ಅರವಿಂದ ಕೇಜ್ರಿವಾಲಗೆ ಜಾಮೀನು ನೀಡಿದ ಸುಪ್ರೀಂ ಕೋರ್ಟ್‌ : ಆದರೆ…

ನವದೆಹಲಿ: ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದ ಸಿಬಿಐ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಅವರಿಗೆ ಸುಪ್ರೀಂ ಕೋರ್ಟ್ ಶುಕ್ರವಾರ (ಸೆಪ್ಟೆಂಬರ್ 13) ಅವರಿಗೆ ಜಾಮೀನು ನೀಡಿದೆ. ನ್ಯಾಯಮೂರ್ತಿ ಸೂರ್ಯಕಾಂತ ಮತ್ತು ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಅವರನ್ನೊಳಗೊಂಡ ಪೀಠವು ಕೇಜ್ರಿವಾಲ್‌ಗೆ ಜಾಮೀನು ನೀಡಿದೆ. ಆದಾಗ್ಯೂ, ಜಾಮೀನಿಗೆ ಕೆಲವು ಷರತ್ತುಗಳನ್ನು ವಿಧಿಸಿದೆ, ಇದರಲ್ಲಿ 10 ಲಕ್ಷ ರೂಪಾಯಿ … Continued

ದೆಹಲಿ ಅಬಕಾರಿ ನೀತಿ ಪ್ರಕರಣ: ಸಿಬಿಐ ಪ್ರಕರಣದಲ್ಲೂ ಕೇಜ್ರಿವಾಲಗೆ ಸುಪ್ರೀಂ ಕೋರ್ಟ್‌ ಜಾಮೀನು

ನವದೆಹಲಿ: ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಹೂಡಿದ್ದ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಮತ್ತು ಎಎಪಿ ಮುಖ್ಯಸ್ಥ ಅರವಿಂದ ಕೇಜ್ರಿವಾಲ್‌ ಅವರಿಗೆ ಸುಪ್ರೀಂ ಕೋರ್ಟ್‌ ಶುಕ್ರವಾರ ಜಾಮೀನು ನೀಡಿದೆ. ಇದೇ ವೇಳೆ, ಕೇಜ್ರಿವಾಲ್‌ ಅವರಿಗೆ ಜಾಮೀನು ನೀಡಿದ್ದರೂ ಕೇಜ್ರಿವಾಲ್ ಅವರನ್ನು ಸಿಬಿಐ ಬಂಧಿಸಿದ್ದು ಸಿಂಧುವೇ ಆಗಿದೆ. ಅದು ಸಂಬಂಧಿತ ಕಾರ್ಯವಿಧಾನದ ಕಾನೂನುಗಳ ಅನುಸಾರವಾಗಿಯೇ ಇದೆ … Continued

ದೆಹಲಿ ಅಬಕಾರಿ ನೀತಿ ಪ್ರಕರಣ: ಬಿಆರ್‌ ಎಸ್‌ ನಾಯಕಿ ಕವಿತಾಗೆ ಸುಪ್ರೀಂ ಕೋರ್ಟ್ ಜಾಮೀನು

ನವದೆಹಲಿ: ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಲಾಯ (ಇ.ಡಿ.) ಮತ್ತು ಸಿಬಿಐ ದಾಖಲಿಸಿದ್ದ ಎರಡೂ ಪ್ರಕರಣಗಳಲ್ಲಿ ಭಾರತ ರಾಷ್ಟ್ರ ಸಮಿತಿ (ಬಿಆರ್‌ಎಸ್) ನಾಯಕಿ ಕೆ. ಕವಿತಾ ಅವರಿಗೆ ಸುಪ್ರೀಂ ಕೋರ್ಟ್ ಮಂಗಳವಾರ ಜಾಮೀನು ಮಂಜೂರು ಮಾಡಿದೆ. ತನಿಖೆ ಪೂರ್ಣಗೊಂಡಿದ್ದು ವಿಚಾರಣೆ ಪೂರ್ಣಗೊಳ್ಳಲು ಸಾಕಷ್ಟು ಸಮಯ ಹಿಡಿಯುವುದರಿಂದ ಈ ಆದೇಶ ನೀಡುತ್ತಿರುವುದಾಗಿ ನ್ಯಾಯಮೂರ್ತಿಗಳಾದ ಬಿ.ಆರ್. … Continued

‘ಎಲ್ಲವನ್ನೂ ಬದಲಾಯಿಸಲಾಗಿದೆ, ನಾವು 5ನೇ ದಿನದಂದು ತನಿಖೆಗೆ ಪ್ರವೇಶಿಸಿದ್ದೇವೆ’: ಕೋಲ್ಕತ್ತಾ ಅತ್ಯಾಚಾರ-ಕೊಲೆ ಪ್ರಕರಣದ ಬಗ್ಗೆ ಸುಪ್ರೀಂ ಕೋರ್ಟ್‌ಗೆ ಸಿಬಿಐ

ನವದೆಹಲಿ: ಕೋಲ್ಕತ್ತಾ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ತನಿಖೆ ನಡೆಸುತ್ತಿರುವ ಕೇಂದ್ರೀಯ ತನಿಖಾ ದಳ (ಸಿಬಿಐ) ಗುರುವಾರ ಸುಪ್ರೀಂ ಕೋರ್ಟ್‌ಗೆ 5 ನೇ ದಿನದಂದು ತನಿಖೆಯನ್ನು ಹಸ್ತಾಂತರಿಸಲಾಯಿತು ಮತ್ತು ಆ ಹೊತ್ತಿಗೆ ಎಲ್ಲವನ್ನೂ “ಬದಲಾಯಿಸಲಾಗಿದೆ” ಎಂದು ತಿಳಿಸಿದೆ. ಸಿಬಿಐ ಅನ್ನು ಪ್ರತಿನಿಧಿಸಿದ್ದ ಸಾಲಿಸಿಟರ್ ಜನರಲ್ (ಎಸ್‌ಜಿ) ತುಷಾರ್ ಮೆಹ್ತಾ ಅವರು, “ಸಿಬಿಐ ಐದನೇ ದಿನದಲ್ಲಿ … Continued

ಗೌರಿ ಲಂಕೇಶ್ ಹತ್ಯೆ ಪ್ರಕರಣ: ಆರೋಪಿ ಮೋಹನ ನಾಯಕ್ ಜಾಮೀನು ಆದೇಶ ಎತ್ತಿ ಹಿಡಿದ ಸುಪ್ರೀಂ ಕೋರ್ಟ್

ನವದೆಹಲಿ: ಪತ್ರಕರ್ತೆ ಗೌರಿ ಲಂಕೇಶ್‌ ಹತ್ಯೆ ಪ್ರಕರಣದ ಆರೋಪಿಗಳಿಗೆ ಆಶ್ರಯ ಕಲ್ಪಿಸಿದ ಆರೋಪಕ್ಕೆ ಗುರಿಯಾಗಿದ್ದ ಎನ್‌. ಮೋಹನ ನಾಯಕ್‌ಗೆ ನೀಡಿದ್ದ ಜಾಮೀನು ರದ್ದುಗೊಳಿಸಲು ಸುಪ್ರೀಂ ಕೋರ್ಟ್‌ ಆಗಸ್ಟ್ 20ರಂದು ನಿರಾಕರಿಸಿದೆ ಎಂದು ಬಾರ್‌ & ಬೆಂಚ್‌ ವರದಿ ಮಾಡಿದೆ. ನ್ಯಾಯಮೂರ್ತಿಗಳಾದ ಬೇಲಾ ಎಂ. ತ್ರಿವೇದಿ ಮತ್ತು ಸತೀಶಚಂದ್ರ ಶರ್ಮಾ ಅವರಿದ್ದ ಪೀಠ ಕರ್ನಾಟಕ ಹೈಕೋರ್ಟ್‌ ನೀಡಿದ್ದ … Continued

ಆರ್‌ ಜಿ ಕರ್ ಕಾಲೇಜು ಟ್ರೈನಿ ವೈದ್ಯೆ ಅತ್ಯಾಚಾರ-ಹತ್ಯೆ ಪ್ರಕರಣ : ವೈದ್ಯಕೀಯ ವೃತ್ತಿಪರರ ಸುರಕ್ಷತೆಗೆ ರಾಷ್ಟ್ರೀಯ ಕಾರ್ಯಪಡೆ ರಚಿಸಿದ ಸುಪ್ರೀಂ ಕೋರ್ಟ್‌

ನವದೆಹಲಿ: ವೈದ್ಯರ ಸುರಕ್ಷತೆಗಾಗಿ ರಾಷ್ಟ್ರೀಯ ಕಾರ್ಯಪಡೆ (National Task Force) ಸ್ಥಾಪಿಸಿರುವ ಸುಪ್ರೀಂ ಕೋರ್ಟ್, ಮೂರು ವಾರಗಳಲ್ಲಿ ಮಧ್ಯಂತರ ವರದಿಯನ್ನು ಸಲ್ಲಿಸುವಂತೆ ಸೂಚಿಸಿದೆ. ದೇಶವನ್ನೇ ಬೆಚ್ಚಿಬೀಳಿಸಿದ ಕೋಲ್ಕತ್ತಾ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ವಿಚಾರಣೆಯನ್ನು ನ್ಯಾಯಾಲಯ ಕೈಗೆತ್ತಿಕೊಂಡ ನಂತರ ಈ ನಿರ್ಧಾರ ಹೊರಬಿದ್ದಿದೆ. ಈ ಸಂಬಂಧ ಮೂರು ವಾರಗಳಲ್ಲಿ ಮಧ್ಯಂತರ ವರದಿ ಮತ್ತು ಎರಡು … Continued

ಕೋಲ್ಕತ್ತಾ ಆಸ್ಪತ್ರೆಯಲ್ಲಿ ವೈದ್ಯೆ ಅತ್ಯಾಚಾರ-ಕೊಲೆ: ಸುಪ್ರೀಂ ಕೋರ್ಟ್ ನಿಂದ ಸ್ವಯಂ ಪ್ರೇರಿತ ವಿಚಾರಣೆ

ನವದೆಹಲಿ: ಪ್ರಮುಖ ಬೆಳವಣಿಗೆಯಲ್ಲಿ, ಇಡೀ ದೇಶವನ್ನು ಬೆಚ್ಚಿಬೀಳಿಸಿದ ಕೋಲ್ಕತ್ತಾ ಅತ್ಯಾಚಾರ-ಕೊಲೆ ಪ್ರಕರಣವನ್ನು ಸುಪ್ರೀಂ ಕೋರ್ಟ್ ಸ್ವಯಂ ಪ್ರೇರಿತವಾಗಿ ಸ್ವೀಕರಿಸಿದ್ದು, ಮಂಗಳವಾರ (ಆಗಸ್ಟ್ 20) ವಿಚಾರಣೆ ನಡೆಸಲಿದೆ. ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ, ನ್ಯಾಯಮೂರ್ತಿ ಜೆ.ಬಿ. ಪರ್ದಿವಾಲಾ, ನ್ಯಾಯಮೂರ್ತಿ ಮನೋಜ ಮಿಶ್ರಾ ನೇತೃತ್ವದ ಪೀಠದಲ್ಲಿ ವಿಚಾರಣೆ ನಡೆಯಲಿದೆ. ಕ್ರೂರವಾಗಿ ಅತ್ಯಾಚಾರ ಮತ್ತು ಹತ್ಯೆಗೀಡಾದ ಟ್ರೈನಿ ವೈದ್ಯೆಗೆ … Continued

ಬಾಬಾ ರಾಮದೇವ, ಆಚಾರ್ಯ ಬಾಲಕೃಷ್ಣಗೆ ದೊಡ್ಡ ರಿಲೀಫ್ ನೀಡಿದ ಸುಪ್ರೀಂ ಕೋರ್ಟ್‌

ನವದೆಹಲಿ: ಪತಂಜಲಿ ಆಯುರ್ವೇದ ಸಂಸ್ಥೆ, ಅದರ ಸಂಸ್ಥಾಪಕರಾದ ಬಾಬಾ ರಾಮದೇವ ಹಾಗೂ ಆಚಾರ್ಯ ಬಾಲಕೃಷ್ಣ ಅವರ ವಿರುದ್ಧ ದಾಖಲಿಸಲಾಗಿದ್ದ ನ್ಯಾಯಾಂಗ ನಿಂದನೆ ಮೊಕದ್ದಮೆಯನ್ನು ಸುಪ್ರೀಂ ಕೋರ್ಟ್‌ ಕೈಬಿಟ್ಟಿದೆ. ಪುರಾವೆ ಆಧಾರಿತ ಔಷಧಗಳನ್ನು ಗುರಿಯಾಗಿಸಿಕೊಂಡು ದಾರಿ ತಪ್ಪಿಸುವ ಜಾಹೀರಾತು ಪ್ರಕಟಿಸಿದ್ದ ಪತಂಜಲಿ ಆಯುರ್ವೇದ ಮತ್ತದರ ಪ್ರವರ್ತಕರಾದ ಬಾಬಾ ರಾಮದೇವ್‌ ಹಾಗೂ ಆಚಾರ್ಯ ಬಾಲಕೃಷ್ಣ ಅವರು ಸುಪ್ರೀಂ ಕೋರ್ಟ್‌ನಿಂದ … Continued

ಬಾಂಗ್ಲಾದೇಶ ಬಿಕ್ಕಟ್ಟು | ಸುಪ್ರೀಂ ಕೋರ್ಟಿಗೆ ಮುತ್ತಿಗೆ ; ನ್ಯಾಯಾಂಗಕ್ಕೂ ಬೆದರಿಕೆ ; ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ರಾಜೀನಾಮೆ

ಢಾಕಾ: ಸುಪ್ರೀಂ ಕೋರ್ಟ್‌ಗೆ ಮುತ್ತಿಗೆ ಹಾಕಿದ ವಿದ್ಯಾರ್ಥಿಗಳ ಬೃಹತ್ ಪ್ರತಿಭಟನೆಯ ನಂತರ ಬಾಂಗ್ಲಾದೇಶದ ಮುಖ್ಯ ನ್ಯಾಯಮೂರ್ತಿ ಒಬೈದುಲ್ ಹಸನ್ ಅವರು ಶನಿವಾರ (ಆಗಸ್ಟ್‌ 10) ರಾಜೀನಾಮೆ ನೀಡಿದ್ದಾರೆ. ರಾಜೀನಾಮೆ ನೀಡಲು ಪ್ರತಿಭಟನಾಕಾರರು ಗಡುವು ನೀಡಿದ ನಂತರ “ತಾತ್ವಿಕವಾಗಿ” ರಾಜೀನಾಮೆ ನೀಡಲು ಹಸನ್ ಅವರು ಒಪ್ಪಿಕೊಂಡರು. ಅವರು ಕಳೆದ ವರ್ಷ ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕಗೊಂಡಿದ್ದರು. … Continued

ಹಿಜಾಬ್ ನಿಷೇಧ | ಮುಂಬೈ ಕಾಲೇಜಿಗೆ ಸುಪ್ರೀಂ ಕೋರ್ಟ್ ತರಾಟೆ; ವಸ್ತ್ರ ಸಂಹಿತೆಗೆ ತಡೆ

ನವದೆಹಲಿ : ಕ್ಯಾಂಪಸ್‌ನಲ್ಲಿ ವಿದ್ಯಾರ್ಥಿಗಳು ಬುರ್ಖಾ ಮತ್ತು ಹಿಜಾಬ್ ಧರಿಸುವುದನ್ನು ನಿಷೇಧಿಸಿರುವ ಮುಂಬೈ ಕಾಲೇಜಿನ ವಿರುದ್ಧ ತೀವ್ರವಾಗಿ ವಾಗ್ದಾಳಿ ನಡೆಸಿದ ಸುಪ್ರೀಂ ಕೋರ್ಟ್, ಮಹಿಳೆಯರಿಗೆ ಏನು ಧರಿಸಬೇಕೆಂದು ಹೇಳುವ ಮೂಲಕ ನೀವು ಹೇಗೆ ಮಹಿಳೆಯರ ಸಬಲೀಕರಣ ಮಾಡುತ್ತಿದ್ದೀರಿ ಎಂದು ಸಂಸ್ಥೆಯ ಅಧಿಕಾರಿಗಳನ್ನು ಪ್ರಶ್ನಿಸಿದೆ. ಸ್ವಾತಂತ್ರ್ಯ ಬಂದು ಇಷ್ಟು ವರ್ಷಗಳ ನಂತರವೂ ಇಂತಹ ನಿಷೇಧಗಳನ್ನು ಹೇರಿರುವುದು ದುರದೃಷ್ಟಕರ … Continued