ಕರ್ನಾಟಕ-ತಮಿಳುನಾಡು ನಡುವಿನ ದಕ್ಷಿಣ ಪಿನಾಕಿನಿ ಜಲ ವಿವಾದ: ನ್ಯಾಯಮಂಡಳಿ ರಚನೆಗೆ ಸುಪ್ರೀಂ ಕೋರ್ಟ್ ಆದೇಶ

ನವದೆಹಲಿ: ಕರ್ನಾಟಕ ಮತ್ತು ತಮಿಳುನಾಡು ನಡುವಿನ ಅಂತಾರಾಜ್ಯ ದಕ್ಷಿಣ ಪಿನಾಕಿನಿ (ಪೆನ್ನಾರ್) ನದಿ‌ ನೀರು ಹಂಚಿಕೆ ವಿವಾದ ಇತ್ಯರ್ಥಕ್ಕಾಗಿ ನ್ಯಾಯಮಂಡಳಿ ರಚನೆ ಮಾಡುವ ಬಗ್ಗೆ ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಬೇಕು ಎಂದು ಸುಪ್ರೀಂ ಕೋರ್ಟ್‌ ಸೋಮವಾರ ಆದೇಶಿಸಿದೆ ಇಂದಿನಿಂದ (ಫೆ.2, 2026) ಒಂದು ತಿಂಗಳ ಒಳಗಾಗಿ ಅಧಿಕೃತ ಗೆಜೆಟ್‌ ಅಧಿಸೂಚನೆ ಹೊರಡಿಸುವಂತೆ ನ್ಯಾಯಮೂರ್ತಿಗಳಾದ ವಿಕ್ರಮನಾಥ ಮತ್ತು … Continued

ಯುಜಿಸಿ ಹೊಸ ನಿಯಮಾವಳಿಗೆ ಸುಪ್ರೀಂ ಕೋರ್ಟ್ ತಡೆ

ನವದೆಹಲಿ: ವಿಶ್ವವಿದ್ಯಾಲಯಗಳ ವ್ಯಾಪ್ತಿಯ ಕಾಲೇಜು ಕ್ಯಾಂಪಸ್‌ಗಳಲ್ಲಿ ಜಾತಿ ಆಧಾರಿತ ತಾರತಮ್ಯ ತಡೆಯುವುದಕ್ಕಾಗಿ ವಿಶ್ವವಿದ್ಯಾಲಯ ಧನಸಹಾಯ ಆಯೋಗ (ಯುಜಿಸಿ) ಹೊರಡಿಸಿರುವ ಹೊಸ ನಿಯಮಾವಳಿಗಳಿಗೆ  ಸುಪ್ರೀಂ ಕೋರ್ಟ್‌ ಗುರುವಾರ ತಡೆ ನೀಡಿದೆ. ನಿಯಮಾವಳಿಗಳು ಅಸ್ಪಷ್ಟವಾಗಿದ್ದು, ದುರುಪಯೋಗ ಸಾಧ್ಯತೆ ಇರುವ ಕಾರಣ ನೀಡಿ ಹೊಸ ನಿಯಮಗಳಿಗೆ ತಡೆ ನೀಡಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ ನೇತೃತ್ವದ ಪೀಠವು ನಿಯಮಕ್ಕೆ ಸ್ಪಷ್ಟೀಕರಣದ … Continued

ಐ-ಪ್ಯಾಕ್‌ ಪ್ರಕರಣ : ಮಮತಾ ಬ್ಯಾನರ್ಜಿ ವಿರುದ್ಧ ಸಿಬಿಐ ತನಿಖೆ ಕೋರಿ ಸುಪ್ರೀಂ ಕೋರ್ಟ್‌ಗೆ ಇ.ಡಿ. ಮೊರೆ

ನವದೆಹಲಿ: ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್ (I-PAC) ಕಚೇರಿಗಳ ಮೇಲೆ ನಡೆದ ದಾಳಿಯ ವೇಳೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮತ್ತು ರಾಜ್ಯ ಸರ್ಕಾರಿ ಅಧಿಕಾರಿಗಳು ತನಿಖೆಗೆ ಅಡ್ಡಿಪಡಿಸಿದ್ದಾರೆ ಎಂದು ಆರೋಪಿಸಿ ಜಾರಿ ನಿರ್ದೇಶನಾಲಯ (ED) ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದೆ. ಕಲ್ಲಿದ್ದಲು ಅಕ್ರಮ ಸಾಗಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐ-ಪ್ಯಾಕ್ ಕಚೇರಿಗಳಲ್ಲಿ ಇಡಿ ಶೋಧ … Continued

ಅರಾವಳಿ ಪರ್ವತ ಶ್ರೇಣಿ ; ತನ್ನ ಆದೇಶಕ್ಕೆ ತಡೆ ನೀಡಿದ ಸುಪ್ರೀಂ ಕೋರ್ಟ್

ನವದೆಹಲಿ : ಉತ್ತರ ಭಾರತದ ವಿವಿಧ ರಾಜ್ಯಗಳಲ್ಲಿ ಹಬ್ಬಿರುವ ಅರಾವಳಿ ಪರ್ವತ ಶೇಣಿಗೆ ಸಂಬಂಧಿಸಿದಂತೆ ತಾನು ಅನುಮೋದಿಸಿದ್ದ ಕೆಲವು ಅಂಶಗಳ ಬಗ್ಗೆ ಸ್ಪಷ್ಟೀಕರಣ ಅಗತ್ಯವಿದೆ ಎಂದು ಹೇಳಿರುವ ಸುಪ್ರೀಂ ಕೋರ್ಟ್‌ ಕಳೆದ ತಿಂಗಳು ತಾನು ನೀಡಿದ್ದ ತೀರ್ಪಿಗೆ ಸೋಮವಾರ ತಾತ್ಕಾಲಿಕ ತಡೆ ನೀಡಿದೆ. ಜೊತೆಗೆ, ಅಧಿಕಾರಿಗಳನ್ನು ಬಹುತೇಕ ಒಳಗೊಂಡಿದ್ದ ಹಿಂದಿನ ಸಮಿತಿಯ ಶಿಫಾರಸುಗಳಿಂದ ಉಂಟಾಗುವ ಪರಿಸರ … Continued

ಉನ್ನಾವ್ ಅತ್ಯಾಚಾರ ಪ್ರಕರಣ: ಮಾಜಿ ಶಾಸಕ ಸೆಂಗರ್ ಜಾಮೀನಿಗೆ ಸುಪ್ರೀಂ ಕೋರ್ಟ್ ತಡೆ

ನವದೆಹಲಿ: ಉತ್ತರ ಪ್ರದೇಶದ ಉನ್ನಾವ್‌ನಲ್ಲಿ ನಡೆದ ಅಪ್ರಾಪ್ತ ಬಾಲಕಿಯ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಮಾಜಿ ಶಾಸಕರಾದ ಕುಲದೀಪ ಸಿಂಗ್ ಸೆಂಗರಗೆ ಜಾಮೀನು ನೀಡಿದ ಹಾಗೂ ಆತನಿಗೆ ವಿಧಿಸಿದ್ದ ಜೀವಾವಧಿ ಶಿಕ್ಷೆಯನ್ನು ಅಮಾನತುಗೊಳಿಸಿದ್ದ ದೆಹಲಿ ಹೈಕೋರ್ಟ್ ಆದೇಶ ಜಾರಿಯಾಗದಂತೆ ಸುಪ್ರೀಂ ಕೋರ್ಟ್‌ ಸೋಮವಾರ ತಡೆ ನೀಡಿದೆ. ನ್ಯಾಯಪೀಠವು ಕುಲದೀಪ್ ಸಿಂಗ್ ಸೆಂಗಾರ್ ಅವರಿಗೆ ನೋಟಿಸ್ ಜಾರಿ ಮಾಡಿ, … Continued

ಸಿಎಂ ಸಿದ್ದರಾಮಯ್ಯ ಆಯ್ಕೆ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ ಗೆ ಅರ್ಜಿ

ನವದೆಹಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವರುಣಾ ವಿಧಾನಸಭಾ ಕ್ಷೇತ್ರದಿಂದ 2023ರಲ್ಲಿ ಆಯ್ಕೆಯಾಗಿರುವುದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿದೆ. ಈ ಸಂಬಂಧ ಪ್ರತಿಕ್ರಿಯಿಸುವಂತೆ ಸಿದ್ದರಾಮಯ್ಯ ಅವರಿಗೆ ಸೂಚಿಸಿ ನ್ಯಾಯಮೂರ್ತಿಗಳಾದ ವಿಕ್ರಮನಾಥ ಮತ್ತು ಸಂದೀಪ ಮೆಹ್ತಾ ಅವರಿದ್ದ ಪೀಠ ಸೋಮವಾರ ನೋಟಿಸ್‌ ನೀಡಿದೆ ಎಂದು ಬಾರ್‌ & ಬೆಂಚ್‌ ವರದಿ ಮಾಡಿದೆ. ವರುಣಾ ಕ್ಷೇತ್ರದ ಮತದಾರ ಕೆ. … Continued

ಪೋಕ್ಸೊ ಪ್ರಕರಣ : ಮಾಜಿ ಸಿಎಂ ಯಡಿಯೂರಪ್ಪಗೆ ಸುಪ್ರೀಂ ಕೋರ್ಟ್‌ ರಿಲೀಫ್‌

ನವದೆಹಲಿ : ಪೋಕ್ಸೊ ಕಾಯ್ದೆ ಅಡಿಯಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ವಿರುದ್ಧ ದಾಖಲಾಗಿರುವ ಪ್ರಕರಣದ ವಿಚಾರಣೆಗೆ ಸುಪ್ರೀಂ ಕೋರ್ಟ್ ಮಂಗಳವಾರ ತಡೆ ನೀಡಿದೆ. ಕರ್ನಾಟಕ ಹೈಕೋರ್ಟ್ ಪ್ರಕರಣವನ್ನು ರದ್ದುಗೊಳಿಸಲು ನಿರಾಕರಿಸಿದ್ದನ್ನು ಪ್ರಶ್ನಿಸಿ ಯಡಿಯೂರಪ್ಪ ಸಲ್ಲಿಸಿದ್ದ ಅರ್ಜಿ ಆಲಿಸಿದ ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಸೂರ್ಯಕಾಂತ ಹಾಗೂ ನ್ಯಾಯಮೂರ್ತಿ ಜೊಯಮಲ್ಯ ಬಾಗ್ಚಿ ಅವರಿದ್ದ … Continued

ವೀಡಿಯೊ | ಸುದೀರ್ಘ ಕಾನೂನು ಹೋರಾಟದ ನಂತ್ರ 3 ಅಡಿ ಎತ್ತರದ ಯುವಕನ ವೈದ್ಯನಾಗುವ ಕನಸು ನನಸು

ಗುಜರಾತಿನ ಭಾವನಗರ ಜಿಲ್ಲೆಯ ಗಣೇಶ ಬರೈಯಾ ಎಂಬ 25 ವರ್ಷದ ಯುವಕ, ತನ್ನ 3 ಅಡಿ ಎತ್ತರ ಮತ್ತು 72 ಪ್ರತಿಶತದಷ್ಟು ಅಂಗವೈಕಲ್ಯದ (ಕುಬ್ಜತ್ವದಿಂದ ಉಂಟಾದ ಚಲನೆಯಲ್ಲಿನ ಅಸಾಮರ್ಥ್ಯ) ಕಾರಣಕ್ಕೆ ವೈದ್ಯಕೀಯ ಶಿಕ್ಷಣವನ್ನು ನಿರಾಕರಿಸಿದ ಭಾರತೀಯ ವೈದ್ಯಕೀಯ ಮಂಡಳಿ (MCI) ವಿರುದ್ಧ ಏಳು ವರ್ಷಗಳ ಕಾನೂನು ಹೋರಾಟ ಮಾಡಿದ ನಂತರ ಕೊನೆಗೂ ವೈದ್ಯಕೀಯ ಪದವಿ ಪೂರ್ಣಗೊಳಿಸಿ … Continued

ಪೋರ್ಟಲ್‌ನಲ್ಲಿ ವಕ್ಫ್ ಆಸ್ತಿಗಳ ನೋಂದಣಿಗೆ ಗಡುವು ವಿಸ್ತರಣೆಗೆ ಸುಪ್ರೀಂ ಕೋರ್ಟ್ ನಕಾರ

ನವದೆಹಲಿ:  ವಕ್ಫ್ (ತಿದ್ದುಪಡಿ) ಕಾಯಿದೆ, 2025ರ ಅಡಿಯಲ್ಲಿ ವಕ್ಫ್ ಆಸ್ತಿಗಳ ನೋಂದಣಿಗೆ ನೀಡಲಾಗಿದ್ದ ಕಾಲಾವಧಿಯನ್ನು ವಿಸ್ತರಿಸಲು ಸುಪ್ರೀಂ ಕೋರ್ಟ್ ಸೋಮವಾರ ನಿರಾಕರಿಸಿದೆ. ನ್ಯಾಯಮೂರ್ತಿಗಳಾದ ದೀಪಂಕರ್ ದತ್ತಾ ಮತ್ತು ಎ.ಜಿ. ಮಸಿಹ್ ಅವರಿದ್ದ ನ್ಯಾಯಪೀಠವು, ಕಾಯಿದೆಯ ಸೆಕ್ಷನ್ 3ಬಿ ಅಡಿಯಲ್ಲಿ ಆಸ್ತಿಗಳನ್ನು ನೋಂದಾಯಿಸಲು ಬಯಸುವವರು ಕಾನೂನಿನ ಪ್ರಕಾರ ಕಾಲಾವಧಿ ವಿಸ್ತರಣೆಗಾಗಿ ವಕ್ಫ್ ಟ್ರಿಬ್ಯೂನಲ್ (ನ್ಯಾಯಮಂಡಳಿ) ಅನ್ನು ಸಂಪರ್ಕಿಸಬೇಕು … Continued

ದೇಶಾದ್ಯಂತ ʼಡಿಜಿಟಲ್ ಬಂಧನ’ ವಂಚನೆ ಪ್ರಕರಣಗಳು : ಸಿಬಿಐಗೆ ತನಿಖೆ ನಡೆಸಲು ಆದೇಶಿಸಿದ ಸುಪ್ರೀಂ ಕೋರ್ಟ್

ನವದೆಹಲಿ: ದೇಶದಲ್ಲಿ ವ್ಯಾಪಕವಾಗಿ ನಡೆಯುತ್ತಿರುವ ‘ಡಿಜಿಟಲ್ ಬಂಧನ’ (Digital Arrest) ವಂಚನೆ ಪ್ರಕರಣಗಳ ತನಿಖೆಯನ್ನು ತಕ್ಷಣವೇ ಪ್ರಾರಂಭಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ ಕೇಂದ್ರೀಯ ತನಿಖಾ ದಳ (CBI)ಕ್ಕೆ ಆದೇಶ ನೀಡಿದೆ. ನ್ಯಾಯಮೂರ್ತಿಗಳಾದ ಸೂರ್ಯಕಾಂತ ಮತ್ತು ಜೋಯಮಾಲ್ಯ ಬಾಗ್ಚಿ ಅವರಿದ್ದ ಪೀಠವು, ನ್ಯಾಯಾಲಯದ ಸಲಹೆಗಾರರು (Amicus Curiae) ಎತ್ತಿ ತೋರಿಸಿದ ಸೈಬರ್ ಅಪರಾಧಗಳಾದ ಡಿಜಿಟಲ್ ಬಂಧನ ವಂಚನೆಗಳು … Continued