ಅಮಾನತುಗೊಂಡ 14 ಉತ್ಪನ್ನಗಳ ಮಾರಾಟ ಸ್ಥಗಿತ ; ಅಂಗಡಿಗಳಿಂದ ಹಿಂಪಡೆಯಲು ಸೂಚನೆ : ಸುಪ್ರೀಂ ಕೋರ್ಟ್‌ ಗೆ ತಿಳಿಸಿದ ಪತಂಜಲಿ

ನವದೆಹಲಿ: ನವದೆಹಲಿ: ಉತ್ತರಾಖಂಡ ರಾಜ್ಯದ ಪರವಾನಗಿ ಪ್ರಾಧಿಕಾರವು ಏಪ್ರಿಲ್‌ನಲ್ಲಿ ಉತ್ಪಾದನಾ ಪರವಾನಗಿ ಅಮಾನತುಗೊಳಿಸಿದ್ದರಿಂದ 14 ಉತ್ಪನ್ನಗಳ ಮಾರಾಟ ಸ್ಥಗಿತಗೊಳಿಸಲಾಗಿದೆ ಎಂದು ಪತಂಜಲಿ ಆಯುರ್ವೇದ ಲಿಮಿಟೆಡ್‌ ಮಂಗಳವಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ. ಈ ಉತ್ಪನ್ನಗಳನ್ನು ಮಾರುಕಟ್ಟೆಯಿಂದ ಹಿಂತೆಗೆದುಕೊಳ್ಳುವಂತೆ 5,606 ಫ್ರಾಂಚೈಸ್ ಸ್ಟೋರ್‌ಗಳಿಗೆ ಸೂಚನೆಗಳನ್ನು ನೀಡಲಾಗಿದೆ ಎಂದು ಪತಂಜಲಿ ಸಂಸ್ಥೆ ಸುಪ್ರೀಂ ಕೋರ್ಟ್ ಗೆ ಮಾಹಿತಿ ನೀಡಿದೆ. ಅದು … Continued

ವಿಚ್ಛೇದಿತ ಮುಸ್ಲಿಂ ಮಹಿಳೆಯರು ಜೀವನಾಂಶ ಪಡೆಯಲು ಅರ್ಹರು : ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

ನವದೆಹಲಿ: ಸಿಆರ್‌ಪಿಸಿ ಸೆಕ್ಷನ್ 125ರ ಅಡಿ ವಿಚ್ಛೇದಿತ ಮುಸ್ಲಿಂ ಮಹಿಳೆ ತನ್ನ ಮಾಜಿ ಪತಿಯಿಂದ ಜೀವನಾಂಶ ಪಡೆಬಹುದು ಎಂದು ಸುಪ್ರೀಂ ಕೋರ್ಟ್‌ ಬುಧವಾರ ಮಹತ್ವದ ತೀರ್ಪು ನೀಡಿದೆ. ಹಾಗೂ ಅವರ ಧರ್ಮವನ್ನು ಲೆಕ್ಕಿಸದೆ ಇದು ಎಲ್ಲಾ ವಿವಾಹಿತ ಮಹಿಳೆಯರಿಗೆ ಅನ್ವಯಿಸುತ್ತದೆ ಎಂದು ಹೇಳಿದೆ. ತನ್ನ ಮಾಜಿ ಪತ್ನಿಗೆ ₹10,000 ಮಧ್ಯಂತರ ಜೀವನಾಂಶ ನೀಡುವಂತೆ ತೆಲಂಗಾಣ ಹೈಕೋರ್ಟ್ … Continued

ಮಹಿಳೆಯರಿಗೆ ಮುಟ್ಟಿನ ರಜೆ : ಮಾದರಿ ನೀತಿ ರೂಪಿಸಲು ಕೇಂದ್ರಕ್ಕೆ ಸುಪ್ರೀಂಕೋರ್ಟ್ ಸೂಚನೆ

ನವದೆಹಲಿ : ಮಹಿಳಾ ಉದ್ಯೋಗಿಗಳ ಮುಟ್ಟಿನ ರಜೆ ಕುರಿತು ಮಧ್ಯಸ್ಥಗಾರರೊಂದಿಗೆ ಸಮಾಲೋಚನೆ ನಡೆಸಿ ಮಾದರಿ ನೀತಿ ರಚಿಸುವಂತೆ ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ಸೋಮವಾರ ನಿರ್ದೇಶನ ನೀಡಿದೆ. ಈ ಸಂಬಂಧ ರಾಜ್ಯ ಸರ್ಕಾರಗಳ ಜತೆ ಸಮಾಲೋಚನೆ ನಡೆಸುವಂತೆಯೂ ಸೂಚಿಸಿದೆ. ಮಹಿಳಾ ಉದ್ಯೋಗಿಗಳಿಗೆ ಮುಟ್ಟಿನ ಕಡ್ಡಾಯ ರಜೆ ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ … Continued

ಜಾಮೀನಿಗೆ ಹೈಕೋರ್ಟ್ ತಡೆ; ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಅರವಿಂದ ಕೇಜ್ರಿವಾಲ್

ನವದೆಹಲಿ: ಜಾರಿ ನಿರ್ದೇಶನಾಲಯದ ಅರ್ಜಿ ವಿಚಾರಣೆ ನಡೆಯುವವರೆಗೆ ಮದ್ಯ ನೀತಿ ಪ್ರಕರಣಕ್ಕೆ ಸಂಬಂಧಿಸಿದ ಭ್ರಷ್ಟಾಚಾರ ಪ್ರಕರಣದಲ್ಲಿ ದೆಹಲಿ ಹೈಕೋರ್ಟ್ ತನ್ನ ಜಾಮೀನಿಗೆ ತಡೆ ನೀಡಿರುವುದನ್ನು ಪ್ರಶ್ನಿಸಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ. ಕೇಜ್ರಿವಾಲ್ ಅವರು ತಿಹಾರ್ ಜೈಲಿನಿಂದ ಬಿಡುಗಡೆಯಾಗುವ ಗಂಟೆಗಳ ಮೊದಲು ಅವರಿಗೆ ನೀಡಲಾದ ಜಾಮೀನನ್ನು ಇ.ಡಿ.ದೆಹಲಿ ಹೈಕೋರ್ಟಿನಲ್ಲಿ ಪ್ರಶ್ನಿಸಿತ್ತು. ಶುಕ್ರವಾರ … Continued

‘ಹಮಾರೆ ಬಾರಹ’ ಸಿನಿಮಾ ಬಿಡುಗಡೆಗೆ ಸುಪ್ರೀಂಕೋರ್ಟ್‌ ತಡೆ

ನವದೆಹಲಿ: ಹಮಾರೆ ಬಾರಹ’ ಚಿತ್ರದ ಬಿಡುಗಡೆಗೆ ಸುಪ್ರೀಂ ಕೋರ್ಟ್ ಗುರುವಾರ ತಡೆ ನೀಡಿದ್ದು ಇಸ್ಲಾಮ್‌ ನಂಬಿಕೆ ಮತ್ತು ವಿವಾಹಿತ ಮುಸ್ಲಿಂ ಮಹಿಳೆಯರನ್ನು ಅವಹೇಳನ ಮಾಡುತ್ತದೆ ಎಂದು ಆರೋಪಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ ತ್ವರಿತ ನಿರ್ಧಾರ ತೆಗೆದುಕೊಳ್ಳುವಂತೆ ಬಾಂಬೆ ಹೈಕೋರ್ಟ್‌ಗೆ ಸೂಚಿಸಿದೆ. ಚಲನಚಿತ್ರ ಪ್ರಮಾಣೀಕರಣ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯ ಇತ್ಯರ್ಥವಾಗುವವರೆಗೆ ಚಲನಚಿತ್ರ ಪ್ರದರ್ಶನ ಮಾಡುವಂತಿಲ್ಲ ಎಂದು ನ್ಯಾಯಮೂರ್ತಿಗಳಾದ ವಿಕ್ರಂನಾಥ … Continued

ನೀಟ್‌ ಪರೀಕ್ಷೆ ವಿವಾದ : ಕೃಪಾಂಕ ರದ್ದು, ಕಡಿಮೆ ಸಮಯಾವಕಾಶ ಸಿಕ್ಕವರಿಗೆ ಮರುಪರೀಕ್ಷೆ ; ಸುಪ್ರೀಂ ಕೋರ್ಟಿಗೆ ಕೇಂದ್ರ

ನವದೆಹಲಿ: ಪ್ರಸಕ್ತ ಸಾಲಿನ ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶಾತಿ ಪದವಿ ಪರೀಕ್ಷೆ (ನೀಟ್‌ ಯುಜಿ 2024) ಬರೆಯಲು ಕಡಿಮೆ ಕಾಲಾವಕಾಶ ದೊರೆತಿದ್ದ ಅಭ್ಯರ್ಥಿಗಳಿಗೆ ಮರು ಪರೀಕ್ಷೆ ಬರೆಯುವ ಇಲ್ಲವೇ ಸಮಯದ ನಷ್ಟ ಅನುಭವಿಸಿದ್ದಕ್ಕಾಗಿ ಈ ಹಿಂದೆ ನೀಡಲಾಗಿದ್ದ ಕೃಪಾಂಕ ತ್ಯಜಿಸುವ ಆಯ್ಕೆ ನೀಡಲಾಗುತ್ತದೆ ಎಂದು ಕೇಂದ್ರ ಸರ್ಕಾರ ಗುರುವಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ. ಅಸಮರ್ಪಕವಾಗಿ ನಡೆದ … Continued

ಆರ್‌ಎಸ್‌ಎಸ್‌ ನಾಯಕರ ಭಾವಚಿತ್ರದ ಸಮೇತ ಸಿಕ್ಕಿಬಿದ್ದಿದ್ದ 8 ಪಿಎಫ್ಐ ಸದಸ್ಯರ ಜಾಮೀನು ರದ್ದುಗೊಳಿಸಿದ ಸುಪ್ರೀಂ ಕೊರ್ಟ್‌

ನವದೆಹಲಿ: ದೇಶಾದ್ಯಂತ ಭಯೋತ್ಪಾದಕ ಕೃತ್ಯಗಳನ್ನು ಎಸಗಲು ಸಂಚು ರೂಪಿಸಿದ್ದಕ್ಕಾಗಿ ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯಿದೆ (ಯುಎಪಿಎ) ಅಡಿ ಬಂಧಿತರಾಗಿದ್ದ ಎಂಟು ಮಂದಿ ನಿಷೇಧಿತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಸದಸ್ಯರಿಗೆ ಮದ್ರಾಸ್ ಹೈಕೋರ್ಟ್ ನೀಡಿದ್ದ ಜಾಮೀನನ್ನು ಸುಪ್ರೀಂ ಕೋರ್ಟ್ ಬುಧವಾರ ರದ್ದುಗೊಳಿಸಿದೆ. ಆರ್‌ಎಸ್‌ಎಸ್‌ ಹಾಗೂ ಹಿಂದೂ ಸಂಘಟನೆಗಳಿಗೆ ಸೇರಿದ ವಿವಿಧ ನಾಯಕರ ಭಾವಚಿತ್ರ ಸೇರಿದಂತೆ … Continued

“ಬಂಧನ ಅನೂರ್ಜಿತ” : ನ್ಯೂಸ್‌ಕ್ಲಿಕ್ ಸಂಸ್ಥಾಪಕ ಪುರಕಾಯಸ್ಥ ಬಿಡುಗಡೆಗೆ ಸುಪ್ರೀಂ ಕೋರ್ಟ್ ಆದೇಶ

ನವದೆಹಲಿ : ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯಿದೆ (ಯುಎಪಿಎ) ಅಡಿ ನ್ಯೂಸ್‌ಕ್ಲಿಕ್‌ ಸುದ್ದಿ ಜಾಲತಾಣದ ಪ್ರಧಾನ ಸಂಪಾದಕ ಪ್ರಬೀರ ಪುರಕಾಯಸ್ಥ ಅವರ ಬಂಧನವನ್ನು ಸುಪ್ರೀಂಕೋರ್ಟ್‌ ಬುಧವಾರ ರದ್ದುಗೊಳಿಸಿದೆ. ಪುರಕಾಯಸ್ಥ ಅವರಿಂದ ಶ್ಯೂರಿಟಿ ಮತ್ತು ಜಾಮೀನು ಬಾಂಡ್ ಪಡೆದು ಬಿಡುಗಡೆ ಮಾಡುವಂತೆ ನ್ಯಾಯಮೂರ್ತಿಗಳಾದ ಬಿ.ಆರ್. ಗವಾಯಿ ಮತ್ತು ಸಂದೀಪ ಮೆಹ್ತಾ ಅವರಿದ್ದ ಪೀಠ ಆದೇಶಿಸಿದೆ. ರಿಮಾಂಡ್ ಅರ್ಜಿಯ … Continued

ಪತಂಜಲಿ ನ್ಯಾಯಾಂಗ ನಿಂದನೆ ಪ್ರಕರಣ: ತೀರ್ಪು ಕಾಯ್ದಿರಿಸಿದ ಸುಪ್ರೀಂ ಕೋರ್ಟ್

ನವದೆಹಲಿ:  ಪತಂಜಲಿ ಆಯುರ್ವೇದ ಕಂಪನಿ ಮತ್ತು ಮಾಲೀಕರಾದ ಬಾಬಾ ರಾಮದೇವ ಮತ್ತು ಆಚಾರ್ಯ ಬಾಲಕೃಷ್ಣ ಅವರು ತಪ್ಪುದಾರಿಗೆಳೆಯುವ ಜಾಹೀರಾತುಗಳನ್ನು ನೀಡಿದ್ದ ಸಂಬಂಧ ದಾಖಲಿಸಲಾದ ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಂಗಳವಾರ ತೀರ್ಪನ್ನು ಕಾಯ್ದಿರಿಸಿದೆ. ಪತಂಜಲಿ ಉತ್ಪನ್ನಗಳ ಕುರಿತು ಪ್ರಕಟಿಸಲಾಗಿದ್ದ ತಪ್ಪುದಾರಿಗೆಳೆಯುವ ಜಾಹೀರಾತುಗಳನ್ನು ತೆಗೆದುಹಾಕಲು ತೆಗೆದುಕೊಂಡ ಕ್ರಮಗಳ ಬಗ್ಗೆ ಅಫಿಡವಿಟ್‌ ಸಲ್ಲಿಸಲಾಗುವುದು ಎಂದು ಪತಂಜಲಿ ತಿಳಿಸಿದ … Continued

ನರೇಂದ್ರ ಮೋದಿ ಚುನಾವಣೆಯಲ್ಲಿ ಸ್ಪರ್ಧಿಸದಂತೆ ನಿರ್ಬಂಧಿಸಲು ಕೋರಿದ್ದ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್

ನವದೆಹಲಿ: ಲೋಕಸಭಾ ಚುನಾವಣೆ ಪ್ರಚಾರದ ವೇಳೆ ದೇವರು ಮತ್ತು ಪೂಜಾ ಸ್ಥಳದ ಹೆಸರಿನಲ್ಲಿ ಮತ ಯಾಚಿಸುವ ಮೂಲಕ ಮಾದರಿ ನೀತಿ ಸಂಹಿತೆ (ಎಂಸಿಸಿ) ಉಲ್ಲಂಘಿಸಿರುವ ಆರೋಪದಡಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಆರು ವರ್ಷಗಳ ಕಾಲ ಚುನಾವಣೆಯಲ್ಲಿ ಸ್ಪರ್ಧಿಸದಂತೆ ನಿರ್ಬಂಧಿಸಬೇಕು ಎಂದು ಕೋರಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ಮಂಗಳವಾರ ತಿರಸ್ಕರಿಸಿದೆ [ಫಾತಿಮಾ ಮತ್ತು ಭಾರತೀಯ … Continued