ಶಾಸಕ ವಿನಯ ಕುಲಕರ್ಣಿಗೆ ಸಂಕಷ್ಟ ; ಯೋಗೇಶ ಗೌಡ ಕೊಲೆ ಪ್ರಕರಣದಲ್ಲಿ ಜಾಮೀನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್‌

ನವದೆಹಲಿ: ಬಿಜೆಪಿ ಮುಖಂಡ ಯೋಗೇಶ ಗೌಡ ಹತ್ಯೆ ಪ್ರಕರಣದಲ್ಲಿ (yogesh gowda Murder Case) ಬಂಧಿತರಾಗಿ ಜಾಮೀನಿನ ಮೇಲೆ ಹೊರಗಿರುವ ಧಾರವಾಡ ಕ್ಷೇತ್ರದ ಕಾಂಗ್ರೆಸ್ ಶಾಸಕ ವಿನಯ ಕುಲಕರ್ಣಿ(Vinay Kulkarni) ಅವರಿಗೆ ಮತ್ತೆ ಸಂಕಷ್ಟ ಎದುರಾಗಿದೆ. ಸಿಬಿಐ ಮನವಿಯನ್ನು ಪುರಸ್ಕರಿಸಿರುವ ಸುಪ್ರೀಂಕೋರ್ಟ್​ ವಿನಯ ಕುಲಕರ್ಣಿ ಅವರಿಗೆ ನೀಡಲಾಗಿದ್ದ ಜಾಮೀನನ್ನು ರದ್ದುಗೊಳಿಸಿದೆ. ಹಾಗೂ ಒಂದು ವಾರದಲ್ಲಿ ಕೋರ್ಟ್ … Continued

ಪಶ್ಚಿಮ ಬಂಗಾಳ | 25,000 ಶಿಕ್ಷಕರ ನೇಮಕಾತಿ ರದ್ದು ; ಹೈಕೋರ್ಟ್‌ ಆದೇಶ ಎತ್ತಿ ಹಿಡಿದ ಸುಪ್ರೀಂಕೋರ್ಟ್ ; ಮಮತಾ ಸರ್ಕಾರಕ್ಕೆ ತೀವ್ರ ಮುಖಭಂಗ

ನವದೆಹಲಿ: ಪಶ್ಚಿಮ ಬಂಗಾಳದ ಮಮತಾ ಬ್ಯಾನರ್ಜಿ ಸರ್ಕಾರಕ್ಕೆ ಭಾರೀ ಮುಖಭಂಗವಾಗಿದ್ದು, ನೇಮಕಾತಿಯಲ್ಲಿ ನಡೆದ ಭ್ರಷ್ಟಾಚಾರ ಹಗರಣದಲ್ಲಿ ಶಾಲಾ ಉದ್ಯೋಗಗಳಿಗೆ ಸಂಬಂಧಿಸಿದಂತೆ 2016 ರಲ್ಲಿ ಪಶ್ಚಿಮ ಬಂಗಾಳ ಶಾಲಾ ಸೇವಾ ಆಯೋಗ (ಡಬ್ಲ್ಯುಬಿಎಸ್‌ಎಸ್‌ಸಿ) 25,000 ಕ್ಕೂ ಹೆಚ್ಚು ಬೋಧಕ ಮತ್ತು ಬೋಧಕೇತರ ಸಿಬ್ಬಂದಿಯ ನೇಮಕಾತಿಗಳನ್ನು ರದ್ದುಗೊಳಿಸಿದ್ದ ಕಲ್ಕತ್ತಾ ಹೈಕೋರ್ಟ್‌ನ ತೀರ್ಪನ್ನು ಸುಪ್ರೀಂ ಕೋರ್ಟ್ ಗುರುವಾರ ಎತ್ತಿಹಿಡಿದಿದೆ. ಸು … Continued

ದೆಹಲಿ ಹೈಕೋರ್ಟ್‌ನ ನ್ಯಾಯಮೂರ್ತಿ ವರ್ಮಾ ನಿವಾಸದಲ್ಲಿ ನಗದು ಪತ್ತೆ ಪ್ರಕರಣ: ವೀಡಿಯೊ ಬಹಿರಂಗ

ನವದೆಹಲಿ: ದೆಹಲಿ ಹೈಕೋರ್ಟ್‌ನ ನ್ಯಾಯಮೂರ್ತಿ ಯಶವಂತ ವರ್ಮಾ ಅವರ ಮನೆಯಲ್ಲಿ ನಗದು ಹಣ ಪತ್ತೆಯಾದ ಆರೋಪದ ಕುರಿತು ಮೂರು ಚಿತ್ರಗಳು ಮತ್ತು ವೀಡಿಯೊ ಸೇರಿದಂತೆ ವರದಿಯನ್ನು ಸುಪ್ರೀಂ ಕೋರ್ಟ್ ಶನಿವಾರ ತಡರಾತ್ರಿ ಸಾರ್ವಜನಿಕಗೊಳಿಸಿದೆ. ಭಾರತದ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರು ತನಿಖೆ ನಡೆಸಲು ಆಂತರಿಕ ಸಮಿತಿಯನ್ನು ರಚಿಸಿದ್ದಾರೆ. ಸುಪ್ರೀಂ ಕೋರ್ಟ್ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಲಾದ … Continued

ನಗದು ಪತ್ತೆ ಪ್ರಕರಣ: ನ್ಯಾಯಮೂರ್ತಿ ಯಶವಂತ ವರ್ಮಾ ವಿರುದ್ಧದ ಆರೋಪಗಳ ತನಿಖೆಗೆ ಸಮಿತಿ ರಚಿಸಿದ ಸುಪ್ರೀಂ ಕೋರ್ಟ್‌

ನವದೆಹಲಿ: ದೆಹಲಿ ಹೈಕೋರ್ಟ್ ನ್ಯಾಯಮೂರ್ತಿ ಯಶವಂತ ವರ್ಮಾ ಅವರ ಮನೆಯಲ್ಲಿ ಅಪಾರ ಪ್ರಮಾಣದ ಹಣದ ರಾಶಿ ಪತ್ತೆಯಾಗಿದೆ ಎಂಬ ಆರೋಪವನ್ನು ಪರಿಶೀಲಿಸಲು ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರು ಮೂವರು ಸದಸ್ಯರ ಸಮಿತಿಯನ್ನು ರಚಿಸಿದ್ದಾರೆ. ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಶೀಲ್ ನಾಗು, ಹಿಮಾಚಲ ಪ್ರದೇಶ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ … Continued

ಇವಿಎಂ ಡೇಟಾಗಳನ್ನು ಅಳಿಸಬೇಡಿ: ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್‌ ಸೂಚನೆ

ನವದೆಹಲಿ: ಇವಿಎಂ(EVM) ದತ್ತಾಂಶಗಳನ್ನು‌( ಅಳಿಸಬೇಡಿ ಎಂದು ಸುಪ್ರೀಂ ಕೋರ್ಟ್ (Supreme Court) ಚುನಾವಣಾ ಆಯೋಗಕ್ಕೆ ಮಂಗಳವಾರ(ಫೆ.11) ಸೂಚನೆ ನೀಡಿದೆ. ಮತ ಎಣಿಕೆ ಮುಗಿದ ನಂತರವೂ ಎಲೆಕ್ಟ್ರಾನಿಕ್ ಮತ ಯಂತ್ರಗಳ ದತ್ತಾಂಶವನ್ನು ಅಳಿಸಬಾರದು ಎಂದು ಕೋರಿ ಸಲ್ಲಿಸಲಾದ ಅರ್ಜಿಗೆ ಪ್ರತಿಕ್ರಿಯೆಯಾಗಿ ಸುಪ್ರೀಂ ಕೋರ್ಟ್ ಈ ಸೂಚನೆ ನೀಡಿದ್ದು, ಸದ್ಯಕ್ಕೆ ಇವಿಎಂನಿಂದ ಯಾವುದೇ ದತ್ತಾಂಶ ಅಳಿಸಬೇಡಿ ಅಥವಾ ಯಾವುದೇ … Continued

ಸಲಿಂಗ ವಿವಾಹಕ್ಕೆ ಕಾನೂನುಬದ್ಧತೆ ತಿರಸ್ಕರಿಸಿದ ಆದೇಶ ಮರುಪರಿಶೀಲಿಸಲು ನಿರಾಕರಿಸಿದ ಸುಪ್ರೀಂ ಕೋರ್ಟ್

ನವದೆಹಲಿ: ಸಲಿಂಗ ವಿವಾಹಕ್ಕೆ ಕಾನೂನು ಅನುಮತಿ ನೀಡಲು ನಿರಾಕರಿಸಿದ ಅಕ್ಟೋಬರ್ 2023 ರ ತೀರ್ಪನ್ನು ಮರುಪರಿಶೀಲಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ಗುರುವಾರ ವಜಾಗೊಳಿಸಿದೆ. ಈ ಹಿಂದೆ ಅರ್ಜಿಗಳ ಮುಕ್ತ ವಿಚಾರಣೆಯನ್ನು ನಿರಾಕರಿಸಿದ ನ್ಯಾಯಮೂರ್ತಿಗಳಾದ ಬಿ.ಆರ್.ಗವಾಯಿ, ಸೂರ್ಯಕಾಂತ, ಬಿ.ವಿ.ನಾಗರತ್ನ, ಪಿ.ಎಸ್.ನರಸಿಂಹ ಮತ್ತು ದೀಪಂಕರ ದತ್ತ ಅವರಿದ್ದ ಪೀಠವು ಚೇಂಬರ್‌ಗಳಲ್ಲಿ ಅರ್ಜಿಗಳನ್ನು ಪರಿಗಣಿಸಿ ಹಿಂದಿನ ತೀರ್ಪಿನಲ್ಲಿ … Continued

ವೈದ್ಯಕೀಯ ಕಾರಣಗಳಿಗೆ ಅಸಾರಾಂ ಬಾಪುಗೆ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ ಕೋರ್ಟ್

ನವದೆಹಲಿ : ವೈದ್ಯಕೀಯ ಕಾರಣಗಳಿಗಾಗಿ ಸ್ವಯಂ ಘೋಷಿತ ದೇವಮಾನವ ಮತ್ತು ಅತ್ಯಾಚಾರ ಅಪರಾಧಿ ಅಸಾರಾಂ ಬಾಪುಗೆ ಸುಪ್ರೀಂ ಕೋರ್ಟ್ ಮಂಗಳವಾರ ಮಧ್ಯಂತರ ಜಾಮೀನು ನೀಡಿದೆ. ನ್ಯಾಯಮೂರ್ತಿ ಎಂ.ಎಂ. ಸುಂದ್ರೇಶ ಮತ್ತು ನ್ಯಾಯಮೂರ್ತಿ ರಾಜೇಶ ಬಿಂದಾಲ್ ಅವರಿದ್ದ ಪೀಠವು ಮಾರ್ಚ್ 31, 2025 ರ ವರೆಗೆ ಅಸಾರಾಂ ಬಾಪುಗೆ ಮಧ್ಯಂತರ ಜಾಮೀನು ನೀಡಿದೆ. ತಮ್ಮ ಜೈಲು ಶಿಕ್ಷೆಯನ್ನು … Continued

ಸಂಭಾಲ್ ಜಾಮಾ ಮಸೀದಿ ಸರ್ವೆ ಕುರಿತ ಟ್ರಯಲ್ ಕೋರ್ಟ್ ವಿಚಾರಣೆಗೆ ಸುಪ್ರೀಂ ಕೋರ್ಟ್‌ ತಡೆ

ನವದೆಹಲಿ: ಉತ್ತರ ಪ್ರದೇಶದ ಸಂಭಾಲ್ ನ ಜಾಮಾ ಮಸೀದಿ ಸರ್ವೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಸೀದಿ ಸಮೀಕ್ಷೆ ಕುರಿತ ಟ್ರಯಲ್ ಕೋರ್ಟ್ ವಿಚಾರಣೆಗೆ ‘ಸುಪ್ರೀಂ ಕೋರ್ಟ್’ ಶುಕ್ರವಾರ ತಡೆ ನೀಡಿದ್ದು, ಶಾಂತಿ ಕಾಪಾಡುವಂತೆ ಉತ್ತರ ಪ್ರದೇಶ ಸರ್ಕಾರಕ್ಕೆ ಶುಕ್ರವಾರ ಸೂಚನೆ ನೀಡಿದೆ. ವಿಚಾರಣಾ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಅಲಹಾಬಾದ್ ಹೈಕೋರ್ಟ್‌ ಮೊರೆ ಹೋಗುವಂತೆ ಉತ್ತರ ಪ್ರದೇಶದ ಸಂಭಾಲ್‌ನಲ್ಲಿರುವ … Continued

ಸರ್ಕಾರ ಎಲ್ಲ ಖಾಸಗಿ ಆಸ್ತಿಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ : ಖಾಸಗಿ ಆಸ್ತಿಯ ಮೇಲೆ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

ಬೆಂಗಳೂರು : ಸರ್ವರ ಒಳಿತಿಗಾಗಿ ವಿತರಿಸಲು ಖಾಸಗಿ ಒಡೆತನದ ಎಲ್ಲ ಸಂಪನ್ಮೂಲಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಂವಿಧಾನದ ಅಡಿಯಲ್ಲಿ ರಾಜ್ಯಗಳಿಗೆ ಅಧಿಕಾರವಿಲ್ಲ. ಸಂವಿಧಾನದ ಪರಿಚ್ಛೇದ 39(ಬಿ) ಅಡಿಯಲ್ಲಿ ಎಲ್ಲಾ ಖಾಸಗಿ ಆಸ್ತಿಗಳನ್ನು “ಸಮುದಾಯದ ಭೌತಿಕ ಸಂಪನ್ಮೂಲಗಳು” ಎಂದು ಪರಿಗಣಿಸಲಾಗುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಮಹತ್ವದ ತೀರ್ಪಿನಲ್ಲಿ ಹೇಳಿದೆ ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ ನೇತೃತ್ವದ ಒಂಬತ್ತು … Continued

ಭಾರತದ ಮುಂದಿನ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾ. ಸಂಜೀವ ಖನ್ನಾ ನೇಮಕ

ನವದೆಹಲಿ: ನ್ಯಾಯಮೂರ್ತಿ ಸಂಜೀವ  ಖನ್ನಾ ಅವರನ್ನು ಭಾರತದ ಮುಂದಿನ ಮುಖ್ಯ ನ್ಯಾಯಮೂರ್ತಿಯನ್ನಾಗಿ ನೇಮಿಸಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಗುರುವಾರ ಅಧಿಸೂಚನೆ ಹೊರಡಿಸಿದ್ದಾರೆ. ಸಿಜೆಐ ಚಂದ್ರಚೂಡ್‌ ಅವರು ಶಿಫಾರಸ್ಸು ಮಾಡಿದ್ದ ನ್ಯಾ. ಸಂಜೀವ್‌ ಖನ್ನಾ ಅವರ ಹೆಸರನ್ನು ಕೇಂದ್ರ ಸರ್ಕಾರವು ಅನುಮೋದಿಸಿದ ನಂತರ ರಾಷ್ಟ್ರಪತಿ ಭವನದಿಂದ ಅಧಿಕೃತವಾಗಿ ನೇಮಕಾತಿ ಅಧಿಸೂಚನೆ ಹೊರಬಿದ್ದಿದೆ. ಕಾನೂನು ಮತ್ತು ನ್ಯಾಯ … Continued