ವಿನಯ ಕುಲಕರ್ಣಿ ಅರ್ಜಿ ವಿಚಾರಣೆ ಮುಂದೂಡಿದ ಸುಪ್ರೀಂಕೋರ್ಟ್

ನವದೆಹಲಿ: ಧಾರವಾಡ ಜಿಲ್ಲಾ ಪಂಚಾಯ್ತಿ ಸದಸ್ಯರಾಗಿದ್ದ ಯೋಗೀಶಗೌಡ ಗೌಡರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐನಿಂದ ಬಂಧಿತರಾಗಿ ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿರುವ ಅನುಭವಿಸುತ್ತಿರುವ ಮಾಜಿ ಸಚಿವ ವಿನಯ ಕುಲಕರ್ಣಿ ಜಾಮೀನು ಅರ್ಜಿ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಮತ್ತೆ ಆಗಸ್ಟ್ 10ಕ್ಕೆ ಮುಂದೂಡಿದೆ. ಮಾಜಿ ಸಚಿವ ವಿನಯ ಕುಲಕರ್ಣಿ ಜಾಮೀನು ಅರ್ಜಿ, ವಿನಯ ಕುಲಕರ್ಣಿ ವಿರುದ್ಧ ಸಿಬಿಐ ದಾಖಲಿಸಿರುವ … Continued

ಚೆಕ್‌ ಬೌನ್ಸ್‌ ಪ್ರಕರಣಗಳ ಶೀಘ್ರ ವಿಲೇವಾರಿಗೆ ಕೇಂದ್ರಕ್ಕೆ ಸುಪ್ರಿಂ ಕೋರ್ಟ್‌ ನೊಟೀಸ್‌ ‌

ನವದೆಹಲಿ:ಚೆಕ್ ಬೌನ್ಸ್ ಕೇಸುಗಳ ಶೀಘ್ರ ವಿಲೇವಾರಿಗೆ ಆದೇಶ ಹೊರಡಿಸಿರುವ ಸುಪ್ರೀಂ ಕೋರ್ಟ್, ಒಬ್ಬ ವ್ಯಕ್ತಿಯ ವಿರುದ್ಧ ಒಂದು ವರ್ಷದೊಳಗೆ ದಾಖಲಾಗುವ ಪ್ರಕರಣಗಳಲ್ಲಿ ವಿಚಾರಣೆಗಳನ್ನು ಒಟ್ಟುಗೂಡಿಸಿ ವಿಚಾರಣೆಗಳ ಶೀಘ್ರ ವಿಲೇವಾರಿ ಮಾಡಬೇಕೆಂದು ಕೇಂದ್ರ ಸರ್ಕಾರಕ್ಕೆ ಸೂಚನೆ ನೀಡಿದೆ. ಈ ಸಂಬಂಧ ಎಲ್ಲಾ ಹೈಕೋರ್ಟ್ ಗಳಿಗೆ ಆದೇಶ ಹೊರಡಿಸಿರುವ ಸುಪ್ರೀಂ ಕೋರ್ಟ್, ಚೆಕ್ ಬೌನ್ಸ್ ಕೇಸುಗಳನ್ನು ನಿಭಾಯಿಸುವಂತೆ ವಿಚಾರಣಾಧೀನ … Continued

ಧಾರ್ಮಿಕ ಮತಾಂತರ: ಅರ್ಜಿ ವಜಾ ಮಾಡಿದ ಸುಪ್ರೀಂಕೋರ್ಟ್

ನವ ದೆಹಲಿ: 18 ವರ್ಷ ಮೇಲ್ಪಟ್ಟವರು ತಮ್ಮ ಧರ್ಮ ಆಯ್ಕೆಮಾಡಿಕೊಳ್ಳಲು ಮುಕ್ತರಾಗಿರುತ್ತಾರೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಮೂಢನಂಬಿಕೆ, ಪ್ರಚೋದನೆ, ಮಾಟ-ಮಂತ್ರ, ಆರ್ಥಿಕ ಲಾಭದ ಹೆಸರಿನಲ್ಲಿ ಮತಾಂತರ ನಡೆಯುತ್ತಿದ್ದು, ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮಕ್ಕೆ ಆದೇಶಿಸಬೇಕೆಂದು ಬಿಜೆಪಿ ಹಿರಿಯ ಮುಖಂಡ ಅಶ್ವಿನಿ ಉಪಾಧ್ಯಾಯ ಅವರು ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆಯು ನ್ಯಾಯಮೂರ್ತಿಗಳಾದ ಆರ್.ಎಫ್. ನಾರಿಮನ್, … Continued

ಅನಿಲ್ ದೇಶ್ಮುಖ್ ವಿರುದ್ಧದ ಗಂಭೀರ ಆರೋಪಗಳಿಗೆ ಸಿಬಿಐ ತನಿಖೆ ಅಗತ್ಯ: ಸುಪ್ರೀಂ ಕೋರ್ಟ್‌

ನವ ದೆಹಲಿ: ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶ್ಮುಖ್ ವಿರುದ್ಧ ಮುಂಬೈನ ಮಾಜಿ ಪೊಲೀಸ್ ಆಯುಕ್ತ ಪರಮ್ ಬೀರ್ ಸಿಂಗ್ ಮಾಡಿದ ಭ್ರಷ್ಟಾಚಾರ ಮತ್ತು ದುಷ್ಕೃತ್ಯದ ಆರೋಪಗಳು ‘ಗಂಭೀರ’ ಸ್ವರೂಪದ್ದಾಗಿದ್ದು ಸ್ವತಂತ್ರ ತನಿಖೆ ಅಗತ್ಯ ಎಂದು ಸುಪ್ರೀಂ ಕೋರ್ಟ್ ಗುರುವಾರ ಹೇಳಿದೆ. ಆರೋಪಗಳು ಗಂಭೀರವಾಗಿವೆ, ಗೃಹ ಸಚಿವರು ಮತ್ತು ಪೊಲೀಸ್ ಆಯುಕ್ತರುಬೇರೆಯಾಗುವವರೆಗೂ ಅವರು ಒಟ್ಟಿಗೆ … Continued

ಡಿನೋಟಿಫಿಕೇಷನ್ ಪ್ರಕರಣದ ತನಿಖೆಗೆ ‘ಸುಪ್ರೀಂಕೋರ್ಟ್’ ತಡೆ :ಸಿಎಂ ಬಿಎಸ್ ವೈಗೆ ಬಿಗ್ ರಿಲೀಫ್;

ನವ ದೆಹಲಿ: ಅಕ್ರಮ ಡಿನೋಟಿಫಿಕೇಷನ್ ಪ್ರಕರಣದಡಿ ಭ್ರಷ್ಟಾಚಾರ ಆರೋಪಕ್ಕೆ ಸಂಬಂಧಿಸಿದಂತೆ ತನಿಖೆ ಎದುರಿಸುತ್ತಿದ್ದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಸುಪ್ರೀಂ ಕೋರ್ಟ್ ರಿಲೀಫ್ ನೀಡಿದೆ. ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧದ ಬೆಂಗಳೂರಿನ ಬೆಳ್ಳಂದೂರು ಬಳಿಯ 24 ಎಕರೆ ಭೂಮಿಯ ಡಿನೋಟಿಫಿಕೇಷನ್ ಪ್ರಕರಣದ ವಿಚಾರಣೆಗೆ ಸುಪ್ರೀಂಕೋರ್ಟ್ ಸಿಜೆಐ ಪೀಠ ತಡೆಯಾಜ್ಞೆ ನೀಡಿದೆ. ಈ ಹಿಂದೆ ಇದೇ ಪ್ರಕರಣದ ವಿಚಾರಣೆ … Continued

ಡಾನ್ ಅನ್ಸಾರಿ ಉತ್ತರ ಪ್ರದೇಶ ಆಡಳಿತಕ್ಕೆ ಹಸ್ತಾಂತರಿಸಲು ಪಂಜಾಬ್ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ನಿರ್ದೇಶನ

ನವ ದೆಹಲಿ: ಪಂಜಾಬ್‌ ರೂಪನಗರ ಜೈಲಿನಲ್ಲಿರುವ ಸುಲಿಗೆಕೋರ-ರಾಜಕಾರಣಿ ಮುಖ್ತಾರ್ ಅನ್ಸಾರಿ ಅವರ ಕಸ್ಟಡಿಯನ್ನು ಉತ್ತರ ಪ್ರದೇಶ ಪೊಲೀಸರಿಗೆ ಹಸ್ತಾಂತರಿಸುವಂತೆ ಸುಪ್ರೀಂ ಕೋರ್ಟ್ ಶುಕ್ರವಾರ ಪಂಜಾಬ್ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ನ್ಯಾಯಮೂರ್ತಿಗಳಾದ ಅಶೋಕ್ ಭೂಷಣ್ ಮತ್ತು ಆರ್. ಎಸ್. ರೆಡ್ಡಿ ಅವರಿದ್ದ ನ್ಯಾಯಪೀಠವು ಮೌ ಕ್ಷೇತ್ರದ ಶಾಸಕರಾದ ಅನ್ಸಾರಿ ಕಸ್ಟಡಿಯನ್ನು ಎರಡು ವಾರಗಳಲ್ಲಿ ಉತ್ತರ ಪ್ರದೇಶ ರಾಜ್ಯಕ್ಕೆ … Continued

ಮಹತ್ವದ ತೀರ್ಪು: ಟಾಟಾ ಸನ್ಸ್‌ನಿಂದ ಸೈರಸ್ ಮಿಸ್ತ್ರಿ ಉಚ್ಚಾಟನೆ ಎತ್ತಿ ಹಿಡಿದ ಸುಪ್ರೀಂ ಕೋರ್ಟ್

ನವ ದೆಹಲಿ: ನ್ಯಾಷನಲ್ ಕಂಪನಿ ಲಾ ಅಪೀಲೆಟ್ ಟ್ರಿಬ್ಯೂನಲ್ (ಎನ್‌ಸಿಎಲ್‌ಎಟಿ) ಆದೇಶದ ವಿರುದ್ಧ ಟಾಟಾ ಸನ್ಸ್ ಪ್ರೈವೇಟ್ ಲಿಮಿಟೆಡ್ ಮತ್ತು ಸೈರಸ್ ಇನ್ವೆಸ್ಟ್‌ಮೆಂಟ್ಸ್ ಪ್ರೈವೇಟ್ ಲಿಮಿಟೆಡ್ ಸಲ್ಲಿಸಿದ ಮೇಲ್ಮನವಿ ಕುರಿತು ಸುಪ್ರೀಂ ಕೋರ್ಟ್ ಶುಕ್ರವಾರ ಟಾಟಾ ಸನ್ಸ್ ಪರವಾಗಿ ತೀರ್ಪು ನೀಡಿದೆ. ರತನ್ ಟಾಟಾ ಅವರ ನಂತರ ಸೈರಸ್‌ ಮಿಸ್ತ್ರಿ 2012 ರಲ್ಲಿ 100 ಶತಕೋಟಿಗಿಂತಲೂ … Continued

ಶಾಶ್ವತ ಆಯೋಗಕ್ಕೆ ಸೇನಾ ಮಹಿಳಾ ಅಧಿಕಾರಿಗಳ ಪರಿಗಣಿಸಿ: ಸುಪ್ರೀಂಕೋರ್ಟ್‌ ಮಹತ್ವದ ಆದೇಶ

ನವ ದೆಹಲಿ: ಶಿಸ್ತು ಮತ್ತು ವಿಜಿಲೆನ್ಸ್ ಕ್ಲಿಯರೆನ್ಸ್‌ಗೆ ಒಳಪಟ್ಟ ಮಹಿಳಾ ಅಧಿಕಾರಿಗಳನ್ನು ಶಾಶ್ವತ ಆಯೋಗಕ್ಕೆ (ಪರ್ಮನೆಂಟ್‌ ಕಮಿಶನ್‌) ಪರಿಗಣಿಸಬೇಕು ಎಂದು ಗುರುವಾರ ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರಕ್ಕೆ ಆದೇಶಿಸಿದೆ.  ಇದನ್ನು ಜಾರಿಗೊಳಿಸದಿರುವ ಬಗ್ಗೆ ಮಹಿಳಾ ಸೇನಾಧಿಕಾರಿಗಳ ಮನವಿ ಆಲಿಸಿ ನ್ಯಾಯಾಲಯ ಈ ಆದೇಶ ಜಾರಿಗೊಳಿಸಿದೆ. ನಾವು ಈ ಅರ್ಜಿಗಳನ್ನು ಹಲವಾರು ನಿರ್ದೇಶನಗಳೊಂದಿಗೆ ಅನುಮತಿಸುತ್ತೇವೆ. ಶಿಸ್ತು ಮತ್ತು … Continued

ಪರಮ್‌ ಬೀರ್‌ ಮನವಿಗೆ ಪುರಸ್ಕರಿಸದ ಸುಪ್ರೀಂ ಕೋರ್ಟ್‌:ಹೈಕೋರ್ಟಿಗೆ ಹೋಗಿ ಎಂದ ನ್ಯಾಯಪೀಠ

ರಾಜ್ಯ ಗೃಹ ಸಚಿವ ಅನಿಲ್ ದೇಶ್ಮುಖ್ ಅವರ ಭ್ರಷ್ಟಾಚಾರದ ಬಗ್ಗೆ ಕೇಂದ್ರೀಯ ತನಿಖಾ ದಳ (ಸಿಬಿಐ) ತನಿಖೆ ನಡೆಸಬೇಕೆಂದು ಕೋರಿ ಮುಂಬೈ ಮಾಜಿ ಪೊಲೀಸ್ ಮುಖ್ಯಸ್ಥ ಪರಮ್ ಬಿರ್ ಸಿಂಗ್ ಅವರ ಮನವಿ ಪುರಸ್ಕರಿಸಲು ಸುಪ್ರೀಂಕೋರ್ಟ್ ಬುಧವಾರ ನಿರಾಕರಿಸಿದೆ. ಈ ವಿಷಯದಲ್ಲಿ ಮುಂಬೈ ಹೈಕೋರ್ಟ್‌ ಸಂಪರ್ಕಿಸುವಂತೆ ಉನ್ನತ ನ್ಯಾಯಾಲಯ ಕೇಳಿದೆ. ಪೊಲೀಸ್ ಇಲಾಖೆಯ ಮೂಲಕ ‘ಹಣ … Continued

ತಮ್ಮ ಉತ್ತರಾಧಿಕಾರಿಯಾಗಿ ನ್ಯಾಯಮೂರ್ತಿ ಎನ್‌.ವಿ. ರಮಣ ಹೆಸರು ಶಿಫಾರಸು ಮಾಡಿದ ಸಿಜೆಐ ಎಸ್‌.ಎ. ಬೊಬ್ಡೆ

ನವ ದೆಹಲಿ: ಹಿರಿತನದ ಮಾನದಂಡಗಳಿಗೆ ಅನುಗುಣವಾಗಿ ಭಾರತದ ಮುಖ್ಯ ನ್ಯಾಯಮೂರ್ತಿ ಎಸ್‌.ಎ. ಬೊಬ್ಡೆ ಅವರು ನ್ಯಾಯಮೂರ್ತಿ ಎನ್.ವಿ. ರಮಣ ಅವರನ್ನು ತಮ್ಮ ಉತ್ತರಾಧಿಕಾರಿ ಮತ್ತು ಭಾರತದ 48 ನೇ ಮುಖ್ಯ ನ್ಯಾಯಮೂರ್ತಿ ಎಂದು ಶಿಫಾರಸು ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಏಪ್ರಿಲ್ 23 ರಂದು ನಿವೃತ್ತಿಯಾಗಲಿರುವ ಸಿಜೆಐ ಬೊಬ್ಡೆ ಅವರು ಶಿಫಾರಸುಗಳನ್ನು ಸರ್ಕಾರಕ್ಕೆ ಕಳುಹಿಸಿದ್ದಾರೆ ಮತ್ತು … Continued