ಶಿರಸಿ | ಈಜಲು ತೆರಳಿದ್ದ ಇಬ್ಬರು ನೀರುಪಾಲು

ಶಿರಸಿ :ಈಜಲು ತೆರಳಿದ್ದ ಇಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಉಂಚಳ್ಳಿ ಸಮೀಪದ ಮಾಸ್ತಿಜಡ್ಡಿ ಹಳ್ಳದಲ್ಲಿ ಭಾನುವಾರ ನಡೆದಿದೆ ಎಂದು ವರದಿಯಾಗಿದೆ. ಮಾಸ್ತಿಜಡ್ಡಿ ಗ್ರಾಮದ ಮದನ ಗಜಾನನ ನಾಯ್ಕ (೧೬) ಹಾಗೂ ಹೊನ್ನಾವರ ತಾಲೂಕಿನ ಹರ್ಷ ಮಂಜುನಾಥ ನಾಯ್ಕ(೧೯) ಮೃತ ಬಾಲಕರಾಗಿದ್ದು, ಇಬ್ಬರೂ ಮಾಸ್ತಿಜಡ್ಡಿಯಲ್ಲಿರುವ ಸುಮಾರು ೧೫ ಅಡಿ … Continued

ವಿಡಿಯೋ..| ರಾಮಸೇತು ಸಮುದ್ರ ಮಾರ್ಗದಲ್ಲಿ ಶ್ರೀಲಂಕಾದಿಂದ ಭಾರತಕ್ಕೆ 11 ತಾಸಿನೊಳಗೆ 32 ಕಿ.ಮೀ ಈಜಿ ಬಂದ ಬೆಂಗಳೂರು ದಂಪತಿ…!

ಬೆಂಗಳೂರು: ಸಿಲಿಕಾನ್ ಸಿಟಿಯ ಐಟಿ ಉದ್ಯೋಗಿಗಳಾದ ದಾನಿಶ್ ಅಬ್ದಿ ಮತ್ತು ವೃಶಾಲಿ ಪ್ರಸಾದೆ ಅವರು ಐತಿಹಾಸಿಕ ಸಾಧನೆ ಮಾಡಿದ್ದಾರೆ. ಇವರು ಶ್ರೀಲಂಕಾದಿಂದ ಭಾರತಕ್ಕೆ ರಾಮಸೇತು ಮಾರ್ಗದ ಮೂಲಕ ‘ಸೈಡ್-ಬೈ-ಸೈಡ್’ (ಜೊತೆಜೊತೆಯಾಗಿ) ಈಜುವ ಮೂಲಕ ಈ ಸಾಧನೆ ಮಾಡಿದ ಮೊದಲ ದಂಪತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಮೇ 7 ರಂದು ಮುಂಜಾನೆ ಸುಮಾರು 4:30ಕ್ಕೆ ಶ್ರೀಲಂಕಾದ ತಲೈಮನ್ನಾರ್‌ನಿಂದ … Continued

ವೀಡಿಯೊ…| 28 ಕಿಮೀ ರಾಮಸೇತು ಸಮುದ್ರ ಈಜಿದ ಹುಬ್ಬಳ್ಳಿ ಪೊಲೀಸ್‌ ಅಧಿಕಾರಿ…!

ಹುಬ್ಬಳ್ಳಿ : ಶ್ರೀಲಂಕಾದಿಂದ ಭಾರತದ ಧನುಷ್ ಕೋಡಿಯ ವರೆಗೆ ರಾಮ ಸೇತು ಸಮುದ್ರ ಮಾರ್ಗದಲ್ಲಿ 28 ಕಿ.ಮೀ.ಈಜುವ ಮೂಲಕ ಹುಬ್ಬಳ್ಳಿಯ ಹುಬ್ಬಳ್ಳಿಯ ಪೊಲೀಸ್ ಅಧಿಕಾರಿ ಇದ್ದ ಈಜು ತಂಡ ಜಾಗತಿಕವಾಗಿ ಗಮನ ಸೆಳೆದಿದೆ. ಈ ಸಾಧನೆ ಮಾಡಿದವರಲ್ಲಿ ಹುಬ್ಬಳ್ಳಿ ಗ್ರಾಮೀಣ ಠಾಣೆಯ ಇನ್ಸ್‌ಪೆಕ್ಟರ್‌ ಮುರುಗೇಶ ಚನ್ನಣ್ಣವರ ಅವರು ಒಬ್ಬರು. ಇವರ ಜೊತೆ ಹುಬ್ಬಳ್ಳಿಯ ವೈದ್ಯಕೀಯ ವಿದ್ಯಾರ್ಥಿ … Continued

ಕುಂದಾಪುರ | ಅಣೆಕಟ್ಟಿನ ಬಳಿ ಈಜಲು ಹೋಗಿ ಇಬ್ಬರು ನೀರುಪಾಲು

ಕುಂದಾಪುರ : ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಬೆಳ್ವೆ ಗ್ರಾಮದ ಗುಮ್ಮೋಲ ಸಮೀಪದ ಸೀತಾನದಿ ಒಳ್ಳೆಹೊಂಡ ಕಿಂಡಿ ಅಣೆಕಟ್ಟಿನ ಬಳಿ ಸ್ನಾನಕ್ಕೆ ಹೋದ ಇಬ್ಬರು ನೀರು ಪಾಲಾದ ಘಟನೆ ನಡೆದಿದೆ ಎಂದು ವರದಿಯಾಗಿದೆ. ಮೃತರನ್ನು ಗುಮ್ಮೋಲ ಹರ್ಗಗುಂಡಿಯ ಜಯಂತ್ ನಾಯ್ಕ (19 ) ಹಾಗೂ ಗೋಳಿಯಂಗಡಿಯ ಶ್ರೀಶ ಆಚಾರ್ಯ (14 ) ಎಂದು ಗುರುತಿಸಲಾಗಿದೆ. ಭಾನುವಾರ … Continued

ಈಜಲು ತೆರಳಿದ್ದ ನಾಲ್ವರು ಬಾಲಕರು ನೀರುಪಾಲು

ಹಾಸನ: ಹೊಳೆಗೆ ಈಜಲು ತೆರಳಿದ್ದ ನಾಲ್ವರು ಮಕ್ಕಳು ನೀರುಪಾಲಾದ ಘಟನೆ ಹಾಸನ ಜಿಲ್ಲೆಯ ಆಲೂರು ತಾಲೂಕಿನ ಕದಾಳು ಸಮೀಪದ ಮುತ್ತಿಗೆ ಗ್ರಾಮದಲ್ಲಿ ಸಂಭವಿಸಿದೆ ಎಂದು ವರದಿಯಾಗಿದೆ. ಮೃತ ಬಾಲಕರನ್ನು ಜೀವನ್(13), ಸಾತ್ವಿಕ್(11), ವಿಶ್ವ(12), ಪೃಥ್ವಿ(12) ಎಂದು ಗುರುತಿಸಲಾಗಿದೆ. ಐವರು ಗೆಳೆಯರು ಹೊಳೆಗೆ ಈಜಲು ಹೋಗಿದ್ದರು. ಹೊಳೆಗೆ ಇಳಿದಾಗ ನೀರಿನಿಂದ ಹೊರಬರಲಾಗದೆ ನಾಲ್ವರು ಮುಳುಗಿದ್ದಾರೆ. ಮತ್ತೊಬ್ಬ ಬಾಲಕ … Continued