ಕದಂಬ ಕನ್ನಡ ಜಿಲ್ಲೆ ರಚನೆಗೆ ಒತ್ತಾಯಿಸಿ ಬೆಳಗಾವಿ ಸುವರ್ಣಸೌಧದ ಮುಂದೆ ಹೋರಾಟ; ಸಿಎಂ ಗಮನಕ್ಕೆ ತರುವೆ ಎಂದ ಸಚಿವ ತಂಗಡಗಿ

ಬೆಳಗಾವಿ : ಕಳೆದ ಹತ್ತು ವರ್ಷಗಳಿಂದ ಉತ್ತರ ಕನ್ನಡದಲ್ಲಿ ಪ್ರತ್ಯೇಕ ಜಿಲ್ಲೆಗಾಗಿ ನಡೆಯುತ್ತಿರುವ ಹೋರಾಟ ಗಮನಕ್ಕಿದೆ. ನೂತನವಾಗಿ ಕದಂಬ ಕನ್ನಡ ಜಿಲ್ಲೆ ರಚನೆ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಂದಾಯ ಸಚಿವರ ಗಮನಕ್ಕೆ ತರಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ ಹೇಳಿದ್ದಾರೆ. ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯುತ್ತಿರುವ ಅಧಿವೇಶನದ ಸಂದರ್ಭದಲ್ಲಿ ಕದಂಬ ಕನ್ನಡ … Continued

ಬೆಳಗಾವಿಯಲ್ಲಿ ಪಂಚಮಸಾಲಿ ಮೀಸಲಾತಿ ಹೋರಾಟ ತೀವ್ರ ; ಪೊಲೀಸರಿಂದ ಲಾಠಿ ಚಾರ್ಜ್, ಕಲ್ಲು ತೂರಾಟ

ಬೆಳಗಾವಿ: ಬೆಳಗಾವಿ ಸುವರ್ಣಸೌಧದ ಮುಂದೆ ಪಂಚಮಸಾಲಿ 2ಎ ಮೀಸಲಾತಿ ಹೋರಾಟ ತೀವ್ರಗೊಂಡಿದ್ದು, ಮಂಗಳವಾರ ಪ್ರತಿಭಟನಾಕಾರರು ಸುವರ್ಣಸೌಧಕ್ಕೆ ನುಗ್ಗಲು ಯತ್ನಿಸಿದ್ದಾರೆ. ಪ್ರತಿಭಟನೆ ವೇಳೆ ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ್ದರಿಂದ ಪ್ರತಿಭಟನಾಕಾರರನ್ನು ಚದುರಿಸಲು ಲಾಠಿ ಚಾರ್ಜ್‌ ನಡೆಸಿದ್ದಾರೆ. ಇದರಲ್ಲಿ ಹಲವರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಪಂಚಮಸಾಲಿ 2ಎ ಮೀಸಲಾತಿಗಾಗಿ ಪಟ್ಟು ಹಿಡಿದ ಹೋರಾಟಗಾರರು ಸುವರ್ಣಸೌಧಕ್ಕೆ ನುಗ್ಗಲು ಯತ್ನಿಸಿದಾಗ … Continued

ಬೆಳಗಾವಿ | ರಸ್ತೆ ತಡೆದು ಪ್ರತಿಭಟನೆ ನಡೆಸುವ ವೇಳೆ ನುಸುಳಿ ದಾಟಿ ಬಂದ ಬಸ್‌ : ಚಾಲಕರ ಕೈ ಕಟ್ಟಿಹಾಕಿದ ರೈತರು..!

ಬೆಳಗಾವಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರೈತರು ಸೋಮವಾರ, ಇಲ್ಲಿನ ಸುವರ್ಣ ವಿಧಾನಸೌಧ ಮಾರ್ಗದ ಹಲಗಾ ಬಳಿ ರಾಷ್ಟ್ರೀಯ ಹೆದ್ದಾರಿಯ ಸರ್ವಿಸ್ ರಸ್ತೆ ತಡೆದು ಪ್ರತಿಭಟನೆ ನಡೆಸಿದರು. ಕನಿಷ್ಠ ಬೆಂಬಲ ಬೆಲೆ, ಕಬ್ಬಿಗೆ ಸೂಕ್ತ ದರ ನಿಗದಿ, ರೈತ ವಿರೋಧಿ ಕಾಯ್ದೆಗಳನ್ನು ಹಿಂಪಡೆಯುವುದು, ಕಳಸಾ- ಬಂಡೂರಿ ಯೋಜನೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯ … Continued

ಸುವರ್ಣಸೌಧದಲ್ಲಿ ಶಾವಿಗೆ ಒಣ ಹಾಕಿ ವಜಾಗೊಂಡ ಮಹಿಳೆಗೆ ಮತ್ತೆ ಸಿಕ್ತು ಕೆಲಸ

ಬೆಳಗಾವಿ :ಇಲ್ಲಿಯ ಸುವರ್ಣ ವಿಧಾನಸೌಧದ ಎದುರು ಶಾವಿಗೆ ಒಣ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿ ಎರಡು ದಿನಗಳ ಹಿಂದಷ್ಟೇ ಕೆಲಸದಿಂದ ವಜಾಗೊಳಿಸಲಾಗಿದ್ದ ಮಹಿಳೆಯರನ್ನು ಈಗ ಮತ್ತೆ ಕೆಲಸಕ್ಕೆ ನಿಯೋಜಿಸಲಾಗಿದೆ. ಮಲ್ಲಮ್ಮ ಎಂಬ ಮಹಿಳೆಯನ್ನು ಶಾವಿಗೆ ಒಣ ಹಾಕಿದ ಪ್ರಕರಣಕ್ಕೆ ಸಂಬಂಧಿಸಿ ಸುವರ್ಣ ಸೌಧದ ಸ್ವಚ್ಛತಾ ಕೆಲಸದಿಂದ ತೆಗೆಯಲಾಗಿತ್ತು. ಇವರು ಸೌಧದಲ್ಲಿ ದಿನಗೂಲಿ ನೌಕರರಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಸಾಂವಕ್ಕ … Continued