ಆಸ್ಪತ್ರೆಯಲ್ಲಿ ಯುವಕ ಸಾವು: ಕಾವಾಡಿಗರಹಟ್ಟಿಯಲ್ಲಿ ಕಲುಷಿತ ನೀರು ಕುಡಿದಿರುವ ಶಂಕೆ, 78 ಮಂದಿ ಅಸ್ವಸ್ಥ

ಚಿತ್ರದುರ್ಗ: ವಾಂತಿ-ಬೇದಿಯಿಂದ ಆಸ್ಪತ್ರೆಗೆ ದಾಖಲಾಗಿದ್ದ ಯುವಕನೊಬ್ಬ ಮೃತಪಟ್ಟಿದ್ದು, ಈತನೂ ತಾಲೂಕಿನ ಕಾವಾಡಿಗರಹಟ್ಟಿಯಲ್ಲಿ ಕಲುಷಿತ ನೀರು ಸೇವಿಸಿದ್ದರಿಂದ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಕಲುಷಿತ ನೀರು ಸೇವೆನೆಯಿಂದ ಅಸ್ವಸ್ಥರ ಸಂಖ್ಯೆ 78ಕ್ಕೆ ಏರಿಕೆಯಾಗಿದ್ದು, ಜನರು ಆತಂಕಕ್ಕೀಡಾಗಿದ್ದಾರೆ. ಯುವಕ ದಾವಣಗೆರೆ ಖಾಸಗಿ ಆಸ್ಪತ್ರೆಯಲ್ಲಿ ಬುಧವಾರ ಮೃತಪಟ್ಟಿದ್ದಾನೆ. ಕಾವಾಡಿಗರಹಟ್ಟಿಯಲ್ಲಿ ಕಲುಷಿತ ನೀರು ಸೇವಿಸಿ ಮೃತಪಟ್ಟ ಶಂಕಿತರ ಸಂಖ್ಯೆ ಮೂರಕ್ಕೇರಿದೆ ಎಂದು ವರದಿಯಾಗಿದೆ. … Continued