400ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಅಭಿನಯಿಸಿದ್ದ ಬಹುಭಾಷಾ ನಟಿ ಸಾಹಕಾರ ಜಾನಕಿ ಇನಿಲ್ಲ

ಚೆನ್ನೈ : ದಕ್ಷಿಣ ಭಾರತದ ಹಿರಿಯ ನಟಿ, ಬಹುಭಾಷಾ ತಾರೆ ಸಾಹಕಾರ ಜಾನಕಿ ಅವರು ಶುಕ್ರವಾರ ಚೆನ್ನೈನಲ್ಲಿ ನಿಧನರಾಗಿದ್ದಾರೆ. ಅವರಿಗೆ 94 ವರ್ಷ ವಯಸ್ಸಾಗಿತ್ತು. ತೀವ್ರ ಎದೆನೋವಿನ ಹಿನ್ನೆಲೆಯಲ್ಲಿ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ಮಧ್ಯಾಹ್ನ 1:59ಕ್ಕೆ ಕೊನೆಯುಸಿರೆಳೆದಿದ್ದಾರೆ ಎಂದು ನಟರ … Continued

ಕಾವೇರಿ ವಿವಾದ | ತಮಿಳುನಾಡಿಗೆ 15 ದಿನಗಳ ಕಾಲ ಪ್ರತಿದಿನ 12 ಸಾವಿರ ಕ್ಯುಸೆಕ್ ನೀರು ಬಿಡಲು ಕರ್ನಾಟಕಕ್ಕೆ ಸಿಡಬ್ಲ್ಯುಆರ್‌ಸಿ ಸೂಚನೆ

ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರವಾಗಿ ಕರ್ನಾಟಕ ಮತ್ತು ತಮಿಳುನಾಡು ನಡುವಿನ ವಿವಾದ ತೀವ್ರಗೊಂಡಿರುವ ನಡುವೆಯೇ, ಮುಂದಿನ 15 ದಿನಗಳ ಕಾಲ ಪ್ರತಿದಿನ ತಮಿಳುನಾಡಿಗೆ 12,000 ಕ್ಯುಸೆಕ್ ಕಾವೇರಿ ನೀರು ಹರಿಸುವಂತೆ ಕರ್ನಾಟಕ ಸರ್ಕಾರಕ್ಕೆ ಕಾವೇರಿ ಜಲ ನಿಯಂತ್ರಣ ಸಮಿತಿ (CWRC) ಮಂಗಳವಾರ ನಿರ್ದೇಶನ ನೀಡಿದೆ. ಕಾವೇರಿ ಜಲ ನಿಯಂತ್ರಣ ಸಮಿತಿ (CWRC) ಅಧ್ಯಕ್ಷ ವಿನೀತ್ … Continued

ಬರದ ನಡುವೆ ರಾಜ್ಯಕ್ಕೆ ಆಘಾತ : ತಮಿಳುನಾಡಿಗೆ ಪ್ರತಿದಿನ 3500 ಕ್ಯೂಸೆಕ್ ನೀರು ಹರಿಸಲು ಸಿಡಬ್ಲ್ಯುಆರ್‌ಸಿ ಶಿಫಾರಸು

ನವದೆಹಲಿ/ಬೆಂಗಳೂರು: ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಕರ್ನಾಟಕ ಸರ್ಕಾರಕ್ಕೆ ಮುಂದಿನ 15 ದಿನಗಳ ಕಾಲ ಪ್ರತಿದಿನ 3,500 ಕ್ಯೂಸೆಕ್‌ ನೀರನ್ನು ತಮಿಳುನಾಡಿಗೆ ಬಿಡುಗಡೆ ಮಾಡುವಂತೆ ಶಿಫಾರಸು ಮಾಡಿದೆ. ಕಾವೇರಿ ಜಲಾನಯನ ಪ್ರದೇಶದಲ್ಲಿನ ಜಲಾಶಯಗಳ ನೀರಿನ ಸಂಗ್ರಹ, ಮಳೆಯ ಪ್ರಮಾಣ ಹಾಗೂ ಒಳಹರಿವನ್ನು ಪರಾಮರ್ಶಿಸಲು ನಡೆದ ಸಿಡಬ್ಲ್ಯೂಆರ್‌ಸಿ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಸಮಿತಿಯು ಎರಡೂ … Continued

ಮೇಕೆದಾಟು ಯೋಜನೆಗೆ ತಮಿಳುನಾಡು ಸೇರಿ ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ : ಸಂಸತ್ತಿನಲ್ಲಿ ಕೇಂದ್ರ ಸರ್ಕಾರ ಸ್ಪಷ್ಟನೆ

ನವದೆಹಲಿ : ಕಾವೇರಿ ನದಿಗೆ ಅಡ್ಡಲಾಗಿ ನಿರ್ಮಿಸಲು ಉದ್ದೇಶಿಸಿರುವ ಪ್ರಸ್ತಾವಿತ ಮೇಕೆದಾಟು ಸಮತೋಲನ ಜಲಾಶಯ (Balancing Reservoir) ನಿರ್ಮಾಣಕ್ಕೆ ಕರ್ನಾಟಕವು ಕೆಳಹರಿವು ರಾಜ್ಯಗಳಾದ ತಮಿಳುನಾಡು, ಕೇರಳ ಹಾಗೂ ಕೇಂದ್ರಾಡಳಿತ ಪ್ರದೇಶವಾದ ಪುದುಚೇರಿಯ ಅನುಮತಿ ಪಡೆಯುವ ಅಗತ್ಯವಿಲ್ಲ ಎಂದು ಕೇಂದ್ರ ಸರ್ಕಾರ ಸೋಮವಾರ (ಜುಲೈ 27) ಸಂಸತ್ತಿನಲ್ಲಿ ಸ್ಪಷ್ಟಪಡಿಸಿದೆ. ಈ ಕುರಿತು 2018ರಲ್ಲಿ ಸುಪ್ರೀಂ ಕೋರ್ಟ್ ನೀಡಿದ … Continued

‘ಮುತ್ತು ಮಾಸ್ಟರ್’ ಹೆಸರಿನಲ್ಲಿ 37 ವರ್ಷ ಪುರುಷನಂತೆ ಬದುಕಿದ ಮಹಿಳೆ : ಹೀಗೆ ಬದುಕುವ ನಿರ್ಧಾರದ ಹಿಂದಿನ ಕಾರಣವೇನು ?

ತಮಿಳುನಾಡಿನ ಒಂದು ಸಣ್ಣ ಹಳ್ಳಿಯಲ್ಲಿ ಹಲವು ವರ್ಷಗಳಿಂದ “ಮುತ್ತು ಮಾಸ್ಟರ್” ಎಂದು ಪರಿಚಿತರಾಗಿದ್ದ ವ್ಯಕ್ತಿಯ ಬದುಕಿನ ಹಿಂದಿನ ಅಚ್ಚರಿಯ ಸತ್ಯ ಇದೀಗ ದೇಶದಾದ್ಯಂತ ಚರ್ಚೆಗೆ ಗ್ರಾಸವಾಗಿದೆ. ಗ್ರಾಮಸ್ಥರು ಪುರುಷನೆಂದು ನಂಬಿದ್ದ ಮುತ್ತು ಮಾಸ್ಟರ್ ವಾಸ್ತವವಾಗಿ ಪೆಚ್ಚಿಯಮ್ಮಾಳ್ ಎಂಬ ಮಹಿಳೆಯಾಗಿದ್ದು, ತಮ್ಮ ಪತಿಯ ಸಾವಿನ ಬಳಿಕ ಸುರಕ್ಷತೆ ಮತ್ತು ಮಗಳ ಭವಿಷ್ಯಕ್ಕಾಗಿ 37 ವರ್ಷಗಳ ಕಾಲ ಪುರುಷನ … Continued

ಸ್ಟಾಲಿನ್‌ಗೆ ಮತ್ತೊಂದು ರಾಜಕೀಯ ಹಿನ್ನಡೆ ; 9 ವರ್ಷಗಳ ಬಳಿಕ ಡಿಎಂಕೆ ಮೈತ್ರಿ ತೊರೆದ ಎಂಡಿಎಂಕೆ ಪಕ್ಷ

ಚೆನ್ನೈ: ತಮಿಳುನಾಡಿನ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದರಲ್ಲಿ, ಮರುಮಲರ್ಚಿ ದ್ರಾವಿಡ ಮುನ್ನೇತ್ರ ಕಳಗಂ (ಎಂಡಿಎಂಕೆ) ಪಕ್ಷವು ಡಿಎಂಕೆ ಜೊತೆಗಿನ ತನ್ನ ಒಂಬತ್ತು ವರ್ಷಗಳ ಮೈತ್ರಿಯನ್ನು ಅಧಿಕೃತವಾಗಿ ಅಂತ್ಯಗೊಳಿಸಿದೆ.  ಈ ನಿರ್ಧಾರವನ್ನು ಶನಿವಾರ ನಡೆದ ಪಕ್ಷದ ಸಾಮಾನ್ಯ ಮಂಡಳಿ ಸಭೆಯಲ್ಲಿ ಕೈಗೊಳ್ಳಲಾಯಿತು. ಆದರೆ ಆಡಳಿತಾರೂಢ ಟಿವಿಕೆ ನೇತೃತ್ವದ ಮೈತ್ರಿಕೂಟಕ್ಕೆ ಸೇರ್ಪಡೆಯ ಬಗ್ಗೆ ಪಕ್ಷ ಇವರೆಗೆ ಏನೂ ಹೇಳಿಲ್ಲ. ಸಭೆಯಲ್ಲಿ … Continued

ಅಮೋನಿಯಾ ಅನಿಲ ಸೋರಿಕೆ : 7 ಕಾರ್ಮಿಕರ ಸಾವು, 67 ಜನರು ಆಸ್ಪತ್ರೆಗೆ ದಾಖಲು

ಚೆನ್ನೈ : ತಮಿಳುನಾಡಿನ ಪೆರಿಯಪಾಳ್ಯಂ ಬಳಿಯ ಮಂಜಂಗಾರಣೈ (ಕಣ್ಣಿಗೈಪೇರ್ ಗ್ರಾಮ)ನಲ್ಲಿರುವ ಸೀಫುಡ್ (ಸಮುದ್ರ ಆಹಾರ) ಸಂಸ್ಕರಣಾ ಘಟಕವೊಂದರಲ್ಲಿ ಸಂಭವಿಸಿದ ಭೀಕರ ಅಮೋನಿಯಾ ಅನಿಲ ಸೋರಿಕೆ ದುರಂತದಲ್ಲಿ ಏಳು ಕಾರ್ಮಿಕರು ಮೃತಪಟ್ಟಿದ್ದಾರೆ. ಘಟನೆಯಲ್ಲಿ ಸುಮಾರು 67 ಕಾರ್ಮಿಕರು ತೀವ್ರವಾಗಿ ಅಸ್ವಸ್ಥಗೊಂಡಿದ್ದು, ಅವರನ್ನು ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅನಿಲ ಸೋರಿಕೆಯ ವಿಷಯ ತಿಳಿಯುತ್ತಿದ್ದಂತೆ ತಿರುವಳ್ಳೂರು … Continued

ಕೊಲ್ಲೂರು ಮೂಕಾಂಬಿಕೆ ದೇವಿ ದರ್ಶನ ಪಡೆದು ಬೆಳ್ಳಿ ಖಡ್ಗ ಸಮರ್ಪಿಸಿದ ತಮಿಳುನಾಡು ಸಿಎಂ ವಿಜಯ

ಉಡುಪಿ : ತಮಿಳುನಾಡು ಮುಖ್ಯಮಂತ್ರಿ ವಿಜಯ ಅವರು ಇಂದು, ಶುಕ್ರವಾರ (ಜೂನ್‌ 12) ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ ದೇವಿಯ ದರ್ಶನ ಪಡೆದರು. ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಆಗಮಿಸಿದ ಮುಖ್ಯಮಂತ್ರಿ ವಿಜಯ ಅವರನ್ನು ದೇವಸ್ಥಾನದ ಆಡಳಿತ ಮಂಡಳಿಯ ಟ್ರಸ್ಟಿಗಳು ಸ್ವಾಗತಿಸಿದರು. ಬಳಿಕ ಅರ್ಚಕರು ಮಂತ್ರ ಘೋಷದೊಂದಿಗೆ ಅವರನ್ನು ದೇವಾಲಯದ ಒಳಗೆ ಬರಮಾಡಿಕೊಂಡರು. ಮುಖ್ಯಮಂತ್ರಿಯಾಗಿ ಅಧಿಕಾರ … Continued

ಎಐಎಡಿಎಂಕೆಗೆ ಮತ್ತೆ ಆಘಾತ ; ಟಿವಿಕೆ ಸೇರಿದ 4 ಮಾಜಿ ಸಚಿವರು, 6 ಮಾಜಿ ಶಾಸಕರು

ಚೆನ್ನೈ: ತಮಿಳುನಾಡಿನಲ್ಲಿ ಎಐಎಡಿಎಂಕೆ ಪಕ್ಷದಲ್ಲಿನ ಬಿಕ್ಕಟ್ಟು ಮುಂದುವರಿದಿದೆ. ಎಐಎಡಿಎಂಕೆಗೆ (AIADMK) ಶನಿವಾರ ಮತ್ತೊಂದು ಭಾರಿ ಆಘಾತ ಎದುರಾಗಿದ್ದು, ಪಕ್ಷದ ನಾಲ್ವರು ಪ್ರಭಾವಿ ಮಾಜಿ ಸಚಿವರು ಹಾಗೂ ಮಾಜಿ ಶಾಸಕರು ಸೇರಿದಂತೆ 300ಕ್ಕೂ ಹೆಚ್ಚು ಪ್ರಮುಖ ಪದಾಧಿಕಾರಿಗಳು ಆಡಳಿತಾರೂಢ ‘ತಮಿಳಗ ವೆಟ್ರಿ ಕಳಗಂ’ (TVK) ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾಗಿದ್ದಾರೆ. ಇದು ಎಐಎಡಿಎಂಕೆಯ ಸಾಂಸ್ಥಿಕ ಬಲವನ್ನು ಮತ್ತಷ್ಟು ಕುಗ್ಗಿಸಿದೆ. … Continued

ಅಣ್ಣಾಮಲೈ ಹೊಸ ರಾಜಕೀಯ ಆಂದೋಲನ ಘೋಷಣೆಯಾದ 24 ಗಂಟೆಯೊಳಗೆ 14 ಲಕ್ಷ ಜನ ಸೇರ್ಪಡೆ…!

 ಚೆನ್ನೈ: ತಮಿಳುನಾಡು ರಾಜಕಾರಣದಲ್ಲಿ ಭಾರಿ ಬೆಳವಣಿಗೆಯೊಂದು ನಡೆದಿದ್ದು, ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಅವರು ಜೂನ್ 5 ರಂದು ಅಧಿಕೃತವಾಗಿ ಭಾರತೀಯ ಜನತಾ ಪಕ್ಷದಿಂದ (ಬಿಜೆಪಿ) ಹೊರಬಂದಿದ್ದಾರೆ. ಪಕ್ಷ ತೊರೆದ ಬೆನ್ನಲ್ಲೇ ಅವರು ತಮ್ಮದೇ ಆದ ಹೊಸ ರಾಜಕೀಯ ಆಂದೋಲನವನ್ನು ಘೋಷಿಸಿದ್ದು, ಕೇವಲ 24 ಗಂಟೆಗಳ ಅವಧಿಯಲ್ಲಿ ಸುಮಾರು 14 ಲಕ್ಷಕ್ಕೂ ಹೆಚ್ಚು … Continued