ಕರ್ನಾಟಕದ ಹೆಚ್ಚಿನ ಜನರಿಗೆ ಎವಿಎಂ ಮೇಲೆ ಅಪಾರ ವಿಶ್ವಾಸ ; ಹೊಸ ಸಮೀಕ್ಷೆಯಲ್ಲಿ ಅನೇಕ ಅಂಶಗಳು ಬಹಿರಂಗ

ಬೆಂಗಳೂರು: ಭಾರತದಲ್ಲಿ ಚುನಾವಣೆಗಳು ಮುಕ್ತ ಮತ್ತು ನ್ಯಾಯಸಮ್ಮತವಾಗಿ ನಡೆಯುತ್ತವೆ ಹಾಗೂ ಇವಿಎಂ (EVM) ಯಂತ್ರಗಳು ನಿಖರವಾದ ಫಲಿತಾಂಶವನ್ನು ನೀಡುತ್ತವೆ ಎಂದು ಕರ್ನಾಟಕದ ಬಹುಪಾಲು ಮತದಾರರು ನಂಬಿದ್ದಾರೆ. ಕರ್ನಾಟಕ ಮೌಲ್ಯಮಾಪನ ಮತ್ತು ಉಸ್ತುವಾರಿ ಪ್ರಾಧಿಕಾರ (Karnataka Monitoring and Evaluation Authority (KMEA)) ನಡೆಸಿದ ಇತ್ತೀಚಿನ ಸಮೀಕ್ಷೆಯಲ್ಲಿ ಈ ಕುತೂಹಲಕಾರಿ ಅಂಶಗಳು ಬಹಿರಂಗಗೊಂಡಿವೆ. ಆಗಸ್ಟ್ 2025 ರ … Continued

ಬಿಹಾರ ಚುನಾವಣೆ 2025 | ಸಿ ವೋಟರ್‌ ಸಮೀಕ್ಷೆ : ಎನ್‌ ಡಿಎ-ಮಹಾ ಮೈತ್ರಿಕೂಟದ ನಡುವೆ ನಿಕಟ ಸ್ಪರ್ಧೆ, ಜನಪ್ರಿಯ ಸಿಎಂ ಅಭ್ಯರ್ಥಿ ಯಾರು…?

ವಿಧಾನಸಭೆ ಚುನಾವಣೆ ಘೋಷಣೆಯಾದ ಹಿನ್ನೆಲೆಯಲ್ಲಿ ಬಿಹಾರದ ಚುನಾವಣಾ ರಾಜಕೀಯವು ಉತ್ತುಂಗದಲ್ಲಿದೆ. ಎನ್‌ಡಿಎ (NDA) ಮತ್ತು ಆರ್‌ಜೆಡಿ ನೇತೃತ್ವದ ಮಹಾ ಮೈತ್ರಿಕೂಟದ ಎರಡೂ ಪಕ್ಷಗಳಲ್ಲಿ ಸೀಟು ಹಂಚಿಕೆಯ ಬಗ್ಗೆ ಭಿನ್ನಾಭಿಪ್ರಾಯಗಳು ಬೆಳೆಯುತ್ತಿವೆ. ದೆಹಲಿಯಿಂದ ಪಾಟ್ನಾದವರೆಗೆ ಸಭೆಗಳು ನಡೆಯುತ್ತಿವೆ, ಆದರೆ ಎರಡೂ ಮೈತ್ರಿಕೂಟಗಳು ಯಾವುದೇ ಅಂತಿಮ ನಿರ್ಧಾರಕ್ಕೆ ಬಂದಿಲ್ಲ. ಏತನ್ಮಧ್ಯೆ, ನಾಯಕರ ಪಕ್ಷಾಂತರವೂ ತೀವ್ರಗೊಂಡಿದೆ. ಪ್ರಶಾಂತ ಕಿಶೋರ ಫ್ಯಾಕ್ಟರ್‌…. … Continued

ಬಿಹಾರ ಚುನಾವಣೆ | 4 ಒಪಿನಿಯನ್‌ ಪೋಲ್‌ ; ಎನ್‌ಡಿಎ, ಆರ್‌ಜೆಡಿ ಮಹಾಘಟಬಂಧನ ಮಧ್ಯೆ ಜಿದ್ದಾಜಿದ್ದಿ : ಯಾರಿಗೆ ಮುನ್ನಡೆ ?

2025 ರ ಬಿಹಾರ ವಿಧಾನಸಭಾ ಚುನಾವಣೆಗೆ ಮುನ್ನ ನಡೆದ ನಾಲ್ಕು ಪ್ರಮುಖ ಒಪಿನಿಯನ್‌ ಪೋಲ್‌ಗಳ ಫಲಿತಾಂಶಗಳು ರಾಜ್ಯದ ಮತದಾರರ ಟ್ರೆಂಡ್‌ ಬಗ್ಗೆ ಹೇಳಿವೆ. ಮ್ಯಾಟ್ರಿಕ್ಸ್, ಜೆವಿಸಿ, ಸ್ಪೀಕ್ ಮೀಡಿಯಾ ನೆಟ್‌ವರ್ಕ್ ಮತ್ತು ವೋಟ್ ವೈಬ್ ನಡೆಸಿದ ಸಮೀಕ್ಷೆಗಳು ಬಿಜೆಪಿ, ಜೆಡಿಯು, ಎಲ್‌ಜೆಪಿ (ರಾಮ ವಿಲಾಸ) ಮತ್ತು ಎಚ್‌ಎಎಂ ಒಳಗೊಂಡ ಎನ್‌ಡಿಎ ಮೈತ್ರಿಕೂಟಕ್ಕೆ ಸ್ಪಷ್ಟ ಮುನ್ನಡೆಯನ್ನು ತೋರಿಸಿವೆ. … Continued

ಮೂಡ್ ಆಫ್ ದಿ ನೇಷನ್ ಸರ್ವೆ | ಮೋದಿ ಜನಪ್ರಿಯತೆ ಸ್ಥಿರ-ನಂಬರ್‌ 1 ; ರಾಹುಲ್‌ ಗಾಂಧಿ 2ನೇ ಸ್ಥಾನದಲ್ಲಿ ; ಇಬ್ಬರ ನಡುವಿನ ಅಂತರ…?

ನರೇಂದ್ರ ಮೋದಿ ಅವರು ಭಾರತದ ಚುಕ್ಕಾಣಿ ಹಿಡಿದ 11 ವರ್ಷಗಳಲ್ಲಿ ಪ್ರತಿಕೂಲ ಪರಿಸ್ಥಿತಿಗಳಿದ್ದರೂ ಜನಪ್ರಿಯತೆಯಲ್ಲಿ ಯಾವಾಗಲೂ ಉತ್ತಮ ನಾಯಕರಾಗಿ ಹೊರಹೊಮ್ಮಿದ್ದಾರೆ. ಈಗ ಅವರ ಮೂರನೇ ಅವಧಿಯ ಎರಡನೇ ವರ್ಷದಲ್ಲಿ ಕಠಿಣ ಸವಾಲನ್ನು ಎದುರಿಸುತ್ತಿದ್ದಾರೆ. ಮುಖ್ಯವಾಗಿ ಅಮೆರಿಕ ವಿಧಿಸಿದ ಸುಂಕದಿಂದ ಈ ಸವಾಲು ಎದುರಾಗಿದೆ. ಟ್ರಂಪ್ ಭಾರತದ ರಫ್ತಿನ ಮೇಲೆ 50 ಪ್ರತಿಶತ ಸುಂಕವನ್ನು ವಿಧಿಸಿದ್ದು, ಇದು … Continued

ಭಾರತದ ಮೇಲೆ ಅಮೆರಿಕ ಭಾರಿ ಸುಂಕ ವಿಧಿಸಿದ್ದರ ಬಗ್ಗೆ ಡೆಮಾಕ್ರಸಿ ಇನ್ಸ್ಟಿಟ್ಯೂಟ್ ಸಮೀಕ್ಷೆ ; ಅದರಲ್ಲಿ ಟ್ರಂಪಗೆ ಮಂಗಳಾರತಿ…!

ನವದೆಹಲಿ : ರಷ್ಯಾದಿಂದ ತೈಲ ಖರೀದಿಗೆ ಸಂಬಂಧಿಸಿದಂತೆ ಭಾರತದ ಮೇಲೆ ಅಮೆರಿಕ ಅಧ್ಯಕ್ಷ ಟ್ರಂಪ್‌ ಸುಂಕ ವಿಧಿಸಿದ್ದಕ್ಕೆ ಸಂಬಂಧಿಸಿದಂತೆ ಅಮೆರಿಕದ ಚಿಂತಕರ ಚಾವಡಿ (think tank) ಡೆಮಾಕ್ರಸಿ ಇನ್ಸ್ಟಿಟ್ಯೂಟ್ ಸಮೀಕ್ಷೆ ನಡೆಸಿದ್ದು ಅದರಲ್ಲಿ ಕಂಡುಬಂದ ಅಂಶಗಳನ್ನು ಬಿಡುಗಡೆ ಮಾಡಿದೆ. ಭಾರತವು ರಷ್ಯಾದಿಂದ ತೈಲ ಖರೀದಿ ಮಾಡಿದ್ದಕ್ಕೆ ಅಮೆರಿಕವು ಭಾರತದ ಮೇಲೆ ಸುಂಕ ವಿಧಿಸಬಾರದಿತ್ತು ಎಂದು ಅರ್ಧಕ್ಕಿಂತ … Continued

ಜಾಗತಿಕ ನಾಯಕರ ಪಟ್ಟಿ : ಶೇ.75 ಅನುಮೋದನೆಯೊಂದಿಗೆ ಪ್ರಧಾನಿ ಮೋದಿಗೆ ಅಗ್ರಸ್ಥಾನ ; 8ನೇ ಸ್ಥಾನದಲ್ಲಿ ಟ್ರಂಪ್ : ಸಮೀಕ್ಷೆಯ ಟಾಪ್ 10 ನಾಯಕರು

ನವದೆಹಲಿ: ಅಮೆರಿಕ ಮೂಲದ ಡೇಟಾ ವಿಶ್ಲೇಷಣಾ ಸಂಸ್ಥೆ ಮಾರ್ನಿಂಗ್ ಕನ್ಸಲ್ಟ್ ಇತ್ತೀಚೆಗೆ ನಡೆಸಿದ ಜಾಗತಿಕ ಸಮೀಕ್ಷೆಯ ಪ್ರಕಾರ, ಪ್ರಧಾನಿ ನರೇಂದ್ರ ಮೋದಿ ಅವರು ಶೇ. 75 ರಷ್ಟು ಅನುಮೋದನೆ ರೇಟಿಂಗ್‌ನೊಂದಿಗೆ ಪ್ರಜಾಪ್ರಭುತ್ವದ ವಿಶ್ವ ನಾಯಕರಾಗಿ ಹೊರಹೊಮ್ಮಿದ್ದಾರೆ. ಅವರು ವಿಶ್ವ ನಾಯಕರ ‘ಡೆಮಾಕ್ರಟಿಕ್ ಲೀಡರ್ ಅಪ್ರೂವಲ್ ರೇಟಿಂಗ್ಸ್’ ಪಟ್ಟಿಯಲ್ಲಿ ಶೇ. 75 ರಷ್ಟು ಅನುಮೋದನೆ ರೇಟಿಂಗ್‌ನೊಂದಿಗೆ ಅಗ್ರಸ್ಥಾನದಲ್ಲಿದ್ದಾರೆ. … Continued

ಲೋಕಸಭೆ ಚುನಾವಣೆ : ಟೈಮ್ಸ್​ ನೌ-ಇಟಿಜಿ ಸಮೀಕ್ಷೆ ವರದಿ ಪ್ರಕಟ; ಕಾಂಗ್ರೆಸ್ಸಿಗೆ ಕಳೆದ ಚುನಾವಣೆಗಿಂತಲೂ ಕಡಿಮೆ ಸ್ಥಾನ ಎಂದ ಸಮೀಕ್ಷೆ; ಬಿಜೆಪಿಗೆ ಎಷ್ಟು ಸ್ಥಾನ..?

ನವದೆಹಲಿ: ಈಗ ದೇಶದಲ್ಲಿ ಲೋಕಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ಇದರ ಬೆನ್ನಲ್ಲೇ ಈಗ ಮತ್ತೊಂದು ಮತ್ತೊಂದು ಚುನಾವಣಾ ಪೂರ್ವ ಸಮೀಕ್ಷೆ ಹೊರಬಿದ್ದಿದೆ. ಈಗಲೇ ದೇಶದಲ್ಲಿ ಚುನಾವಣೆ ನಡೆದರೆ ಬಿಜೆಪಿ ನೇತೃತ್ವದ ಎನ್​ಡಿಎ ಮೈತ್ರಿಕೂಟ 358-398 ಸ್ಥಾನದಲ್ಲಿ ಜಯಗಳಿಸಲಿದೆ ಎಂದು ಸಮೀಕ್ಷೆ ತಿಳಿಸಿದೆ. ಟೈಮ್ಸ್​ ನೌ ಸುದ್ದಿ ವಾಹಿನಿ- ಇಟಿಜಿ ನಡೆಸಿರುವ ಸಮೀಕ್ಷೆಯಲ್ಲಿ ಒಟ್ಟು 543 ಕ್ಷೇತ್ರಗಳಲ್ಲಿ … Continued

ಜ್ಞಾನವಾಪಿ ಮಸೀದಿ ಮುಚ್ಚಿದ ನೆಲಮಾಳಿಗೆಗಳ ಎಎಸ್ಐ ಸಮೀಕ್ಷೆಗೆ ಅವಕಾಶ ನೀಡಿ : ವಾರಾಣಸಿ ನ್ಯಾಯಾಲಯಕ್ಕೆ ಹಿಂದೂ ದಾವೆದಾರರ ಮನವಿ

ವಾರಾಣಸಿ : ಜ್ಞಾನವಾಪಿ ಮಸೀದಿಯ ಆವರಣದಲ್ಲಿರುವ ಹಾಗೂ ಈ ಹಿಂದೆ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯ (ಎಎಸ್ಐ) ಸಮೀಕ್ಷೆ ವ್ಯಾಪ್ತಿಗೆ ಒಳಪಡದ ನೆಲಮಾಳಿಗೆಗಳ ಸಮೀಕ್ಷೆಯನ್ನು ನಡೆಸಬೇಕೆಂದು ಕೋರಿ ವಾರಾಣಸಿಯ ಜಿಲ್ಲಾ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಲಾಗಿದೆ. 2022ರ ಶೃಂಗಾರ ಗೌರಿ ಪೂಜೆ ದಾವೆಯಲ್ಲಿ ಮೊದಲ ದಾವೆದಾರೆಯಾಗಿರುವ ರಾಖಿ ಸಿಂಗ್ ಈ ಕುರಿತ ಅರ್ಜಿ ಸಲ್ಲಿಸಿದ್ದಾರೆ. ಜ್ಞಾನವಾಪಿ ಆವರಣದ … Continued

ನ್ಯಾಯಾಲಯಕ್ಕೆ ವಾರಾಣಸಿ ಜ್ಞಾನವಾಪಿ ಮಸೀದಿ ಸರ್ವೆ ವರದಿ ಸಲ್ಲಿಸಿದ ಪುರಾತತ್ವ ಇಲಾಖೆ

ನವದೆಹಲಿ : ಭಾರತೀಯ ಪುರಾತತ್ವ ಇಲಾಖೆಯು ಉತ್ತರ ಪ್ರದೇಶದ ವಾರಾಣಸಿಯ ಜಿಲ್ಲಾ ನ್ಯಾಯಾಧೀಶರ ನ್ಯಾಯಾಲಯಕ್ಕೆ ಜ್ಞಾನವಾಪಿ ಮಸೀದಿ ‘ವೈಜ್ಞಾನಿಕ ಸಮೀಕ್ಷೆ’ ವರದಿಯನ್ನು ಸಲ್ಲಿಸಿದೆ. ಸೋಮವಾರ ಮಧ್ಯಾಹ್ನ ವರದಿಯನ್ನು ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸಲಾಯಿತು. ಇದನ್ನು ಸಾರ್ವಜನಿಕಗೊಳಿಸಲಾಗುತ್ತದೆಯೇ ಅಥವಾ ಅರ್ಜಿದಾರರಾದ ಹಿಂದೂ ಪಕ್ಷದೊಂದಿಗೆ ಹಂಚಿಕೊಳ್ಳಲಾಗುತ್ತದೆಯೇ ಅಥವಾ ಮುಸ್ಲಿಂ ಪಕ್ಷದೊಂದಿಗೆ ಹಂಚಿಕೊಳ್ಳಲಾಗುತ್ತದೆಯೇ ಎಂಬುದು ಸ್ಪಷ್ಟವಾಗಿಲ್ಲ. ಮುಂದಿನ ವಿಚಾರಣೆಯನ್ನು ಗುರುವಾರಕ್ಕೆ ನಿಗದಿಪಡಿಸಲಾಗಿದೆ. … Continued

ಮಥುರಾ ಶ್ರೀಕೃಷ್ಣ ಜನ್ಮಭೂಮಿ ಪ್ರಕರಣ: ಶಾಹಿ ಈದ್ಗಾ ಸಂಕೀರ್ಣದ ಸರ್ವೆ ನಡೆಸಲು ಅಲಹಾಬಾದ್ ಹೈಕೋರ್ಟ್ ಅನುಮತಿ

ಪ್ರಯಾಗರಾಜ್‌ : ಶ್ರೀಕೃಷ್ಣ ಜನ್ಮಭೂಮಿ ಪ್ರಕರಣದ ಪ್ರಮುಖ ಬೆಳವಣಿಗೆಯಲ್ಲಿ, ಅಲಹಾಬಾದ್ ಹೈಕೋರ್ಟ್ ಗುರುವಾರ ಮಥುರಾದ ಶಾಹಿ ಈದ್ಗಾ ಸಂಕೀರ್ಣದ ಸರ್ವೆ ನಡೆಸಲು ಅನುಮೋದನೆ ನೀಡಿದೆ. ಹಿಂದೂಪರ ಸಂಘಟನೆಗಳು ಸಲ್ಲಿಸಿದ್ದ ಮನವಿಯನ್ನು ಸ್ವೀಕರಿಸಿರುವ ಅಲಹಾಬಾದ್ ಹೈಕೋರ್ಟ್ ವಿವಾದಿತ ಶಾಹಿ ಈದ್ಗಾ ಸಂಕೀರ್ಣದ ವೈಜ್ಞಾನಿಕ ಸಮೀಕ್ಷೆ ನಡೆಸಲು ಅನುಮತಿ ನೀಡಿದೆ. ಹಿಂದೂ ಪರ ವಕೀಲ ವಿಷ್ಣು ಶಂಕರ್ ಜೈನ್ … Continued