ಟಿ20 ವಿಶ್ವಕಪ್‌ : ಇಂದಿನ ಪಂದ್ಯದಲ್ಲಿ ಭಾರತದ ಭವಿಷ್ಯ ನಿರ್ಧಾರ : ಸೆಮಿಫೈನಲ್ ಪ್ರವೇಶಕ್ಕೆ ಇರುವ 3 ಪ್ರಮುಖ ಹಾದಿಗಳು…

2026ರ ಟಿ20 ವಿಶ್ವಕಪ್‌ನ ಸೆಮಿಫೈನಲ್ ಪ್ರವೇಶಿಸಲು ಸೂರ್ಯಕುಮಾರ ಯಾದವ್ ನೇತೃತ್ವದ ಭಾರತ ತಂಡಕ್ಕೆ ಇಂದು ಗುರುವಾರ (ಫೆ.೨೬) ಅತ್ಯಂತ ನಿರ್ಣಾಯಕ ದಿನವಾಗಿದೆ. ಸೂಪರ್ 8 ಹಂತದ ಮೊದಲ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ 76 ರನ್‌ಗಳ ಸೋಲು ಅನುಭವಿಸಿರುವುದು ತಂಡವನ್ನು ಇಕ್ಕಟ್ಟಿಗೆ ಸಿಲುಕಿಸಿದೆ. ಗುರುವಾರ ನಡೆಯಲಿರುವ ದಕ್ಷಿಣ ಆಫ್ರಿಕಾ ಹಾಗೂ ವೆಸ್ಟ್ ಇಂಡೀಸ್ ಮತ್ತು ಭಾರತ … Continued

ಜಿಂಬಾಬ್ವೆ ವಿರುದ್ಧದ ಪಂದ್ಯಕ್ಕೆ ಮುನ್ನ ಭಾರತ ತಂಡ ಸೇರಿಕೊಳ್ಳಲಿರುವ ಬ್ಯಾಟರ್‌ ರಿಂಕು ಸಿಂಗ್

ಚೆನ್ನೈ: ಫೆಬ್ರವರಿ 25, ಬುಧವಾರ ಚೆನ್ನೈನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಭಾರತದ ಬ್ಯಾಟಿಂಗ್ ಕೋಚ್ ನೀಡಿದ ಮಾಹಿತಿ ಪ್ರಕಾರ, ರಿಂಕು ಸಿಂಗ್ ಜಿಂಬಾಬ್ವೆ ವಿರುದ್ಧದ ಪಂದ್ಯಕ್ಕೂ ಮುನ್ನ ಭಾರತ ತಂಡವನ್ನು ಮತ್ತೆ ಸೇರಿಕೊಳ್ಳಲಿದ್ದಾರೆ. ಗುರುವಾರ ಎಂ.ಎ. ಚಿದಂಬರಂ ಕ್ರೀಡಾಂಗಣದಲ್ಲಿ ನಡೆಯಲಿರುವ ಸೂಪರ್ 8 ಪಂದ್ಯಕ್ಕೂ ಮುನ್ನ ತಂಡವನ್ನು ಸೇರಿಕೊಳ್ಳಲಿದ್ದಾರೆ ಎಂದು ನಿರೀಕ್ಷಿಸಲಾಗಿದೆ. ಕುಟುಂಬದ ತುರ್ತು ಪರಿಸ್ಥಿತಿಯ ಕಾರಣದಿಂದಾಗಿ … Continued

ಟಿ20 ವಿಶ್ವಕಪ್‌ | ಬ್ರೂಕ್ ಬ್ಯಾಟಿಂಗ್ ಅಬ್ಬರ: ಪಾಕಿಸ್ತಾನ ಮಣಿಸಿ ಸೆಮಿಫೈನಲ್‌ ಪ್ರವೇಶಿಸಿದ ಇಂಗ್ಲೆಂಡ್

ಕ್ಯಾಂಡಿ (ಶ್ರೀಲಂಕಾ): ಟಿ20 ವಿಶ್ವಕಪ್‌ನ ಸೂಪರ್-8 ಹಂತದ ರೋಚಕ ಪಂದ್ಯದಲ್ಲಿ ಹ್ಯಾರಿ ಬ್ರೂಕ್ ಸಿಡಿಸಿದ ಮನಮೋಹಕ ಶತಕದ ನೆರವಿನಿಂದ ಇಂಗ್ಲೆಂಡ್ ತಂಡ ಪಾಕಿಸ್ತಾನದ ವಿರುದ್ಧ 2 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಇಂಗ್ಲೆಂಡ್ ಪ್ರಸಕ್ತ ಕೂಟದಲ್ಲಿ ಸೆಮಿಫೈನಲ್ ಪ್ರವೇಶಿಸಿದ ಮೊದಲ ತಂಡ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಬ್ರೂಕ್ ಸಿಡಿಲಬ್ಬರದ ಶತಕ 165 ರನ್‌ಗಳ … Continued

ಟಿ20 ವಿಶ್ವಕಪ್ : ತುರ್ತು ಕಾರಣಕ್ಕೆ ಮನೆಗೆ ತೆರಳಿದ ಬ್ಯಾಟರ್‌ ರಿಂಕು ಸಿಂಗ್‌ ; ಜಿಂಬಾವ್ವೆ ವಿರುದ್ಧ ಆಡುವುದು ಅನುಮಾನ

ನವದೆಹಲಿ : ಭಾರತ ತಂಡದ ಸ್ಟಾರ್ ಬ್ಯಾಟರ್ ರಿಂಕು ಸಿಂಗ್ ಅವರು ಕುಟುಂಬದಲ್ಲಿ ಎದುರಾಗಿರುವ ತುರ್ತು ಪರಿಸ್ಥಿತಿಯಿಂದಾಗಿ ಟಿ20 ವಿಶ್ವಕಪ್ ತಂಡವನ್ನು ಅರ್ಧದಲ್ಲೇ ಬಿಟ್ಟು ಮನೆಗೆ ಮರಳಿದ್ದಾರೆ. ಫೆಬ್ರವರಿ 23ರಂದು ತಂಡದೊಂದಿಗೆ ಚೆನ್ನೈಗೆ ಪ್ರಯಾಣಿಸಿದ್ದ ರಿಂಕು, ಮಂಗಳವಾರ ಬೆಳಿಗ್ಗೆಯೇ ಅಲ್ಲಿಂದ ಹೊರಟಿದ್ದಾರೆ. ಫೆಬ್ರವರಿ 26ರಂದು ಜಿಂಬಾಬ್ವೆ ವಿರುದ್ಧ ನಡೆಯಲಿರುವ ಪಂದ್ಯದಲ್ಲಿ ರಿಂಕು ಸಿಂಗ್ ಕಣಕ್ಕಿಳಿಯುವುದು ಅನುಮಾನ … Continued

ಟಿ20 ವಿಶ್ವಕಪ್ | ಜಿಂಬಾಬ್ವೆ ವಿರುದ್ಧ ವಿಂಡೀಸ್‌ಗೆ ಭರ್ಜರಿ ಜಯ ; ಭಾರತದ ‘ಸೆಮಿಫೈನಲ್‌’ ಹಾದಿ ಕಠಿಣ : ಆದ್ರೂ ಇದೆ ಛಾನ್ಸ್ ; ಲೆಕ್ಕಾಚಾರವೇನು ?

ಮುಂಬೈ: ಟಿ20 ವಿಶ್ವಕಪ್‌ನ ಸೂಪರ್-8 ಹಂತದಲ್ಲಿ ವೆಸ್ಟ್ ಇಂಡೀಸ್ ತಂಡವು ಜಿಂಬಾಬ್ವೆ ವಿರುದ್ಧ ದಾಖಲಿಸಿದ 107 ರನ್‌ಗಳ ಬೃಹತ್ ಗೆಲುವು, ಟೀಮ್ ಇಂಡಿಯಾದ ಸೆಮಿಫೈನಲ್ ಪ್ರವೇಶಿಸುವ ಹಾದು ಮತ್ತಷ್ಟು ದುರ್ಗಮವಾಗಿದೆ. ಸೋಮವಾರ ಇಲ್ಲಿನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ತಂಡವು ಅಬ್ಬರಿಸುವ ಮೂಲಕ ಗ್ರೂಪ್-1ರ ಪಾಯಿಂಟ್ ಪಟ್ಟಿಯಲ್ಲಿ ದಕ್ಷಿಣ ಆಫ್ರಿಕಾ ಹಿಂದಿಕ್ಕಿ  ಅಗ್ರ … Continued

ಟಿ20 ವಿಶ್ವಕಪ್ 2026 : ದಕ್ಷಿಣ ಆಫ್ರಿಕಾ ವಿರುದ್ಧ ಭಾರೀ ಸೋಲು : ಸೆಮಿಫೈನಲ್ ತಲುಪಲು ಭಾರತದ ಮುಂದಿರುವ ಲೆಕ್ಕಾಚಾರಗಳೇನು..?

ಅಹ್ಮದಾಬಾದ್‌ನ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ 76 ರನ್‌ಗಳ ಭಾರಿ ಅಂತರದ ಸೋಲು ಅನುಭವಿಸಿದ ಸೂರ್ಯಕುಮಾರ ಯಾದವ್ ನೇತೃತ್ವದ ಭಾರತ ತಂಡಕ್ಕೆ ಈಗ ಮಾಡು ಇಲ್ಲವೇ ಮಡಿ ಪರಿಸ್ಥಿತಿ ಎದುರಾಗಿದೆ. ಈ ಸೋಲು ಕೇವಲ ಒಂದು ಪಂದ್ಯದ ಸೋಲಲ್ಲ, ಬದಲಾಗಿ ಭಾರತದ ನೆಟ್ ರನ್ ರೇಟ್ (NRR) ಅನ್ನು ಪಾತಾಳಕ್ಕೆ (-3.800) … Continued

ಟಿ20 ವಿಶ್ವಕಪ್‌ನಿಂದ ಬಾಂಗ್ಲಾದೇಶ ಹೊರಹಾಕಲ್ಪಟ್ಟ ಪ್ರಕರಣ : ಪಾಕ್‌ ಬಲೆಗೆ ಬಿದ್ದ ಬಾಂಗ್ಲಾದೇಶ ಕ್ರಿಕೆಟ್ ಮುಖ್ಯಸ್ಥ ; ಬಿಸಿಬಿ ಮಾಜಿ ಸಿಇಒ

ಢಾಕಾ: ಭಾರತ ಮತ್ತು ಶ್ರೀಲಂಕಾ ಆತಿಥ್ಯ ವಹಿಸಿರುವ 2026ರ ಟಿ20 ವಿಶ್ವಕಪ್‌ ನಲ್ಲಿ  ಐಸಿಸಿ (ICC) ಜೊತೆಗಿನ ಸಂಘರ್ಷದ ಪರಿಣಾಮವಾಗಿ ಬಾಂಗ್ಲಾದೇಶ ತಂಡವು ವಿಶ್ವಕಪ್‌ನಿಂದ ಹೊರಬಿದ್ದಿದ್ದು, ಇದರ ಹಿಂದೆ ಪಾಕಿಸ್ತಾನದ ಕುತಂತ್ರವಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ.  ವಿಶ್ವಕಪ್‌ ಪಂದ್ಯಗಳನ್ನು ಆಡಲು ಸಹ ಆತಿಥೇಯ ಭಾರತಕ್ಕೆ ಪ್ರಯಾಣಿಸಲು ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ (BCB) “ಭದ್ರತಾ ಕಾರಣ” … Continued

ಟಿ20 ವಿಶ್ವಕಪ್ 2026 : ಸೂಪರ್ 8ರ ಪಂದ್ಯಗಳ ವೇಳಾಪಟ್ಟಿಯ ವಿವರ

ಕೊಲಂಬೊ: ಬುಧವಾರ ಕೊಲಂಬೊದಲ್ಲಿ ನಡೆದ ತನ್ನ ಕೊನೆಯ ಗ್ರೂಪ್ ಎ ಪಂದ್ಯದಲ್ಲಿ ಪಾಕಿಸ್ತಾನ ತಂಡವು ನಮೀಬಿಯಾವನ್ನು ಸೋಲಿಸಿದ ನಂತರ ಟಿ20 ವಿಶ್ವಕಪ್ ಸೂಪರ್ 8 ಹಂತ ಪ್ರವೇಶಿಸಿದ ತಂಡಗಳು ನಿರ್ಧಾರವಾಗಿದೆ. ಗ್ರೂಪ್ ಎ ಯಿಂದ,  ಹಾಲಿ ಚಾಂಪಿಯನ್ ಭಾರತ ಮತ್ತು ಪಾಕಿಸ್ತಾನ ಸೂಪರ್‌ 8ರ ಹಂತ ಪ್ರವೇಶಿವೆ. ಗ್ರೂಪ್ ಬಿ ಯಿಂದ ಶ್ರೀಲಂಕಾ ಮತ್ತು ಜಿಂಬಾಬ್ವೆ … Continued

2026ರ ಟಿ20 ವಿಶ್ವಕಪ್ ಟೂರ್ನಿಯಿಂದ 2021ರ ಚಾಂಪಿಯನ್ಸ್ ಆಸ್ಟ್ರೇಲಿಯಾ ಹೊರಕ್ಕೆ….!

ಕೊಲಂಬೊ : ಶ್ರೀಲಂಕಾದ ಕ್ಯಾಂಡಿಯ ಪಲ್ಲೆಕೆಲೆ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ಮಂಗಳವಾರ ನಡೆಯಬೇಕಿದ್ದ ಐರ್ಲೆಂಡ್ ಮತ್ತು ಜಿಂಬಾಬ್ವೆ ನಡುವಿನ ಪಂದ್ಯವು ಮಳೆಯಿಂದಾಗಿ ರದ್ದಾದ ಕಾರಣ, 2021ರ ಚಾಂಪಿಯನ್ಸ್ ಆಸ್ಟ್ರೇಲಿಯಾ ತಂಡವು 2026ರ ಟಿ20 ವಿಶ್ವಕಪ್‌ನಿಂದ ಹೊರಬಿದ್ದಿದೆ. ಈ ಪಂದ್ಯ ರದ್ದಾದ ಕಾರಣ ಜಿಂಬಾಬ್ವೆ ತಂಡವು ಗುಂಪು ಹಂತದಲ್ಲಿ ಒಟ್ಟು ಐದು ಅಂಕಗಳನ್ನು ಪಡೆಯಿತು. ಈ ಅಂಕವನ್ನು … Continued

ಪಿಸಿಬಿ ಅಧ್ಯಕ್ಷ ಒಬ್ಬ ‘ಅಸಮರ್ಥ, ಅಜ್ಞಾನಿ’: ಭಾರತದ ಎದುರಿಗೆ ಪಾಕ್‌ ತಂಡದ ಹೀನಾಯ ಸೋಲಿಗೆ ಶೋಯೆಬ್ ಅಖ್ತರ್ ಆಕ್ರೋಶ

ಟಿ20 ವಿಶ್ವಕಪ್‌ನ ಹೈವೋಲ್ಟೇಜ್ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿ ಭಾರತದ ವಿರುದ್ಧ ಪಾಕಿಸ್ತಾನ ತಂಡ 61 ರನ್‌ಗಳ ಹೀನಾಯ ಸೋಲು ಅನುಭವಿಸಿದೆ. ಈ ಬೆನ್ನಲ್ಲೇ ಪಾಕಿಸ್ತಾನದ ಮಾಜಿ ವೇಗಿ ಶೋಯೆಬ್ ಅಖ್ತರ್ ಅವರು ಪಾಕಿಸ್ತಾನ ಕ್ರಿಕೆಟ್ ಮಂಡಳಿ (PCB) ಅಧ್ಯಕ್ಷ ಮೊಹ್ಸಿನ್ ನಖ್ವಿ ವಿರುದ್ಧ ಕಿಡಿಕಾರಿದ್ದು, ಅವರನ್ನು ‘ಅನರ್ಹ’ ಮತ್ತು ‘ಜಾಹೀಲ್’ (ಅಜ್ಞಾನಿ) ಎಂದು ಕರೆದಿದ್ದಾರೆ. ಭಾನುವಾರ … Continued