ತಲೆಮರೆಸಿಕೊಂಡಿದ್ದ ಟಿಎಂಸಿ ನಾಯಕ ಜಹಾಂಗೀರ್ ಖಾನ್ ನೇಪಾಳ ಗಡಿ ಬಳಿ ಅರೆಸ್ಟ್

ಕೋಲ್ಕತ್ತಾ : ಹಲವು ದಿನಗಳಿಂದ ತಲೆಮರೆಸಿಕೊಂಡಿದ್ದ ತೃಣಮೂಲ ಕಾಂಗ್ರೆಸ್ (TMC) ನಾಯಕ ಜಹಾಂಗೀರ್ ಖಾನ್ ಅವರನ್ನು ರಾಜ್ಯ ಪೊಲೀಸ್ ವಿಶೇಷ ಕಾರ್ಯಪಡೆ (STF) ಇಂದು, ಸೋಮವಾರ ಮುಂಜಾನೆ ನೇಪಾಳ ಗಡಿ ಪ್ರದೇಶದ ಬಳಿ ವಶಕ್ಕೆ ಪಡೆದಿದೆ ಎಂದು ವರದಿಯಾಗಿದೆ. ಎಸ್‌ಟಿಎಫ್ ತಂಡವು ಗುಪ್ತಚರ ಮಾಹಿತಿಯ ಆಧಾರದ ಮೇಲೆ ಅವರ ಚಲನವಲನಗಳನ್ನು ಪತ್ತೆಹಚ್ಚಿ ಈ ಕಾರ್ಯಾಚರಣೆಯನ್ನು ಯಶಸ್ವಿಯಾಗಿ … Continued

ಬೃಹತ್ ಪ್ರತಿಭಟನೆ ನಡೆಸಿದ ಮಮತಾ ; 78 ಶಾಸಕರು, 41 ಸಂಸದರಿದ್ರೂ ಬಂದದ್ದು 8 ಶಾಸಕರು 6 ಸಂಸದರು ಮಾತ್ರ ! ಟಿಎಂಸಿಯಲ್ಲಿ ಹೀಗ್ಯಾಕೆ ?

ಕೋಲ್ಕತ್ತಾ: ಬಂಗಾಳ ಚುನಾವಣೆಯ ಹೀನಾಯ ಸೋಲಿನ ನಂತರ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಭಿನ್ನಮತ ತಾರಕಕ್ಕೇರಿದೆ. ಪಕ್ಷವನ್ನು ಸಮಾಧಾನಪಡಿಸುವ ಮತ್ತು ಕಾರ್ಯಕರ್ತರಲ್ಲಿ ಚೈತನ್ಯ ತುಂಬುವ ನಿಟ್ಟಿನಲ್ಲಿ ಟಿಎಂಸಿ ಸುಪ್ರಿಮೋ ಮಮತಾ ಬ್ಯಾನರ್ಜಿ ಮತ್ತೆ ತಮ್ಮ ಹಳೆಯ ‘ಸ್ಟ್ರೀಟ್ ಫೈಟರ್’ (ಬೀದಿ ಹೋರಾಟಗಾರ್ತಿ) ಅವತಾರಕ್ಕೆ ಮರಳಿದ್ದಾರೆ. ಸೋಲಿನ ನಂತರ ಹಮ್ಮಿಕೊಂಡ ಮೊದಲ ಬೃಹತ್ ಪ್ರತಿಭಟನೆಯಲ್ಲಿ ಬಿಜೆಪಿಯ … Continued

ದೀದಿ ಪಕ್ಷದಲ್ಲಿ ಬಣ ರಾಜಕೀಯದ ಸದ್ದು ; ಆಂತರಿಕ ತಲ್ಲಣದಿಂದ ದುರ್ಬಲವಾಗುತ್ತಿದೆಯೇ ಟಿಎಂಸಿ..?

ಪಶ್ಚಿಮ ಬಂಗಾಳದ ರಾಜಕಾರಣದಲ್ಲಿ ತೃಣಮೂಲ ಕಾಂಗ್ರೆಸ್ (TMC) ಸದ್ಯ ತನ್ನ ಇತಿಹಾಸದಲ್ಲೇ ಅತ್ಯಂತ ಕಠಿಣ ಪರಿಸ್ಥಿತಿಯನ್ನು ಎದುರಿಸುತ್ತಿದೆ. ಹಿರಿಯ ಸಂಸದರಾದ ಕಾಕಲಿ ಘೋಷ್ ದಸ್ತಿದಾರ್ ಮತ್ತು ಕಲ್ಯಾಣ ಬ್ಯಾನರ್ಜಿ ನಡುವಿನ ಬಹಿರಂಗ ಜಗಳ ಹಾಗೂ ಅದರ ಬೆನ್ನಲ್ಲೇ ದಸ್ತಿದಾರ್ ಅವರ ಬಹಿರಂಗ ಬಂಡಾಯ, ಟಿಎಂಸಿ ಪಕ್ಷದೊಳಗಿನ ಆಂತರಿಕ ವೈರುಧ್ಯಗಳನ್ನು ಮತ್ತೊಮ್ಮೆ ಜಗಜ್ಜಾಹೀರು ಮಾಡಿದೆ. ಈ ಪಕ್ಷದಲ್ಲಿ … Continued

ಪಶ್ಚಿಮ ಬಂಗಾಳದಲ್ಲಿ ಅಕ್ರಮ ವಲಸಿಗರ ವಿರುದ್ಧ ಕಠಿಣ ಕ್ರಮ : ಭಾರತ-ಬಾಂಗ್ಲಾ ಗಡಿಯಲ್ಲಿ ನುಸುಳುಕೋರರ ನೂಕುನುಗ್ಗಲು

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ಸರ್ಕಾರವು ರಾಜ್ಯದಲ್ಲಿ ಅಕ್ರಮ ನುಸುಳುವಿಕೆ ವಿರುದ್ಧದ ಕಾರ್ಯಾಚರಣೆಯನ್ನು ತೀವ್ರಗೊಳಿಸಿದೆ. ಸರ್ಕಾರದ ಹೊಸ “ಪತ್ತೆ ಹಚ್ಚಿ, ತೆಗೆದುಹಾಕಿ ಮತ್ತು ಗಡೀಪಾರು ಮಾಡಿ” (detect, delete and deport) ನೀತಿಯ ಬೆನ್ನಲ್ಲೇ, ಬಾಂಗ್ಲಾದೇಶದ ಗಡಿ ಪರಿಶೀಲನಾ ಕೇಂದ್ರಗಳ ಬಳಿ ಶಂಕಿತ ಅಕ್ರಮ ಬಾಂಗ್ಲಾದೇಶಿ ವಲಸಿಗರು ಭಾರಿ ಸಂಖ್ಯೆಯಲ್ಲಿ ಜಮಾಯಿಸುತ್ತಿದ್ದಾರೆ. ಸರ್ಕಾರದ ಈ ಆಕ್ಷನ್ … Continued

ಪಶ್ಚಿಮ ಬಂಗಾಳದ ಮದ್ರಸಾಗಳಲ್ಲೂ ‘ವಂದೇ ಮಾತರಂ’ ಹಾಡುವುದು ಕಡ್ಡಾಯ ; ರಾಜ್ಯ ಸರ್ಕಾರದ ಆದೇಶ

ಕೋಲ್ಕತ್ತಾ : ಪಶ್ಚಿಮ ಬಂಗಾಳ ಸರ್ಕಾರವು ತನ್ನ ‘ವಂದೇ ಮಾತರಂ’ ಕಡ್ಡಾಯವಾಗಿ ಹಾಡುವ ನಿಯಮವನ್ನು ಈಗ ರಾಜ್ಯಾದ್ಯಂತ ಇರುವ ಮದ್ರಸಾಗಳಿಗೂ ಅನ್ವಯಿಸಿದೆ. ಅಲ್ಪಸಂಖ್ಯಾತರ ಕಲ್ಯಾಣ ಮತ್ತು ಮದ್ರಸಾ ಶಿಕ್ಷಣ ಇಲಾಖೆಯ ಅಡಿಯಲ್ಲಿ ಬರುವ ಎಲ್ಲಾ ಮಾನ್ಯತೆ ಪಡೆದ ಸಂಸ್ಥೆಗಳಲ್ಲಿ ಬೆಳಗಿನ ಪ್ರಾರ್ಥನಾ ಸಭೆಯ (ಅಸೆಂಬ್ಲಿ) ವೇಳೆ ರಾಷ್ಟ್ರಗೀತೆಯೊಂದಿಗೆ ರಾಷ್ಟ್ರೀಯ ಗೀತೆಯಾದ ವಂದೇ ಮಾತರಂ ಹಾಡುವುದನ್ನು ಕಡ್ಡಾಯಗೊಳಿಸಿ … Continued

ಸುವೇಂದು ಅಧಿಕಾರಿ ಪಿಎ ಹತ್ಯೆ ಪ್ರಕರಣ: ಪ್ರಮುಖ ಶೂಟರ್‌ನನ್ನು ಬಂಧಿಸಿದ ಸಿಬಿಐ

ಮುಜಾಫರ್‌ನಗರ/ಕೋಲ್ಕತಾ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಸುವೇಂದು ಅಧಿಕಾರಿಯವರ ಆಪ್ತ ಸಹಾಯಕ (PA) ಚಂದ್ರನಾಥ ರಥ್ ಅವರ ಭೀಕರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಉತ್ತರ ಪ್ರದೇಶದ ಮುಜಾಫರ್‌ ನಗರದಲ್ಲಿ ಮುಖ್ಯ ಶೂಟರನನ್ನು ಕೇಂದ್ರ ತನಿಖಾ ದಳ (CBI) ಬಂಧಿಸಿದೆ ಎಂದು ಸೋಮವಾರ ಅಧಿಕಾರಿಗಳು ತಿಳಿಸಿದ್ದಾರೆ. ಉತ್ತರ ಪ್ರದೇಶ ಪೊಲೀಸರ ಸಹಯೋಗದೊಂದಿಗೆ ಸಿಬಿಐ ಈ ಕಾರ್ಯಾಚರಣೆ ನಡೆಸಿದ್ದು, ಆರೋಪಿ … Continued

ಇಮಾಮರು, ಅರ್ಚಕರ ಸರ್ಕಾರಿ ಸಹಾಯಧನ ಸಂಪೂರ್ಣ ಸ್ಥಗಿತ ; ಪಶ್ಚಿಮ ಬಂಗಾಳ ಸರ್ಕಾರದ ನಿರ್ಧಾರ

ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಬೆನ್ನಲ್ಲೇ, ಇಂದು, ಸೋಮವಾರ ನಡೆದ ಮೊದಲ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಹಲವು ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ. ಈ ಪೈಕಿ, ಮುಂಬರುವ ಜೂನ್ ತಿಂಗಳಿನಿಂದ ಧಾರ್ಮಿಕ ಆಧಾರಿತ ಸರ್ಕಾರಿ ನೆರವುಗಳನ್ನು ಸ್ಥಗಿತಗೊಳಿಸುವುದು ಮತ್ತು ಕಲ್ಕತ್ತಾ ಹೈಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ರಾಜ್ಯದ … Continued

ಸುವೇಂದು ಅಧಿಕಾರಿ ಆಪ್ತ ಕಾರ್ಯದರ್ಶಿ ಹತ್ಯೆ ಪ್ರಕರಣ: ಯುಪಿಐ ಹಣ ಪಾವತಿಯಿಂದ ಸಿಕ್ಕಿಬಿದ್ದ ಮೂವರು ಆರೋಪಿಗಳು…!

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಸುವೇಂದು ಅಧಿಕಾರಿಯವರ ಆಪ್ತ ಸಹಾಯಕ (PA) ಚಂದ್ರನಾಥ ರಥ್ ಅವರ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. ಹಂತಕರು ಟೋಲ್ ಗೇಟ್‌ನಲ್ಲಿ ಮಾಡಿದ ಒಂದು ಸಣ್ಣ ಯುಪಿಐ (UPI) ಪಾವತಿಯನ್ನು ಬೆನ್ನತ್ತಿದ ವಿಶೇಷ ತನಿಖಾ ತಂಡ (SIT)ವು, ಉತ್ತರ ಪ್ರದೇಶ ಮತ್ತು ಬಿಹಾರದಲ್ಲಿ ಕಾರ್ಯಾಚರಣೆ ನಡೆಸಿ ಮೂವರು … Continued

ವಿಡಿಯೋ | ಬಂಗಾಳ ಸಿಎಂ ಪದಗ್ರಹಣ ಸಮಾರಂಭಲ್ಲಿ 98 ವರ್ಷದ ಮಖನ್‌ಲಾಲ ಸರ್ಕಾರ ಪಾದಮುಟ್ಟಿ ನಮಸ್ಕರಿಸಿದ ಪ್ರಧಾನಿ ಮೋದಿ : ಇವರು ಯಾರು ?

ಕೋಲ್ಕತ್ತಾ: ಕೋಲ್ಕತ್ತಾದ ಬ್ರಿಗೇಡ್ ಪೆರೇಡ್ ಮೈದಾನದಲ್ಲಿ ಶನಿವಾರ ಬೆಳಿಗ್ಗೆ ನಡೆದ ಸುವೇಂದು ಅಧಿಕಾರಿ ಅವರ ನೇತೃತ್ವದ ರಾಜ್ಯದ ಮೊತ್ತಮೊದಲ ಬಿಜೆಪಿ ಸರ್ಕಾರದ ಪ್ರಮಾಣ ವಚನ ಸ್ವೀಕಾರ ಸಮಾರಂಭವು ಒಂದು ಭಾವುಕ ಕ್ಷಣಕ್ಕೆ ಸಾಕ್ಷಿಯಾಯಿತು. ಸಮಾರಂಭದಲ್ಲಿ ಭಾಗವಹಿಸಿದ್ದ ಪ್ರಧಾನಿ ನರೇಂದ್ರ ಮೋದಿ ಅವರು, ಜನಸಂಘದ ಕಾಲದ ಹಿರಿಯ ನಾಯಕ, 98 ವರ್ಷದ ಮಾಖನ್‌ಲಾಲ್ ಸರ್ಕಾರ ಅವರ ಪಾದ … Continued

ಪಶ್ಚಿಮ ಬಂಗಾಳದ ಸಿಎಂ ಆಗಿ ಸುವೇಂದು ಅಧಿಕಾರಿ ಪ್ರಮಾಣವಚನ ಸ್ವೀಕಾರ: ಸಚಿವರಾಗಿ ಐವರಿಂದ ಪ್ರಮಾಣ ವಚನ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಇಂದು, ಶನಿವಾರ ಬಿಜೆಪಿಯ ಯುಗ ಆರಂಭವಾಗಿದೆ. ಭಾರತೀಯ ಜನತಾ ಪಕ್ಷದ (ಬಿಜೆಪಿ) ಮುಖಂಡ ಸುವೇಂದು ಅಧಿಕಾರಿ ಅವರು ಶನಿವಾರ ಬೆಳಗ್ಗೆ 11 ಗಂಟೆಗೆ ಕೋಲ್ಕತ್ತಾದ ಐತಿಹಾಸಿಕ ಬ್ರಿಗೇಡ್ ಪೆರೇಡ್ ಮೈದಾನದಲ್ಲಿ ನಡೆದ ಭವ್ಯ ಸಮಾರಂಭದಲ್ಲಿ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಅವರ ಜೊತೆ ಐವರು ಶಾಕಸರು ಸಚಿವರಾಗಿ … Continued