ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ: ನಾಳೆ ದೆಹಲಿಯಲ್ಲಿ ನ್ಯಾಯವಾದಿಗಳ ಜೊತೆ ಸಿಎಂ ಬೊಮ್ಮಾಯಿ ಚರ್ಚೆ

ಬೆಂಗಳೂರು: ಮಹಾರಾಷ್ಟ್ರ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಕಾನೂನು ಸಮರಕ್ಕೆ ಸಿದ್ಧವಾಗಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು, ಸೋಮವಾರ ದೆಹಲಿಗೆ ತೆರಳಿ ನಾಳೆ ಸರ್ವೋಚ್ಛ ನ್ಯಾಯಾಲಯದಲ್ಲಿಕರ್ನಾಟಕದ ಪರ ವಾದ ಮಂಡಿಸಲಿರುವ ವಕೀಲರ ಜೊತೆ ಸಭೆ ನಡೆಸಲಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಬೊಮ್ಮಾಯಿ, ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಕಾನೂನಿನ ಹೋರಾಟಕ್ಕೆ ರಾಜ್ಯ ಸರ್ಕಾರ ಎಲ್ಲ ರೀತಿಯಲ್ಲಿ ಸಿದ್ಧವಾಗಿದೆ. … Continued

ಅತ್ಯಾಚಾರ ಸಂತ್ರಸ್ತರಿಗೆ ಎರಡು-ಬೆರಳಿನ ಪರೀಕ್ಷಾ ನಿಷೇಧ ಪುನರುಚ್ಚರಿಸಿದ ಸುಪ್ರೀಂ ಕೋರ್ಟ್‌ : ಪರೀಕ್ಷೆಗೆ ಒಳಪಡಿಸುವವರು ತಪ್ಪಿತಸ್ಥರು ಎಂದ ಸರ್ವೋಚ್ಛ ನ್ಯಾಯಾಲಯ

ನವದೆಹಲಿ: ಅತ್ಯಾಚಾರ ಅಥವಾ ಲೈಂಗಿಕ ದೌರ್ಜನ್ಯ ಪ್ರಕರಣಗಳಲ್ಲಿ ಸಂತ್ರಸ್ತ ಮಹಿಳೆಗೆ ಎರಡು ಬೆರಳಿನ ಪರೀಕ್ಷೆ ನಡೆಸುವ ಯಾವುದೇ ವ್ಯಕ್ತಿ ದುರ್ನಡತೆಯ ತಪ್ಪಿತಸ್ಥನಾಗುತ್ತಾನೆ ಎಂದು ಸುಪ್ರೀಂ ಕೋರ್ಟ್‌ ಮಹತ್ವದ ತೀರ್ಪು ನೀಡಿದೆ. ಅತ್ಯಾಚಾರ ಸಂತ್ರಸ್ತರು ಹಾಗೂ ಲೈಂಗಿಕ ದೌರ್ಜನಕ್ಕೆ ಒಳಗಾದವರನ್ನು ಎರಡು ಬೆರಳುಗಳ ಪರೀಕ್ಷೆಗೆ ಒಳಪಡಿಸದಂತೆ ತಡೆಯಬೇಕು ಹಾಗೂ ನಿಗಾ ವಹಿಸಬೇಕು ಎಂದು ಸುಪ್ರೀಂ ಕೋರ್ಟ್ ಕೇಂದ್ರ … Continued

ಬಿಲ್ಕಿಸ್ ಬಾನೋ ಪ್ರಕರಣ: ಗುಜರಾತ್ ಸರ್ಕಾರದ ಉತ್ತರ ತುಂಬಾ ದೊಡ್ಡದಿದೆ, ವಾಸ್ತವಿಕ ಹೇಳಿಕೆಗಳು ಕಾಣೆಯಾಗಿದೆ ಎಂದ ಸುಪ್ರೀಂಕೋರ್ಟ್‌, ಮುಂದಿನ ವಿಚಾರಣೆ ನವೆಂಬರ್ 29ಕ್ಕೆ

ನವದೆಹಲಿ: ಬಿಲ್ಕಿಸ್ ಬಾನೊ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 11 ಅಪರಾಧಿಗಳಿಗೆ ನೀಡಲಾದ ಕ್ಷಮಾದಾನ ನೀಡಿಯಡಿಯಲ್ಲಿ ಬಿಡುಗಡೆ ಕ್ರಮ ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳಿಗೆ ಗುಜರಾತ್ ಸರ್ಕಾರ ನೀಡಿದ ಉತ್ತರವನ್ನು ಸುಪ್ರೀಂಕೋರ್ಟ್ ಮಂಗಳವಾರ ಟೀಕಿಸಿದೆ, ಇದರಲ್ಲಿ ತೀರ್ಪುಗಳ ಸರಣಿಯನ್ನು ಉಲ್ಲೇಖಿಸಲಾಗಿದೆ ಆದರೆ ವಾಸ್ತವಾಂಶಗಳು ಕಾಣೆಯಾಗಿವೆ ಎಂದು ದೇಶದ ಅತ್ಯುನ್ನತ ನ್ಯಾಯಾಲಯ ಹೇಳಿದೆ. ಗುಜರಾತ್ ಸರ್ಕಾರದ ಅಫಿಡವಿಟ್‌ಗೆ ತಮ್ಮ ಪ್ರತಿಕ್ರಿಯೆಯನ್ನು … Continued

ಮುಸ್ಲಿಂ ವೈಯಕ್ತಿಕ ಕಾನೂನು: 15 ವರ್ಷ ಮೀರಿದ ಮುಸ್ಲಿಂ ಹುಡುಗಿಯರು ಮದುವೆಯಾಗಬಹುದೇ ಎಂಬುದನ್ನು ಪರಿಶೀಲಿಸಲಿರುವ ಸುಪ್ರೀಂಕೋರ್ಟ್‌

ನವದೆಹಲಿ: ಹದಿನೈದು ವರ್ಷ ವಯಸ್ಸಿನ ಮುಸ್ಲಿಂ ಹುಡುಗಿ ತಾನು ಬಯಸಿದ ವ್ಯಕ್ತಿಯೊಂದಿಗೆ ಮದುವೆಯಾಗಬಹುದೇ ಎಂಬ ವಿಷಯಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಲು ಸುಪ್ರೀಂಕೋರ್ಟ್ ಸೋಮವಾರ ಸಮ್ಮತಿಸಿದೆ. ನ್ಯಾಯಮೂರ್ತಿಗಳಾದ ಸಂಜಯ್ ಕಿಶನ್ ಕೌಲ್ ಮತ್ತು ಎ. ಎಸ್. ಓಕಾ ಅವರಿದ್ದ ಪೀಠವು ಈ ಪ್ರಕರಣದಲ್ಲಿ ಹಿರಿಯ ವಕೀಲ ರಾಜಶೇಖರ ರಾವ್ ಅವರನ್ನು ಅಮಿಕಸ್ ಕ್ಯೂರಿಯಾಗಿ ನೇಮಿಸಿದೆ ಎಂದು ಬಾರ್‌ … Continued

ಅನುಕಂಪದ ನೇಮಕಾತಿ: ವಿವಾಹಿತ ಮಗಳು ಮೃತ ತಾಯಿಯ ಮೇಲೆ ‘ಅವಲಂಬಿತೆ’ ಎಂದು ಹೇಳಲಾಗದು-ಸುಪ್ರೀಂಕೋರ್ಟ್

ನವದೆಹಲಿ: ಅನುಕಂಪದ ನೇಮಕಾತಿಗಾಗಿ ತಾನು ತಾಯಿಯ ಮೇಲೆ ಅವಲಂಬಿತೆ ಎಂದು ವಿವಾಹಿತ ಮಗಳು ಹೇಳುವಂತಿಲ್ಲ. ಹೀಗಾಗಿ ಅಂತಹವರು ಅನುಕಂಪ ಆಧಾರಿತ ನೇಮಕಾತಿಗೆ ಅರ್ಹರಲ್ಲ ಎಂದು ಸುಪ್ರೀಂ ಕೋರ್ಟ್‌ ಇತ್ತೀಚೆಗೆ ಹೇಳಿದೆ ಅನುಕಂಪದ ಆಧಾರದ ಮೇಲೆ ಪ್ರತಿವಾದಿ ಮಾಧುರಿ ಮಾರುತಿ ವಿಧಾತೆ ಅವರನ್ನು ನೇಮಕ ಮಾಡುವಂತೆ ಮಹಾರಾಷ್ಟ್ರ ಆಡಳಿತಾತ್ಮಕ ನ್ಯಾಯಮಂಡಳಿ ನೀಡಿದ್ದ ಆದೇಶ ಎತ್ತಿಹಿಡಿದಿದ್ದ ಬಾಂಬೆ ಹೈಕೋರ್ಟ್‌ನ … Continued

ವಿವಾಹಿತ- ಅವಿವಾಹಿತ ಮಹಿಳೆಯರು ಸುರಕ್ಷಿತ-ಕಾನೂನುಬದ್ಧ ಗರ್ಭಪಾತಕ್ಕೆ ಅರ್ಹರು : ಸುಪ್ರೀಂಕೋರ್ಟ್

ನವದೆಹಲಿ: ಭಾರತದಲ್ಲಿ ಎಲ್ಲ ಮಹಿಳೆಯರು ಸುರಕ್ಷಿತ ಮತ್ತು ಕಾನೂನುಬದ್ಧ ಗರ್ಭಪಾತಕ್ಕೆ ಅರ್ಹರು ಎಂದು ಸುಪ್ರೀಂ ಕೋರ್ಟ್ ಗುರುವಾರ ಹೇಳಿದೆ. ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್‌ ನೇತೃತ್ವದ ತ್ರಿಸದಸ್ಯ ಪೀಠವು ಗಂಡನಿಂದ ಲೈಂಗಿಕ ದೌರ್ಜನ್ಯವು ಅತ್ಯಾಚಾರದ ರೂಪವನ್ನು ಪಡೆಯಬಹುದು.ಆದ್ದರಿಂದ ಅಂತಹ ಸಂತ್ರಸ್ತರಿಗೆ ಕಾನೂನು ಮತ್ತು ನಿಯಮಗಳ ಅಡಿಯಲ್ಲಿ ಗರ್ಭಪಾತಕ್ಕೆ ಅವಕಾಶ ನೀಡಬೇಕು ಎಂದು ಪ್ರಕಟಿಸಿದೆ. ಮಹಿಳೆಯ ವೈವಾಹಿಕ ಸ್ಥಿತಿಯು ಅನಗತ್ಯ … Continued

ʼನಿಜವಾದ ಶಿವಸೇನೆ’ ಪ್ರಕರಣ: ಸುಪ್ರೀಂ ಕೋರ್ಟ್‌ನಲ್ಲಿ ಉದ್ಧವ್‌ ಠಾಕ್ರೆ ಬಣಕ್ಕೆ ಭಾರೀ ಹಿನ್ನಡೆ

ನವದೆಹಲಿ: ಏಕನಾಥ  ಶಿಂಧೆ ವಿರುದ್ಧದ ಹೋರಾಟದಲ್ಲಿ ಉದ್ಧವ್ ಠಾಕ್ರೆ ಅವರಿಗೆ ಭಾರೀ ಹಿನ್ನಡೆಯಾಗಿದ್ದು, ನಿಜವಾದ ಶಿವಸೇನೆ ಯಾರ ಬಣ ಎಂಬುದನ್ನು ನಿರ್ಧರಿಸಲು ಚುನಾವಣಾ ಆಯೋಗಕ್ಕೆ ತಡೆ ನೀಡುವುದಕ್ಕೆ ಸುಪ್ರೀಂಕೋರ್ಟ್ ಇಂದು, ಮಂಗಳವಾರ ನಿರಾಕರಿಸಿದೆ.ಮಹಾರಾಷ್ಟ್ರದಲ್ಲಿ “ನಿಜವಾದ” ಶಿವಸೇನೆ ಯಾರದ್ದು..? ಏಕನಾಥ ಶಿಂಧೆ ಬಣವೋ ಅಥವಾ ಉದ್ಧವ್ ಠಾಕ್ರೆ ಬಣವೋ ಎಂದು ನಿರ್ಧರಿಸಲು ಚುನಾವಣಾ ಆಯೋಗದ ಪ್ರಕ್ರಿಯೆಗಳಿಗೆ ಯಾವುದೇ … Continued

ನೂಪುರ್‌ ಶರ್ಮಾಗೆ ರಿಲೀಫ್‌ ನೀಡಿದ ಸುಪ್ರೀಂಕೋರ್ಟ್‌: ಮುಂದಿನ ವಿಚಾರಣೆ ವರೆಗೆ ಬಂಧಿಸದಂತೆ ಮಧ್ಯಂತರ ರಕ್ಷಣೆ

ನವದೆಹಲಿ:ನವದೆಹಲಿ: ಬಿಜೆಪಿಯ ಮಾಜಿ ವಕ್ತಾರರಾದ ನೂಪುರ್ ಶರ್ಮಾ ಅವರಿಗೆ ಸುಪ್ರೀಂಕೋರ್ಟ್‌ ರಿಲೀಫ್‌ ನೀಡಿದೆ. ಮುಂದಿನ ವಿಚಾರಣೆಯ ದಿನಾಂಕದ ವರೆಗೆ ಅವರನ್ನು ಬಂಧಿಸುವಂತಿಲ್ಲ ಎಂದು ಹೇಳಿದ ಸುಪ್ರೀಂ ಕೋರ್ಟ್ ಮಂಗಳವಾರ ಮಧ್ಯಂತರ ರಕ್ಷಣೆ ನೀಡಿದೆ.. ಬಂಧನದಿಂದ ರಕ್ಷಣೆ ನೀಡುವಂತೆ ಹಾಗೂ ಪ್ರವಾದಿಯ ಕುರಿತಾದ ತನ್ನ ಹೇಳಿಕೆಗಳ ಮೇಲೆ ದಾಖಲಾಗಿರುವ ಎಫ್‌ಐಆರ್‌ಗಳನ್ನು ಒಂದೇ ಕಡೆ ತರುವಂತೆ ಕೋರಿ ನೂಪುರ್‌ … Continued

ತಮ್ಮನ್ನು ಬಂಧಿಸದಂತೆ ತಡೆ ನೀಡಬೇಕು ಎಂದು ಕೋರಿ ಸುಪ್ರೀಕೋರ್ಟ್‌ ಮೆಟ್ಟಿಲೇರಿದ ನೂಪುರ್‌ ಶರ್ಮಾ

ನವದೆಹಲಿ: ಪ್ರವಾದಿ ಮೊಹ್ಮಮದ್‌ ಅವರ ಕುರಿತು ನೀಡಿದ್ದ ವಿವಾದಾತ್ಮಕ ಹೇಳಿಕೆಯ ಹಿನ್ನೆಲೆಯಲ್ಲಿ ದೇಶದ ವಿವಿಧೆಡೆ ತಮ್ಮ ವಿರುದ್ಧ ದಾಖಲಾಗಿದ್ದ ಎಫ್‌ಐಆರ್‌ಗಳನ್ನು ದೆಹಲಿಗೆ ವರ್ಗಾಯಿಸುವಂತೆ ಕೋರಿದ್ದ ತಮ್ಮ ಹಿಂದಿನ ಮನವಿಯನ್ನು ಮರುಸ್ಥಾಪಿಸಲು ಹಾಗೂ ತಮ್ಮನ್ನು ಬಂಧಿಸದಂತೆ ತಡೆ ನೀಡಬೇಕು ಕೋರಿ ಬಿಜೆಪಿಯ ಮಾಜಿ ವಕ್ತಾರೆ ನೂಪುರ್‌ ಶರ್ಮಾ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ್ದಾರೆ. ಜುಲೈ 1ರಂದು ಶರ್ಮಾ ವಿರುದ್ಧ … Continued

ಜುಲೈ 20ರಂದು ಶಿವಸೇನೆಯ ಎರಡೂ ಬಣಗಳ ಅರ್ಜಿಗಳ ವಿಚಾರಣೆ ನಡೆಸಲಿರುವ ಸುಪ್ರೀಂಕೋರ್ಟ್‌

ನವದೆಹಲಿ: ಮಹಾರಾಷ್ಟ್ರ ರಾಜಕೀಯ ಬಿಕ್ಕಟ್ಟಿಗೆ ಸಂಬಂಧಿಸಿದಂತೆ ಶಿವಸೇನೆಯ ಎರಡೂ ಬಣಗಳು ಸಲ್ಲಿಸಿರುವ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ಜುಲೈ 20 ರಂದು ವಿಚಾರಣೆ ನಡೆಸಲಿದೆ. ಭಾರತದ ಮುಖ್ಯ ನ್ಯಾಯಮೂರ್ತಿ ಎನ್‌ವಿ ರಮಣ, ನ್ಯಾಯಮೂರ್ತಿಗಳಾದ ಕೃಷ್ಣ ಮುರಾರಿ ಮತ್ತು ಹಿಮಾ ಕೊಹ್ಲಿ ಅವರ ಪೀಠವು ಉದ್ಧವ್ ಠಾಕ್ರೆ ನೇತೃತ್ವದ ಬಣ ಮತ್ತು ಏಕನಾಥ್ ಶಿಂಧೆ ಬಣದಿಂದ ಸಲ್ಲಿಸಿದ ಅರ್ಜಿಗಳನ್ನು … Continued