ಚುನಾವಣಾ ಬಾಂಡ್‌ ಸಂಖ್ಯೆಗಳನ್ನು ಬಹಿರಂಗಪಡಿಸದ ಎಸ್‌ ಬಿಐ : ಸುಪ್ರೀಂ ಕೋರ್ಟ್‌ ನೋಟಿಸ್‌

ನವದೆಹಲಿ: ಚುನಾವಣಾ ಬಾಂಡ್‌ಗಳನ್ನು ಗುರುತಿಸಲು ಸಹಾಯ ಮಾಡುವ ಬಾಂಡ್‌ಗಳ ಸಂಖ್ಯೆಗಳನ್ನು ಬಹಿರಂಗಪಡಿಸದ ಹಿನ್ನೆಲೆಯಲ್ಲಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ(ಎಸ್‌ಬಿಐ)ಕ್ಕೆ ಈ ಬಗ್ಗೆ ಪ್ರತಿಕ್ರಿಯಿಸುವಂತೆ ಸೂಚಿಸಿ ಸುಪ್ರೀಂ ಕೋರ್ಟ್‌ ಶುಕ್ರವಾರ ನೋಟಿಸ್‌ ಜಾರಿ ಮಾಡಿದೆ. ಚುನಾವಣಾ ಬಾಂಡ್‌ಗಳಿಗೆ ಸಂಬಂಧಿಸಿದ ಎಲ್ಲಾ ವಿವರಗಳನ್ನು ಬಹಿರಂಗಪಡಿಸುವಂತೆ ಮಾರ್ಚ್ 11ರಂದು ನ್ಯಾಯಾಲಯ ನೀಡಿದ್ದ ಆದೇಶವನ್ನು ಎಸ್‌ಬಿಐ ಸಂಪೂರ್ಣ ಪಾಲಿಸಿಲ್ಲ ಎಂದು ಮುಖ್ಯ … Continued

ಸಿಎಎ : ಮಾರ್ಚ್ 19 ರಂದು ಪೌರತ್ವ (ತಿದ್ದುಪಡಿ) ನಿಯಮಗಳ ವಿರುದ್ಧದ ಅರ್ಜಿಗಳ ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ನವದೆಹಲಿ: 2019 ರ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಮತ್ತು ಇತ್ತೀಚೆಗೆ ಸೂಚಿಸಲಾದ 2024 ರ ಪೌರತ್ವ (ತಿದ್ದುಪಡಿ) ನಿಯಮಗಳಿಗೆ ಸಂಬಂಧಿಸಿದ ಎಲ್ಲಾ ಅರ್ಜಿಗಳನ್ನು ಮಾರ್ಚ್ 19ರಂದು ವಿಚಾರಣೆ ನಡೆಸುವುದಾಗಿ ಸುಪ್ರೀಂ ಕೋರ್ಟ್ ಶುಕ್ರವಾರ ಹೇಳಿದೆ. ಭಾರತದ ಮುಖ್ಯ ನ್ಯಾಯಮೂರ್ತಿ (CJI) ಡಿ.ವೈ. ಚಂದ್ರಚೂಡ ನೇತೃತ್ವದ ಪೀಠವು ಎಲ್ಲ ಅರ್ಜಿಗಳನ್ನು ವಿಚಾರಣೆ ನಡೆಸಲಿದೆ ಎಂದು ಹೇಳಿದೆ. … Continued

ಸುಪ್ರೀಂ ಕೋರ್ಟ್‌ ಆದೇಶ : ಚುನಾವಣಾ ಬಾಂಡ್‌ ದತ್ತಾಂಶವನ್ನು ಚುನಾವಣಾ ಆಯೋಗಕ್ಕೆ ಸಲ್ಲಿಸಿದ ಎಸ್‌ಬಿಐ

ನವದೆಹಲಿ: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ಮಂಗಳವಾರ ಭಾರತೀಯ ಚುನಾವಣಾ ಆಯೋಗಕ್ಕೆ (ಇಸಿಐ) 2019ರ ಏಪ್ರಿಲ್ 12ರಿಂದ ರಾಜಕೀಯ ಪಕ್ಷಗಳು ಎನ್‌ಕ್ಯಾಶ್ ಮಾಡಿದ ಚುನಾವಣಾ ಬಾಂಡ್‌ಗಳ ಎಲ್ಲಾ ವಿವರಗಳನ್ನು ರವಾನಿಸಿದೆ. ಮಂಗಳವಾರ (ಮಾರ್ಚ್ 12) ಸಂಜೆ 5:30ರೊಳಗೆ ಮಾಡಬೇಕೆಂದು ಸೋಮವಾರದ ಸುಪ್ರೀಂ ಕೋರ್ಟ್ ಆದೇಶಕ್ಕೆ ಅನುಗುಣವಾಗಿ ಅಂಕಿ-ಅಂಶವನ್ನು ಚುನಾವಣಾ ಆಯೋಗಕ್ಕೆ ಕಳುಹಿಸಿದೆ. ಮಾರ್ಚ್ 15, … Continued

ಕೇಂದ್ರ ಸರ್ಕಾರ ಚುನಾವಣಾ ಆಯುಕ್ತರ ನೇಮಿಸುವುದಕ್ಕೆ ತಡೆ ಕೋರಿ ಸುಪ್ರೀಂಕೋರ್ಟ್‌ ಮೆಟ್ಟಿಲೇರಿದ ಕಾಂಗ್ರೆಸ್ ನಾಯಕಿ

ನವದೆಹಲಿ: ಖಾಲಿ ಇರುವ ಇಬ್ಬರು ಚುನಾವಣಾ ಆಯುಕ್ತರುಗಳನ್ನು ಕೇಂದ್ರ ಸರ್ಕಾರ ನೇಮಿಸುವುದಕ್ಕೆ ತಡೆ ನೀಡಬೇಕು ಎಂದು ಕೋರಿ ಕಾಂಗ್ರೆಸ್ ಮುಖಂಡರೊಬ್ಬರು ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದಾರೆ. ಮಧ್ಯಪ್ರದೇಶದ ಕಾಂಗ್ರೆಸ್ ನಾಯಕಿ ಡಾ.ಜಯಾ ಠಾಕೂರ್‌ ಅವರು 2023 ರ ಸುಪ್ರೀಂ ಕೋರ್ಟ್‌ ತೀರ್ಪನ್ನು ಉಲ್ಲೇಖಿಸಿ ಕೇಂದ್ರ ಸರ್ಕಾರಕ್ಕೆ ಚುನಾವಣಾ ಆಯುಕ್ತರನ್ನು ನೇಮಿಸದಂತೆ ಸೂಚಿಸಬೇಕು ಎಂದು ಆಗ್ರಹಿಸಿ ಅರ್ಜಿಯಲ್ಲಿ … Continued

ಲೋಕಪಾಲದ ಮುಖ್ಯಸ್ಥರಾಗಿ ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಎ.ಎಂ.ಖಾನ್ವಿಲ್ಕರ ನೇಮಕ

ನವದೆಹಲಿ : ಸುಪ್ರೀಂ ಕೋರ್ಟ್ ನ್ಯಾಯಾಧೀಶರಾಗಿ ನಿವೃತ್ತರಾದ ಸುಮಾರು 19 ತಿಂಗಳ ನಂತರ, ನ್ಯಾಯಮೂರ್ತಿ ಎ.ಎಂ. ಖಾನ್ವಿಲ್ಕರ್ ಅವರನ್ನು ಭ್ರಷ್ಟಾಚಾರ ವಿರೋಧಿ ಒಂಬುಡ್ಸ್‌ಮನ್ ಲೋಕಪಾಲದ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ. ಸುಮಾರು ಎರಡು ವರ್ಷಗಳಿಂದ ಹುದ್ದೆ ಖಾಲಿ ಇತ್ತು. ನ್ಯಾಯಮೂರ್ತಿ ಅಜಯ ಮಾಣಿಕ್‌ ರಾವ್‌ ಖಾನ್ವಿಲ್ಕರ್ ಅವರನ್ನು ಲೋಕಪಾಲ್ ಅಧ್ಯಕ್ಷರನ್ನಾಗಿ ನೇಮಿಸಲು ರಾಷ್ಟ್ರಪತಿ ದ್ರೌಪದಿ ಮುರ್ಮು ಸಂತಸ ವ್ಯಕ್ತಪಡಿಸಿದ್ದಾರೆ” … Continued

ಸಿಎಂ ಸಿದ್ದರಾಮಯ್ಯಗೆ ದಂಡ: ಹೈಕೋರ್ಟ್‌ ಆದೇಶಕ್ಕೆ ತಡೆ ನೀಡಿದ ಸುಪ್ರಿಂ ಕೋರ್ಟ್‌

ನವದೆಹಲಿ : ಪ್ರತಿಭಟನಾ ಮೆರವಣಿಗೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮ್ಯಯ ಮತ್ತು ಇತರ ನಾಯಕರಿಗೆ ತಲಾ ₹10 ಸಾವಿರ ದಂಡ ವಿಧಿಸಿದ್ದ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್‌ ತಡೆ ನೀಡಿದೆ. ಹಾಗೂ ಮಾರ್ಚ್‌ 6ರಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ. ಕರ್ನಾಟಕ ಮುಖ್ಯಮಂತ್ರಿ (ಸಿಎಂ) ಸಿದ್ದರಾಮಯ್ಯ, ಸಚಿವರಾದ ರಾಮಲಿಂಗಾ ರೆಡ್ಡಿ ಮತ್ತು ಎಂ.ಬಿ.ಪಾಟೀಲ, ಹಾಗೂ ಮತ್ತು ಕರ್ನಾಟಕ ಕಾಂಗ್ರೆಸ್‌ … Continued

‘ಚುನಾವಣಾ ಬಾಂಡ್‌ ಯೋಜನೆ ಅಸಂವಿಧಾನಿಕ..’ : ಮಹತ್ವದ ತೀರ್ಪಿನಲ್ಲಿ ಚುನಾವಣಾ ಬಾಂಡ್ ಯೋಜನೆ ರದ್ದುಗೊಳಿಸಿದ ಸುಪ್ರೀಂ ಕೋರ್ಟ್‌

ನವದೆಹಲಿ: ರಾಜಕೀಯ ನಿಧಿಗಾಗಿ ಚುನಾವಣಾ ಬಾಂಡ್ ಯೋಜನೆಯು ನಾಗರಿಕರ ಮಾಹಿತಿಯ ಹಕ್ಕನ್ನು ಉಲ್ಲಂಘಿಸುತ್ತದೆ ಎಂದು ಪರಿಗಣಿಸಿರುವ ಸುಪ್ರೀಂ ಕೋರ್ಟ್‌ ಮಹತ್ವದ ತೀರ್ಪಿನಲ್ಲಿ ರಾಜಕೀಯ ಪಕ್ಷಗಳಿಗೆ ಅನಾಮಧೇಯ ದೇಣಿಗೆಗಳನ್ನು ನೀಡಲು ಅನುಮತಿಸುವ ಚುನಾವಣಾ ಬಾಂಡ್ ಯೋಜನೆಯನ್ನು ಗುರುವಾರ ರದ್ದುಗೊಳಿಸಿದೆ. ಯೋಜನೆ ಜಾರಿಗೆ ತರಲೆಂದು ಆದಾಯ ತೆರಿಗೆ ಕಾಯಿದೆ ಮತ್ತು ಜನ ಪ್ರತಿನಿಧಿ ಕಾಯಿದೆಗೆ ಮಾಡಿದ ತಿದ್ದುಪಡಿಗಳನ್ನು ಮುಖ್ಯ … Continued

ನ್ಯಾಯಮೂರ್ತಿಗಳಿಬ್ಬರ ಸಂಘರ್ಷದ ಪ್ರಕರಣ : ಕಲ್ಕತ್ತಾ ಹೈಕೋರ್ಟ್‌ ವಿಚಾರಣೆಗೆ ತಡೆ ನೀಡಿದ ಸುಪ್ರೀಂ ಕೋರ್ಟ್‌

ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ವೈದ್ಯಕೀಯ ಸೀಟು ಪಡೆಯಲು ನಕಲಿ ಪ್ರಮಾಣಪತ್ರ ಸಲ್ಲಿಕೆ ಮಾಡುತ್ತಿದ್ದ ಹಗರಣಕ್ಕೆ ಸಂಬಂಧಿಸಿದಂತೆ ಕಲ್ಕತ್ತಾ ಹೈಕೋರ್ಟ್‌ ನ್ಯಾಯಮೂರ್ತಿಗಳ ನಡುವಿನ ಸಂಘರ್ಷ ತೀವ್ರ ಸ್ವರೂಪ ಪಡೆದ ಹಿನ್ನೆಲೆಯಲ್ಲಿ ಇಂದು (ಶನಿವಾರ) ವಿಶೇಷ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್‌ನ ಐವರು ನ್ಯಾಯಮೂರ್ತಿಗಳ ಪೀಠ ಹಗರಣಕ್ಕೆ ಸಂಬಂಧಪಟ್ಟಂತೆ ಕಲ್ಕತ್ತಾ ಹೈಕೋರ್ಟ್‌ ನಡೆಸುತ್ತಿದ್ದ ಎಲ್ಲಾ ವಿಚಾರಣೆಗಳಿಗೆ ತಡೆ ನೀಡಿದೆ. … Continued

ಗೋಕರ್ಣ ಮಹಾಬಲೇಶ್ವರ ದೇಗುಲ ಮೇಲ್ವಿಚಾರಣಾ ಸಮಿತಿಯ ಸದಸ್ಯರ ಬದಲಾವಣೆ: ರಾಜ್ಯ ಸರ್ಕಾರದ ಆದೇಶ ರದ್ದುಪಡಿಸಿದ ಹೈಕೋರ್ಟ್

ಬೆಂಗಳೂರು : ಗೋಕರ್ಣ ಮಹಾಬಲೇಶ್ವರ ದೇವಸ್ಥಾನದ ಚಟುವಟಿಕೆಗಳ ನಿರ್ವಹಣೆಗಾಗಿ ಸುಪ್ರೀಂ ಕೋರ್ಟ್‌ ಆದೇಶದ ಅನ್ವಯ ರಚಿಸಲಾಗಿದ್ದ ಮೇಲ್ವಿಚಾರಣಾ ಸಮಿತಿಯ ನಾಲ್ವರು ಸದಸ್ಯರನ್ನು ತೆಗೆದುಹಾಕಿದ್ದ ರಾಜ್ಯ ಸರ್ಕಾರದ ಆದೇಶವನ್ನು ಕರ್ನಾಟಕ ಹೈಕೋರ್ಟ್‌ ರದ್ದುಪಡಿಸಿದೆ. ಮೇಲ್ವಿಚಾರಣಾ ಸಮಿತಿಯಲ್ಲಿದ್ದ ಇಬ್ಬರು ಉಪಾಧಿವಂತರಯ ಹಾಗೂ ಇಬ್ಬರು ವಿದ್ವಾಂಸರನ್ನು ಬದಲಿಸಿದ್ದ ರಾಜ್ಯ ಸರ್ಕಾರದ ಆದೇಶವನ್ನು ಹೈಕೋರ್ಟ್‌ ರದುಪಡಿಸಿದೆ. ಮಠದ ಮೇಲ್ವಿಚಾರಣಾ ಸಮಿತಿಯ ನಾಲ್ವರು … Continued

ಪ್ರಧಾನಿ ಮೋದಿ ಪದವಿ ವಿವಾದ: ಅರವಿಂದ ಕೇಜ್ರಿವಾಲ್, ಸಂಜಯ ಸಿಂಗ್ ವಿರುದ್ಧದ ಮಾನನಷ್ಟ ಮೊಕದ್ದಮೆಗೆ ಸುಪ್ರೀಂ ಕೋರ್ಟ್ ತಡೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಶೈಕ್ಷಣಿಕ ಪದವಿಗೆ ಸಂಬಂಧಿಸಿದ ಹೇಳಿಕೆಗಳಿಗಾಗಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಮತ್ತು ಸಂಸದ ಸಂಜಯ್ ಸಿಂಗ್ ವಿರುದ್ಧ ಹೂಡಲಾಗಿದ್ದ ಮಾನನಷ್ಟ ಮೊಕದ್ದಮೆಗೆ ಸುಪ್ರೀಂ ಕೋರ್ಟ್ ಮಂಗಳವಾರ ತಡೆ ನೀಡಿದೆ. ಈ ವೇಳೆ ಮಧ್ಯಂತರ ಪರಿಹಾರ ಕೋರಿ ಈ ಇಬ್ಬರೂ ಸಲ್ಲಿಸಿರುವ ಮನವಿಯನ್ನು ತ್ವರಿತವಾಗಿ ವಿಲೇವಾರಿ ಮಾಡುವಂತೆ ನ್ಯಾಯಮೂರ್ತಿಗಳಾದ ಬಿ.ಆರ್‌. … Continued