ಲೋಕಸಭೆಯಿಂದ ಮಹುವಾ ಮೊಯಿತ್ರಾ ಉಚ್ಚಾಟನೆಗೆ ತಡೆ ನೀಡಲು ಸುಪ್ರೀಂ ಕೋರ್ಟ್ ನಕಾರ

ನವದೆಹಲಿ : ‌ತಮ್ಮನ್ನು ಲೋಕಸಭೆಯಿಂದ ಉಚ್ಚಾಟಿಸಿರುವುದನ್ನು ಪ್ರಶ್ನಿಸಿ ಟಿಎಂಸಿ ನಾಯಕಿ ಮಹುವಾ ಮೊಯಿತ್ರಾ ಸಲ್ಲಿಸಿದ್ದ ಅರ್ಜಿಗೆ ಪ್ರತಿಕ್ರಿಯೆ ನೀಡುವಂತೆ ಸುಪ್ರೀಂ ಕೋರ್ಟ್ ಬುಧವಾರ ಲೋಕಸಭಾ ಸಚಿವಾಲಯಕ್ಕೆ ಸೂಚಿಸಿದೆ. ಹಾಗೂ ಮೊಯಿತ್ರಾ ಅವರಿಗೆ ಯಾವುದೇ ಮಧ್ಯಂತರ ಪರಿಹಾರ ನೀಡಲು ನಿರಾಕರಿಸಿದೆ. ನ್ಯಾಯಮೂರ್ತಿಗಳಾದ ಸಂಜೀವ ಖನ್ನಾ ಮತ್ತು ದೀಪಾಂಕರ್ ದತ್ತಾ ಅವರ ಪೀಠವು ಲೋಕಸಭಾ ಸಚಿವಾಲು ಎರಡು ವಾರಗಳಲ್ಲಿ … Continued

ಅದಾನಿ-ಹಿಂಡೆನ್‌ಬರ್ಗ್ ಪ್ರಕರಣ: ನಿಯಂತ್ರಕ ಸೆಬಿ ತನಿಖೆಗೆ ಸುಪ್ರೀಂಕೋರ್ಟ್ ಬೆಂಬಲ, ಎಸ್‌ಐಟಿ ತನಿಖೆಗೆ ನಕಾರ

ನವದೆಹಲಿ: ಹಿಂಡೆನ್‌ಬರ್ಗ್‌ ಸಂಶೋಧನಾ ವರದಿಯಲ್ಲಿ ಅದಾನಿ ಕಂಪನಿ ಸಮೂಹದ ವಿರುದ್ಧದ ವಂಚನೆ ಆರೋಪಗಳ ಬಗ್ಗೆ ವಿಶೇಷ ತನಿಖಾ ತಂಡ ಅಥವಾ ಪರ್ಯಾಯ ಸಂಸ್ಥೆಗಳಿಂದ ತನಿಖೆ ನಡೆಸಬೇಕು ಎಂದು ಕೋರಿ ಸಲ್ಲಿಸಲಾದ ಅರ್ಜಿಗಳಿಗೆ ಸಂಬಂಧಿಸಿದಂತೆ ಯಾವುದೇ ನಿರ್ದೇಶನ ನೀಡಲು ಅಥವಾ ಭಾರತೀಯ ಷೇರು ನಿಯಂತ್ರಣ ಮಂಡಳಿಯ (ಸೆಬಿ) ಅಧಿಕಾರ ವ್ಯಾಪ್ತಿಯಲ್ಲಿ ಹಸ್ತಕ್ಷೇಪ ಮಾಡಲು ಸುಪ್ರೀಂ ಕೋರ್ಟ್ ಬುಧವಾರ … Continued

ರೋಹಿಣಿ ಸಿಂಧೂರಿ ವಿರುದ್ಧದ ಪೋಸ್ಟ್‌ಗಳನ್ನು ಡಿಲೀಟ್‌ ಮಾಡಿ: ರೂಪಾ ಮೌದ್ಗಿಲಗೆ ಸುಪ್ರೀಂ ಕೋರ್ಟ್ ಸೂಚನೆ

ನವದೆಹಲಿ : ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಬರೆದ ಪೋಸ್ಟ್‌ಗಳನ್ನು ಡಿಲೀಟ್‌ ಮಾಡುವಂತೆ ಐಪಿಎಸ್ ಅಧಿಕಾರಿ ರೂಪಾ ಮೌದ್ಗಿಲ್ ಅವರಿಗೆ ಸುಪ್ರೀಂ ಕೋರ್ಟ್ ಸೂಚಿಸಿದೆ. ಕ್ರಿಮಿನಲ್‌ ಕೇಸ್‌ ಗಳನ್ನು ರದ್ದುಗೊಳಿಸುವಂತೆ ಕೋರಿ ರೂಪಾ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿಗಳಾದ ಅಭಯ ಎಸ್. ಓಕಾ ಮತ್ತು ಪಂಕಜಮಿಥಾಲ್ … Continued

ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ರದ್ದು: ಕೇಂದ್ರ ಸರ್ಕಾರದ ಆದೇಶ ಎತ್ತಿ ಹಿಡಿದ ಸುಪ್ರೀಂಕೋರ್ಟ್ ಸಂವಿಧಾನ ಪೀಠ

ನವದೆಹಲಿ: ಜಮ್ಮು ಮತ್ತು ಕಾಶ್ಮೀರಕ್ಕೆ ಸಂವಿಧಾನದ 370ನೇ ವಿಧಿಯಡಿ ನೀಡಲಾಗಿದ್ದ ವಿಶೇಷ ಸ್ಥಾನಮಾನ ರದ್ದುಪಡಿಸಿದ ಕೇಂದ್ರ ಸರ್ಕಾರದ ನಿರ್ಧಾರವನ್ನು ಸುಪ್ರೀಂ ಕೋರ್ಟ್‌ ಎತ್ತಿ ಹಿಡಿದಿದೆ. ‘ಸಂವಿಧಾನದ 370 ನೇ ವಿಧಿಯನ್ನು ರದ್ದುಗೊಳಿಸಲು ರಾಷ್ಟ್ರಪತಿಯವರು ಸಾಂವಿಧಾನಿಕ ಆದೇಶ ಹೊರಡಿಸುವ ಅಧಿಕಾರ ಹೊಂದಿದ್ದಾರೆ’ ಎಂದು ಮುಖ್ಯ ನ್ಯಾಯಮೂರ್ತಿ (ಸಿಜೆಐ) ಡಿ.ವೈ. ಚಂದ್ರಚೂಡ ನೇತೃತ್ವದ ಪೀಠ ಹೇಳಿದೆ. ಆರ್ಟಿಕಲ್ 370 … Continued

ಸಂವಿಧಾನದ 370ನೇ ವಿಧಿ ರದ್ದತಿ: ಡಿಸೆಂಬರ್‌ 11ಕ್ಕೆ ಸುಪ್ರೀಂ ಕೋರ್ಟ್‌ ತೀರ್ಪು ಪ್ರಕಟ

  ನವದೆಹಲಿ : ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸಿದ್ದ ಸಂವಿಧಾನದ 370ನೇ ವಿಧಿ ರದ್ದುಪಡಿಸಿ 2019ರಲ್ಲಿ ಕೇಂದ್ರ ಸರ್ಕಾರ ತೆಗೆದುಕೊಂಡಿದ್ದ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಗಳಿಗೆ ಸಂಬಂಧಿಸಿದ ತೀರ್ಪನ್ನು ಸುಪ್ರೀಂ ಕೋರ್ಟ್‌ ಡಿಸೆಂಬರ್‌ 11ರಂದು ಪ್ರಕಟಿಸಲಿದೆ. ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ, ನ್ಯಾಯಮೂರ್ತಿಗಳಾದ ಸಂಜಯ ಕಿಶನ್‌ ಕೌಲ್‌, ಸಂಜೀವ ಖನ್ನಾ, ಬಿ.ಆರ್‌. … Continued

ಪ್ರತಿ ಪ್ರಾಡಕ್ಟ್‌ ಮೇಲೆ 1 ಕೋಟಿ ರೂ. ದಂಡ ಹಾಕಬೇಕಾಗುತ್ತದೆ, ಒಂದು ವೇಳೆ…”: ಪತಂಜಲಿ ಆಯುರ್ವೇದಕ್ಕೆ ಸುಪ್ರೀಂ ಕೋರ್ಟ್ ಎಚ್ಚರಿಕೆ

ನವದೆಹಲಿ: ಯೋಗ ಗುರು ಬಾಬಾ ರಾಮದೇವ್ ಅವರ ಪತಂಜಲಿ ಆಯುರ್ವೇದ್ ಕಂಪನಿಯು ಹಲವಾರು ರೋಗಗಳಿಗೆ ಚಿಕಿತ್ಸೆ ನೀಡುವ ಬಗ್ಗೆ ಜಾಹೀರಾತುಗಳಲ್ಲಿ “ಸುಳ್ಳು” ಮತ್ತು “ತಪ್ಪುದಾರಿಗೆಳೆಯುವ” ಭರವಸೆ ನೀಡದಂತೆ ಸುಪ್ರೀಂ ಕೋರ್ಟ್ ಮಂಗಳವಾರ ಎಚ್ಚರಿಕೆ ನೀಡಿದೆ. “ಪತಂಜಲಿ ಆಯುರ್ವೇದದ ಇಂತಹ ಸುಳ್ಳು ಮತ್ತು ತಪ್ಪುದಾರಿಗೆಳೆಯುವ ಜಾಹೀರಾತುಗಳನ್ನು ತಕ್ಷಣವೇ ನಿಲ್ಲಿಸಬೇಕು. ಅಂತಹ ಯಾವುದೇ ಉಲ್ಲಂಘನೆಯನ್ನು ನ್ಯಾಯಾಲಯವು ಗಂಭೀರವಾಗಿ ಪರಿಗಣಿಸುತ್ತದೆ…” … Continued

ಸಂಸದರು-ಶಾಸಕರ ವಿರುದ್ಧದ ಪ್ರಕರಣಗಳ ವಿಚಾರಣೆಗೆ ವಿಶೇಷ ಪೀಠ ರಚಿಸಬೇಕು: ಸುಪ್ರೀಂ ಕೋರ್ಟ್‌ ನಿರ್ದೇಶನ

ನವದೆಹಲಿ: ಸಂಸದರು ಹಾಗೂ ಶಾಸಕರ ವಿರುದ್ಧದ ಕ್ರಿಮಿನಲ್ ಮೊಕದ್ದಮೆಗಳ ತ್ವರಿತ ವಿಚಾರಣೆಗೆ ವಿಶೇಷ ಪೀಠ ರಚಿಸಬೇಕು ಎಂದು ಸುಪ್ರೀಂ ಕೋರ್ಟ್ ಗುರುವಾರ ನಿರ್ದೇಶನಗಳನ್ನು ನೀಡಿದೆ. ಶಾಸಕರು ಹಾಗೂ ಸಂಸದರ ವಿರುದ್ಧ ಐದು ಸಾವಿರಕ್ಕೂ ಹೆಚ್ಚಿನ ಕ್ರಿಮಿನಲ್ ಪ್ರಕರಣಗಳು ದಾಖಲಾಗಿವೆ. ಇಂತಹ ಪ್ರಕರಣಗಳಲ್ಲಿ ‘ಅಪರೂಪದ ಹಾಗೂ ಬಲವಾದ ಕಾರಣಗಳು ಇಲ್ಲದಿದ್ದರೆ ವಿಶೇಷ ನ್ಯಾಯಾಲಯಗಳು ವಿಚಾರಣೆಯನ್ನು ಮುಂದೂಡಬಾರದು’ ಎಂದು … Continued

ಕ್ಷಮೆಯಾಚಿಸುವೆ ಎಂದ ರಾಜ್ಯಸಭಾ ಸದಸ್ಯ ರಾಘವ್ ಚಡ್ಡಾ ; ಪ್ರಕರಣವನ್ನು ಸಹಾನುಭೂತಿಯಿಂದ ಪರಿಗಣಿಸಿ ಎಂದು ರಾಜ್ಯಸಭಾ ಚೇರ್ಮನ್‌ ಗೆ ಸುಪ್ರೀಂ ಕೋರ್ಟ್‌ ಸಲಹೆ

ನವದೆಹಲಿ: ನಕಲಿ ಸಹಿ ಆರೋಪದ ಪ್ರಕರಣದಲ್ಲಿ ರಾಜ್ಯಸಭಾ ಚೇರ್ಮನ್‌ ಜಗದೀಪ ಧನಕರ ಅವರನ್ನು ಬೇಷರತ್ ಕ್ಷಮೆಯಾಚಿಸುವುದಾಗಿ ರಾಜ್ಯಸಭೆಯಿಂದ ಅಮಾನತುಗೊಂಡಿರುವ ಸದಸ್ಯ ರಾಜೀವ ಚಡ್ಡಾ ಸುಪ್ರೀಂ ಕೋರ್ಟ್‌ಗೆ ಶುಕ್ರವಾರ ತಿಳಿಸಿದ್ದಾರೆ. ದೆಹಲಿ ಸೇವೆಗಳ ಮಸೂದೆಯ ಕುರಿತಾಗಿ ಅಧ್ಯಯನ ನಡೆಸಲು ಸ್ಥಾಯಿ ಸಮಿತಿಯೊಂದನ್ನು ರಚಿಸಬೇಕು ಎಂದು ಒತ್ತಾಯಿಸಿ ನಿರ್ಣಯ ಮಂಡಿಸಲು ರಾಘವ ಚಡ್ಡಾ ಅವರು ಐವರು ರಾಜ್ಯಸಭಾ ಸದಸ್ಯರ … Continued

ಮಹಾರಾಷ್ಟ್ರ ಶಾಸಕರ ಅನರ್ಹತೆ ಪ್ರಕರಣ: ತೀರ್ಪು ನೀಡಲು ವಿಧಾನಸಭಾ ಸ್ಪೀಕರ್‌ ಗೆ ಗಡುವು ವಿಧಿಸಿದ ಸುಪ್ರೀಂ ಕೋರ್ಟ್

ನವದೆಹಲಿ: ಈ ಹಿಂದಿನ ಶಿವಸೇನೆ ಪಕ್ಷದ ಬಂಡಾಯ ಸದಸ್ಯರ ವಿರುದ್ಧದ ಅನರ್ಹತೆ ಪ್ರಕರಣದ ಕುರಿತಾದ ತೀರ್ಪನ್ನು ಈ ವರ್ಷದ ಡಿಸೆಂಬರ್ 31ರ ಒಳಗೆ ಮತ್ತು ಎನ್‌ಸಿಪಿ ಶಾಸಕರ ವಿರುದ್ಧ ಅನರ್ಹತೆಯನ್ನು 2024ರ ಜನವರಿ 24ರ ಒಳಗೆ ನೀಡುವಂತೆ ಮಹಾರಾಷ್ಟ್ರ ವಿಧಾನಸಭೆಯ ಸ್ಪೀಕರ್‌ ಅವರಿಗೆ ಸುಪ್ರೀಂ ಕೋರ್ಟ್ ಸೋಮವಾರ ನಿರ್ದೇಶನ ನೀಡಿದೆ. ಶಿವಸೇನೆಯ ಬಂಡಾಯ ಶಾಸಕರ ವಿರುದ್ಧ … Continued

ರಾಜಕೀಯ ಪಕ್ಷಗಳ ನಿಧಿಯ ಮೂಲದ ಬಗ್ಗೆ ತಿಳಿದುಕೊಳ್ಳುವ ಹಕ್ಕು ಪ್ರಜೆಗಳಿಗೆ ಇಲ್ಲ: ಸುಪ್ರೀಂ ಕೋರ್ಟ್‌ಗೆ ತಿಳಿಸಿದ ಕೇಂದ್ರ ಸರ್ಕಾರ

ನವದೆಹಲಿ: ಚುನಾವಣಾ ಬಾಂಡ್‌ಗಳ ಸಿಂಧುತ್ವ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ಆರಂಭವಾಗಲಿರುವ ಹಿನ್ನೆಲೆಯಲ್ಲಿ ಭಾರತದ ಅಟಾರ್ನಿ ಜನರಲ್ (ಎಜಿ) ಆರ್.ವೆಂಕಟರಮಣಿ ಅವರು ರಾಜಕೀಯ ಪಕ್ಷಗಳ ನಿಧಿಯ ಮೂಲದ ಬಗ್ಗೆ ತಿಳಿದುಕೊಳ್ಳುವ ಹಕ್ಕು ಪ್ರಜೆಗಳಿಗೆ ಇಲ್ಲ ಎಂದು ಸುಪ್ರೀಂ ಕೋರ್ಟ್‌ಗೆ ತಿಳಿಸಿದ್ದಾರೆ. ಎಜಿ ಅವರ ಈ ವಾದವು ಕೇಂದ್ರ ಸರ್ಕಾರದ ಪರವಾಗಿ ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿದ ಲಿಖಿತ … Continued