ಮತದಾರರ ಪಟ್ಟಿಯಿಂದ ಹೆಸರು ತೆಗೆದ ಮಾತ್ರಕ್ಕೆ ಪೌರತ್ವ ರದ್ದಾಗುವುದಿಲ್ಲ : ಸುಪ್ರೀಂ ಕೋರ್ಟ್

ನವದೆಹಲಿ: ವಿಶೇಷ ಸಮಗ್ರ ಪರಿಷ್ಕರಣೆ (Special Intensive Revision–SIR) ವೇಳೆ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಿದ ಮಾತ್ರಕ್ಕೆ ವ್ಯಕ್ತಿಯ ಭಾರತೀಯ ಪೌರತ್ವ ಸ್ವಯಂಚಾಲಿತವಾಗಿ ರದ್ದಾಗುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ ಮತ್ತೊಮ್ಮೆ ಮೌಖಿಕವಾಗಿ ಸ್ಪಷ್ಟಪಡಿಸಿದೆ. ಬಿಹಾರ ಎಸ್‌ಐಆರ್ ಪ್ರಕರಣದಲ್ಲಿ ಈಗಾಗಲೇ ನೀಡಿದ್ದ ತೀರ್ಪಿನಲ್ಲಿಯೇ ಚುನಾವಣಾ ಆಯೋಗ (ECI) ಪೌರತ್ವ ನಿರ್ಧರಿಸುವ ಅಂತಿಮ ಸಾಂವಿಧಾನಿಕ ಪ್ರಾಧಿಕಾರವಲ್ಲ ಎಂದು … Continued

ಭೋಜಶಾಲಾ–ಕಮಾಲ್ ಮೌಲಾ ಪ್ರಕರಣ: ಶುಕ್ರವಾರದ ನಮಾಜ್‌ಗೆ ಮುಸ್ಲಿಮರಿಗೆ ಪ್ರತ್ಯೇಕ ಸ್ಥಳ ಕಲ್ಪಿಸಲು ಸುಪ್ರೀಂ ಕೋರ್ಟ್ ನಿರ್ದೇಶನ

ನವದೆಹಲಿ : ಮಧ್ಯಪ್ರದೇಶದ ಧಾರ್ ಜಿಲ್ಲೆಯ ಭೋಜಶಾಲಾ–ಕಮಾಲ್ ಮೌಲಾ ಮಸೀದಿ ಸಂಕೀರ್ಣವನ್ನು ಹಿಂದೂ ದೇವಾಲಯವೆಂದು ಘೋಷಿಸಿದ್ದ ಮಧ್ಯಪ್ರದೇಶ ಹೈಕೋರ್ಟ್‌ನ ಮೇ 15ರ ತೀರ್ಪನ್ನು ಪ್ರಶ್ನಿಸಿ ಮುಸ್ಲಿಮ್‌ ಪಕ್ಷದವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆಯಲ್ಲಿ ಸುಪ್ರೀಂ ಕೋರ್ಟ್ ಮಂಗಳವಾರ ಸೀಮಿತ ಮಧ್ಯಂತರ ಪರಿಹಾರ ನೀಡಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ ನೇತೃತ್ವದ, ನ್ಯಾಯಮೂರ್ತಿಗಳಾದ ಜಾಯ್‌ಮಲ್ಯ ಬಾಗ್ಚಿ ಮತ್ತು ವಿ. ಮೋಹನ … Continued

ರಾಮಮಂದಿರ ದೇಣಿಗೆ ಕಳ್ಳತನ ಪ್ರಕರಣ: ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ಗೆ ಸುಪ್ರೀಂ ಕೋರ್ಟ್ ನೋಟಿಸ್

ನವದೆಹಲಿ : ಅಯೋಧ್ಯೆಯ ರಾಮಮಂದಿರದಲ್ಲಿ ಭಕ್ತರು ನೀಡಿದ ದೇಣಿಗೆ ಹಣದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಸಮ್ಮತ ಹಾಗೂ ನಿಗದಿತ ಅವಧಿಯೊಳಗೆ ತನಿಖೆ ನಡೆಸುವಂತೆ ಕೋರಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ಗೆ ಸೋಮವಾರ (ಜುಲೈ 13) ನೋಟಿಸ್ ಜಾರಿಗೊಳಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ ನೇತೃತ್ವದ ಪೀಠದಲ್ಲಿ ನ್ಯಾಯಮೂರ್ತಿಗಳಾದ … Continued

ನ್ಯಾಯಾಲಯದಲ್ಲೇ ದಾಖಲೆಗಳ ಎಸೆತ, ಸಿಜೆಐ ವಿರುದ್ಧ ನಿಂದನೆ ; ಅರ್ಜಿದಾರನ ವಿರುದ್ಧ ಕ್ರಮ ಕೈಗೊಳ್ಳದ ಸುಪ್ರೀಂ ಕೋರ್ಟ್

ನವದೆಹಲಿ : ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ (ಜುಲೈ 10) ನಡೆದ ವಿಚಾರಣೆಯ ವೇಳೆ ಅನಿರೀಕ್ಷಿತ ಘಟನೆ ನಡೆಯಿತು. ಸ್ವತಃ ತಮ್ಮ ಪ್ರಕರಣವನ್ನು ತಾವೇ ವಾದಿಸುತ್ತಿದ್ದ ಅರ್ಜಿದಾರರೊಬ್ಬರು ನ್ಯಾಯಾಲಯದಲ್ಲೇ ಪ್ರಕರಣದ ದಾಖಲೆಗಳನ್ನು ಎಸೆದು, ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ವಿರುದ್ಧ ಅವಾಚ್ಯ ಶಬ್ದಗಳನ್ನು ಬಳಸಿ ವಿಚಾರಣೆಗೆ ಅಡ್ಡಿಪಡಿಸಿದ ಘಟನೆ ನಡೆಯಿತು. ನಂತರ ಭದ್ರತಾ ಸಿಬ್ಬಂದಿ ಆತನನ್ನು ಹೊರಗೆ … Continued

ಗೋಹತ್ಯೆಗೆ ಸಂಪೂರ್ಣ ನಿಷೇಧ: ಮದ್ರಾಸ್ ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂ ಮೆಟ್ಟಿಲೇರಿದ ತಮಿಳುನಾಡು ಸರ್ಕಾರ

ಚೆನ್ನೈ: ತಮಿಳುನಾಡಿನಲ್ಲಿ ಹಸು ಹಾಗೂ ಕರುಗಳ ವಧೆಗೆ ಸಂಪೂರ್ಣ ನಿಷೇಧ ಹೇರಿರುವ ಮದ್ರಾಸ್ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ತಮಿಳುನಾಡು ಸರ್ಕಾರ ಬುಧವಾರ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದೆ. ತಮಿಳುನಾಡು ಸರ್ಕಾರ ತನ್ನ ಮೇಲ್ಮನವಿಯಲ್ಲಿ, ಮದ್ರಾಸ್ ಹೈಕೋರ್ಟ್ ನೀಡಿರುವ ಸಂಪೂರ್ಣ ನಿಷೇಧದ ಆದೇಶವು ತಮಿಳುನಾಡು ಪ್ರಾಣಿ ಸಂರಕ್ಷಣಾ ಕಾಯ್ದೆ, 1958ರ ವಿರುದ್ಧವಾಗಿದೆ ಎಂದು ವಾದಿಸಿದೆ. ಈ ಕಾಯ್ದೆಯ … Continued

ರಾಮ ಮಂದಿರ ಟ್ರಸ್ಟ್‌ ದೇಣಿಗೆ ದುರ್ಬಳಕೆ ಆರೋಪ: ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ

ನವದೆಹಲಿ : ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ಗೆ ರಾಮ ಮಂದಿರ ನಿರ್ಮಾಣಕ್ಕಾಗಿ ಬಂದಿರುವ ದೇಣಿಗೆ ಹಣದ ದುರ್ಬಳಕೆ ನಡೆದಿದೆ ಎಂಬ ಆರೋಪಗಳ ಕುರಿತು ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ತುರ್ತಾಗಿ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಸೋಮವಾರ ನಿರಾಕರಿಸಿದೆ. ನ್ಯಾಯಮೂರ್ತಿ ಎಂ.ಎಂ. ಸುಂದರೇಶ ಹಾಗೂ ನ್ಯಾಯಮೂರ್ತಿ … Continued

ಇಬ್ಬರೂ ವೃತ್ತಿಜೀವನ ಹಾಳು ಮಾಡಿಕೊಳ್ಳುತ್ತಿದ್ದಾರೆ: ರೋಹಿಣಿ ಸಿಂಧೂರಿ–ರೂಪಾ ಜಗಳದ ಕುರಿತು ಸುಪ್ರೀಂ ಕೋರ್ಟ್‌

ನವದೆಹಲಿ: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಹಾಗೂ ಐಪಿಎಸ್ ಅಧಿಕಾರಿ ಡಿ. ರೂಪಾ ಮೌದ್ಗಿಲ್ ನಡುವಿನ ಮಾನನಷ್ಟ ಮೊಕದ್ದಮೆಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಮಧ್ಯಸ್ಥಿಕೆಗೆ (Mediation) ಉಲ್ಲೇಖಿಸಿದೆ. ನಿರಂತರ ಕಾನೂನು ಹೋರಾಟದಿಂದ ಇಬ್ಬರೂ ಅಧಿಕಾರಿಗಳು ಪರಸ್ಪರರ ವೃತ್ತಿ ಜೀವನ ಹಾಳುಮಾಡಿಕೊಳ್ಳುತ್ತಿದ್ದಾರೆ ಎಂದು ಅಭಿಪ್ರಾಯ ವ್ಯಕ್ತಪಡಿಸಿರುವ ಸುಪ್ರೀಂ ಕೋರ್ಟ್, ಈ ವಿವಾದವನ್ನು ಮಾತುಕತೆಯ ಮೂಲಕ ಇತ್ಯರ್ಥಪಡಿಸಿಕೊಳ್ಳುವಂತೆ ಸೂಚಿಸಿದೆ. … Continued

ರಾಜ್ಯಸಭಾ ಚುನಾವಣೆ : ನಾಮಪತ್ರ ತಿರಸ್ಕಾರ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಕಾಂಗ್ರೆಸ್ ನಾಯಕಿ ಮೀನಾಕ್ಷಿ ನಟರಾಜನ್

ನವದೆಹಲಿ: ಮಧ್ಯಪ್ರದೇಶದಿಂದ ರಾಜ್ಯಸಭಾ ಚುನಾವಣೆಗೆ ಸಲ್ಲಿಕೆಯಾಗಿದ್ದ ತಮ್ಮ ನಾಮಪತ್ರ ತಿರಸ್ಕಾರಗೊಂಡಿರುವುದನ್ನು ಪ್ರಶ್ನಿಸಿ ಕಾಂಗ್ರೆಸ್ ನಾಯಕಿ ಮೀನಾಕ್ಷಿ ನಟರಾಜನ್ ಅವರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ. ತೆಲಂಗಾಣದಲ್ಲಿ ಬಾಕಿ ಇರುವ ಕ್ರಿಮಿನಲ್ ಪ್ರಕರಣವೊಂದರ ವಿವರಗಳನ್ನು ನಾಮಪತ್ರದಲ್ಲಿ “ಮುಚ್ಚಿಟ್ಟಿದ್ದಾರೆ” ಎಂಬ ಆರೋಪದ ಹಿನ್ನೆಲೆಯಲ್ಲಿ, ಚುನಾವಣಾ ಅಧಿಕಾರಿ (ರಿಟರ್ನಿಂಗ್ ಆಫೀಸರ್) ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ತಿರಸ್ಕರಿಸಿದ್ದರು. ತಮ್ಮ ನಾಮಪತ್ರ ಅನರ್ಹಗೊಳಿಸಿದ … Continued

ಮತದಾರರ ಪಟ್ಟಿ ‘ವಿಶೇಷ ಪರಿಷ್ಕರಣೆ’ ನಡೆಸುವ ಚುನಾವಣಾ ಆಯೋಗದ ಅಧಿಕಾರವನ್ನು ಎತ್ತಿಹಿಡಿದ ಸುಪ್ರೀಂ ಕೋರ್ಟ್

ನವದೆಹಲಿ: ಚುನಾವಣಾ ಆಯೋಗವು (ECI) ಮತದಾರರ ಪಟ್ಟಿಯ ‘ವಿಶೇಷ ಸಮಗ್ರ ಪರಿಷ್ಕರಣೆ’ (Special Intensive Revision – SIR) ನಡೆಸುವ ಸಂಪೂರ್ಣ ಅಧಿಕಾರವನ್ನು ಹೊಂದಿದೆ ಎಂದು ಸುಪ್ರೀಂ ಕೋರ್ಟ್ ಬುಧವಾರ (ಮೇ 27) ಮಹತ್ವದ ತೀರ್ಪು ನೀಡಿದೆ. ಕಳೆದ ವರ್ಷ ನಡೆದ ಬಿಹಾರ ವಿಧಾನಸಭೆ ಚುನಾವಣೆಗೆ ಮುನ್ನ, ಅಂದರೆ 2025ರ ಜೂನ್‌ನಲ್ಲಿ ವಿಶೇಷ ಸಮಗ್ರ ಪರಿಷ್ಕರಣೆ … Continued

ತ್ವಿಷಾ ಶರ್ಮಾ ಸಾವಿನ ಪ್ರಕರಣ: ಸುಪ್ರೀಂ ಕೋರ್ಟ್‌ನಿಂದ ಸ್ವಯಂಪ್ರೇರಿತ ದೂರು ದಾಖಲು

ನವದೆಹಲಿ: ಯುವತಿ ತ್ವಿಷಾ ಶರ್ಮಾ ಅವರ ಶಂಕಾಸ್ಪದ ವರದಕ್ಷಿಣೆ ಸಾವಿನ ಪ್ರಕರಣವನ್ನು ಸುಪ್ರೀಂ ಕೋರ್ಟ್ ಅತ್ಯಂತ ಗಂಭೀರವಾಗಿ ಪರಿಗಣಿಸಿದೆ. ಮಾಧ್ಯಮ ವರದಿಗಳು ಮತ್ತು ಘಟನೆಯ ಗಂಭೀರತೆಯನ್ನು ಆಧರಿಸಿ ಸುಪ್ರೀಂ ಕೋರ್ಟ್ ಶನಿವಾರ ಸ್ವಯಂಪ್ರೇರಿತವಾಗಿ (Suo Motu) ಪ್ರಕರಣವನ್ನು ದಾಖಲಿಸಿಕೊಂಡಿದೆ.  ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ, ನ್ಯಾಯಮೂರ್ತಿ ಜಾಯ್ಮಲ್ಯ ಬಾಗ್ಚಿ ಮತ್ತು ನ್ಯಾಯಮೂರ್ತಿ … Continued