ಮಧ್ಯಂತರ ಜಾಮೀನು ಸಿಕ್ಕರೂ ಕೇಜ್ರಿವಾಲ್‌ ದೆಹಲಿ ಸಿಎಂ ಕಚೇರಿಗೆ ಹೋಗುವಂತಿಲ್ಲ…

ನವದೆಹಲಿ: ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಅವರಿಗೆ ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್‌ ಶುಕ್ರವಾರ ಷರತ್ತುಬದ್ಧ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಆದರೆ, ಮಧ್ಯಂತರ ಜಾಮೀನು ನೀಡುವಾಗ ಮುಖ್ಯಮಂತ್ರಿ ಕಚೇರಿ ಹಾಗೂ ಸಚಿವಾಲಯಕ್ಕೆ ಹೋಗುವಂತಿಲ್ಲ, ಕಡತಗಳಿಗೆ ಸಹಿ ಹಾಕುವಂತಿಲ್ಲ ಎಂದು ಕೇಜ್ರಿವಾಲ್‌ಗೆ ಸುಪ್ರಿಂ ಕೋರ್ಟ್‌ ಸೂಚಿಸಿದೆ. ಮಧ್ಯಂತರ ಜಾಮೀನು … Continued

ಚಿತ್ರದುರ್ಗ ನ್ಯಾಯಾಲಯಕ್ಕೆ ಶರಣಾದ ಶಿವಮೂರ್ತಿ ಮುರುಘಾ ಶರಣರು

ಚಿತ್ರದುರ್ಗ : ಸುಪ್ರೀಂ ಕೋರ್ಟ್‌ ನಿರ್ದೇಶನದಂತೆ ಚಿತ್ರದುರ್ಗದ ಮುರುಘಾ ಮಠದ ಡಾ. ಶಿವಮೂರ್ತಿ ಮುರುಘಾ ಶರಣರು ಸೋಮವಾರ ಚಿತ್ರದುರ್ಗದ ನ್ಯಾಯಾಲಯದ ಮುಂದೆ ಶರಣಾಗಿದ್ದಾರೆ. ಸೋಮವಾರ ಅಪರಾಹ್ನದ ವೇಳೆಗೆ ಪೋಕ್ಸೊ ವಿಶೇಷ ನ್ಯಾಯಾಲಯದ ಉಸ್ತುವಾರಿಯಾಗಿರುವ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ಮುಂದೆ ಮುರುಘಾ ಶರಣರು ಹಾಜರಾದರು. ಈ ವಿಚಾರವನ್ನು ದಾಖಲಿಸಿಕೊಂಡ ನ್ಯಾಯಾಧೀಶರು ಆರೋಪಿ ಸ್ವಾಮೀಜಿಯನ್ನು … Continued

‘ಅನುಮಾನ ಆಧರಿಸಿ ಇವಿಎಂ ವಿರುದ್ಧ ನಿರ್ದೇಶನ ನೀಡಲು ಸಾಧ್ಯವೇ? : ಸುಪ್ರೀಂ ಕೋರ್ಟ್ ಪ್ರಶ್ನೆ

ನವದೆಹಲಿ: ದೃಢ ಪುರಾವೆಗಳಿಲ್ಲದೆ ಹ್ಯಾಕ್‌ ಆಗಿದೆ, ಇಲ್ಲವೇ ತಿರುಚಲಾಗಿದೆ ಎಂಬ ಶಂಕೆಯ ಆಧಾರದ ಮೇಲೆ ವಿದ್ಯುನ್ಮಾನ ಮತಯಂತ್ರಗಳ (ಇವಿಎಂ) ಬಳಕೆಗೆ ಸಂಬಂಧಿಸಿದಂತೆ ನಿರ್ದೇಶನಗಳನ್ನು ನೀಡಬಹುದೇ ಎಂದು ಸುಪ್ರೀಂ ಕೋರ್ಟ್‌ ಬುಧವಾರ ಪ್ರಶ್ನಿಸಿದೆ. ಇವಿಎಂಗಳ ಮೂಲಕ ಚಲಾವಣೆಯಾದ ಪ್ರತಿ ಮತವನ್ನು ಚುನಾವಣಾ ಸಮಯದಲ್ಲಿ ವೋಟರ್-ವೆರಿಫೈಬಲ್ ಪೇಪರ್ ಆಡಿಟ್ ಟ್ರಯಲ್ (ವಿವಿಪಿಎಟಿ) ಚೀಟಿಗಳೊಂದಿಗೆ ತಾಳೆ ಮಾಡಲು ನಿರ್ದೇಶನ ನಿಡುವಂತೆ … Continued

ಪೋಕ್ಸೋ ಪ್ರಕರಣ : ಮುರುಘಾ ಶರಣರ ಜಾಮೀನು ರದ್ದುಗೊಳಿಸಿದ ಸುಪ್ರೀಂಕೋರ್ಟ್

ನವದೆಹಲಿ : ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಖಲಾಗಿರುವ ಫೋಕ್ಸೋ ಪ್ರಕರಣದಡಿ ವಿಚಾರಣೆ ಎದುರಿಸುತ್ತಿರುವ ಚಿತ್ರದುರ್ಗದ ಮುರುಘಾಮಠದ ಮುರುಘಾ ಶರಣರ ಜಾಮೀನನ್ನು ಸುಪ್ರೀಂ ಕೋರ್ಟ್‌ ರದ್ದುಗೊಳಿಸಿದ್ದು, ನಾಲ್ಕು ತಿಂಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ. ಒಂದು ವಾರದಲ್ಲಿ ನ್ಯಾಯಾಂಗ ಬಂಧನಕ್ಕೆ ತೆರಳುವಂತೆ ಸುಪ್ರೀಂ ಕೋರ್ಟ್‌ ಸೂಚನೆ ನೀಡಿದೆ. ಮುರುಘಾ ಶರಣರನ್ನು … Continued

ನೀವು ಅಮಾಯಕರಲ್ಲ : ಬಾಬಾ ರಾಮದೇವ, ಆಚಾರ್ಯ ಬಾಲಕೃಷ್ಣಗೆ ಸುಪ್ರೀಂ ಕೋರ್ಟ್‌ ಮತ್ತೆ ತರಾಟೆ

ನವದೆಹಲಿ: ಆಧುನಿಕ ವೈದ್ಯ ಪದ್ಧತಿಯನ್ನು ಅವಹೇಳನ ಮಾಡಿ ದಾರಿ ತಪ್ಪಿಸುವಂತಹ ಜಾಹೀರಾತು ಪ್ರಸಾರ ಮಾಡಿದ್ದಕ್ಕಾಗಿ ಪತಂಜಲಿ ಆಯುರ್ವೇದ ಪ್ರವರ್ತಕರಾದ ಬಾಬಾ ರಾಮದೇವ ಮತ್ತು ಆಚಾರ್ಯ ಬಾಲಕೃಷ್ಣ ಅವರು ಯಾಚಿಸಿರುವ ಕ್ಷಮೆಯ ನೈಜತೆ ಗ್ಗೆ ತಿಳಿಯಲು ಸುಪ್ರೀಂ ಕೋರ್ಟ್‌ ಮಂಗಳವಾರ ಈ ಇಬ್ಬರೊಂದಿಗೆ ವೈಯಕ್ತಿಕ ಸಂವಹನ ನಡೆಸಿತು. ಈ ಹಂತದಲ್ಲಿ ಅವರಿಬ್ಬರೂ ಕ್ಷಮೆ ಯಾಚಿಸಿದರಾದರೂ ನ್ಯಾಯಮೂರ್ತಿಗಳಾದ ಹಿಮಾ … Continued

ತೀರ್ಪು ಬಾಕಿ ಇರುವ ಪ್ರಕರಣಗಳ ಕುರಿತು ಹೇಳಿಕೆ ನೀಡಲು ಸಾಮಾಜಿಕ ಮಾಧ್ಯಮಗಳ ದುರ್ಬಳಕೆ: ಸುಪ್ರೀಂ ಕೋರ್ಟ್ ಕಳವಳ

ನವದೆಹಲಿ: ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳ ಕುರಿತು ಸತ್ಯ ತಿರುಚಿ ಹೇಳಿಕೆ ನೀಡಲು ಸಾಮಾಜಿಕ ಮಾಧ್ಯಮವನ್ನು ವ್ಯಾಪಕವಾಗಿ ದುರ್ಬಳಕೆ ಮಾಡಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್ ಕಳವಳ ವ್ಯಕ್ತಪಡಿಸಿದೆ. ನ್ಯಾಯಾಲಯದ ಭುಜಗಳು ಟೀಕೆಗಳನ್ನು ಭರಿಸುವಷ್ಟು ದೊಡ್ಡದಿವೆ. ಆದರೂ ಸಾಮಾಜಿಕ ಮಾಧ್ಯಮದಲ್ಲಿ ಹೇಳಿಕೆ ನೀಡಿ ಸತ್ಯ ತಿರುಚುವುದನ್ನು ಸಹಿಸಲಾಗದು ಎಂದು ನ್ಯಾಯಮೂರ್ತಿಗಳಾದ ಅನಿರುದ್ಧ ಬೋಸ್ (ತಮ್ಮ ನಿವೃತ್ತಿಯ ದಿನ … Continued

ಎಲ್ಲ ಪತಂಜಲಿ ಉತ್ಪನ್ನಗಳ ಗುಣಮಟ್ಟ ಪರಿಶೀಲನೆಗೆ ಸೂಚನೆ: ದಿನೇಶ ಗುಂಡೂರಾವ್

ಬೆಂಗಳೂರು: ಪತಂಜಲಿ ಆಯುರ್ವೇದದ ಜಾಹೀರಾತುಗಳ ಕುರಿತು ಸೂಕ್ತ ಕ್ರಮ ಕೈಗೊಳ್ಳುವಲ್ಲಿ ವಿಫಲವಾದ ಉತ್ತರಾಖಂಡದ ಔಷದ ಪರವಾನಗಿ ಮತ್ತು ನಿಯಂತ್ರಣ ಪ್ರಾಧಿಕಾರವನ್ನು ಸುಪ್ರೀಕೋರ್ಟ್ ತರಾಟೆಗೆ ತೆಗೆದುಕೊಂಡ ಬೆನ್ನಲ್ಲೇ, ರಾಜ್ಯದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ ಗುಂಡೂರಾವ್ ಅವರು ರಾಜ್ಯದಲ್ಲಿ ಎಲ್ಲ ಪತಂಜಲಿ ಉತ್ಪನ್ನಗಳ ಗುಣಮಟ್ಟ ಪರಿಶೀಲನೆಗೆ ಆದೇಶಿಸಿದ್ದಾರೆ. ಬೆಂಗಳೂರಿನಲ್ಲಿ ಗುರುವಾರ ಮಾತನಾಡಿದ ಅವರು, ಪತಂಜಲಿ … Continued

‘ಚುನಾವಣೆಗೆ ಮುನ್ನ ಎಷ್ಟು ಮಂದಿ ಜೈಲು ಪಾಲಾಗಬೇಕು…?’: ಸುಪ್ರೀಂ ಕೋರ್ಟ್ ಪ್ರಶ್ನೆ, ಯೂ ಟ್ಯೂಬರ್‌ ಗೆ ರಿಲೀಫ್

ನವದೆಹಲಿ: ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಯೂ ಟ್ಯೂಬರ್‌ಗೆ ನೀಡಲಾಗಿದ್ದ ಜಾಮೀನನ್ನು ಸುಪ್ರೀಂ ಕೋರ್ಟ್ ಮರುಸ್ಥಾಪಿಸಿದೆ. ಅಲ್ಲದೆ, ಸಾಮಾಜಿಕ ಮಾಧ್ಯಮದಲ್ಲಿ ಆರೋಪ ಮಾಡುವ ಪ್ರತಿಯೊಬ್ಬರನ್ನೂ ಜೈಲಿಗೆ ಹಾಕಲು ಸಾಧ್ಯವಿಲ್ಲ ಎಂದು ಹೇಳಿದೆ. ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರ ಬಗ್ಗೆ 2021ರಲ್ಲಿ ಅವಹೇಳನಕಾರಿಯಾಗಿ ಮಾತನಾಡಿದ ಆರೋಪ … Continued

5, 8, 9ನೇ ತರಗತಿ ಬೋರ್ಡ್‌ ಪರೀಕ್ಷೆ : ಹೈಕೋರ್ಟ್​ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ; ಫಲಿತಾಂಶ ಪ್ರಕಟಿಸಿದಂತೆ ಆದೇಶ

ನವದೆಹಲಿ: 5, 8 ಮತ್ತು 9ನೇ ತರಗತಿ ಬೋರ್ಡ್‌ ಪರೀಕ್ಷೆ ಕುರಿತು ನೀಡಿದ್ದ ಕರ್ನಾಟಕ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿದೆ. ಅಲ್ಲದೆ, ಈ ತರಗತಿಗಳ ಬೋರ್ಡ್‌ ಪರೀಕ್ಷೆ ಫಲಿತಾಂಶ ಪ್ರಕಟಿಸದಂತೆ ನ್ಯಾಯಮೂರ್ತಿ ಬೇಲಾ ಎಂ. ತ್ರಿವೇದಿ ಪೀಠ ಆದೇಶಿಸಿದೆ. ಈ ಕುರಿತು ಎರಡು ವಾರಗಳಲ್ಲಿ ಉತ್ತರಿಸುವಂತೆ ರಾಜ್ಯ ಸರ್ಕಾರಕ್ಕೆ ನೋಟಿಸ್‌ ನೀಡಿದೆ. ರಾಜ್ಯ … Continued

ಪತಂಜಲಿ ಸಂಸ್ಥೆಯಿಂದ ನ್ಯಾಯಾಲಯ ಆದೇಶದ ಉಲ್ಲಂಘನೆ: ಸುಪ್ರೀಂ ಕೋರ್ಟ್‌ ಕೆಂಡಾಮಂಡಲ

ನವದೆಹಲಿ: ವೈಜ್ಞಾನಿಕ ತಳಹದಿಯ ಔಷಧಗಳನ್ನು ಗುರಿಯಾಗಿಸಿಕೊಂಡ ಜಾಹೀರಾತುಗಳನ್ನು ನಿಲ್ಲಿಸಲು ವಿಫಲವಾಗಿ ಕೇವಲ ನೆಪಮಾತ್ರದ ಕ್ಷಮೆಯಾಚನೆ ಅಫಿಡವಿಟ್‌ ಸಲ್ಲಿಸಿದ್ದ ಪತಂಜಲಿ ಆಯುರ್ವೇದ ಸಂಸ್ಥೆಯನ್ನು ಸುಪ್ರೀಂ ಕೋರ್ಟ್‌ ಮಂಗಳವಾರ ತೀವ್ರ ತರಾಟೆಗೆ ತೆಗೆದುಕೊಂಡಿದೆ. ಇಂತಹ ಜಾಹೀರಾತುಗಳ ಪ್ರಸಾರ ನಿಲ್ಲಿಸುವಂತೆ ನ್ಯಾಯಾಲಯ ಕಂಪನಿಗೆ ಆದೇಶಿಸಿರುವ ಬಗ್ಗೆ ತನ್ನ ಮಾಧ್ಯಮ ವಿಭಾಗಕ್ಕೆ ತಿಳಿದಿಲ್ಲ ಎಂದು ಪತಂಜಲಿ ನೀಡಿದ ಹೇಳಿಕೆಯನ್ನು ನ್ಯಾಯಮೂರ್ತಿಗಳಾದ ಹಿಮಾ … Continued