55 ದಿನಗಳಿಂದ ತಲೆಮರೆಸಿಕೊಂಡಿದ್ದ ಸಂದೇಶಖಾಲಿ ಪ್ರಕರಣದ ಆರೋಪಿ ಶೇಖ್ ಷಹಜಹಾನ್ ಬಂಧನ : ಪಕ್ಷದಿಂದ 6 ವರ್ಷ ಅಮಾನತು ಮಾಡಿದ ಟಿಎಂಸಿ

ಕೋಲ್ಕತ್ತಾ: ಸಂದೇಶಖಾಲಿ ಪ್ರಕರಣದ ಪ್ರಮುಖ ಆರೋಪಿ ತೃಣಮೂಲ ಕಾಂಗ್ರೆಸ್ ನಾಯಕ ಶೇಖ್ ಷಹಜಹಾನ್ ನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಶೇಖ್ ಷಹಜಹಾನ್ ಬಂಧನದ ಬಳಿಕ ತೃಣ ಮೂಲ ಕಾಂಗ್ರೆಸ್ ಆತನನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ 6 ವರ್ಷಗಳ ಕಾಲ ಅಮಾನತು ಮಾಡಲಾಗಿದೆ ಎಂದು ಹೇಳಿದೆ. ಆತ ಮತ್ತು ಆತನ ಸಹಚರರ ವಿರುದ್ಧ ಸಂದೇಶಖಾಲಿಯಲ್ಲಿ ಮಹಿಳೆಯರ … Continued

ಪ್ರಧಾನಿ ಮೋದಿ, ಕೇಂದ್ರ ಸರ್ಕಾರ ಅಪಹಾಸ್ಯ ಮಾಡಿದ ನಾಟಕ ಪ್ರದರ್ಶಿಸಿದ ಇಬ್ಬರು ಅಧಿಕಾರಿಗಳನ್ನು ಅಮಾನತು ಮಾಡಿದ ಕೇರಳ ಹೈಕೋರ್ಟ್

ತಿರುವನಂತಪುರಂ: ಪ್ರಧಾನಿ ನರೇಂದ್ರ ಮೋದಿ ಮತ್ತು ಭಾರತ ಸರ್ಕಾರದ ವಿರುದ್ಧ ಅವಹೇಳನಕಾರಿ ವಿಷಯ ಇದ್ದ ನಾಟಕವನ್ನು ಪ್ರದರ್ಶಿಸಿದ್ದಕ್ಕಾಗಿ ಕೇರಳ ಹೈಕೋರ್ಟ್‌ನ ಇಬ್ಬರು ಅಧಿಕಾರಿಗಳನ್ನು ಶುಕ್ರವಾರ ಅಮಾನತುಗೊಳಿಸಲಾಗಿದೆ. ಗಣರಾಜ್ಯೋತ್ಸವದಂದು ಹೈಕೋರ್ಟ್‌ನಲ್ಲಿ ಪ್ರದರ್ಶಿಸಲಾದ ಈ ನಾಟಕವು ಭಾರತ ಸರ್ಕಾರ ಮತ್ತು ದೇಶಕ್ಕೆ ಅವಮಾನವಾಗಿದೆ ಎಂದು ಆರೋಪಿಸಿ ದೂರಿಗೆ ಕಾರಣವಾಯಿತು. ಸಹಾಯಕ ರಿಜಿಸ್ಟ್ರಾರ್ ಸುಧೀಶ ಟಿ.ಎ. ಮತ್ತು ಕೋರ್ಟ್ ಕೀಪರ್ … Continued

ಪ್ರಧಾನಿ ಮೋದಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆ : ತನ್ನ ಮೂವರು ಸಚಿವರನ್ನು ಅಮಾನತು ಮಾಡಿದ ಮಾಲ್ಡೀವ್ಸ್‌ ಸರ್ಕಾರ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರ ಲಕ್ಷದ್ವೀಪ ಭೇಟಿಯನ್ನು ಅಪಹಾಸ್ಯ ಮಾಡಿದ ವಿವಾದಕ್ಕೆ ಸಂಬಂಧಿಸಿದಂತೆ ಮಾಲ್ಡೀವ್ಸ್‌ನಲ್ಲಿ ಮೂವರು ಸಚಿವರ ತಲೆದಂಡವಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಲಕ್ಷದ್ವೀಪ ಪ್ರವಾಸದ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಆಕ್ಷೇಪಾರ್ಹ ಹೇಳಿಕೆಗಳನ್ನು ಹಂಚಿಕೊಂಡ ಮಾಲ್ಡೀವ್ಸ್‌ನ ಮೂವರು ಸಚಿವರನ್ನು ಅಲ್ಲಿನ ಸರ್ಕಾರವು ಭಾನುವಾರ ಅಮಾನತುಗೊಳಿಸಿದೆ ಎಂದು ಮಾಲ್ಡೀವ್ಸ್ ವಕ್ತಾರರು ತಿಳಿಸಿದ್ದಾರೆ. ಭಾನುವಾರ ಭಾರತವು ಮಾಲ್ಡೀವ್ಸ್‌ … Continued

ಕಲಾಪಕ್ಕೆ ಅಡ್ಡಿ: ಡಿ.ಕೆ ಸುರೇಶ ಸೇರಿದಂತೆ ಮೂವರು ಕಾಂಗ್ರೆಸ್ ಸಂಸದರ ಅಮಾನತು

ನವದೆಹಲಿ : ಅಶಿಸ್ತಿನ ವರ್ತನೆ ತೋರಿದ್ದಕ್ಕಾಗಿ ಮೂವರು ಕಾಂಗ್ರೆಸ್ ಸಂಸದರನ್ನು ಚಳಿಗಾಲದ ಅಧಿವೇಶನದ ಉಳಿದ ಅವಧಿಗೆ ಗುರುವಾರ( ಡಿಸೆಂಬರ್‌ 21) ಸಂಸತ್ತಿನಿಂದ ಅಮಾನತುಗೊಳಿಸಲಾಗಿದೆ. ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ಅವರು ಅಮಾನತಿಗೆ ಪ್ರಸ್ತಾವನೆ ಮಂಡಿಸಿದರು. ನಂತರ ಕಾಂಗ್ರೆಸ್ ಸಂಸದರಾದ ಡಿ.ಕೆ.ಸುರೇಶ, ದೀಪಕ ಬೈಜ್ ಮತ್ತು ನಕುಲ ನಾಥ ಅವರನ್ನು ಅಮಾನತುಗೊಳಿಸಲಾಗಿದೆ. ಹೀಗಾಗಿ ಲೋಕಸಭೆಯಿಂದ ಅಮಾನತುಗೊಂಡ … Continued

ಲೋಕಸಭೆಗೆ ಗೈರಾಗಿದ್ದ ಡಿಎಂಕೆ ಸಂಸದ ಪಾರ್ಥಿಬನ್ ತಪ್ಪಾಗಿ ಅಮಾನತು: ನಂತರ ಸ್ಪಷ್ಟಪಡಿಸಿದ ಸರ್ಕಾರ

ನವದೆಹಲಿ: ಸದನ ನಡೆಯಲು ಅಡ್ಡಿಪಡಿಸಿದ್ದಕ್ಕಾಗಿ ಚಳಿಗಾಲದ ಅಧಿವೇಶನದ ಉಳಿದ ಅವಧಿಗೆ ಲೋಕಸಭೆಯಿಂದ ಗುರುವಾರ ಅಮಾನತುಗೊಂಡ 14 ವಿರೋಧ ಪಕ್ಷದ ಸಂಸದರಲ್ಲಿ ಡಿಎಂಕೆ ನಾಯಕ ಎಸ್.ಆರ್ ಪಾರ್ಥಿಬನ್ ಅವರ ಹೆಸರು ಸೇರಿದೆ. ಪಾರ್ಥಿಬನ್ ಸೇರ್ಪಡೆ ‘ತಪ್ಪಾದ ಗುರುತಿನ’ ಪ್ರಕರಣ ಎಂದು ಸರ್ಕಾರ ನಂತರ ಸ್ಪಷ್ಟಪಡಿಸಿದೆ. ಹಾಗೂ ಅವರ ಅಮಾನತನ್ನು ಹಿಂಪಡೆದಿದೆ. ಒಟ್ಟಾರೆಯಾಗಿ ವಿಪಕ್ಷಗಳ 13 ಸಂಸದರನ್ನು ಲೋಕಸಭೆಯಿಂದ … Continued

‘ಪಕ್ಷ ವಿರೋಧಿ’ ಚಟುವಟಿಕೆ : ಸಂಸದ ಡ್ಯಾನಿಶ್ ಅಲಿ ಅಮಾನತುಗೊಳಿಸಿದ ಬಿಎಸ್‌ಪಿ

  ನವದೆಹಲಿ: ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿರುವ ಆರೋಪದ ಮೇಲೆ ಬಿಎಸ್ಪಿ ತನ್ನ ಸಂಸದ ಡ್ಯಾನಿಶ್ ಅಲಿ ಅವರನ್ನು ಶನಿವಾರ ಅಮಾನತುಗೊಳಿಸಿದೆ. ಅಲಿ 2019 ರಿಂದ ಉತ್ತರ ಪ್ರದೇಶದ ಅಮ್ರೋಹಾ ಲೋಕಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾರೆ. ಬಿಎಸ್‌ಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸತೀಶಚಂದ್ರ ಮಿಶ್ರಾ ನೀಡಿರುವ ಹೇಳಿಕೆಯಲ್ಲಿ, ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ಪಾಲ್ಗೊಳ್ಳದಂತೆ ಅಲಿ ಅವರಿಗೆ ಪಕ್ಷವು … Continued

ಪ್ರಧಾನಿ ಮೋದಿಗೆ ಭದ್ರತಾ ಲೋಪ : 7 ಪಂಜಾಬ್ ಪೊಲೀಸ್‌ ಅಧಿಕಾರಿಗಳು ಅಮಾನತು

ನವದೆಹಲಿ: ಕಳೆದ ವರ್ಷ ಪ್ರಧಾನಿ ನರೇಂದ್ರ ಮೋದಿ ಅವರು ಪಂಜಾಬ್‌ಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಆದ ಭದ್ರತಾ ಲೋಪಕ್ಕೆ ಸಂಬಂಧಿಸಿದಂತೆ ಒಟ್ಟು ಏಳು ಪೊಲೀಸ್ ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ. ಇವರಲ್ಲಿ ಫಿರೋಜ್‌ಪುರ ಜಿಲ್ಲೆಯ ಅಂದಿನ ಪೊಲೀಸ್ ವರಿಷ್ಠಾಧಿಕಾರಿ ಮತ್ತು ಇಬ್ಬರು ಡಿಎಸ್‌ಪಿ ಶ್ರೇಣಿಯ ಅಧಿಕಾರಿಗಳು ಸೇರಿದ್ದಾರೆ. ಕಳೆದ ವರ್ಷ ಜನವರಿ 5ರಂದು ಪ್ರಧಾನಿ ಮೋದಿ ಅವರು ಪಂಜಾಬ್‌ನಲ್ಲಿ … Continued

ವಿದ್ಯುತ್‌ ತಂತಿ ತುಳಿದು ತಾಯಿ-ಮಗು ಸಾವಿನ ಪ್ರಕರಣ : ಮೃತರ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ, ಇಬ್ಬರು ಅಧಿಕಾರಿಗಳ ಅಮಾನತು

ಬೆಂಗಳೂರು : ಕಾಡುಗುಡಿ ಪೊಲೀಸ್ ಠಾಣಾ ವ್ಯಾಪ್ತಿಯ ಹೋಪ್ ಫಾರ್ಮ್ ಬಳಿ ವಿದ್ಯುತ್ ತಂತಿ ತುಳಿದ ಪರಿಣಾಮ ಮಹಿಳೆ ಮತ್ತು ಮಗು ಮೃತಪಟ್ಟಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬೆಸ್ಕಾಂನ ಎಇ ಹಾಗೂ ಎಇಇ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ ಎಂದು ಇಂಧನ ಖಾತೆ ಸಚಿವ ಕೆ.ಜೆ. ಜಾರ್ಜ್‌ ಹೇಳಿದ್ದಾರೆ. ರಸ್ತೆ ಬದಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿಯನ್ನು ತುಳಿದು … Continued

ಜೆಡಿಎಸ್ ನಿಂದ ಸಿ.ಎಂ. ಇಬ್ರಾಹಿಂ ಅಮಾನತು

ಬೆಂಗಳೂರು: ಜೆಡಿಎಸ್ ಮಾಜಿ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ ಅವರನ್ನು ಪಕ್ಷದಿಂದ ಅಮಾನತು ಮಾಡಲಾಗಿದೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ. ದೇವೇಗೌಡರು ಇಬ್ರಾಹಿಂ ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ. ಕರ್ನಾಟಕ ರಾಜ್ಯ ಘಟಕದ ಪ್ರಸ್ತುತ ಕಾರ್ಯಕಾರಿ ಸಮಿತಿಯು ಪಕ್ಷದ ಸಂಘಟನೆ ಮತ್ತು ಬಲವರ್ಧನೆ ಕಾರ್ಯಕ್ರಮಗಳನ್ನು ರೂಪಿಸಿ ಅನುಷ್ಠಾನಗೊಳಿಸಿರುವುದಿಲ್ಲ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಕೈಗೊಂಡಿರುವುದಿಲ್ಲ. ಇದು … Continued

ಶ್ರೀಲಂಕಾ ಕ್ರಿಕೆಟ್‌ ಆಡಳಿತ ಮಂಡಳಿಯಲ್ಲಿ ಸರ್ಕಾರದ ಹಸ್ತಕ್ಷೇಪ: ಐಸಿಸಿಯಿಂದ ಶ್ರೀಲಂಕಾ ಸದಸ್ಯತ್ವ ಅಮಾನತು

ಐಸಿಸಿ ಮಂಡಳಿಯ ಸಭೆಯ ನಂತರ ತಕ್ಷಣವೇ ಜಾರಿಗೆ ಬರುವಂತೆ ಶ್ರೀಲಂಕಾ ಕ್ರಿಕೆಟ್‌ನ ಸದಸ್ಯತ್ವವನ್ನು ಅಮಾನತುಗೊಳಿಸುವ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ನಿರ್ಣಾಯಕ ಹೆಜ್ಜೆ ಇಟ್ಟಿದೆ. ಐಸಿಸಿಯ ಈ ನಿರ್ಧಾರವು ಪ್ರಾಥಮಿಕವಾಗಿ ಕ್ರಿಕೆಟ್ ವ್ಯವಹಾರಗಳ ಸ್ವಾಯತ್ತ ನಿರ್ವಹಣೆ ಮತ್ತು ಶ್ರೀಲಂಕಾದೊಳಗೆ ಕ್ರಿಕೆಟ್ ಆಡಳಿತದಲ್ಲಿ ಸರ್ಕಾರದ ಹಸ್ತಕ್ಷೇಪವನ್ನು ತಡೆಗಟ್ಟುವ ಆದೇಶಕ್ಕೆ ಸಂಬಂಧಿಸಿದೆ. ಶ್ರೀಲಂಕಾ ಕ್ರಿಕೆಟ್ (SLC) ಈ … Continued