬಾಕಿ ಉಳಿದಿರುವ ನ್ಯಾಯಮೂರ್ತಿಗಳ ನೇಮಕಾತಿಗಳನ್ನು ತ್ವರಿತಗೊಳಿಸಬೇಕು ಎಂದು ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ ನೇತೃತ್ವದ ಕೊಲಿಜಿಯಂ, ಮದ್ರಾಸ್ ಹೈಕೋರ್ಟ್‌ನ ನ್ಯಾಯಮೂರ್ತಿಗಳಾಗಿ ನೇಮಕ ಮಾಡಲು ನಾಲ್ಕು ಜಿಲ್ಲಾ ನ್ಯಾಯಾಧೀಶರ ಹೆಸರನ್ನು ಶಿಫಾರಸು ಮಾಡಿದೆ. … Continued